
ಮುಕುಂದ ಮಾಲಾ ಸ್ತೋತ್ರದ ಶ್ರವಣ ಅಥವಾ ಪಠಣವನ್ನು ಮಾಡಿ. ದೂರವಾದ ಸ್ನೇಹ- ಸಂಬಂಧ ಮತ್ತೆ ಸರಿಹೋಗುವುದಕ್ಕೆ ಹಾಗೂ ಉದ್ಯೋಗ, ವ್ಯಾಪಾರ- ವ್ಯವಹಾರಗಳಲ್ಲಿ ಯಶಸ್ಸು ಕಾಣುವುದಕ್ಕೆ ಸಹಕಾರಿ ಆಗುತ್ತದೆ.
ಪ್ರಾಪಂಚಿಕ ವಿಚಾರಗಳ ಬಗ್ಗೆ ಒಂದು ರೀತಿಯ ನಿರಾಸಕ್ತಿ ನಿಮ್ಮನ್ನು ಕಾಡಬಹುದು. ಯಾರಿಗೋ ಮುಖ್ಯ ಎಂದೆನಿಸಿದ್ದು ನನಗೂ ಮುಖ್ಯ ವಿಷಯ ಏಕಾಗಿರಬೇಕು ಎಂಬಂಥ ಧೋರಣೆ ಈ ದಿನ ಇರುತ್ತದೆ. ವೃತ್ತಿಯೋ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಸಂಗತಿಗಳ ಚರ್ಚೆಯೋ ಇದ್ದಲ್ಲಿ ಅನಿಸಿದ್ದನ್ನೆಲ್ಲ ಹೇಳಿಬಿಡುತ್ತೇನೆ ಎಂಬ ಮನಸ್ಥಿತಿಯಿಂದ ಆಚೆ ಬನ್ನಿ. ಈಗ ನಿಮಗೆ ಅನಿಸುತ್ತಿರುವುದು ತಾತ್ಕಾಲಿಕ ಮಾತ್ರ.
ನಿಮ್ಮಲ್ಲಿ ಕೆಲವರು ಡಿಷ್ ವಾಷರ್, ಮನೆಯನ್ನು ಕಸ ಗುಡಿಸುವಂಥ ರೋಬೋಟ್ ಅಥವಾ ಹೀಗೆ ಮನೆಯ ಸ್ವಚ್ಛತೆಗಾಗಿಯೇ ಯಂತ್ರಗಳನ್ನು ಖರೀದಿಸುವ ಬಗ್ಗೆ ಆಲೋಚನೆಯನ್ನು ಮಾಡಲಿದ್ದೀರಿ. ಇನ್ನೂ ಕೆಲವರು ಇಎಂಐ ಮಾಡಿಸಿ, ಖರೀದಿಸಿಯೇ ಬಿಡುವ ಸಾಧ್ಯತೆ ಸಹ ಇದೆ. ಸ್ನೇಹಿತರು ಯಾವುದಾದರೂ ಆಫರ್ ಗಳನ್ನು ತಂದರೆ ಏಕಾಏಕಿ ಒಪ್ಪಿಕೊಂಡು ಬಿಡಬೇಡಿ.
ನಿಮಗೆ ಬಂದಿದ್ದ ಅವಕಾಶವೊಂದು ಅಥವಾ ಈಗಾಗಲೇ ಕೆಲಸ ಅರಂಭಿಸಿಯಾಗಿದೆ ಎಂಬುದೊಂದನ್ನು ಮಧ್ಯದಲ್ಲಿ ನಿಲ್ಲಿಸಬೇಕಾದ ಸನ್ನಿವೇಶ ಎದುರಾಗಲಿದೆ. ಒಂದು ವೇಳೆ ಹಣಕಾಸಿನ ವಿಚಾರದಲ್ಲಿ ಕಮಿಟ್ ಆಗಿದ್ದಲ್ಲಿ, ಅಂದರೆ ಮಾತು ನೀಡಿದ್ದಲ್ಲಿ ಗಾಂಭೀರ್ಯ ಕಾಪಾಡಿಕೊಳ್ಳಿ. ಹೇಗೋ ಸಂಭಾಳಿಸುತ್ತೀನಿ ಎಂಬ ಧೋರಣೆ ಬೇಡ. ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾದ ದಿನ ಇದಾಗಿರುತ್ತದೆ.
ಲೇಖನ- ಸ್ವಾತಿ ಎನ್.ಕೆ.