
ಐವತ್ತೊಂದು ಬಾರಿ ಓಂ ನಮೋ ನಾರಾಯಣಾಯ ಹಾಗೂ ನೂರಾ ಹದಿನಾರು ಬಾರಿ ಶ್ರೀರಾಮ ಜಯರಾಮ ಜಯ ಜಯ ರಾಮ ಎಂಬುದನ್ನು ಒಂದು ಪುಸ್ತಕದಲ್ಲಿ ಬರೆಯಿರಿ. ಇದರಿಂದ ಯಾರಿಗೆ ಆತ್ಮವಿಶ್ವಾಸ ಕುಂದುತ್ತಾ ಬರುತ್ತಿದೆ, ಅಂಥವರಿಗೆ ಚೇತರಿಕೆ ಕಾಣುತ್ತದೆ. ವ್ಯಾಪಾರ- ವ್ಯವಹಾರದಲ್ಲಿ ಯಶಸ್ಸಿದೆ.
ಸಂತೋಷದ ಸುದ್ದಿ ಬರುವುದರಿಂದ ಅಥವಾ ನಿಮ್ಮದೇ ಸ್ವಭಾವದ ಕಾರಣಕ್ಕಾಗಿ ಅತ್ಯಂತ ಲವಲವಿಕೆಯ ದಿನ ಇದಾಗಿರುತ್ತದೆ. ಹಳೆಯ ಸ್ನೇಹಿತರೊಂದಿಗೆ ಮಾತುಕತೆ ನಡೆಸುವಿರಿ ಅಥವಾ ಅವರನ್ನು ಭೇಟಿ ಮಾಡುವಿರಿ. ನಿಮ್ಮ ಹಾಸ್ಯಪ್ರವೃತ್ತಿ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸಲಿದೆ. ವ್ಯಾಪಾರಸ್ಥರಿಗೆ ಕೆಲವು ಲಾಭದಾಯಕ ವ್ಯವಹಾರಗಳ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ.
ಆರ್ಥಿಕ ವಿಚಾರದಲ್ಲಿ ಇಂದು ಸ್ವಲ್ಪ ಎಚ್ಚರಿಕೆಯಿಂದ ಇರಿ, ಅನಗತ್ಯ ವೆಚ್ಚಗಳು ಬಜೆಟ್ ಏರುಪೇರು ಮಾಡಬಹುದು. ಇತರರ ವೈಯಕ್ತಿಕ ವಿಚಾರಗಳಲ್ಲಿ ತಲೆಹಾಕಬೇಡಿ, ಅದು ನಿಮ್ಮ ನೆಮ್ಮದಿ ಕೆಡಿಸಬಹುದು. ಹಳೆಯ ಹವ್ಯಾಸಗಳನ್ನು ಪುನರಾರಂಭಿಸಲು ಇದು ಸಕಾಲ. ಸಂಗಾತಿಯೊಂದಿಗೆ ಸಣ್ಣಪುಟ್ಟ ವಾದಗಳು ಬರಬಹುದು, ತಾಳ್ಮೆಯಿಂದ ವರ್ತಿಸಿ. ಹೊಸ ವಸ್ತುಗಳನ್ನು ಖರೀದಿಸುವ ಆಸೆ ಉಂಟಾಗಲಿದೆ. ದಿನದ ಕೊನೆಗೆ ಮಾನಸಿಕ ತೃಪ್ತಿ ಸಿಗುವಂತಹ ಕೆಲಸ ಮಾಡುವಿರಿ.
ಹಲವು ಅನಿರೀಕ್ಷಿತ ಘಟನೆಗಳು ಈ ದಿನ ನಡೆಯಲಿವೆ. ಬಿಡುವಾಗಿ ಇರೋಣ ಅಥವಾ ವಿಶ್ರಾಂತಿ ಪಡೆಯೋಣ ಎಂದು ನೀವು ಅಂದುಕೊಂಡರೂ ಹಠಾತ್ ಪ್ರಯಾಣ ಅಥವಾ ಅತಿಥಿಗಳ ಆಗಮನ ಆಗಬಹುದು. ಮನೆಯಲ್ಲಿ ಕೆಲವು ತಾಂತ್ರಿಕ ಬದಲಾವಣೆ ಅಥವಾ ದುರಸ್ತಿ ಕೆಲಸಗಳಲ್ಲಿ ಮಗ್ನರಾಗುವಿರಿ. ನಿಮ್ಮ ಶಿಸ್ತುಬದ್ಧ ಜೀವನಶೈಲಿಯಿಂದ ಕುಟುಂಬದ ಕೆಲಸಗಳನ್ನು ಸುಲಭವಾಗಿ ಮುಗಿಸುವಿರಿ.
ಲೇಖನ- ಸ್ವಾತಿ ಎನ್.ಕೆ.