AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ

Daily Numerology February 23: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Feb 23, 2026 | 12:10 AM

Share

ಶಿವ ಅಷ್ಟಕವನ್ನು ಶ್ರವಣ ಮಾಡುವುದು ಅಥವಾ ಪಠಣ ಮಾಡುವುದು ಅಥವಾ ಈಶ್ವರನ ದೇವಸ್ಥಾನದಲ್ಲಿ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವ ಪ್ರಯತ್ನಗಳು ವಿಫಲವಾಗುತ್ತವೆ. ಹೊಸದಾಗಿ ವಹಿಸಿಕೊಂಡ ಜವಾಬ್ದಾರಿಗಳಲ್ಲಿ ಯಶಸ್ಸು ಸಾಧಿಸುತ್ತೀರಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಪೈಕಿ ಕೆಲವರು ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸುವುದಕ್ಕೆ ಇತರರಿಗೆ ಒಪ್ಪಿಸುವುದರಿಂದ ಅವರಿಗೆ ಸಲಹೆ- ಸೂಚನೆ, ಮಾರ್ಗದರ್ಶನ ನೀಡುವುದಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಡುವಂತೆ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಈ ದಿನ ಚಂಚಲತೆ ವಿಪರೀತ ಕಾಡುತ್ತದೆ. ಆತುರದಲ್ಲಿ ನಿಮ್ಮ ಯಾವುದೇ ತೀರ್ಮಾನ ಹೇಳುವುದಕ್ಕೆ ಹೋಗಬೇಡಿ. ಇನ್ನು ನಿಮ್ಮ ಬಳಿ ಇರುವ ಹಣಕ್ಕೆ ಎಷ್ಟು ಅಷ್ಟಕ್ಕೆ ಮಾತ್ರ ಯೋಜನೆ ಹಾಕಿಕೊಳ್ಳಿ. ಏನನ್ನಾದರೂ ದಕ್ಕಿಸಿಕೊಳ್ಳ ಬಲ್ಲೆ ಎಂಬ ಆಲೋಚನೆ ಅಪಾಯಕಾರಿ ಆಗಲಿದೆ. ಸರ್ಕಾರಿ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮುಗಿಸಿಕೊಳ್ಳುವುದಕ್ಕೆ ಎಲ್ಲ ಪ್ರಯತ್ನ ಮಾಡಿದ ನಂತರವೂ ಕೊನೆ ಹಂತದಲ್ಲಿ ಅದು ನಿಂತು ಬಿಡಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಬೆನ್ನು ನೋವು ವಿಪರೀತವಾಗಿ ಕಾಡಬಹುದು. ಅದರಲ್ಲಿಯೂ ದ್ವಿಚಕ್ರ ವಾಹನವನ್ನು ಹೆಚ್ಚಾಗಿ ಬಳಸುತ್ತೀರಿ ಅಂತಾದಲ್ಲಿ ವೈದ್ಯರ ಬಳಿ ತೆರಳಿ, ಸಲಹೆ ತೆಗೆದುಕೊಳ್ಳುವುದು ಕ್ಷೇಮ. ಯಾವುದಕ್ಕೂ ಇರಲಿ ಎಂದುಕೊಂಡು, ಬಹಳ ಹಿಂದೆ ಸಣ್ಣ ಪ್ರಮಾಣದಲ್ಲಿ ಮಾಡಿದ್ದ ಹೂಡಿಕೆಯೊಂದು ಈಗ ಭಾರೀ ದೊಡ್ಡ ಲಾಭ ತಂದುಕೊಡಲಿದೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಆದರೆ ಈ ಬಗ್ಗೆ ಎಲ್ಲ ಕಡೆ ಹೇಳಿಕೊಂಡು ಬರಬೇಡಿ.

ಲೇಖನ- ಸ್ವಾತಿ ಎನ್.ಕೆ.

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ