AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 22ರ ದಿನಭವಿಷ್ಯ

Daily Numerology February 22: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 22ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 22, 2026 | 12:20 AM

Share

ಈ ದಿನ ಆಂಜನೇಯ ದೇವಸ್ಥಾನಕ್ಕೆ ತೆರಳಿ, ಹತ್ತು ನಿಮಿಷವಾದರೂ ದೇವಾಲಯದಲ್ಲಿ ಕೂತಿದ್ದು ಬನ್ನಿ. ಆರೋಗ್ಯ ಸಮಸ್ಯೆ, ವಿರಸ- ಮನಸ್ತಾಪಗಳು. ದೂರವಾಗಿ ಮಾನಸಿಕ ನೆಮ್ಮದಿ ಸಿಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ವಾಹನ ಸ್ವಂತಕ್ಕೆ ಇಟ್ಟುಕೊಂಡು, ಚಾಲನೆಯನ್ನೂ ಮಾಡುತ್ತಿರುವವರು ಒಂದೋ ಹೊಸ ವಾಹನವನ್ನು ಖರೀದಿಸಬಹುದು ಅಥವಾ ಈಗಿರುವುದರ ಜೊತೆಗೆ ಇನ್ನೊಂದನ್ನು ಖರೀದಿಸಿ, ಬಾಡಿಗೆಗೆ ಬಿಡುವ ಬಗ್ಗೆ ಆಲೋಚಿಸಬಹುದು. ತುಂಬ ಆತುರವಾಗಿ ಮಾಡಿ ಮುಗಿಸಬೇಕಾದ ಕೆಲಸವೊಂದು ಕಾರ್ಪೆಂಟರ್ ಗಳು, ರೇಲಿಂಗ್, ಪೇಂಟಿಂಗ್ ಅಥವಾ ಎಲೆಕ್ಟ್ರಿಕ್ ಕೆಲಸ ಮಾಡುವಂಥವರನ್ನು ಹುಡುಕಿಕೊಂಡು ಬರುವ ಸಾಧ್ಯತೆಗಳು ಹೆಚ್ಚಿವೆ. ಇದರಿಂದ ಖಂಡಿತವಾಗಿ ಒಳ್ಳೆಯ ಆದಾಯವಂತೂ ಬರಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿರೀಕ್ಷಿತವಾದ ಆದಾಯಗಳು ಈ ದಿನ ನಿಮ್ಮ ಕೈ ಸೇರಲಿವೆ. ಮನಸ್ಸಿಗೆ ಒಂದು ಬಗೆಯ ಸಮಾಧಾನ- ಸಂತೋಷ ಇರಲಿದ್ದು, ನಿಮ್ಮಲ್ಲಿ ಕೆಲವರು ಪ್ರೀತಿಯನ್ನು ನಿವೇದಿಸಿಕೊಳ್ಳುವಂಥ ಅವಕಾಶಗಳಿವೆ. ಹಣ್ಣು- ತರಕಾರಿಗಳ ಹೋಲ್ ಸೇಲ್ ವ್ಯಾಪಾರ ಮಾಡುವವರಿಗೆ ಆದಾಯದಲ್ಲಿ ಹೆಚ್ಚಳ ನಿರೀಕ್ಷೆ ಮಾಡಬಹುದು. ಯಾವ ಕಾರಣಕ್ಕೂ ಈಗಿರುವ ಗ್ರಾಹಕರನ್ನು ಕಳೆದುಕೊಳ್ಳಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ದೂರ ಪ್ರಯಾಣದ ಬಗ್ಗೆ ಯೋಜನೆ ಹಾಕಿಕೊಂಡವರು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ರದ್ದು ಮಾಡಬೇಕಾದ ಸನ್ನಿವೇಶ ಎದುರಾಗಬಹುದು. ಬೇರೆಯವರನ್ನು ಜೊತೆಗೆ ಬರಲೇಬೇಕೆಂದು ಒತ್ತಡ ಹಾಕಿ, ಕೊನೆ ಕ್ಷಣದಲ್ಲಿ ನೀವೇ ತೆರಳದಿದ್ದರೆ ಹೇಗಾಗಬಹುದು ಎಂಬ ಬಗ್ಗೆ ಮೊದಲೇ ಆಲೋಚನೆ ಮಾಡುವುದು ಉತ್ತಮ.

ಲೇಖನ- ಸ್ವಾತಿ ಎನ್.ಕೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ