AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 18ರ ದಿನಭವಿಷ್ಯ

Daily Numerology February 18: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 18ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Feb 18, 2026 | 12:20 AM

Share

ಈ ದಿನ ಹಯಗ್ರೀವ ಸೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಪದೇಪದೇ ನಿಮ್ಮ ವಿರುದ್ಧ ದೂರು ಬರುತ್ತಿದೆ ಎಂಬ ಆಕ್ಷೇಪದಿಂದ ಹೊರಗೆ ಬರುವುದಕ್ಕೆ ಇದರಿಂದ ಸಹಾಯ ಆಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ವಿವಾಹಿತರಿಗೆ ಸಂಗಾತಿ ಜೊತೆಗೆ ಸ್ವಲ್ಪ ಮಟ್ಟಿಗೆ ಅಭಿಪ್ರಾಯ ಭೇದಗಳು ತಲೆದೋರಬಹುದು. ಅದರಲ್ಲೂ ನಿಮ್ಮ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಯಿಂದ ಈ ಹಿಂದೆ ಯಾವಾಗಲೋ ಆಗಿದ್ದ ಸಮಸ್ಯೆಗಳನ್ನು ಈಗ ಎತ್ತಾಡಬಹುದು. ಆದ್ದರಿಂದ ಸಣ್ಣ- ಪುಟ್ಟ ವಿಚಾರಗಳಿಗೆ ಹೆಚ್ಚಿಗೆ ಗಮನ ನೀಡುವುದಕ್ಕೆ ಹೋಗಬೇಡಿ. ಆಹಾರ- ನೀರು ಸೇವನೆ ಮಾಡುವಾಗ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಕೊಡಿ, ಇಲ್ಲದಿದ್ದರೆ ದಿನದ ಕೊನೆಗೆ ಹೊಟ್ಟೆ ಸಮಸ್ಯೆ ಕಾಡಬಹುದು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಸ್ನೇಹಿತರು ಅಥವಾ ಸಂಬಂಧಿಗಳ ಜೊತೆಗೆ ಅವರ ಕೆಲಸಕ್ಕಾಗಿ ನೀವು ಜೊತೆಗೆ ಹೋಗುವ ಸನ್ನಿವೇಶ ಎದುರಾಗಲಿದೆ. ಹಲವು ಜವಾಬ್ದಾರಿಗಳನ್ನು ಪೂರ್ಣಗೊಳಿಸಿದ ಸಮಾಧಾನವೊಂದು ನಿಮಗೆ ದೊರೆಯಲಿದೆ. ಹಣದ ಹೂಡಿಕೆ, ಉಳಿತಾಯ ಈ ಬಗ್ಗೆ ಹೆಚ್ಚಿಗೆ ತಲೆ ಕೆಡಿಸಿಕೊಳ್ಳಲಿದ್ದೀರಿ. ಮನೆಯ ಮಟ್ಟಿಗೆ ನಿಮ್ಮ ಆಲೋಚನೆಗಳು ಫಲಿಸುತ್ತವೆ ಎಂಬ ಭಾವನೆ ನಿಮ್ಮದಾಗಿದಲ್ಲಿ ಅದನ್ನು ಮೀರಿದ ವ್ಯಾಪ್ತಿ ನಿಮಗಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಕ್ರೀಡೆಯೋ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳೋ ಅಥವಾ ಇವುಗಳ ಸ್ಪರ್ಧೆಯೋ ಇಂಥವುಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಅಂತಾದಲ್ಲಿ ಆಸಕ್ತಿ ವಹಿಸಿ ಪಾಲ್ಗೊಳ್ಳಿ. ಇದರಿಂದ ಭವಿಷ್ಯದಲ್ಲಿ ನಿಮಗೆ ದೊಡ್ಡ ಅನುಕೂಲ ಆಗುವಂಥ ಯೋಗ ಇದೆ. ಖಾದಿ ವಸ್ತ್ರಗಳ ಮಾರಾಟ ಮಾಡುವುದನ್ನೇ ವ್ಯವಹಾರವಾಗಿ ಮಾಡುತ್ತಿರುವವರಿಗೆ ಆ ವ್ಯಾಪಾರದ ಪ್ರಮಾಣ ಕಡಿಮೆ ಮಾಡಬೇಕಾಗಬಹುದು ಅಥವಾ ಸಂಪೂರ್ಣ ನಿಲ್ಲಿಸಿಬಿಡೋಣ ಎಂದೆನಿಸಲಿದೆ.

ಲೇಖನ- ಸ್ವಾತಿ ಎನ್.ಕೆ.

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ