AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ

Daily Numerology February 23: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 23, 2026 | 12:30 AM

Share

ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ದೂರ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು ಉದ್ಭವ ಆಗಲಿವೆ. ಕೆಲವು ಹಣಕಾಸಿನ ವಿಚಾರದ ನಿರ್ಧಾರಗಳು ಮುಂದಕ್ಕೆ ಹಾಕಿಕೊಳ್ಳಬೇಕಾಗುತ್ತದೆ. ಮೆಡಿಕಲ್ ಶಾಪ್ ನಡೆಸುತ್ತಾ ಇರುವವರು ಇದಕ್ಕೆ ಪೂರಕವಾಗಿ ಕೆಲವು ಹೊಸ ವ್ಯವಹಾರ ನಡೆಸುವ ಚಿಂತನೆ ನಡೆಸುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಉದ್ಯೋಗ ಸ್ಥಳದಲ್ಲಿ ನೀವು ಯಾವುದನ್ನು ಕೊನೆ ಆಯ್ಕೆ ಎಂದು ಭಾವಿಸಿರುತ್ತೀರೋ ಅದನ್ನೇ ಆರಿಸಿಕೊಳ್ಳುವಂತೆ ಆಗಲಿದೆ. ನಾಲಗೆ ಹುಣ್ಣು, ಗಂಟಲು ನೋವಿನ ಸಮಸ್ಯೆ ಈ ದಿನ ವಿಪರೀತ ಬಾಧಿಸಬಹುದು. ಆಹಾರ ಪಥ್ಯವನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ. ಆಕಸ್ಮಿಕವಾಗಿ ನಿಮಗೆ ಸಿಗುವಂಥ ಅವಕಾಶಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಕಡೆಗೆ ಗಮನ ನೀಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮ ಪಾಲಿನ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡಿದ್ದರ ಉತ್ತಮ ಫಲಿತವನ್ನು ಪಡೆದುಕೊಳ್ಳಲಿದ್ದೀರಿ. ನಿಮ್ಮಲ್ಲಿ ಕೆಲವರು ಹೆಚ್ಚಿನ ಬಡ್ಡಿದರಕ್ಕೆ ತಂದಿದ್ದ ಸಾಲವನ್ನು ಹಿಂತಿರುಗಿಸುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಮಿನರಲ್ ವಾಟರ್ ವಿತರಣೆಯ ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಉದ್ಯೋಗ ಸ್ಥಳದಲ್ಲಿ ಸವಾಲು ಎನಿಸಿದಂ ಕೆಲವು ಕೆಲಸಗಳನ್ನು ನೀವಾಗಿಯೇ ಮುಂದೆ ಹೋಗಿ ವಹಿಸಿಕೊಳ್ಳಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ