Horoscope: ಹಿಂದಿನ ತಪ್ಪುಗಳು ಇಂದು ಪಾಠವಾಗುವುದು

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 28 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಹಿಂದಿನ ತಪ್ಪುಗಳು ಇಂದು ಪಾಠವಾಗುವುದು
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 28, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜೂನ್ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಆಯುಷ್ಮಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:59 ರಿಂದ ಮಧ್ಯಾಹ್ನ 12:36ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:50 ರಿಂದ ಸಂಜೆ 05:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:45 ರಿಂದ 09:22ರ ವರೆಗೆ.

ಧನು ರಾಶಿ: ನಿಮಗೆ ಇಂದು ಮುಖ್ಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಾಗದು. ಅಧಿಕ ಪ್ರತಿಫಲಾಪೇಕ್ಷೆ ಇಲ್ಲದೆ ನೀವು ಇಂದಿನ ಕೆಲಸವನ್ನು ಮಾಡಬೇಕಾಗುತ್ತದೆ. ಉದ್ಯೋಗದಲ್ಲಿ ಭಡ್ತಿಗಾಗಿ ಬಹಳ ಶ್ರಮವಹಿಸುವಿರಿ. ನಿಮ್ಮನ್ನು ಹಿಂದೆಳೆಯಲು ಅನೇಕರು ಪ್ರಯತ್ನಿಸಿದರೂ ನಿಮ್ಮ ಕೆಲಸವು ನಿಮ್ಮನ್ನು ಮುಂದಕ್ಕೆ ತಂದಿರುತ್ತದೆ. ನಿಮಗೆ ನಿಮ್ಮ ಬಗ್ಗೆ ಕಾಳಜಿ ಮಾಡುವವರು ಬೇಕು ಎನಿಸಬಹುದು. ವಿದ್ಯಾವಂತರೊಬ್ಬರ ಪರಿಚಯವು ನಿಮಗೆ ಇಂದಿನ‌ ಮಹಾಲಾಭದಲ್ಲಿ ಒಂದಾಗಿದೆ. ನಿಮ್ಮಲ್ಲಿ ಹಣವನ್ನು ಕೇಳಿ ಯಾರಾದರೂ ಬರಬಹುದು, ಇಲ್ಲವೆನ್ನದೇ ಎಷ್ಟೋ ಒಂದಿಷ್ಟನ್ನು ಇದಂ‌ ನ ಮಮ ಎಂಬ ಭಾವದಿಂದ ಕೊಡಿ. ದುರಭ್ಯಾಸವನ್ನು ರೂಢಿಸಿಕೊಳ್ಳುವ ಸಂಭವವು ಬರಬಹುದು. ಆಲಸ್ಯದಿಂದ ಎಲ್ಲ ಕಾರ್ಯದಲ್ಲಿಯೂ ನಿರಾಸಕ್ತಿ ಇರಲಿದೆ. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು.

ಮಕರ ರಾಶಿ: ಇಂದು ನಿಮ್ಮವರು ಎಂದು ಯಾರನ್ನು ನೀವು ಭಾವಿಸಿದ್ದೀರೋ ಅವರಿಂದಲೋ ಬಹಳ ನೋವಾಗಬಹುದು. ಹಸಿದವರಿಗೆ ನಿಮ್ಮ ಕೈಲಾದ ಸಹಾಯವನ್ನು ಮಾಡುವಿರಿ. ಮಕ್ಕಳ ವಿಷಯಕ್ಕೆ ಖರ್ಚು ಮಾಡುವ ಸ್ಥಿತಿ ಬರಲಿದೆ. ದೈನಿಂದನ ಕೆಲಸಗಳು ನಿಶ್ಚಿಂತೆಯಿಂದ ನಡೆಯುವುವು.‌ ಕುಟಂಬದ ಜೊತೆ ನೀವು ಇನ್ನಷ್ಟು ಆಪ್ತರಾಗುವಿರಿ. ದಾಂಪತ್ಯದಲ್ಲಿ ನಗುವಿದ್ದರೂ ಸುಖದ ಕೊರತೆ ನಿಮ್ಮನ್ನು ಕಾಡಬಹುದು. ನಿಮ್ಮ ಕೆಲಸವನ್ನು ಸಕಾಲಕ್ಕೆ ಮುಗಿಸಿ ಎಲ್ಲರಿಂದ‌ ಮೆಚ್ಚುಗೆ ಗಳಿಸುವಿರಿ. ಅದಕ್ಕಾಗಿ ಹಣವು ವ್ಯಯವಾಗಲಿದೆ. ಹಳೆಯ‌ ಕೆಲಸವನ್ನು ಮರೆಯುವ ಸ್ವಭಾವವು ಇರಲಿದೆ. ಶತ್ರುಗಳ ಭಯವು ನಿಮ್ಮನ್ನು ಕಾಡಬಹುದು.‌ ಕಲಾವಿದರು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುವರು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಸಂಗಾತಿಯ ಎದುರು ಏನನ್ನೂ ಹೇಳದೇ ಸುಮ್ಮನಿರುವಿರಿ.

ಕುಂಭ ರಾಶಿ: ನಿಮ್ಮ ಸ್ವತಂತ್ರ ಯೋಚನೆಯಿಂದ ಯಶಸ್ಸು ಸಿಗಲಿದೆ. ಹಣದ ಅಗತ್ಯ ಕಂಡುಬಂದು, ಸಾಲ ಮಾಡಬೇಕಾಗಿ ಬರುವುದು. ವಾಹನಸಂಚಾರವು ನಿಮಗೆ ಬೇಡವೆನಿಸವುದು. ನಿಮ್ಮನ್ನು ತರತರದ ಮಾತುಗಳಿಂದ ನಿಮ್ಮ ಉತ್ತೇಜಿಸಬಹುದು. ಅದು ಸರಿ ಎನಿಸಿ ನೀವು ಮಾಡಿ ಸಮಸ್ಯೆಗಳನ್ನು ತಂದುಕೊಳ್ಳಬೇಕಾದೀತು. ಆಪ್ತಮಿತ್ರರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮದಾದ ಗುರಿಯನ್ನು ಹಾಕಿಕೊಳ್ಳಲು ಗೊಂದಲವಾಗಬಹುದು. ಭೂಮಿಯ ಖರೀದಿಗೆ ಯೋಚಿಸಿದ್ದರೆ ನೀವು ಸ್ವಲ್ಪ ಸಮಯವನ್ನು ಬಿಡುವುದು ಒಳ್ಳೆಯದು. ಸಮಯ ಬಂದಾಗ ಅವು ಮತ್ತೆ ಮನೋಭೂಮಿಯಲ್ಲಿ ಮೊಳಕೆ ಒಡೆದೀತು. ಅಪರಿಚಿತರ ಜೊತೆ ಅನುಚಿತ ವರ್ತನೆ ಬೇಡ. ನಂಬಿಕೆಯು ಹುಸಿಯಾಗುವುದು. ಯಾರೊಬ್ಬರ ಮಾತುಗಳಿಗೆ ತ್ವರಿತ ಪ್ರತಿಕ್ರಿಯೆ ಕೊಡುವುದು ಬೇಡ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ನಿಮ್ಮ ಗುಣವನ್ನು ಅಪಾರ್ಥ ಮಾಡಿಕೊಂಡಾರು.

ಮೀನ ರಾಶಿ: ಇಂದು ನಿಮ್ಮ ಮಾತಿನ ಮೋಡಿಗೆ ಯಾರಾದರೂ ಮರುಳಾಗಬಹುದು. ಮಕ್ಕಳ ವ್ಯವಹಾರಕ್ಕೆ ಹಣಕಾಸು ನೆರವು ನೀಡಲು ಪ್ರಯತ್ನಿಸುತ್ತೀರಿ. ಮನೆಗೆ ಅಗತ್ಯವಿರುವ ಯಂತ್ರೋಪಕರಣವನ್ನು ಖರೀದಿಸುವಿರಿ. ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸಗಳು ಆಗಬಹುದು. ಸರ್ಕಾರಿ ಕೆಲಸವು ಪ್ರಗತಿಯಲ್ಲಿ ಇರಲಿದೆ. ಸಂಗಾತಿಯು ಇಂದು ನಿಮ್ಮ ಮಾತನ್ನು ಅನುಸರಿಸುವಳು. ಹೆಚ್ಚಿನ ಸಂಪಾದನೆಗೆ ಅನ್ಯ ಮಾರ್ಗವನ್ನು ಹಿಡಿದುಕೊಳ್ಳಬೇಕಾಗುವುದು. ಮಾತಮಾಡುವಾಗ ಗಮನವಿರಲಿ. ನಿಮ್ಮೆದುರಿನವರಿಗೆ ಬೈಯ್ಯುತ್ತಿದ್ದುದೆಂದು ಅನಂತರ ಗೊತ್ತಾಗಿ ಇಸರುಮುರುಸಾದೀತು. ಮನೆಯವರ ಮನ ನೋಯಿಸಿ ಕಾರ್ಯ ಮಾಡಲಾಗದು. ಮನಸ್ಸಿನ ಆಲಸ್ಯವನ್ನು ಹೋಗಲಾಡಿಸಿಕೊಂಡು ಕಾರ್ಯಪ್ರವೃತ್ತರಾಗಿ. ಪ್ರತಿಯೊಂದು ಕ್ಷಣವನ್ನೂ ಆನಂದಿಸುವಿರಿ. ಸಜ್ಜನರ ಸಹವಾಸ ನಿಮಗೆ ಸಿಕ್ಕಿ ಮಾರ್ಗದರ್ಶನವೂ ಆಗಕಿದೆ. ಹಿಂದಿನ ತಪ್ಪುಗಳು ಪಾಠವಾಗುವುದು. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು.

ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ