AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಯಾವ ಉಪಾಯದಿಂದಲೂ ಗೆಲ್ಲಲಾಗದು..‌

Horoscope Today June 17: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯ ಬುಧವಾರದಂದು ಸುಪ್ತ ಪ್ರೇಮ ಪ್ರಕಟ, ಸಂಗಾತಿಯ ಜೊತೆ ವಿಹಾರ, ಹಳೆಯ ವಿಚಾರಗಳ ವಿಸ್ಮರಣೆ,ನಿರುದ್ಯೋಗ ಭೀತಿ, ಅಗೌರವದಿಂದ ಬೇಸರ, ಹಣದ ಮದದಿಂದ ಸೋಲು ಇವೆಲ್ಲ ಈ ದಿನದಲ್ಲಿ ಇರಲಿದೆ.

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಯಾವ ಉಪಾಯದಿಂದಲೂ ಗೆಲ್ಲಲಾಗದು..‌
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 17, 2026 | 12:18 AM

Share

ಮೇಷ ರಾಶಿ:

ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಪ್ರೇಮ ಜೀವನವು ಉತ್ತಮವಾಗಿರುತ್ತದೆ. ಅತಿಯಾದ ನೋವು ಕೊಡುವುದನ್ನು ಇಟ್ಟಕೊಳ್ಳಲಾರಿರಿ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ. ಸರಿಯಾದ ಕೆಲಸವನ್ನು ಸರಿ ಇಲ್ಲ‌ ಎಂದು ಹೇಳಿ ನಿಮ್ಮನ್ನು ಕುಗ್ಗಿಸಬಹುದು. ಇದಾವುದಕ್ಕೂ ಬಗ್ಗುವ ಅವಶ್ಯಕತೆ ಇಲ್ಲ. ನ್ಯಾಯಲಯದ ವ್ಯವಹಾರಗಳಲ್ಲಿ ನಿಮಗೆ ಶುಭಸಮಾಚಾರ ಇರುತ್ತದೆ.

ವೃಷಭ ರಾಶಿ:

ಸಂಪತ್ತಿನ ಅನಿರೀಕ್ಷಿತವಾಗಿ ಖರ್ಚಾಗಲಿದೆ. ಪ್ರೇಮ ಜೀವನದಲ್ಲಿ ಹೊಸ ರೋಮಾಂಚಕಾರಿ ತಿರುವುಗಳು ಬರುತ್ತವೆ. ಕಳೆಯದೇ ಇಂದು ಪಡೆದುಕೊಳ್ಳುವ ಆಸೆ ಬೇಡ. ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಬಲವಾಗಿರುತ್ತದೆ. ವಿಚಾರ ಸಂಕೀರ್ಣದಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಸಣ್ಣ ವ್ಯಾಪಾರಿಗಳಿಗೆ ಹೆಚ್ಚು ವ್ಯವಹಾರ ಆಗುವ ಸಾಧ್ಯತೆಗಳಿವೆ. ಧನದ ಆದಾಯವು ನಿರೀಕ್ಷೆಯನ್ನು ಪೂರ್ಣವಾಗಿ ತಲುಪದು.

ಮಿಥುನ ರಾಶಿ:

ಮನೆಗೆ ಅತಿಥಿಗಳ ಆಗಮನವು ಸಂತೋಷದ ವಾತಾವರಣವನ್ನು ಸೃಷ್ಟಿಸುತ್ತದೆ. ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಉತ್ತಮ ದಿನವಾಗಿದೆ. ವೃತ್ತಿಪರ ಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸಲಾಗುತ್ತದೆ. ನಿಮಗೆ ಇಂದು ಯಾವುದೇ ವಿಚಾರ ಅತಿ ಎಂದು ಕಂಡರೆ ಅದನ್ನು ಬಿಡಿ.‌ ತಂದೆಯಿಂದ ನಿಮ್ಮ ವ್ಯವಹಾರಗಳಿಗೆ ಸಹಕಾರ, ಸಹಾಯ ದೊರೆಯುತ್ತದೆ. ವೃತ್ತಿಯಲ್ಲಿ ಯಾವುದೇ ರೀತಿ ವ್ಯತ್ಯಾಸವಿಲ್ಲ. ಪ್ರಯಾಣವು ಅನಿವಾರ್ಯವಾದರೂ ಅದರಿಂದ ಶುಭ ಸುದ್ದಿಯು ನಿಮಗೆ ಇರುವುದು.

ಕರ್ಕಾಟಕ ರಾಶಿ:

ವಿದ್ಯುತ್ ಉಪಕರಣಗಳಿಂದ ಹಣವು ಖರ್ಚಾಗಬಹುದು. ಉದ್ಯಮಿಗಳು ಹೊಸ ಸ್ಥಳದಲ್ಲಿ ವ್ಯವಹಾರ ಪ್ರಾರಂಭಿಸಲು ಹಣವನ್ನು ಪಡೆಯಬಹುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಆಯೋಜಿಸುವುದು ಸಾಧ್ಯ. ಇದು ಜೀವನದಲ್ಲಿ ಸಂತೋಷವನ್ನು ತರುತ್ತದೆ. ಶ್ರಮಕ್ಕೆ ಯೋಗ್ಯ ಫಲಿತಾಂಶ ಸಿಗದೇ ಇರಬಹುದು. ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು. ಇನ್ನೊಬ್ಬರ ಬಗ್ಗೆ ಸದಾ ಅಸಮಾಧಾನವಿರಲಿದೆ.

ಸಿಂಹ ರಾಶಿ:

ಪ್ರಭಾವಿಗಳ ಸಹಾಯವನ್ನು ಉದ್ಯೋಗಕ್ಕೆ ಬಳಸಿಕೊಳ್ಳುವಿರಿ. ಮನೆ ನಿರ್ಮಾಣ ಮಾಡುತ್ತಿದ್ದವರಿಗೆ ಇದ್ದ ಅಡೆತಡೆಗಳು ಸ್ವಲ್ಪಮಟ್ಟಿಗೆ ದೂರವಾಗಲಿದೆ. ಗುರಿಗಳನ್ನು ಸಾಧಿಸಲು ನೀವು ಪ್ರೇರೇಪಿಸಲ್ಪಡುತ್ತೀರಿ. ಆಸ್ತಿಯನ್ನು ಖರೀದಿಸಲು ಇಂದು ಉತ್ತಮ ದಿನವಾಗಿರುತ್ತದೆ. ವೃತ್ತಿಪರ ಜೀವನದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ನಿಮ್ಮ ಮೇಲೆ‌ ನಂಬಿಕೆಯು ಕಡಿಮೆಯಾದೀತು. ಹೂಡಿಕೆಯ ವಿಚಾರದ ಬಗ್ಗೆ ಚರ್ಚೆ ನಡೆಸುವಿರಿ.

ಕನ್ಯಾ ರಾಶಿ:

ಸಂಗಾತಿಯ ಜೊತೆ ಅನೌಪಚಾರಿಕ ಹರಟೆಯಿಂದ ಕಾಲವನ್ನು ಕಳೆಯುವಿರಿ. ಕಾಲಕ್ಷೇಪಕ್ಕೆ ಯಾವುದಾದರೂ ಉತ್ತಮವರ ಸಂಗ ಸಿಗಲಿದೆ. ನಿಮಗೆ ಹೊಸ ಸುವರ್ಣ ಅವಕಾಶಗಳು ಸಿಗುತ್ತವೆ. ನಿಮ್ಮ ಕುಟುಂಬದಲ್ಲಿ ನೀವು ಆಕರ್ಷಣೆಯ ಕೇಂದ್ರಬಿಂದುವಾಗಿ ಉಳಿಯುತ್ತೀರಿ. ಬಂಧುಗಳ ನಡುವೆ ವಾಗ್ವಾದವು ನಡೆದು ವೈಮನಸ್ಯ ಉಂಟಾಗಬಹುದು. ಕಾರ್ಯದ ಒತ್ತಡದಿಂದ ಸಂಗಾತಿಯು ನಿಮ್ಮ ಜೊತೆ ಸರಿಯಾಗಿ ಮಾತನಾಡದೇ ಇರುವರು.

ತುಲಾ ರಾಶಿ:

ಹೂಡಿಕೆಗೆ ಬೇಕಾದ ಆಲೋಚನೆಗಳನ್ನು ಮಾಡಬಹುದು. ಮನೆಯನ್ನು ಕಟ್ಟಲು ಸಾಲವನ್ನು ಮಾಡಬೇಕಾಗುವುದು. ತಪ್ಪಿಸಿಕೊಳ್ಳಲು ಅಸತ್ಯವನ್ನು ಹೇಳಬೇಕಾಗುವುದು. ಸಂಗಾತಿಯಿಂದ ನಿಮಗೆ ಬೆಂಬಲ ಸಿಗುತ್ತದೆ. ನೀವು ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುತ್ತೀರಿ. ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಚಿತ್ತ ಚಾಂಚಲ್ಯ ನಿಮ್ಮನ್ನು ಒಂದು ಕಡೆಗೆ ಇರಲು ಬಿಡದು. ವೃತ್ತಿಯಲ್ಲಿ ಹೆಚ್ಚು ತಿರುಗಾಟವಿರಲಿದೆ. ಸಂಗಾತಿಯ ಸಿಡುಕಿನ ನುಡಿಗಳು ನಿಮಗೆ ನೋವು ತರುತ್ತದೆ.

ವೃಶ್ಚಿಕ ರಾಶಿ:

ಇಂದು ದೈನಂದಿನ ಸಂಪಾದನೆಯನ್ನು ಮಾಡುವವರಿಗೆ ಕಷ್ಟವಾಗುವುದು. ಜೀವನದಲ್ಲಿ ಎಲ್ಲಾ ಕೆಲಸಗಳ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿ ಅಡೆತಡೆಗಳು ದೂರವಾಗುತ್ತವೆ. ಕುಟುಂಬದೊಂದಿಗೆ ಧಾರ್ಮಿಕ ಸ್ಥಳಕ್ಕೆ ಪ್ರಯಾಣಿಸುವ ಸಾಧ್ಯತೆ ಇರುತ್ತದೆ. ಅದನ್ನು ಪಡೆದುಕೊಳ್ಳಲು ಕಷ್ಟವಾದೀತು. ನೌಕರರು ನಿಮ್ಮ‌ಆಪ್ತರಾಗಿ ನಿಮ್ಮ ಕೆಲಸದಲ್ಲಿ ಭಾಗಿಯಾಗುವರು.

ಧನು ರಾಶಿ:

ವಿವಾಹವು ನಿಮಗೆ ಬಹಳ ವಿಳಂಬವೆಂದು ಅನ್ನಿಸಬಹುದು. ಚಿಂತೆಗೆ ಅವಕಾಶ ಕೊಡದೇ ಗುರಿಯ ಕಡೆ ಗಮನವಿರಲಿ. ಜೀವನದಲ್ಲಿ ಎಲ್ಲಾ ಕೆಲಸಗಳ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿ ಅಡೆತಡೆಗಳು ದೂರವಾಗುತ್ತವೆ. ವಸ್ತ್ರಾಭರಣಗಳನ್ನು ಮಿತವಾಗಿ ಖರೀದಿಸಿ. ವಯಸ್ಕರಿಗೆ ವಿವಾಹ ಸಂಬಂಧವು ಒದಗಿ ಬರಬಹುದು.

ಮಕರ ರಾಶಿ:

ಕಚೇರಿಯಲ್ಲಿ ಪ್ರಮುಖ ಕೆಲಸದ ಜವಾಬ್ದಾರಿ ಸಿಗಬಹುದು. ಮನೆ ಮತ್ತು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭ ಇರುತ್ತದೆ. ತಾಯಿಯ ಆಶೀರ್ವಾದವನ್ನು ಪಡೆದು ಶುಭಕಾರ್ಯಕ್ಕೆ ಮನೆಯಿಂದ ಹೊರಡಿ. ರಾಜಕೀಯ ವ್ಯಕ್ತಿಗಳಿಗೆ ಅವರ ವಿರೋಧಿಗಳಿಂದಲೇ ತೊಂದರೆಯಾಗುವ ಸಾಧ್ಯತೆ ಇದೆ. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿರುವಿರಿ. ಹಣಕಾಸಿನ ವಿಚಾರದಲ್ಲಿ ಇನ್ನೊಬ್ಬರನ್ನು ಅನುಸರಿಸುವ ಅವಶ್ಯಕತೆ ಇಲ್ಲ.

ಕುಂಭ ರಾಶಿ:

ಮನೆಯಿಂದ ದೂರದಲ್ಲಿ ವಾಸಿಸುವ ನಿಮ್ಮಿಂದ ಇಂದು ಪೋಷಕರಿಗೆ ಖುಷಿಯಾಗುವುದು. ಕಚೇರಿಯಲ್ಲಿ ಪ್ರಮುಖ ಕೆಲಸದ ಜವಾಬ್ದಾರಿ ಸಿಗಬಹುದು. ಮನೆ ಮತ್ತು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭ ಇರುತ್ತದೆ. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು. ಏನನ್ನಾದರೂ ಮಾಡಬೇಕು ಎಂಬ ಮಹತ್ತರವಾದ ಯೋಜನೆಯನ್ನು ಮುಂದೂಡುವಿರಿ.

ಮೀನ ರಾಶಿ:

ಹಣವನ್ನು ಉಳಿಸಲು ಯತ್ನದಲ್ಲಿ ಸೋಲಾಗುವುದು. ಪ್ರತಿಯೊಂದು ಕೆಲಸದ ಅಪೇಕ್ಷಿತ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ. ವ್ಯವಹಾರವು ವಿಸ್ತರಿಸುತ್ತದೆ. ಶೈಕ್ಷಣಿಕ ಕೆಲಸದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣಿಸುವ ಸಾಧ್ಯತೆಗಳಿವೆ. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ. ಉನ್ನತವಾದ ಸ್ಥಾನಕ್ಕೆ ಏರಲು ನಿಮ್ಮೆದುರು ಅವಕಾಶವು ತೆರೆದುಕೊಳ್ಳುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಶೂಲಿ, ಕರಣ : ಭದ್ರ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:21 – 13:57, ಯಮಗಂಡ ಕಾಲ 07:31 – 09:08, ಗುಳಿಕ ಕಾಲ 10:44 – 12:21

-ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ