AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ…

Horoscope Today June 20: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಶನಿವಾರದಂದು ತಂತ್ರಜ್ಞತೆ, ಮನಸ್ಸಿನಿಂದ ನಿಯಂತ್ರಣ, ಸಾಧಿಸುವ ಹುಮ್ಮಸ್ಸು, ಪ್ರತ್ಯುಪಕಾರ, ಸಂತಾನದ ಖುಷಿ, ದೇಹ ತೂಕದಿಂದ ಬಾಧೆ, ನಿರ್ಧಾರಕ್ಕೆ ಹಿಂದೇಟು ಇವೆಲ್ಲ ಈ ದಿನದ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ...
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 20, 2026 | 12:40 AM

Share

ಮೇಷ ರಾಶಿ:

ಹೊಂದಾಣಿಕೆಯಿಂದ‌ ಕಾರ್ಯವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಖುಷಿಯಾಗಿರುವಂತೆ ನಿಮ್ಮ ಸುತ್ತಲನ್ನು ರೂಪಿಸಿಕೊಳ್ಳಿ. ಕೆಳಗಿಳಿದ ಚಕ್ರ ಮೇಲೆ ಏರಲೇ ಬೇಕು. ಪೂರ್ಣ ವಿಚಾರವನ್ನು ತಿಳಿದು ಮಾತನಾಡಿ.‌ ಅರ್ಧವಿಷಯವನ್ನು ತಿಳಿದು ಮಾತನಾಡಿದರೆ ಇನ್ನೊಬ್ಬರಿಗೆ ನೋವಾದೀತು. ಅವರ ಶಾಪಕ್ಕೂ ಗುರಿಯಾಗುವಿರಿ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು.

ವೃಷಭ ರಾಶಿ:

ಯಾವುದಕ್ಕೂ ಇಂತಹ ಸನ್ನಿವೇಶ ಎದುರಾದಾಗ ಮೊದಲು ಯೋಚಿಸಿ. ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ ಇದೆ. ಪ್ರತಿಭಾನ್ವಿತರಿಗೆ ಯಾವ ಅನುಕೂಲತೆಗಳೂ ಸಿದ್ಧಿಸದು. ಕುತೂಹಲದ ನಿಮ್ಮ ಸ್ವಭಾವವು ಇಂದು ಎಲ್ಲರಿಗೆ ಗೊತ್ತಾಗಬಹುದು. ಸಭ್ಯತೆಯನ್ನು ರೂಢಿಸಿಕೊಳ್ಳುವುದು ಉತ್ತಮ. ಎಲ್ಲರ ಜೊತೆ ಸೇರಿಕೊಳ್ಳುವುದು ಕೂಡಲೇ ಆಗದು. ಯಾರಾದರೂ ಏನನ್ನಾದರೂ ಬಂದು ಕೇಳಿದರೆ ಇಲ್ಲವೆನ್ನದೇ, ಇರುವಷ್ಟರಲ್ಲಿ ಅಲ್ಪವನ್ನಾದರೂ ಕೊಡಿ. ವ್ಯಾಪಾರಸ್ಥರು ಲಾಭವನ್ನು ಗಳಿಸುವತ್ತ ಯೋಜನೆ ರೂಪಿಸಿಕೊಳ್ಳುವುದು.

ಮಿಥುನ ರಾಶಿ:

ಬಲ್ಲವರಾದ ತಾವು ಸದಾ ಪ್ರಯತ್ನಶೀಲರು. ನಿರಂತರ ಪ್ರಯತ್ನಕ್ಕೆ ಫಲವಿಲ್ಲದಿಲ್ಲ. ಸಮಯವನ್ನು ನೀರೀಕ್ಷಿಸುತ್ತ ಕಾಲ ಕಳೆಯಬೇಕು. ನಿಮ್ಮ ಶತ್ರುವಾಗಿ ಯಾರಿದ್ದಾರೆ ಎನ್ನುವುದು ಗೊತ್ತಾಗದು. ಸಾಗುವ ದಾರಿಯು ಎಷ್ಟೇ ಚೆನ್ನಾಗಿದ್ದರೂ ಒಮ್ಮೆ ಹಿಂತಿರುಗಿ ನೋಡುವುದು ಒಳ್ಳೆಯದು. ಅನ್ಯರ ಜೊತೆಗಿನ ಅಸಂಬದ್ಧ ಮಾತುಕತೆಗಳನ್ನು ನಿಲ್ಲಿಸಿ. ದೈವಾನುಗ್ರಹದ ಅವಶ್ಯಕತೆ ಬಹಳ ಇದೆ. ಭವಿಷ್ಯದ ಬಗ್ಗೆ ಏನೇನೋ ಕಲ್ಪನೆಯನ್ನು ಇಟ್ಟುಕೊಂಡು ಹತಾಶರಾಗಬೇಕಾಗುವುದು. ನಿಮ್ಮ ಮನಸ್ಸಿಗೆ ಬಾರದೇ ಇರುವ ಯಾವುದನ್ನೂ ನೀವು ಒಪ್ಪಿಕೊಳ್ಳಲಾರಿರಿ.

ಕರ್ಕಾಟಕ ರಾಶಿ:

ಆಕಾಶದಲ್ಲಿ ಕಾಣುವ ಎಲ್ಲ ಮೋಡಗಳೂ ಮಳೆಗರೆಯವು. ಎಲ್ಲರೂ ನಿಮಗೆ ಬೇಕಾದುದನ್ನು ಕೊಡುವವರಲ್ಲಿ ಮಾತ್ರ ಕೇಳಿ. ನಿಜವನ್ನು ಪ್ರೂವ್ ಮಾಡುವ ಸ್ಥಿತಿ ಬರಲಿದೆ. ಮಾತುಗಳಿಂದ ನಿಮಗೆ ಕಿರಿ ಕಿರಿಯಾಗುವ ಸಾಧ್ಯತೆ ಇದೆ. ಮಕ್ಕಳು ಆಸ್ತಿಯ ವಿಚಾರದಲ್ಲಿ ಮಾನಸಿಕ ಹಿಂಸೆ ಕೊಡಬಹುದು. ಸ್ತ್ರೀಯರು ನಿಮಗೆ ಶತ್ರುವಾಗುವರು. ಒಂದೇ ರೀತಿ ಜೀವನ ಶೈಲಿಯಿಂದ ಆಚೆ ಬರುವುದು ನಿಮಗೆ ಮುಖ್ಯವಾದೀತು. ನಿಮ್ಮ ಮಿತಿಯಲ್ಲಿ ನೀವು ಇರುವುದು ಸೂಕ್ತ.

ಸಿಂಹ ರಾಶಿ:

ಹಣವನ್ನು ಉಳಿಸಿಯೇ ಉಳಿಸುತ್ತೇನೆ ಎಂಬ ಹುಂಬುತನ ಬೇಡ. ಅಮೂಲ್ಯವಾದುದನ್ನು ಕಳೆದುಕೊಳ್ಳಬೇಕಾಗಬಹುದು. ತಲೆಯೊಳಗಿದ್ದ ಭೂಮಿಯ ಭಾರ ತಗ್ಗಲಿದೆ. ನಿಮ್ಮ ಬುದ್ಧಿಯ ಕೌಶಲಕ್ಕೆ ಕಛೇರಿಯಲ್ಲಿ ಬೆರಗಾಗುವರು. ಅಂದುಕೊಂಡ ಕಾರ್ಯವನ್ನು ಆರಂಭಿಸುವ ಮೊದಲೇ ಹಿಂದೆ ಹೆಜ್ಜೆ ಇಡಬೇಡಿ. ಹಿತಶತ್ರುಗಳು ನಿಮಗೆ ಏನನ್ನಾದರೂ ಮಾಡಲು ಇಚ್ಛಿಸುವರು. ಆರ್ಥಿಕ ವಿಚಾರದಲ್ಲಿ ಹಿನ್ನಡೆಯಾಗಲಿದೆ. ಬಾಡಿಗೆ ಮನೆಯಲ್ಲಿ ನೀವಿದ್ದರೆ ಕಿರಿಕಿರಿ ಅತಿಯಾದಂತೆ ಅನಿಸುವುದು.

ಕನ್ಯಾ ರಾಶಿ:

ಉದ್ಯೋಗದಲ್ಲಿ ಲಾಭ ಹೆಚ್ಚಲಿದೆ. ದೈವವೇ ನಿಮ್ಮ ಭವಿಷ್ಯವನ್ನು ಕಂಡು ಪೂರ್ವಭಾವಿಯಾಗಿ ಹಣವನ್ನು ಕೂಡಿಡುವಂತೆ ಪ್ರೇರಿಸಿತ್ತು. ಉದ್ಯಮವನ್ನು ನಡೆಸುತ್ತಿದ್ದರೆ, ಆದಾಯದ ಹೊಸಮಾರ್ಗವನ್ನು ಯೋಚಿಸಬೇಕಾಗುವುದು. ನಿಮ್ಮ ಆಸ್ತಿಯನ್ನು ಮಾರಾಟಮಾಡಲು ಆಲೋಚಿಸಿಸುವಿರಿ. ನಿಮ್ಮ ಅಸಲಿಯತ್ತನ್ನು ತೋರಿಸಲಾಗದು. ನೂತನ ವಾಹನಖರೀದಿಯನ್ನು ಮಾಡಲಿದ್ದೀರಿ. ನಿಮಗೆ ಸಿಗಬೇಕಾದ ಹಣವು ಸಿಗದೇ ಇರುವುದರಿಂದ ಬೇಸರ ಬೇಡ.

ತುಲಾ ರಾಶಿ:

ಇಂದು ಬಂಧುಗಳ ಚುಚ್ಚು ಮಾತು ನಿಮಗೆ ಹಿಡಿಸದು. ಅಲ್ಪ ವ್ಯತ್ಯಾಸದಿಂದ ಹೆಚ್ಚಿನ ಬಾಧೆಯನ್ನು ಪಡಬೇಕಾದೀತು. ಆಪ್ತರಿಗೆ ನೀಡುವ ಉಪದೇಶವು ವ್ಯರ್ಥವಾದೀತು. ಆಪ್ತರು ಹಣವನ್ನು ಕೇಳಿದಾಗ ಇಲ್ಲ ಎನ್ನಲಾಗದು. ಕೊಟ್ಟರೆ ಆರ್ಥಿಕ ಸ್ಥಿತಿಯ ಹದ ಕೆಡುವುದು. ತಾಳ್ಮೆಯಿಂದ ಆದಷ್ಟು ವ್ಯವಹರಿಸಿ. ಮನಸ್ಸನ್ನು ನಕಾರಾತ್ಮಕವಾಗಿ ಹರಿಯಲು ಬಿಡಬೇಡಿ. ಕೃಷಿಗೆ ಸಂಬಂಧಿಸಿದ ಚಟುವಟಿಕೆಲ್ಲಿ ಭಾಗವಹಿಸುವಿರಿ. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ.

ವೃಶ್ಚಿಕ ರಾಶಿ:

ಒತ್ತಾಯದಿಂದ ದೂರದ ಪ್ರಯಾಣಕ್ಕೆ ಹೋಗುವ ಸಾಧ್ಯತೆ ಇದೆ. ನಿಮಗೆ ಇನ್ನಷ್ಟು ಬಲ, ಸ್ಫೂರ್ತಿ ಸಿಗುವುದು. ಇಂದು ನೀವು ಹಲವು ದಿನಗಳಿಂದ ಕಾಡುತ್ತಿರುವ ಅಥವಾ ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಿಕೊಳ್ಳುವಿರಿ. ದುಃಖವನ್ನು ಕಣ್ಣೀರಿನ ಮೂಲಕ ಹೊರಹಾಕಿ ಸಮಾಧಾನ ಮಾಡಿಕೊಳ್ಳುವಿರಿ. ಮೂರ್ಖರಂತೆ ವರ್ತಿಸಿ ಎಲ್ಲರ ನಡುವೆ ನಗೆಪಾಟಲಾಗುವಿರಿ. ಸಂಗಾತಿಯ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿಸುವಿರಿ.

ಧನು ರಾಶಿ:

ಇಂದು ದಂಪತಿಗಳ ನಡುವೆ ಕಲಹವೆದ್ದು ಇಬ್ಬರ ತಪ್ಪುಗಳನ್ನು ಪರಸ್ಪರ ಹೇಳಿ ವಾದ ಮಾಡುವಿರಿ. ಹೂಡಿಕೆಗಳನ್ನು ಮಾಡಿ, ಲಾಭವು ನಿಮ್ಮನ್ನು ಬಂದು ಸೇರುವುದು. ಸ್ನೇಹಿತನಿಗೆ ಧನಸಹಾಯ ಅಥವಾ ಅನುಕೂಲಕರವಾದ ವಾತಾವರಣವನ್ನು ಸೃಷ್ಟಿಸಿಕೊಡುವಿರಿ. ಹೂಡಿಕೆಯ ವಿಚಾರದಲ್ಲಿ ನಂಬಿಕೆ ಉಳಿಯದು. ಮಕ್ಕಳ ವಿದ್ಯಾಭ್ಯಾಸದ ವಿಚಾರಕ್ಕೆ ಸಿಟ್ಟಾಗುವಿರಿ. ಉದ್ಯೋಗದ ಬದಲಾವಣೆಯು ನಿಮಗೆ ಹವ್ಯಾಸದಂತೆ ಆಗುವುದು. ಸರ್ಜನಶೀಲ ವ್ಯಕ್ತಿಗಳಾಗಿದ್ದರೆ ನಿಮಗೆ ಅವಕಾಶಗಳು ಹೆಚ್ಚು ಬರುತ್ತದೆ.

ಇದನ್ನೂ ಓದಿ: ಉದ್ಯೋಗ ಭವಿಷ್ಯ: ಜೂನ್ 14ರಿಂದ 20ರವರೆಗೆ ಈ ರಾಶಿಯವರಿಗೆ ಸಿಗಲಿದೆ ಪ್ರಮೋಷನ್; ನಿಮ್ಮ ರಾಶಿಯ ಉದ್ಯೋಗ ಯೋಗ ಹೇಗಿದೆ?

ಮಕರ ರಾಶಿ:

ನಿಮ್ಮ ರೂಪ ಹಾಗೂ ವ್ಯಕ್ತಿತ್ವ ಸ್ನೇಹಿತರನ್ನು ಗಳಿಸಲು ಸಹಕಾರಿ. ಪರಿಸ್ಥಿತಿಗಳು ಹೇಗೂ ಬರಲಿ, ಮನಸ್ಸು ಮತ್ತು ಬುದ್ಧಿ ದೃಢವಾಗಿರಲಿ. ನಿರೀಕ್ಷಿತವಾದ ಸಂಪತ್ತು ನಿಮಗೆ ಸಿಗಲಿದೆ. ಮಕ್ಕಳು ನಿಮ್ಮ ನಿರೀಕ್ಷೆಯನ್ನು ಹುಸಿಗೊಳಿಸಲಾರರು. ಯಾವುದೇ ವಿಚಾರವನ್ನು ನಿಮ್ಮ ಸಾಮರ್ಥ್ಯ ಹಾಗೂ ವಿದ್ಯೆ ತಕ್ಕಂತೆ ಯೋಚಿಸಿ. ಆಲಸ್ಯದ ಮನೋಭಾವವನ್ನು ನೀವು ಬಿಡಬೇಕಾದೀತು. ಉದ್ವೇಗದಿಂದಾಗಿ ಇಂದಿನ ಉತ್ತಮ ಲಾಭದಾಯಕ ವ್ಯಾಪಾರವನ್ನು ಕಳೆದುಕೊಳ್ಳುವಿರಿ.

ಕುಂಭ ರಾಶಿ:

ನೀವು ನೀಡಿದ ಸಾಲವು ಮರಳಿ ಬರಬಹುದು ಎಂದು ಹೇಳಲು ಸಾಧ್ಯವಿಲ್ಲ. ಪರರ ದುಃಖದಲ್ಲಿ ಭಾಗಿಯಾಗಿ ಮನಸ್ಸನ್ನು ಹಗುರಗೊಳಿಸುವಿರಿ. ಹೇಳಿಸಿಕೊಂಡು ಮಾಡುವುದು ನಿಮಗೆ ಅಭ್ಯಾಸವಾದ ಸಂಗತಿ. ಅಂದುಕೊಂಡಿದ್ದು ಆಗುವುದಿಲ್ಲ ಎಂಬ ನಂಬಿಕೆಯಿಂದ ಹೊರಗೆ ಬನ್ನಿ. ಎಲ್ಲವನ್ನೂ ನಾವಂದು ಕೊಂಡಂತೆ ನಡೆಸಲು ಸಾಧ್ಯವಿಲ್ಲ. ನಿಮ್ಮ ವಿದ್ಯಾರ್ಹತೆಯನ್ನು ಪರೀಕ್ಷಿಸಬಹುದು. ಮಿಶ್ರಫಲವನ್ನು ಪಡೆಯುವಿರಿ. ನಿಮ್ಮ ಸುತ್ತಲಿನ ಜನರು ತಮ್ಮದೇ ಮಿತಿಯಲ್ಲಿ ಇರುವರು.

ಮೀನ ರಾಶಿ:

ಜನರಿಂದ ಕೆಲಸದ ವಿಚಾರದಲ್ಲಿ ಮನ್ನಣೆ ದೊರೆಯಲಿದೆ. ಉಪಕಾರಕ್ಕೆ ಸತ್ಫಲವನ್ನು ಪಡಯಬಹುದಾಗಿದೆ. ಬೇಕಾಗಿರುವುದು ಉಳಿಸಿಕೊಳ್ಳುವುದು ಇಂದು ಕಷ್ಟ. ಕಾರಣಾಂತರಗಳಿಂದ ನಿಂತಿದ್ದ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಮನೆಯಲ್ಲಿ‌ ಪ್ರಶಾಂತವಾದ ವಾತಾವರಣವಿರಲಿದ್ದು ನಿಮಗೆ ಬಹಳ ಖುಷಿ ಎನಿಸುವುದು. ದಿನದಲ್ಲಿ ಶುಭವು ಹೆಚ್ಚಿರಲಿದೆ. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಮಘಾ, ಯೋಗ : ಧ್ರುವ, ಕರಣ : ತೈತಿಲ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:48 – 10:45, ಯಮಗಂಡ ಕಾಲ 13:58 – 15:34, ಗುಳಿಕ ಕಾಲ 05:56 – 07:32

-ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು