
ಲಕ್ಷ್ಮಿದೇವಿಯ ಪಟದ ಮುಂದೆ ಸಕ್ಕರೆ, ಒಣದ್ರಾಕ್ಷಿ ಹಾಗೂ ಖರ್ಜೂರವನ್ನು ಎರಡೆರಡು ಇಟ್ಟು ನೈವೇದ್ಯ ಮಾಡಿ. ಇದನ್ನು ಬೆಳಗ್ಗೆ ಅಥವಾ ಸಂಜೆ ಮಾಡಬಹುದು. ದೀರ್ಘಾವಧಿಗೆ ಮಾಡಿದ್ದ ಹೂಡಿಕೆ ಹಿಂತೆಗೆದುಕೊಳ್ಳಬೇಕಾ ಬೇಡವಾ ಎಂಬ ಗೊಂದಲ ಇದ್ದಲ್ಲಿ ಅದು ನಿವಾರಣೆ ಆಗಲಿದೆ.
ನಿಮಗೆ ಗೊತ್ತಿರುವ ಕೌಶಲ, ವಿದ್ಯೆ ಹಾಗೂ ನಿಮಗೆ ಇರುವಂಥ ಈಗಿನ ಅನುಭವಕ್ಕೆ ಬೇಡಿಕೆ ಹೆಚ್ಚಲಿದೆ. ನಿಮ್ಮಲ್ಲಿ ಕೆಲವರಿಗೆ ಏಕಕಾಲಕ್ಕೆ ನಾಲ್ಕಾರು ಕಡೆಯಿಂದ ಉದ್ಯೋಗದ ಆಫರ್ ಗಳು ಬರಬಹುದು. ಸಂಬಳದ ಜೊತೆಗೆ ಲಾಭದಲ್ಲಿ ಸಹ ಇಂತಿಷ್ಟು ಪರ್ಸೆಂಟ್ ಎಂದು ಕೊಡುವುದಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ನಿಮಗೆ ಪ್ರಸ್ತಾವ ಬರುವಂಥ ಯೋಗ ಇದೆ.
ಬೇಡ ಅಂದುಕೊಂಡಿದ್ದನ್ನೇ ಮಾಡಬೇಕಾದ ಸನ್ನಿವೇಶಗಳು ಸೃಷ್ಟಿ ಆಗಲಿವೆ. ಯಾವ ವ್ಯಕ್ತಿ ಜೊತೆಗೆ ಇನ್ನು ವ್ಯವಹಾರ ಮಾಡಬಾರದು, ಹಣಕಾಸಿನ ವಿಷಯ ಮಾತನಾಡಬಾರದು, ಸಾಲ ಕೇಳಬಾರದು, ಜೊತೆಯಾಗಿ ಕೆಲಸ ಮಾಡಬಾರದು ಹೀಗೆ ಅಂದುಕೊಂಡಿರುತ್ತೀರೋ ಅವುಗಳನ್ನು ಮಾಡಲೇಬೇಕಾದ ಸನ್ನಿವೇಶ ಸೃಷ್ಟಿ ಆಗುತ್ತದೆ. ನಿಮಗೆ ಸಂಪೂರ್ಣವಾಗಿ ಮಾಹಿತಿ ಇರುವ ವಿಷಯಗಳನ್ನು ಮಾತ್ರ ಮಾತನಾಡಿ.
ಸಂತಾನಕ್ಕೆ ಪ್ರಯತ್ನ ಮಾಡುತ್ತಿರುವವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಇನ್ನು ಯಾರು ವೈದ್ಯರ ಮಾರ್ಗದರ್ಶನದಲ್ಲಿ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರಿಗೆ ಆರೋಗ್ಯ ಸಮಸ್ಯೆಗಳು ಅಡೆತಡೆಯಾಗಿ ಇಲ್ಲಿಯವರೆಗೆ ಕಾಡುತ್ತಾ ಇದ್ದಲ್ಲಿ ಅದಕ್ಕೆ ಪರಿಹಾರ ದೊರೆಯಲಿದೆ. ಪರ್ ಫ್ಯೂಮ್, ದುಬಾರಿ ಬ್ರ್ಯಾಂಡ್ ಗಳ ಬಟ್ಟೆ, ಶೂ ಇಂಥವುಗಳ ಮಾರಾಟ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಭಾರೀ ಪ್ರಮಾಣದ ಏರಿಕೆ ಆಗಲಿದೆ.
ಲೇಖನ- ಸ್ವಾತಿ ಎನ್.ಕೆ.