AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 15ರ ದಿನಭವಿಷ್ಯ

Daily Numerology February 15: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 15ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 15, 2026 | 12:20 AM

Share

ಈ ದಿನ ರುದ್ರ- ಚಮಕದ ಶ್ರವಣವನ್ನು ಮಾಡಿ. ಈಶ್ವರನಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ನಿಮ್ಮನ್ನು ಕಾಡುತ್ತಿರುವ ಹಲವು ರೀತಿಯ ಸಮಸ್ಯೆಗಳು ದೂರವಾಗುತ್ತವೆ. ನಿಮ್ಮ ಇನ್ ಟ್ಯೂಷನ್ ಜಾಗ್ರತೆ ಆಗುವುದರಿಂದ ಹಲವು ರೀತಿಯ ಅನುಕೂಲಗಳಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಇತರರ ಕಣ್ಣಿಗೆ ಅಥವಾ ದೃಷ್ಟಿ- ಆಲೋಚನೆಗೆ ದಕ್ಕದ ಕೆಲವು ಸಂಗತಿ-ವಸ್ತು, ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ. ಎಷ್ಟು ಬೇಗ ಇದರ ಲಾಭವನ್ನು ಪಡೆದುಕೊಳ್ಳುವುದಕ್ಕೆ ಪ್ರತಿಕ್ರಿಯೆ ನೀಡುತ್ತೀರೋ ಅಷ್ಟು ಒಳ್ಳೆಯದು. ಇಷ್ಟು ಸಮಯ ನೀವು ಯಾವುದನ್ನು ವ್ಯರ್ಥ ಹೂಡಿಕೆ ಅಂದುಕೊಂಡಿದ್ದಿರೋ ಅದರಲ್ಲಿ ನಿಮ್ಮ ಅಸಲು ದೊರೆಯಬಹುದು ಅಥವಾ ಹಾಕಿದ್ದ ಅಸಲಿನ ಮೊತ್ತಕ್ಕಿಂತ ಸ್ವಲ್ಪ ಹೆಚ್ಚು ಕೈ ಸೇರುವ ಸಾಧ್ಯತೆ ಗೋಚರಿಸಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನನಗೆ ಯಾರ ಸಹಾಯವೂ ಬೇಡ ಎಂದು ನಿಮ್ಮೆದುರು ಮಾತನಾಡಿದ್ದ ವ್ಯಕ್ತಿ ಈಗ ತಾನು ಬಹಳ ಕಷ್ಟದಲ್ಲಿ ಇರುವುದಾಗಿಯೂ ಈ ಹಿಂದೆ ತಾನಾಡಿದ ಮಾತುಗಳನ್ನು ಮರೆತು ಸಹಾಯ ಮಾಡುವಂತೆಯೂ ಕೇಳಿಕೊಂಡು ಬರಲಿದ್ದಾರೆ. ಇನ್ನು ನಿಮ್ಮ ಉಳಿತಾಯದ ಹಣವನ್ನು ತೆಗೆದುಕೊಂಡು, ಅದನ್ನು ಷೇರು ಮಾರುಕಟ್ಟೆಯಲ್ಲಿನ ಷೇರುಗಳ ಮೇಲೆಯೋ ಅಥವಾ ಮ್ಯೂಚುವಲ್ ಫಂಡ್ ಮೇಲೋ ಹೂಡಿಕೆ ಮಾಡಬೇಕು ಎಂದು ಗಂಭೀರವಾಗಿ ಆಲೋಚನೆಯನ್ನು ಆರಂಭಿಸಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಲೈಬ್ರರಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಜವಾಬ್ದಾರಿಗಳನ್ನು ವಹಿಸಬಹುದು. ಬಾಡಿಗೆ ಮನೆಯಲ್ಲಿ ವಾಸ ಇರುವಂಥವರು ಈಗ ಇರುವ ಮನೆಯನ್ನು ಬಿಟ್ಟು ಬೇರೆ ಕಡೆ ಹೋಗಬೇಕು ಎಂದುಕೊಳ್ಳಲಿದ್ದೀರಿ. ಮಕ್ಕಳ ಶಿಕ್ಷಣ ಹಾಗೂ ಶಾಲೆ ಸಲುವಾಗಿ ಹಣ- ಸಮಯವನ್ನು ಮೀಸಲಿಟ್ಟು ಕೆಲವು ಹೊಸ ಕೆಲಸಗಳನ್ನು ಶುರು ಮಾಡಲಿದ್ದೀರಿ. ದಿನದ ಕೊನೆಗೆ ಸಮಾಧಾನ ಆಗುವ ಕೆಲವು ಬೆಳವಣಿಗೆಗಳು ಆಗಲಿವೆ.

ಲೇಖನ- ಸ್ವಾತಿ ಎನ್.ಕೆ.

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್