AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 21ರ ದಿನಭವಿಷ್ಯ

Daily Numerology February 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 21ರ ದಿನಭವಿಷ್ಯ
Daily Numerology
ಸ್ವಾತಿ ಎನ್​ಕೆ
| Edited By: |

Updated on: Feb 21, 2026 | 12:30 AM

Share

ಈ ದಿನ ರಾಮದೇವರ ದೇವಸ್ಥಾನಕ್ಕೆ ಹಣ್ಣನ್ನು ನೈವೇದ್ಯಕ್ಕೆ ನೀಡಿ. ಇದರಿಂದ ವಿರಸಗಳು ದೂರವಾಗಿ ಸಾಮರಸ್ಯ ಮೂಡುತ್ತದೆ. ಸರ್ಕಾರಿ ಕೆಲಸಗಳು ವಿಳಂಬ ಆಗುತ್ತಾ ಇದ್ದಲ್ಲಿ ಅದನ್ನು ಪೂರ್ಣಗೊಳಿಸಲು ಸಹಾಯ ಆಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಈ ದಿನ ಕೆಲಸ- ಕಾರ್ಯಗಳಲ್ಲಿ ಒಂದು ಬಗೆಯ ನಿರಾಸಕ್ತಿಯನ್ನು ಕಾಡಲಿದೆ. ಇನ್ನೂ ನಿರ್ದಿಷ್ಟವಾಗಿ ಹೇಳಬೇಕು ಅಂದರೆ ವೈರಾಗ್ಯವು ನಿಮ್ಮನ್ನು ಆವರಿಸಲಿದೆ. ಕೃಷಿ ವೃತ್ತಿಯಲ್ಲಿ ತೊಡಗಿಕೊಂಡವರಿಗೆ ಆದಾಯದಲ್ಲಿ ಇಳಿಕೆ ಆಗುವ ಸೂಚನೆ ಸಿಗಬಹುದು. ಅಥವಾ ಈಗಾಗಲೇ ಮೊತ್ತವನ್ನು ಅಂತಿಮ ಮಾಡಿಕೊಂಡು ಹೋದವರು ಅಷ್ಟು ಹಣವನ್ನು ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಬಹುದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆಯ ಕೆಲಸಗಳನ್ನು ಮಾಡಿಸುತ್ತಿರುವವರಿಗೆ ಬಹಳ ಸಂತೋಷ- ಸಮಾಧಾನ ದೊರೆಯುವಂತಹ ದಿನ ಇದಾಗಿರುತ್ತದೆ. ಹೋಮ್ ಥಿಯೇಟರ್, ಇಂಟಿರೀಯರ್ ಸೇರಿದಂತೆ ನೀವು ಬಹಳ ಸಮಯದಿಂದ ಬಯಸುತ್ತಿದ್ದ ಕೆಲವು ಕೆಲಸಗಳನ್ನು ಮಾಡಿಸಿದ್ದಲ್ಲಿ ಅದರಿಂದ ಖುಷಿ ಪಡಲಿದ್ದೀರಿ. ಇನ್ನು ನಿಮ್ಮ ಸೋದರ- ಸೋದರಿಯರ ಜತೆಗೆ ಇರುವಂಥ ಭಿನ್ನಾಭಿಪ್ರಾಯವನ್ನು ದೂರ ಮಾಡಿಕೊಳ್ಳುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮಲ್ಲಿ ಯಾರಿಗೆ ಬೆನ್ನು ನೋವು, ಮಧುಮೇಹ ಅಥವಾ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯವು ಕಾಡುತ್ತಿದ್ದಲ್ಲಿ ಅದಕ್ಕೆ ಸೂಕ್ತ ವೈದ್ಯೋಪಚಾರಗಳು ದೊರೆಯಲಿವೆ. ಯೂಟ್ಯೂಬರ್ ಗಳು ಇದ್ದಲ್ಲಿ ವೃತ್ತಿಗೆ ಬೇಕಾದಂಥ ಸಲಕರಣೆಗಳನ್ನು ಖರೀದಿ ಮಾಡಲಿಕ್ಕಾಗಿ ಹಣವನ್ನು ಹೊಂದಿಸಿಕೊಳ್ಳಲಿದ್ದೀರಿ ಅಥವಾ ನಿಮ್ಮಲ್ಲಿ ಕೆಲವರು ಖರೀದಿಯನ್ನೇ ಮಾಡುವ ಎಲ್ಲ ಸಾಧ್ಯತೆಗಳು ಇವೆ.

ಲೇಖನ- ಸ್ವಾತಿ ಎನ್.ಕೆ.

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್