
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ನವಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಆಯುಷ್ಮಾನ್, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:10 ರಿಂದ ಮಧ್ಯಾಹ್ನ 09:40ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:10 ರಿಂದ 12:41ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:41 ರ ವರೆಗೆ.
ಮೇಷ ರಾಶಿ: ನೀವು ಬರುವ ಆದಾಯವನ್ನು ಕ್ರಮಬದ್ಧವಾಗಿ ಉಳಿಸುವ ಕಡೆ ಯೋಚಿಸಬಹುದು. ಸಂಗಾತಿಯ ಮೇಲಿನ ಕೋಪವನ್ನು ಕಡಿಮೆ ಮಾಡಿಕೊಂಡು ನೀವೇ ಮಾತನಾಡಿಸಲು ಮುಂದಾಗುವಿರಿ. ಮಕ್ಕಳ ಬಗ್ಗೆ ಗಂಭೀರವಾದ ಚಿಂತನೆ ಇರಲಿದೆ. ಸೌಂದರ್ಯದ ಬಗ್ಗೆ ಅಧಿಕ ಕಾಳಜಿ ಇರುವುದು. ನಿಮ್ಮ ಮಾತುಗಳನ್ನು ನೀವು ಪರೀಕ್ಷಿಸಿಕೊಳ್ಳುವುದು ಉತ್ತಮ. ಸಿಟ್ಟಿನಿಂದ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಯಾರದೋ ಮಾತಿಗೆ ಕುಣಿಯುವುದು ಬೇಡ. ನಿಮ್ಮ ಮನಸ್ಸಿಗೆ ಸರಿ ಎನಿಸಿದ್ದರೆ ಮುಂದುವರಿಯಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ ಕೆಲಸವನ್ನು ಮಾಡುವಿರಿ.
ವೃಷಭ ರಾಶಿ: ನಿಮಗೆ ವಿನ್ಯಾಸದಲ್ಲಿ ಹಲವು ಗೊಂದಲಗಳು ಇರಲಿದ್ದು ಯಾರದ್ದಾದರೂ ಹಿರಿಯರ ಸಲಹೆಯನ್ನು ಪಡೆಯಿರಿ. ಕಾನೂನಾತ್ಮಕ ಹೋರಾಟಕ್ಕೆ ಹಣವನ್ನು ಖರ್ಚುಮಾಡಬೇಕಾದೀತು. ವಿನ್ಯಾಸಕ್ಕೆ ಸಂಬಂಧಿಸಿದಂತೆ ಆದಾಯವು ಹೆಚ್ಚಾಗುವುದು. ಆತುರ ಪಡದೇ ಸಮಾಧಾನ ಚಿತ್ತದಿಂದ ಕಾರ್ಯವನ್ನು ಮಾಡಲು ಪ್ರಯತ್ನಿಸಿ. ಮಕ್ಕಳಿಗೆ ನೀವು ಕೊಟ್ಟ ಸ್ವಾತಂತ್ರ್ಯ ಅತಿಯಾದೀತು. ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುತ್ತ ಇರಬಹುದು. ಸಲ್ಲದ ಮಾತುಗಳನ್ನಾಡಿ ಶತ್ರುಗಳನ್ನು ಪ್ರಬಲವಾಗಿಸುವಿರಿ. ಸಾಹಸ ಕಾರ್ಯಕ್ಕೆ ಒಮ್ಮೆಲೇ ಮುಂದಾಗುವುದು ಬೇಡ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ.
ಮಿಥುನ ರಾಶಿ: ನಿಮ್ಮ ಕಾರ್ಯವು ಆಗಬೇಕಾದರೆ ಅದಕ್ಕೆ ಯೋಗ್ಯವಾದ ಮರ್ಯಾದೆಯ ಅವಶ್ಯಕತೆಯೂ ಇರಬೇಕಿದೆ. ವಿವಾಹದ ವಿಳಂಬಕ್ಕೆ ನಿಮ್ಮ ಮನಸ್ಸು ದುರ್ಬಲವಾಗಬಹುದು. ನಿಮ್ಮ ಬೇಸರವನ್ನು ದೂರ ಮಾಡಲು ಏನೇ ಹೇಳಿದರೂ ನಿಮಗೆ ನೆಮ್ಮದಿ ಸಿಗದು. ಮೇಲಧಿಕಾರಿಗಳ ಗುರಿಯನ್ನು ತಲುಪಲು ಶ್ರಮವು ಹೆಚ್ಚಾಗಬಹುದು. ಆಭರಣದ ಬಗ್ಗೆ ಮೋಹ ಉಂಟಾಗುವುದು. ಹಿರಿಯರಿಗೆ ಅಗೌರವದ ಮಾತುಗಳನ್ನು ಆಡಬೇಕಾದೀತು. ನಿಮ್ಮ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ಕಲಾವಿದರಿಗೆ ಅನಿರೀಕ್ಷಿತ ಗೌರವವು ಪ್ರಾಪ್ತವಾಗಬಹುದು. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ಬೇಕಾದಷ್ಟು ಹಣವಿದ್ದರೂ ತುರ್ತಿಗೆ ಪ್ರಯೋಜನಕ್ಕೆ ಬಾರದೇಯಿರುವುದು. ಎಲ್ಲರದ್ದೂ ಒಂದು ದಾರಿಯಾದರೇ ನಿಮ್ಮದೇ ಒಂದು ದಾರಿ.
ಕಟಕ ರಾಶಿ: ನಿಮ್ಮ ಆಸ್ತಿಯ ವಿಚಾರದಲ್ಲಿ ಗೊಂದಲ ಇರಲಿದ್ದು ಅದನ್ನು ಯಾವುದೋ ಮುಖಾಂತರ ವ್ಯಕ್ತಪಡಿಸುವಿರಿ. ಬೇಸರದಲ್ಲಿ ಏನನ್ನಾದರೂ ಮಾಡಿಕೊಳ್ಳಲು ಹೋಗಬಹುದು. ನಿಮ್ಮ ಸ್ವಂತ ನಿರ್ಧಾರವು ನಿಮಗೇ ಸರಿಯಾಗಿ ಕಾಣದೇ ಬದಲಾಯಿಸುವಿರಿ. ಇನ್ನೊಬ್ಬರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದು ಸರಿ ಕಾಣದು. ಸಂಗಾತಿಯ ಆಯ್ಕೆಯು ಗೊಂದಲವಾಗಿರುವುದು. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ಹಳೆಯ ಪ್ರೀತಿಯು ನೆನಪಾಗಿ ಮೌನವಾಗುವಿರಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ದೃಷ್ಟಿಯಲ್ಲಿ ಸ್ವಾರ್ಥಿಯಂತೆ ಕಾಣಿಸುವಿರಿ. ಯಾವುದನ್ನೂ ಅನುಭವಿಸಲೂ ಯೋಗ್ಯವಾದ ಕಾಲವು ಬೇಕಾಗುವುದು. ಇಂದು ನೀವು ಯಾವುದಾದರೂ ವಿಚಾರವನ್ನು ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ.