AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 31 May: ಇಂದು ಈ ರಾಶಿಯವರಿಂದ ಬಾರದ ಸಮಯಕ್ಕೆ ವ್ಯಥೆ

Horoscope Today 31 May: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಪೂರ್ಣಿಮಾ ತಿಥಿಯ ಭಾನುವಾರದಂದು ಹೇಳಿಕೊಳ್ಳಲಾಗದ ಸಂಕಟ, ತೋರಿಕೆಯಿಂದ ಅಸಮಾಧಾನ, ಆಪ್ತರ ಮಾತಿನಿಂದ ಅಪನಂಬಿಕೆ, ನಿಮ್ಮ ಮಾತಿನ ಅರ್ಥದ ಬದಲಾವಣೆ, ದ್ವೇಷ ವರ್ಧನೆ ಇವೆಲ್ಲ ಈ ದಿನದ ಭವಿಷ್ಯ.

Horoscope Today 31 May: ಇಂದು ಈ ರಾಶಿಯವರಿಂದ ಬಾರದ ಸಮಯಕ್ಕೆ ವ್ಯಥೆ
ದಿನ ಭವಿಷ್ಯImage Credit source: tv9 kannada
Lakshmi Hegde
| Edited By: |

Updated on: May 31, 2026 | 12:30 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಪರಿಘ, ಕರಣ : ಬವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:12 – 18:48, ಯಮಗಂಡ ಕಾಲ 12:22 – 13:59, ಗುಳಿಕ ಕಾಲ 15:35 – 17:12.

ಮೇಷ ರಾಶಿ: ಏಕಾಗ್ರತೆಗೆ ನಾನಾ ಪ್ರಕಾರದಲ್ಲಿ ಪರೀಕ್ಷೆಗಳು ಆಗಬಹುದು. ನಿಮ್ಮನ್ನು ಹುಡುಕಿಕೊಂಡು ಬಂದವರಿಗೆ ಸ್ವಲ್ಪ ಸಮಯವನ್ನಾದರೂ ಕೊಡಬೇಕಾಗುವುದು. ಹಣಕಾಸು ಪ್ರಗತಿಮಾರ್ಗದಲ್ಲಿದೆ ಆದರೆ ಯೋಚಿಸಿ ವೆಚ್ಚಮಾಡಿ. ಪ್ರೀತಿಯಲ್ಲಿ ನಿಗೂಢತೆಯ ಬದಲಿಗೆ ಸ್ಪಷ್ಟತೆ ಅಗತ್ಯವಿದೆ. ಕಾನೂನು ಸಂಬಂಧಿತ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಅನಿರೀಕ್ಷಿತವಾಗಿ ಸಿಕ್ಕ ಸಂಪತ್ತನ್ನು ಯಾರಿಗಾದರೂ ಕೊಡುವಿರಿ. ಬಹಳಷ್ಟು ಕಾರ್ಯಗಳಿದ್ದರೂ ಎಲ್ಲವನ್ನೂ ಬಿಟ್ಟು ಆರಾಮಾಗಿ ಇರುವಿರಿ.

ವೃಷಭ ರಾಶಿ: ದೂರಪ್ರಯಾಣ ಸುಖಕರವಾಗಿ ಇರುವುದು.‌ ಧಾರ್ಮಿಕವಾದ ನಂಬಿಕೆಯುಳ್ಳ ನೀವು ತೀರ್ಥಕ್ಷೇತ್ರಗಳೋ ದೇವಾಲಯಕ್ಕೋ ಭೇಟಿ ಕೊಡುವಿರಿ. ಪರರ ಪ್ರಶಂಸೆಯನ್ನು ಹೃದಯದಲ್ಲಿ ಧರಿಸಿ. ಕೆಲಸದ ಮೆಚ್ಚುಗೆಗಳು ಸಂತೋಷವನ್ನು ಉಂಟುಮಾಡುತ್ತವೆ. ಹಣಕಾಸು ವಿಷಯದಲ್ಲಿ ಜಾಗ್ರತೆ ಅಗತ್ಯವಿದೆ. ಕುಟುಂಬದಲ್ಲಿ ಚಿಕ್ಕಪುಟ್ಟ ಮನಸ್ತಾಪ ಉಂಟಾಗಬಹುದು. ವಿದ್ಯಾರ್ಥಿಗಳು ಶುಭ ಫಲಿತಾಂಶದಿಂದ ಸಂತೋಷಗೊಳ್ಳುವರು.

ಮಿಥುನ ರಾಶಿ: ಇಂದು ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಆಲಸ್ಯ ಬೇಡ. ಸ್ವಂತ ಭೂಮಿಯನ್ನು ಮಾರುವ ಸ್ಥಿತಿಯು ಎದುರಾದೀತು. ಕೆಟ್ಟ ಅನುಭವಗಳನ್ನು ಆತ್ಮೀಯರ ಜೊತೆ ಹಂಚಿಕೊಳ್ಳುವಿರಿ. ಹಳೆಯ ವಿಷಯಗಳನ್ನು ನೆನೆಸಿಕೊಳ್ಳದೇ ಪ್ರಸ್ತುತದತ್ತ ಗಮನ ಹರಿಸಿ. ಹೂಡಿಕೆಯೊಳಗಿನ ಲಾಭದಿಂದ ಹಣಕಾಸು ಬೆಂಬಲ ಸಿಗಬಹುದು. ಜವಾಬ್ದಾರಿಯುತ ಸ್ಥಾನದಲ್ಲಿದ್ದರೆ ನಿಮ್ಮ ಕೆಲಸಗಳು ಅಚ್ಚುಕಟ್ಟಾಗಿ ಇರಬೇಕಿದೆ.

ಕರ್ಕಾಟಕ ರಾಶಿ: ದಾಂಪತ್ಯದಲ್ಲಿ ಉಂಟಾದ ವೈಮನಸ್ಯವನ್ನು ಪ್ರಕಟಗೊಳಿಸಿದೇ ಅಲ್ಲಿಯೇ ಸರಿಮಾಡಿಕೊಳ್ಳಿ. ಮನೆಗೆ ಊಹಿಸಿದ್ದಕ್ಕಿಂತ ಹೆಚ್ಚಿನವರ ಆಗಮನವಾಗಲಿದೆ, ಆತಂಕ ಹೆಚ್ಚುಮಾಡಿಕೊಳ್ಳುವಿರಿ. ಮಾತುಗಳು ಹೊಸ ಅವಕಾಶಗಳನ್ನು ತಂದೀತು. ಕಾನೂನು ಕೆಲಸದಲ್ಲಿ ಎಚ್ಚರಿಕೆ ಇರಲಿ. ಹಣಕಾಸು ಒತ್ತಡದಿಂದ ಚಿಕ್ಕ ಏರುಪೇರು ಆಗಬಹುದು. ಎಲ್ಲರ ಜೊತೆ ಜಗಳವಾಡುತ್ತ ಇರುವುದು ನಿಮಗೆ ಇಷ್ಟವಾಗಬಹುದು. ಆಸ್ತಿಯ ವಿಚಾರದಲ್ಲಿ ಆಸೆಯನ್ನು ಅತಿಯಾಗಿ ಇಟ್ಟುಕೊಳ್ಳುವಿರಿ.

ಸಿಂಹ ರಾಶಿ: ಸಾಮಾಜಿಕ ಕಾರ್ಯದಲ್ಲಿ ನಿಮಗೆ ಆಸಕ್ತಿಯು ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ಜಾಣೆ ಅಗತ್ಯ. ಮೌಖಿಕ ವಿಚಾರವನ್ನು ಯಾರೂ ಗಂಭೀರವಾಗಿ ಪರಿಗಣಿಸಲಾರರು. ಸಣ್ಣ ಖರ್ಚು ಕೂಡ ದೊಡ್ಡದಾಗಬಹುದು. ಕುಟುಂಬದವರ ಭಾವನೆಗಳಿಗೆ ಪ್ರಾಮುಖ್ಯತೆ ನೀಡಿ. ದೂರದ ಸಂಬಂಧಿಯವರಿಂದ ಸಂವೇದನೆಗಳ ಬದಲಾವಣೆ ಉಂಟಾಗಬಹುದು. ಮೋಹದಿಂದ ಸರಿ ತಪ್ಪುಗಳ ವಿವೇಚನೆ ದೂರಾಗುವುದು. ಯಾರಾದರೂ ನಿಮ್ಮನ್ನು ತೆಗಳಿದರೆ ಅದನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸಿ.

ಕನ್ಯಾ ರಾಶಿ: ನಿಮ್ಮ ಮನಸ್ಸು ಅತಿ ಚಾಂಚಲ್ಯದಿಂದ ಇರಲಿದ್ದು, ಕೆಲಸವು ಹಾಳಾಗಬಹುದು. ಖರ್ಚಿಲ್ಲದೇ ಎಲ್ಲ ಓಡಾಟವನ್ನು ಮಾಡುವ ಯೋಚನೆ. ಕೆಲಸದಲ್ಲಿ ನಿಮ್ಮ ಚುರುಕು ಮೆಚ್ಚುಗೆಯನ್ನು ಗಳಿಸಬಹುದು. ಹಳೆಯ ಹೂಡಿಕೆಗಳು ಲಾಭದ ಸಂಕೇತ ತೋರಿಸುತ್ತವೆ. ಮನೆಯ ವಿಷಯದಲ್ಲಿ ಹೆಚ್ಚು ಸಮಯ ಕೊಡಬೇಕಾಗಬಹುದು. ಕೋಪದಿಂದ ಶಾಂತವಾಗಲು ಹಲವಾರು ದಾರಿಗಳನ್ನು ಕಂಡುಕೊಳ್ಳುವಿರಿ. ಬಂಧುಗಳ ಜೊತೆ ಆತ್ಮೀಯ ಒಡನಾಟ ಮಾಡುವಿರಿ.

ತುಲಾ ರಾಶಿ: ನೆರೆ-ಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಿ. ಮೇಲಧಿಕಾರಿಗಳಿಂದ ಕ್ಷಣಕಾಲ ತಪ್ಪಿಸಿಕೊಂಡರೆ ಅಷ್ಟೇ ಸಾಕು. ನಿಮ್ಮ ಕಾರ್ಯಕ್ಕೆ ವಿದೇಶದಿಂದ ಕರೆ ಬರಬಹುದು. ಹೂಡಿಕೆಗೆ ಮೊದಲು ಎಲ್ಲವನ್ನೂ ಅಧ್ಯಯನ ಮಾಡಿ. ಕುಟುಂಬದವರೊಂದಿಗೆ ಕಳೆಯುವ ಸಮಯ ಹೃದಯ ತಣಿಸುತ್ತದೆ. ನಿಮ್ಮ ತಪ್ಪನ್ನು ಎಲ್ಲರೆದು ಒಪ್ಪಿಕೊಳ್ಳಲು ಆಗದು. ಅಧಿಕ ಆಸ್ತಿಯೇ ನಿಮಗೆ ತೊಂದರೆಯನ್ನು ಉಂಟುಮಾಡಬಹುದು.

ವೃಶ್ಚಿಕ ರಾಶಿ: ಸಾಲಬಾಧೆ ಎದುರಾಗಲಿದ್ದು ಸಮಸ್ಯೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಹಠವನ್ನು ಮುಂದಿಡುವುದು ಬೇಡ. ಒಂಟಿಯಾಗಿಯೇ ಇರಬೇಕಾಗುವುದು. ಕೆಲಸದಲ್ಲಿ ಅವಕಾಶಗಳು ಸಿಗಬಹುದು ಆದರೆ ತೀರ್ಮಾನದಲ್ಲಿ ತಾಳ್ಮೆ ಅಗತ್ಯ. ಖರ್ಚುಗಳು ನಿಮ್ಮ ಮೇಲೆ ಒತ್ತಡ ತರುತ್ತವೆ. ಮನೆಯ ಅಲಂಕರಣದ ಚಿಂತನೆ ಮೂಡಬಹುದು ಆದರೆ ಮುಂದಕ್ಕೆ ಹಾಕುವುದು ಉತ್ತಮ. ಸಂತಾನದ ಬಗ್ಗೆ ನಿಮಗೆ ಅತಿಯಾದ ಆಸೆಯಾಗುವುದು.

ಧನು ರಾಶಿ: ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಧೈರ್ಯದಿಂದ ಕೆಲಸದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ಮಾತಿನಂತೆ ನಡಿಗೆ ನೂಲಿನಂತೆ ಬಟ್ಟೆ ಇರುವಂತೆ ಇರಬೇಕು. ಹಣಕಾಸು ಸ್ಥಿತಿಯಲ್ಲಿ ಸ್ಥಿರತೆ ಇರುತ್ತದೆ. ಖರ್ಚುಗಳಲ್ಲಿ ನಿಯಂತ್ರಣ ವಹಿಸಿ. ಮನೆಯವರು ನಿಮ್ಮ ಸಮಯ ಮತ್ತು ಪ್ರೀತಿಗೆ ಕಾಯುತ್ತಿದ್ದಾರೆ. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ಇಷ್ಟವಾಗದು.

ಮಕರ ರಾಶಿ: ಕಾರ್ಯದ ಒತ್ತಡ ನಿಮ್ಮನ್ನು ಇಂದು ಬಂಧಿಸಿ ಇಡಲಿದೆ. ಹೊಸ ವಸ್ತ್ರದ ಖರೀದದಿಯಾಗಲಿದೆ‌. ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಿದರೂ ಮನಸ್ಸು ಬೇರೆಡೆ ಇರಬಹುದು. ಹಣಕಾಸು ಸ್ಥಿತಿಯಲ್ಲಿ ನಿರ್ವಹಣಾ ಜಾಣ್ಮ ಅಗತ್ಯ. ಕೈ ಮೀರಿದ ಆರೋಗ್ಯವನ್ನು ನಿಯಂತ್ರಣಕ್ಕೆ ತರಲಾಗದು. ಸಹೋದ್ಯೋಗಿಯಿಂದ ಸ್ಪರ್ಧಾತ್ಮಕ ಮನೋಭಾವನೆ ಎದುರಾಗಬಹುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು.

ಕುಂಭ ರಾಶಿ: ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಯಾರ ಮೇಲೂ ದ್ವೇಷವನ್ನು ಸಾಧಿಸಿ ಆಗುವುದೇನಿಲ್ಲ. ಸಮಯ ಹಾಳು ಅಷ್ಟೇ. ಉದ್ಯೋಗದಲ್ಲಿ ಚುರುಕು ಮತ್ತು ಯೋಜನೆ ಮುಖ್ಯ. ಹಣಕಾಸಿನಲ್ಲಿ ಸ್ಥಿರತೆ ಇದ್ದರೂ ಸಾಲ ಅಥವಾ ಸಾಲಕೊಡಿಕೆ ಬೇಡ. ಪ್ರೀತಿಯಲ್ಲಿ ಸಹನಶೀಲತೆಯಿಂದ ಸ್ಪಂದಿಸಿ, ಅತಿವಿಚಾರ ಬೇಡ. ನಿಮ್ಮ ತಂದೆಯ ಜೊತೆ ಸ್ನೇಹದ ಸಂಬಂಧವನ್ನು ಇಟ್ಟುಕೊಳ್ಳುವಿರಿ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು.

ಮೀನ ರಾಶಿ: ಉದ್ಯೋಗ ಸೃಷ್ಟಿಗೆ ಬೇಕಾದ ಬಂಡವಾಳವು ಸಿಗಲಿದೆ. ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಹಣಕಾಸು ಸಂಬಂಧಿತ ವಿಷಯಗಳು ನಿಮ್ಮ ಗಮನಕ್ಕೆ ಬರುತ್ತವೆ. ನೀವು ಸೇವಿಸುವ ಔಷಧ ಅಡ್ಡ ಪರಿಣಾಮ ನೀಡಬಹುದು. ತಪ್ಪುಗಳು ನಡೆದಾಗ ನಿಮ್ಮ ಪರವಾದ ಮಾತುಗಳು ಕೇಳಿಸದೇ ಇರಬಹುದು. ಸಾಲಕ್ಕೆ ಏನನ್ನಾದರೂ ಅಡವಿಡಬೇಕಾಗಬಹುದು. ವಾಹನಕ್ಕಾಗಿ ಖರ್ಚು ಮಾಡಬೇಕಾಗುವುದು. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು.

ಲೋಹಿತ ಹೆಬ್ಬಾರ್-8762924271 (what’s app only)

Follow Us
Lakshmi Hegde
Lakshmi Hegde
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!