
ಕೆಲಸದ ಆರಂಭದಲ್ಲಿ ಇರುವ ಉತ್ಸಾಹ ಅದು ಮುಗಿಯುವ ತನಕ ಉಳಿಯುತ್ತಿಲ್ಲ. ನೀವು ಪ್ರಸ್ತಾವ ಮಾಡಿದ ಪ್ರಾಜೆಕ್ಟ್ ಗಳ ಬಗ್ಗೆ ಆರಂಭದಲ್ಲಿ ಉತ್ಸಾಹ ತೋರುವವರು ನಂತರದಲ್ಲಿ ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ನಿಮ್ಮ ವೇಗಕ್ಕೆ ಸರಿಯಾಗಿ ಕೆಲವು ಬಾರಿ ಸರಿಯಾದ ಬೆಂಬಲ ದೊರೆಯುತ್ತಿಲ್ಲ ಎಂದಾದಲ್ಲಿ ಖಡ್ಗ ಮಾಲಾ ಸ್ತೋತ್ರದ ಶ್ರವಣ ಮಾಡಿ.
ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ನಿರೀಕ್ಷೆ ಹೆಚ್ಚಾದಷ್ಟೂ ಬೇಸರ ಸಹ ಪಡುವಂತೆ ಆಗಲಿದೆ. ಉದ್ಯೋಗ ಸ್ಥಳದಲ್ಲಿ ಒತ್ತಡದ ಸನ್ನಿವೇಶಗಳನ್ನು ಎದುರಿಸುವಂತೆ ಆಗಲಿದೆ. ಚಿನ್ನ- ಬೆಳ್ಳಿ ಅಥವಾ ವಜ್ರಾಭರಣ ಖರೀದಿಗಾಗಿ ಹೆಚ್ಚಿನ ಖರ್ಚು ಮಾಡುವ ಯೋಗ ಇದೆ.
ನಿಮಗೇನೋ ಅತಿ ಉತ್ಸಾಹ ಇರುತ್ತದೆ. ಆದರೆ ಸುತ್ತಮುತ್ತಲಿನವರ ಪರಿಸ್ಥಿತಿ, ಮನಸ್ಥಿತಿಯನ್ನು ಸಹ ಅರ್ಥ ಮಾಡಿಕೊಂಡು ಮಾತುಕತೆ ಆಡುವುದು ಒಳ್ಳೆಯದು. ಹಣಕಾಸಿನ ವಿಚಾರ ಮಾತನಾಡುತ್ತೀರಿ ಅಂತಾದಲ್ಲಿ ಸಾಧ್ಯಾಸಾಧ್ಯತೆ ಬಗ್ಗೆ ಸ್ಪಷ್ಟ ಚಿತ್ರಣ ಇರಬೇಕು. ಮನೆ ನಿರ್ಮಾಣ, ಆಸ್ತಿ ಖರೀದಿಯ ಮಾತುಕತೆಗೆ ತೆರಳುತ್ತಿದ್ದೀರಿ ಅಂತಾದಲ್ಲಿ ಮನೆ ದೇವರನ್ನು ಮನಸ್ಸಿನಲ್ಲಿ ಸ್ಮರಣೆ ಮಾಡಿಕೊಂಡು ಮುಂದುವರಿಯಿರಿ.
ಶ್ರಮ ಹಾಗೂ ಶಿಸ್ತಿನ ಜೀವನಕ್ಕೆ ಪ್ರಾಮುಖ್ಯ ನೀಡುವ ದಿನ ಇದಾಗಿರುತ್ತದೆ. ನೀವು ಕೈಗೆತ್ತಿಕೊಂಡಿರುವ ಕೆಲಸ- ಕಾರ್ಯಗಳು ನಿಧಾನವಾಗಿ ಮುಂದಕ್ಕೆ ಸಾಗಿದರೂ ದೃಢವಾಗಿ ಗುರಿಯತ್ತ ತಲುಪುವ ಸೂಚನೆ ದೊರೆಯುತ್ತದೆ. ಸರ್ಕಾರಿ ಕೆಲಸಗಳು ಹಾಗೂ ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬ ಆಗಬಹುದು. ಆದರೆ ತಾಳ್ಮೆ- ಸಂಯಮದಿಂದ ಮುಂದುವರಿದಲ್ಲಿ ಯಶಸ್ವಿಯಾಗಿ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಲೇಖನ- ಸ್ವಾತಿ ಎನ್.ಕೆ.