
ಈ ದಿನ ಹಯಗ್ರೀವ ಸೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಪದೇಪದೇ ನಿಮ್ಮ ವಿರುದ್ಧ ದೂರು ಬರುತ್ತಿದೆ ಎಂಬ ಆಕ್ಷೇಪದಿಂದ ಹೊರಗೆ ಬರುವುದಕ್ಕೆ ಇದರಿಂದ ಸಹಾಯ ಆಗಲಿದೆ.
ವಿವಾಹಿತರಿಗೆ ಸಂಗಾತಿ ಜೊತೆಗೆ ಸ್ವಲ್ಪ ಮಟ್ಟಿಗೆ ಅಭಿಪ್ರಾಯ ಭೇದಗಳು ತಲೆದೋರಬಹುದು. ಅದರಲ್ಲೂ ನಿಮ್ಮ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಯಿಂದ ಈ ಹಿಂದೆ ಯಾವಾಗಲೋ ಆಗಿದ್ದ ಸಮಸ್ಯೆಗಳನ್ನು ಈಗ ಎತ್ತಾಡಬಹುದು. ಆದ್ದರಿಂದ ಸಣ್ಣ- ಪುಟ್ಟ ವಿಚಾರಗಳಿಗೆ ಹೆಚ್ಚಿಗೆ ಗಮನ ನೀಡುವುದಕ್ಕೆ ಹೋಗಬೇಡಿ. ಆಹಾರ- ನೀರು ಸೇವನೆ ಮಾಡುವಾಗ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಕೊಡಿ, ಇಲ್ಲದಿದ್ದರೆ ದಿನದ ಕೊನೆಗೆ ಹೊಟ್ಟೆ ಸಮಸ್ಯೆ ಕಾಡಬಹುದು.
ಸ್ನೇಹಿತರು ಅಥವಾ ಸಂಬಂಧಿಗಳ ಜೊತೆಗೆ ಅವರ ಕೆಲಸಕ್ಕಾಗಿ ನೀವು ಜೊತೆಗೆ ಹೋಗುವ ಸನ್ನಿವೇಶ ಎದುರಾಗಲಿದೆ. ಹಲವು ಜವಾಬ್ದಾರಿಗಳನ್ನು ಪೂರ್ಣಗೊಳಿಸಿದ ಸಮಾಧಾನವೊಂದು ನಿಮಗೆ ದೊರೆಯಲಿದೆ. ಹಣದ ಹೂಡಿಕೆ, ಉಳಿತಾಯ ಈ ಬಗ್ಗೆ ಹೆಚ್ಚಿಗೆ ತಲೆ ಕೆಡಿಸಿಕೊಳ್ಳಲಿದ್ದೀರಿ. ಮನೆಯ ಮಟ್ಟಿಗೆ ನಿಮ್ಮ ಆಲೋಚನೆಗಳು ಫಲಿಸುತ್ತವೆ ಎಂಬ ಭಾವನೆ ನಿಮ್ಮದಾಗಿದಲ್ಲಿ ಅದನ್ನು ಮೀರಿದ ವ್ಯಾಪ್ತಿ ನಿಮಗಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ.
ಕ್ರೀಡೆಯೋ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳೋ ಅಥವಾ ಇವುಗಳ ಸ್ಪರ್ಧೆಯೋ ಇಂಥವುಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಅಂತಾದಲ್ಲಿ ಆಸಕ್ತಿ ವಹಿಸಿ ಪಾಲ್ಗೊಳ್ಳಿ. ಇದರಿಂದ ಭವಿಷ್ಯದಲ್ಲಿ ನಿಮಗೆ ದೊಡ್ಡ ಅನುಕೂಲ ಆಗುವಂಥ ಯೋಗ ಇದೆ. ಖಾದಿ ವಸ್ತ್ರಗಳ ಮಾರಾಟ ಮಾಡುವುದನ್ನೇ ವ್ಯವಹಾರವಾಗಿ ಮಾಡುತ್ತಿರುವವರಿಗೆ ಆ ವ್ಯಾಪಾರದ ಪ್ರಮಾಣ ಕಡಿಮೆ ಮಾಡಬೇಕಾಗಬಹುದು ಅಥವಾ ಸಂಪೂರ್ಣ ನಿಲ್ಲಿಸಿಬಿಡೋಣ ಎಂದೆನಿಸಲಿದೆ.
ಲೇಖನ- ಸ್ವಾತಿ ಎನ್.ಕೆ.