
ಶಿವ ಅಷ್ಟಕವನ್ನು ಶ್ರವಣ ಮಾಡುವುದು ಅಥವಾ ಪಠಣ ಮಾಡುವುದು ಅಥವಾ ಈಶ್ವರನ ದೇವಸ್ಥಾನದಲ್ಲಿ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವ ಪ್ರಯತ್ನಗಳು ವಿಫಲವಾಗುತ್ತವೆ. ಹೊಸದಾಗಿ ವಹಿಸಿಕೊಂಡ ಜವಾಬ್ದಾರಿಗಳಲ್ಲಿ ಯಶಸ್ಸು ಸಾಧಿಸುತ್ತೀರಿ.
ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಪೈಕಿ ಕೆಲವರು ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸುವುದಕ್ಕೆ ಇತರರಿಗೆ ಒಪ್ಪಿಸುವುದರಿಂದ ಅವರಿಗೆ ಸಲಹೆ- ಸೂಚನೆ, ಮಾರ್ಗದರ್ಶನ ನೀಡುವುದಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಡುವಂತೆ ಆಗಲಿದೆ.
ಈ ದಿನ ಚಂಚಲತೆ ವಿಪರೀತ ಕಾಡುತ್ತದೆ. ಆತುರದಲ್ಲಿ ನಿಮ್ಮ ಯಾವುದೇ ತೀರ್ಮಾನ ಹೇಳುವುದಕ್ಕೆ ಹೋಗಬೇಡಿ. ಇನ್ನು ನಿಮ್ಮ ಬಳಿ ಇರುವ ಹಣಕ್ಕೆ ಎಷ್ಟು ಅಷ್ಟಕ್ಕೆ ಮಾತ್ರ ಯೋಜನೆ ಹಾಕಿಕೊಳ್ಳಿ. ಏನನ್ನಾದರೂ ದಕ್ಕಿಸಿಕೊಳ್ಳ ಬಲ್ಲೆ ಎಂಬ ಆಲೋಚನೆ ಅಪಾಯಕಾರಿ ಆಗಲಿದೆ. ಸರ್ಕಾರಿ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮುಗಿಸಿಕೊಳ್ಳುವುದಕ್ಕೆ ಎಲ್ಲ ಪ್ರಯತ್ನ ಮಾಡಿದ ನಂತರವೂ ಕೊನೆ ಹಂತದಲ್ಲಿ ಅದು ನಿಂತು ಬಿಡಲಿದೆ.
ಬೆನ್ನು ನೋವು ವಿಪರೀತವಾಗಿ ಕಾಡಬಹುದು. ಅದರಲ್ಲಿಯೂ ದ್ವಿಚಕ್ರ ವಾಹನವನ್ನು ಹೆಚ್ಚಾಗಿ ಬಳಸುತ್ತೀರಿ ಅಂತಾದಲ್ಲಿ ವೈದ್ಯರ ಬಳಿ ತೆರಳಿ, ಸಲಹೆ ತೆಗೆದುಕೊಳ್ಳುವುದು ಕ್ಷೇಮ. ಯಾವುದಕ್ಕೂ ಇರಲಿ ಎಂದುಕೊಂಡು, ಬಹಳ ಹಿಂದೆ ಸಣ್ಣ ಪ್ರಮಾಣದಲ್ಲಿ ಮಾಡಿದ್ದ ಹೂಡಿಕೆಯೊಂದು ಈಗ ಭಾರೀ ದೊಡ್ಡ ಲಾಭ ತಂದುಕೊಡಲಿದೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಆದರೆ ಈ ಬಗ್ಗೆ ಎಲ್ಲ ಕಡೆ ಹೇಳಿಕೊಂಡು ಬರಬೇಡಿ.
ಲೇಖನ- ಸ್ವಾತಿ ಎನ್.ಕೆ.