AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ

Daily Numerology February 23: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Feb 23, 2026 | 12:10 AM

Share

ಶಿವ ಅಷ್ಟಕವನ್ನು ಶ್ರವಣ ಮಾಡುವುದು ಅಥವಾ ಪಠಣ ಮಾಡುವುದು ಅಥವಾ ಈಶ್ವರನ ದೇವಸ್ಥಾನದಲ್ಲಿ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವ ಪ್ರಯತ್ನಗಳು ವಿಫಲವಾಗುತ್ತವೆ. ಹೊಸದಾಗಿ ವಹಿಸಿಕೊಂಡ ಜವಾಬ್ದಾರಿಗಳಲ್ಲಿ ಯಶಸ್ಸು ಸಾಧಿಸುತ್ತೀರಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಪೈಕಿ ಕೆಲವರು ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸುವುದಕ್ಕೆ ಇತರರಿಗೆ ಒಪ್ಪಿಸುವುದರಿಂದ ಅವರಿಗೆ ಸಲಹೆ- ಸೂಚನೆ, ಮಾರ್ಗದರ್ಶನ ನೀಡುವುದಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಡುವಂತೆ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಈ ದಿನ ಚಂಚಲತೆ ವಿಪರೀತ ಕಾಡುತ್ತದೆ. ಆತುರದಲ್ಲಿ ನಿಮ್ಮ ಯಾವುದೇ ತೀರ್ಮಾನ ಹೇಳುವುದಕ್ಕೆ ಹೋಗಬೇಡಿ. ಇನ್ನು ನಿಮ್ಮ ಬಳಿ ಇರುವ ಹಣಕ್ಕೆ ಎಷ್ಟು ಅಷ್ಟಕ್ಕೆ ಮಾತ್ರ ಯೋಜನೆ ಹಾಕಿಕೊಳ್ಳಿ. ಏನನ್ನಾದರೂ ದಕ್ಕಿಸಿಕೊಳ್ಳ ಬಲ್ಲೆ ಎಂಬ ಆಲೋಚನೆ ಅಪಾಯಕಾರಿ ಆಗಲಿದೆ. ಸರ್ಕಾರಿ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮುಗಿಸಿಕೊಳ್ಳುವುದಕ್ಕೆ ಎಲ್ಲ ಪ್ರಯತ್ನ ಮಾಡಿದ ನಂತರವೂ ಕೊನೆ ಹಂತದಲ್ಲಿ ಅದು ನಿಂತು ಬಿಡಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಬೆನ್ನು ನೋವು ವಿಪರೀತವಾಗಿ ಕಾಡಬಹುದು. ಅದರಲ್ಲಿಯೂ ದ್ವಿಚಕ್ರ ವಾಹನವನ್ನು ಹೆಚ್ಚಾಗಿ ಬಳಸುತ್ತೀರಿ ಅಂತಾದಲ್ಲಿ ವೈದ್ಯರ ಬಳಿ ತೆರಳಿ, ಸಲಹೆ ತೆಗೆದುಕೊಳ್ಳುವುದು ಕ್ಷೇಮ. ಯಾವುದಕ್ಕೂ ಇರಲಿ ಎಂದುಕೊಂಡು, ಬಹಳ ಹಿಂದೆ ಸಣ್ಣ ಪ್ರಮಾಣದಲ್ಲಿ ಮಾಡಿದ್ದ ಹೂಡಿಕೆಯೊಂದು ಈಗ ಭಾರೀ ದೊಡ್ಡ ಲಾಭ ತಂದುಕೊಡಲಿದೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಆದರೆ ಈ ಬಗ್ಗೆ ಎಲ್ಲ ಕಡೆ ಹೇಳಿಕೊಂಡು ಬರಬೇಡಿ.

ಲೇಖನ- ಸ್ವಾತಿ ಎನ್.ಕೆ.

Follow Us
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!