Horoscope: ರಾಶಿ ಭವಿಷ್ಯ; ಹಿತಶತ್ರುಗಳಿಂದ ತೊಂದರೆ ಆಗುವುದು-ಎಚ್ಚರ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 30 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ಹಿತಶತ್ರುಗಳಿಂದ ತೊಂದರೆ ಆಗುವುದು-ಎಚ್ಚರ
ದಿನಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 30, 2024 | 12:42 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ (ಜೂನ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಶೋಭನ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 05:28 ರಿಂದ 07:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:13ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ ಸಂಜೆ 05:28ರ ವರೆಗೆ.

ಧನು ರಾಶಿ: ಇಂದು ನೀವು ಮನೆಯನ್ನು ಸುಂದರವಾಗಿಡಲು ತೊಡಗುವಿರಿ. ಮಕ್ಕಳಿಂದ ನಿಮಗೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಉದ್ಯೋಗದ ಸ್ಥಾನದಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳನ್ನು ನಿಮಗಾಗದವರು ಹರಡುವರು. ಮಕ್ಕಳಿಂದ ನಿಮಗೆ ವಿದ್ಯಾಭಾಸದ ಕಾರಣಕ್ಕೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ಪ್ರಯಾಣದಲ್ಲಿ ಆದ ಪರಿಚಯವು ಮುಂದುವರಿಯುವುದು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ಕೋಪವನ್ನು ನಿಯಂತ್ರಿಸಿಕೊಂಡು, ನಿಮ್ಮ ಮಾತಿನಲ್ಲಿ ಎಂದಿನ ಮಾರ್ದವವನ್ನು ಇಟ್ಟುಕೊಳ್ಳಿ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಬಹುದು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಮಾತನಾಡುವಾಗ ಜಾಗರೂಕತೆ ಅವಶ್ಯಕ.

ಮಕರ ರಾಶಿ: ಇಂದು ನೀವು ಮಾನಸಿಕವಾಗಿ ಹಿಂಸೆಯನ್ನು ಅನುಭವಿಸಲು ಕಷ್ಟವಾಗುವುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ನೀವು ಇಂದು ಸಾಲವನ್ನು ಪಡೆಯಲು ಮಾಡಿದ ಪ್ರಯತ್ನವು ಯಶಸ್ವಿಯಾಗುವುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡುವುದು ಒಳ್ಳೆಯದು. ಭೂಮಿಯ ವ್ಯವಹಾರದಲ್ಲಿ ನಷ್ಟವಾಗಬಹುದು. ವಿದ್ಯೆಗೆ ಸಮಾನವಾದ ಉದ್ಯೋಗವನ್ನು ಮಾಡುವುದು ಒಳ್ಳೆಯದು. ಮನಸ್ಸು ದುರ್ಬಲವಾದ ಕಾರಣ ಅದನ್ನು ಸಬಲವಾಗಿಸಿಕೊಳ್ಳುವುದು. ಮಾಡಿದ ಕೆಲಸಕ್ಕೆ ಕೂಡಲೆ ಫಲ ಸಿಗಬೇಕು ಎನ್ನುವ ವೇಗದಿಂದ ಹೊರಬರುವುದು ಉತ್ತಮ. ಯಾರಾದರೂ ಚುಚ್ಚಿ ಮಾತನಾಡಬಹುದು. ನಿಮ್ಮ ಬಗ್ಗೆ ನಿಮಗೆ ಹೆಮ್ಮೆ ಬರುವುದು. ಕೊನೆಗೆ ಅನುಭವಿಸುವವರು ತಾವೇ ಆಗಿರುತ್ತೀರಿ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಉದ್ಯಮಿಗಳ ಜೊತೆ ಇಂದು ಕಾಲ ಕಳೆಯುವಿರಿ.

ಕುಂಭ ರಾಶಿ: ಇಂದು ನೀವು ಎಲ್ಲವನ್ನೂ ಶಕ್ತಿಮೀರಿ ಕಾರ್ಯದಲ್ಲಿ ಪ್ರಯತ್ನಶೀಲರಾಗುವಿರಿ. ಆಲಸ್ಯವು ಒಳ್ಳೆಯದಲ್ಲ‌. ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ಯಾವುದು ಎಷ್ಟು ಪ್ರಾಮುಖ್ಯ ಎಂಬ ಆಲೋಚನೆ ಇರಲಿ. ಕೊಟ್ಟ ಜವಾಬ್ದಾರಿಯನ್ನು ಶಕ್ತಿಮೀರಿ ಪ್ರಯತ್ನಿಸುವಿರಿ. ಆಲಸ್ಯವವನ್ನು ಕಡಿಮೆ ಮಾಡಿಕೊಳ್ಳುತ್ತ ಬನ್ನಿ. ಇಲ್ಲವಾದರೆ ನಿಮ್ಮ ಗುರಿಯ ಸಾಧನೆಗೆ ಅದೇ ಅಡ್ಡಿಯಾಗಬಹುದು. ಎಲ್ಲರನ್ನೂ ಬಿಟ್ಟು ದೂರದಲ್ಲಿ ಇರುವುದುವನಿಮಗೆ ಇಷ್ಟವಾಗದು. ಕಚೇರಿಯಲ್ಲಿ ಆಗುವ ಸಣ್ಣ ತಪ್ಪೂ ಬೇರೆಯವರ ಕಿಬಿಗೆ ಬಿದ್ದು ದೊಡ್ಡದಾಗಬಹುದು. ಯಾರ ಮಾರ್ಗದರ್ಶನವನ್ನೂ ಕೇಳಲು ಇಷ್ಟಪಡಲಾರಿರಿ. ಹಣಕಾಸಿನಲ್ಲಿ ಸುಧಾರಣೆಯನ್ನು ಮಾಡಿಕೊಳ್ಳಲು ಮಾರ್ಗಗಳನ್ನು ಹುಡುಕುವಿರಿ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳಿಂದ ಬಾಧೆಯ ಆಗುವುದು ಗೊತ್ತಾಗುವುದು.

ಮೀನ ರಾಶಿ: ಇಂದು ನೀವು ಇನ್ನೊಬ್ಬರ ಬಗ್ಗೆ ಸಲ್ಲದ ಮಾತುಗಳನ್ನು ಆಡುವಿರಿ. ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆ ಇಲ್ಲ. ನಿಮ್ಮವರಿಂದ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಸಲಹೆಗಳು ಬರಬಹುದು. ಇತರರು ನಿಮ್ಮ ಕುರಿತು ಸಲ್ಲದ ಮಾತುಗಳನ್ನು ಆಡಬಹುದು. ಪ್ರತ್ಯುತ್ತರವನ್ನು ಕೊಡುವ ಅವಶ್ಯಕತೆಯಿಲ್ಲ. ನಿಮ್ಮ ನಿತ್ಯದ ಕೆಲಸದ ವಿಧಾನವನ್ನು ಮತ್ತಷ್ಟು ಸರಳಮಾಡಿಕೊಳ್ಳಲು ಬಯಸುವಿರಿ. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಆಪ್ತರ ಭೇಟಿಯಾಗಬಹುದು. ಉದ್ಯಮದಲ್ಲಿ ನಿಮಗೆ ಪ್ರತಿಸ್ಪರ್ಧಿ ಹುಟ್ಟಿಕೊಂಡಿದ್ದರಿಂದ ಸಣ್ಣ ಕಿರಿಕಿರಿ ಆರಂಭವಾಗಬಹುದು. ದಾಕ್ಷಿಣ್ಯದಿಂದ ಪಡೆದುಕೊಳ್ಳಬೇಕಾದುದನ್ನು ಪಡೆದುಕೊಳ್ಳಲಾರಿರಿ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಹಣದ ವಿಚಾರದಲ್ಲಿ ನಿಮಗೆ ಲೋಭವು ಇರದು. ನೀವು ಇಂದು ಯಾರ ಮಾತನಲ್ಲಿ ನಂಬಿಕೆ ಇಡಲಾರಿರಿ.

ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ