AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 13ರ ದಿನಭವಿಷ್ಯ

Daily Numerology February 12: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 13ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 13, 2026 | 12:15 AM

Share

ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದುಕೊಳ್ಳಿ. ಸಾಧ್ಯವಿದ್ದಲ್ಲಿ ಮಾರನೇ ದಿನಕ್ಕೆ ಪಂಚಾಮೃತ ಅಭಿಷೇಕಕ್ಕೆ ಕೊಟ್ಟು ಬನ್ನಿ. ಹೊಸ ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಲಿದ್ದು, ಆದಾಯಕ್ಕೆ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ದೂರ ಪ್ರಯಾಣಕ್ಕೆ ಹೊರಡಲು ಎಲ್ಲ ಸಿದ್ಧತೆ ಮಾಡಿಕೊಂಡು, ಕೊನೆ ಕ್ಷಣದಲ್ಲಿ ಅದನ್ನು ರದ್ದು ಮಾಡಬೇಕಾದ ಪರಿಸ್ಥಿತಿ ಉದ್ಭವಿಸಲಿದೆ. ಹೊಸ ಸ್ನೇಹಿತರ ಜತೆಗೆ ಸಲುಗೆ ಬೇಡ. ಪಾರಂಪರಿಕ ವೈದ್ಯ ವೃತ್ತಿ ಮಾಡಿಕೊಂಡು ಬಂದಿರುವವರು ಕೆಲವು ಸಮಯ ಬಿಡುವು ತೆಗೆದುಕೊಳ್ಳುವ ತೀರ್ಮಾನ ಮಾಡುವಂತೆ ಆಗಲಿದೆ. ಇತರರ ತಪ್ಪುಗಳು ಕಂಡುಬಂದಲ್ಲಿ ಸಿಟ್ಟಿನಿಂದ ಕೂಗಾಡುವುದು- ಕಿರುಚಾಡುವುದು ಮಾಡಬೇಡಿ. ಸಾಧ್ಯವಾದಷ್ಟೂ ಸಮಾಧಾನದಿಂದ ತಿಳಿಹೇಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಇಂದು ನಿಮ್ಮಲ್ಲಿ ಮೂಡುವಂಥ ಹೊಸ ಆಶಯಗಳು ಮನಸ್ಸನ್ನು ಉತ್ಸಾಹದಿಂದ ಪ್ರೇರೇಪಿಸುತ್ತವೆ. ಪೊಲೀಸರು ಅಥವಾ ಸೇನೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಇಲ್ಲಿಯ ತನಕ ಸಿಗದೇ ಇದ್ದ ಕೆಲವು ಸವಲತ್ತುಗಳು ದೊರೆಯಲಿವೆ. ಶಾಲಾ ಶಿಕ್ಷಕರು ಮಕ್ಕಳಿಗೆ ಹೊಸ ವಿಧಾನದಲ್ಲಿ ಹೇಳಿಕೊಡುವ ಮೂಲಕ ಕಲಿಕೆ ಸುಗಮಗೊಳಿಸುತ್ತೀರಿ. ಲೇಖಕರು, ಕವಿ, ನಾಟಕ ಕಲಾವಿದರು ಹೊಸ ಸೃಜನಾತ್ಮಕ ಕಾರ್ಯಗಳಿಗೆ ಗುರುಗಳ ಸಮಾನರಾದ ವ್ಯಕ್ತಿಗಳಿಂದ ಪ್ರೇರಣೆ ಪಡೆಯುತ್ತೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕ್ರೀಡಾಪಟುಗಳು ಸ್ಪರ್ಧಾ ತಯಾರಿ ತೀವ್ರವಾಗಿ ಮುಂದುವರಿಸುತ್ತೀರಿ. ದಿನಸಿ ಅಂಗಡಿ, ಸಲೂನ್ ಮಾಲೀಕರು ಗ್ರಾಹಕರು ನೀಡುವ ಫೀಡ್ ಬ್ಯಾಕ್ ನಿಂದ ಸೇವಾ ವಿಧಾನದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದೀರಿ. ಹಣಕಾಸು ವಿಚಾರದಲ್ಲಿ ಯೋಜಿತವಾದ ಖರ್ಚು, ಉಳಿತಾಯವನ್ನು ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಕುಟುಂಬ ಸದಸ್ಯರ ಬೆಂಬಲದಿಂದ ನಿಮ್ಮ ಮೇಲಿನ ಒತ್ತಡದಲ್ಲಿ ಬಹಳ ಕಡಿಮೆಯಾಗುತ್ತದೆ.

ಲೇಖನ- ಸ್ವಾತಿ ಎನ್.ಕೆ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?