
ಲಕ್ಷ್ಮೀನರಸಿಂಹ ದೇವಾಲಯಕ್ಕೆ ತೆರಳಿ ತುಳಸಿ ಮಾಲೆಯನ್ನು ಸಮರ್ಪಣೆ ಮಾಡಿ. ಇದರಿಂದಾಗಿ ನಿಮ್ಮನ್ನು ಕಾಡುತ್ತಿರುವ ಆತಂಕ, ಹಿಂಜರಿಕೆ ಹಾಗೂ ಮಾನಸಿಕ ಕ್ಲೇಶ ದೂರವಾಗುತ್ತದೆ. ಯಾವುದೇ ಕೆಲಸವನ್ನು ಮಾಡಬೇಕೋ ಬೇಡವೋ ಎಂಬ ದ್ವಂದ್ವ ಇದ್ದಲ್ಲಿ ಸ್ಪಷ್ಟತೆ ಸಿಗುತ್ತದೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಸಮಯದೊಳಗೆ ಪೂರ್ಣಗೊಳಿಸಬೇಕಾದ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿ ಮುಗಿಸಿ. ಇನ್ನು ನೀವೇನಾದರೂ ಹಣ್ಣು- ಹೂವು, ತರಕಾರಿ ಇಂಥವುಗಳ ವ್ಯಾಪಾರವನ್ನು ಮಾಡುವವರಾದರೆ ಹೊಸದಾಗಿ ಹೂಡಿಕೆ ಮಾಡುವ ಕಡೆಗೆ ಆದ್ಯತೆಯನ್ನು ನೀಡಲಿದ್ದೀರಿ. ಪ್ರೀತಿ- ಪ್ರೇಮದಲ್ಲಿ ಇರುವವರು ಮನೆಯಲ್ಲಿ ವಿಚಾರ ಪ್ರಸ್ತಾವ ಮಾಡುವ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಚಾಲಕ ವೃತ್ತಿಯಲ್ಲಿ ಇರುವಂಥವರಿಗೆ ಒತ್ತಡದ ದಿನ ಇದಾಗಿರುತ್ತದೆ. ನೀವು ಓಡಿಸುವ ವಾಹನದ ಸರ್ವೀಸ್ ಆಗಿದೆಯಾ, ಅದು ಎಲ್ಲ ರೀತಿಯಲ್ಲೂ ಉತ್ತಮವಾದ ಸ್ಥಿತಿಯಲ್ಲಿ ಇದೆಯಾ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಕ್ಷೇಮ. ಈ ದಿನ ಸಾಧ್ಯವಾದಲ್ಲಿ ಹನುಮಂತ ದೇವರ ದೇವಾಲಯಕ್ಕೆ ತೆರಳಿ ದರ್ಶನವನ್ನು ಪಡೆಯಿರಿ. ಬ್ಯಾಂಕ್ ಉದ್ಯೋಗಿಗಳಿಗೆ ಟಾರ್ಗೆಟ್ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಸ್ನೇಹಿತರಿಗೆ ಕೊಟ್ಟ ಮಾತಿನಂತೆಯೇ ನಡೆದುಕೊಳ್ಳುವುದು ಈ ದಿನ ನಿಮಗೆ ಆದ್ಯತೆಯಾಗಲಿದೆ. ಕಟ್ಟಡ ನಿರ್ಮಾಣ, ರಿನೋವೇಷನ್ ಇಂಥದ್ದನ್ನು ಮಾಡಿಸುತ್ತಾ ಇರುವವರಿಗೆ ಏಕ ಕಾಲಕ್ಕೆ ಹಲವು ಕೆಲಸಗಳು ಹುಡುಕಿಕೊಂಡು ಬರಲಿವೆ. ಉದ್ಯೋಗ ಸ್ಥಳದಲ್ಲಿ ನಿಮಗೆ ಆಪ್ತರಾದವರು ಕೆಲಸ ಬಿಡುವ ತೀರ್ಮಾನ ಮಾಡುವ ಸಾಧ್ಯತೆ ಇದೆ. ಉದ್ಯೋಗಸ್ಥರಿಗೆ ನಿಮ್ಮ ಮೇಲೆ ಸಂಸ್ಥೆಗೆ ವಿಪರೀತ ನಿರೀಕ್ಷೆ ಇದೆ ಎಂಬುದು ಗಮನಕ್ಕೆ ಬರಲಿದೆ.
ಲೇಖನ- ಸ್ವಾತಿ ಎನ್.ಕೆ.