
ಕೃಷ್ಣನ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ತುಳಸಿ ಹಾರವನ್ನು ಸಮರ್ಪಣೆ ಮಾಡಿ. ಒಂದು ವೇಳೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಇರುವಂಥ ಕೃಷ್ಣನ ವಿಗ್ರಹ, ಚಿತ್ರಪಟಕ್ಕೆ ತುಳಸಿ ದಳ, ತುಳಸಿಹಾರವನ್ನು ಅರ್ಪಿಸಿ. ಯಾವುದೇ ವಿಚಾರದಲ್ಲಿ ನಿಮಗೆ ಕಾಡುತ್ತಿರುವ ಅಡೆತಡೆ ನಿವಾರಣೆ ಆಗುತ್ತದೆ.
ನಿಮ್ಮ ವಿಶ್ವಾಸಾರ್ಹತೆ, ನಿಷ್ಠೆ, ಪ್ರಾಮಾಣಿಕತೆಯನ್ನು ಸಾಬೀತು ಮಾಡಬೇಕಾದ ಅನಿವಾರ್ಯ ಸೃಷ್ಟಿ ಅಗಲಿದೆ. ಸಂಗಾತಿಯ ಆರ್ಥಿಕ ವಿಚಾರಗಳಿಗೆ ನಿಮ್ಮ ಬೆಂಬಲ ಹಾಗೂ ಸಹಕಾರ ಅಗತ್ಯವಿದೆ ಎಂಬುದು ಖಾತ್ರಿ ಆಗಲಿದೆ. ಉಪನ್ಯಾಸಕರು- ಮನೆಯಲ್ಲಿಯೇ ಟ್ಯೂಷನ್ ಮಾಡುತ್ತಾ ಆ ಮೂಲಕ ಆದಾಯ ಪಡೆಯುತ್ತಾ ಇರುವವರಿಗೆ ಹಣಕಾಸಿನ ಹರಿವಿನಲ್ಲಿ ಇಳಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣ ಆಗಲಿದೆ.
ಪೂಜಾ ಸಾಮಗ್ರಿಗಳು ಮಾಡಿಸುವುದಕ್ಕೆ- ಖರೀದಿ ಮಾಡುವುದಕ್ಕೆ ಅಥವಾ ದೇವರಮನೆ ರಿನೋವೇಷನ್ ಇಂಥವುಗಳ ಬಗ್ಗೆ ಈ ದಿನ ಹೆಚ್ಚಿನ ಸಮಯವನ್ನು ಮೀಸಲಿಡಲಿದ್ದೀರಿ. ಮತ್ತೆ ನಿಮ್ಮಲ್ಲಿ ಕೆಲವರು ಮನೆಯ ವಾಸ್ತುವಿನಲ್ಲಿ ಆಗಬೇಕಾದ ಬದಲಾವಣೆಗಳು ಇದ್ದಲ್ಲಿ ಅದನ್ನು ಮಾಡಿಸಲು ಬೇಕಾದಂಥ ವ್ಯಕ್ತಿಗಳನ್ನು ಕರೆಸಿ, ಕೆಲಸದ ಬಗ್ಗೆ ಮಾತುಕತೆ ನಡೆಸಲಿದ್ದೀರಿ.
ಕೃಷಿ ವಿಜ್ಞಾನಿಗಳಿಗೆ ತಮ್ಮ ಈಗಿನ ಪ್ರಾಜೆಕ್ಟ್ ಜೊತೆಗೆ ಮಹತ್ವಾಕಾಂಕ್ಷೆಯ- ದೊಟ್ಟ ಮಟ್ಟದ- ಪ್ರತಿಷ್ಠಿತ ಸಂಸ್ಥೆಯ ಅನುದಾನದ ಯೋಜನೆಗಳನ್ನು ಮುನ್ನಡೆಸುವಂತೆ ಸೂಚನೆ ಬರಲಿದೆ. ನಿಮ್ಮ ವೃತ್ತಿ ಜೀವನದಲ್ಲಿ ಬಹಳ ಮುಖ್ಯವಾದ ಪ್ರಾಜೆಕ್ಟ್ ಇದಾಗಿರಲಿದೆ ಎಂಬ ಖಾತ್ರಿ ಸಹ ನಿಮಗೆ ಸಿಗಲಿದೆ. ಡೇರಿ ಉತ್ಪನ್ನಗಳ ಮಾರಾಟ- ವಿತರಣೆ- ಉತ್ಪಾದನೆಯಲ್ಲಿ ತೊಡಗಿರುವವರಿಗೆ ಆದಾಯದಲ್ಲಿ ಹೆಚ್ಚಳ ಮಾಡಿಕೊಳ್ಳುವುದಕ್ಕೆ ನಾನಾ ಅವಕಾಶಗಳು ತೆರೆದುಕೊಳ್ಳಲಿವೆ.
ಲೇಖನ- ಸ್ವಾತಿ ಎನ್.ಕೆ.