AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

Daily Numerology February 26:ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 26, 2026 | 12:20 AM

Share

ಅಶಕ್ತರಿಗೆ ಒಂದು ಹೊತ್ತಿನ ಊಟದ ವ್ಯವಸ್ಥೆ ಮಾಡಲು ಸಾಧ್ಯವಾದರೆ ಮಾಡಿ. ಕನಿಷ್ಠ ಒಬ್ಬರಿಗಾದರೂ ಈ ರೀತಿ ಮಾಡುವುದರಿಂದ ದೃಷ್ಟಿದೋಷಗಳು ನಿವಾರಣೆ ಆಗುತ್ತವೆ. ಜೊತೆಗೆ ಹೇಳಿಕೊಳ್ಳಲು ಸಾಧ್ಯವಾಗದಂಥ ಅಂಜಿಕೆ- ಹಿಂಜರಿಕೆಗಳು ಇದ್ದಲ್ಲಿ ದೂರವಾಗುತ್ತವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಸ್ನೇಹಿತರು- ಸಂಬಂಧಿಗಳ ಮನೆಯಲ್ಲಿ ಆಯೋಜನೆ ಆಗಿರುವ ಕಾರ್ಯಕ್ರಮ- ಸಮಾರಂಭಗಳಿಗೆ ನೆರವು ನೀಡಬೇಕೆಂದು ನಿಮ್ಮಲ್ಲಿ ಕೆಲವರನ್ನು ಜೊತೆಗೆ ಬರುವಂತೆ ಕೇಳಿಕೊಳ್ಳಲಿದ್ದಾರೆ. ಮನಸ್ಸಿಲ್ಲದ ಮನಸ್ಸಿನಲ್ಲಿ ಹೂಂ ಅನ್ನುವ ಮುನ್ನ ಆಲೋಚಿಸುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಇರುವಂಥ ನಿರುತ್ಸಾಹ ಅಥವಾ ಏಕಾಗ್ರತೆ ಇಲ್ಲದಿರುವುದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ದೇವಸ್ಥಾನ- ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ ನಿಮ್ಮಲ್ಲಿ ಕೆಲವರಿಗೆ ಇದೆ. ನಿಮಗೆ ಅಂಥದ್ದೊಂದು ಉದ್ದೇಶ ಇದೆಯೋ ಇಲ್ಲವೋ ಕೊನೆಗೆ ತಮ್ಮ ಜೊತೆಗೆ ಡ್ರೈವಿಂಗ್ ಮಾಡುವುದಕ್ಕೆ ಜನರಲಿಲ್ಲ, ಆದ್ದರಿಂದ ತಮಗೆ ಸಹಾಯ ಮಾಡಬೇಕು ಎಂದು ಮನವಿ ಮಾಡಿಕೊಂಡು, ಆ ಮೂಲಕವಾದರೂ ನಿಮಗೆ ಇಂಥದ್ದೊಂದು ಅವಕಾಶ ಸಿಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಈ ದಿನದ ಬಹುಪಾಲು ಸಮಯ ನಿಮಗೊಂದು ನೀರಸತೆ ಕಾಡಲಿದೆ. ಎಂದಿನ ಉತ್ಸಾಹ- ಚಟುವಟಿಕೆಯಲ್ಲಿ ಕೆಲಸ- ಕಾರ್ಯದಲ್ಲಿ ತೊಡಗಿಕೊಳ್ಳುವುದು ಸಾಧ್ಯವಾಗುವುದಿಲ್ಲ. ಇನ್ನು ನಿಮ್ಮಲ್ಲಿ ಯಾರು ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸುತ್ತೀರೋ ಅಂಥವರಿಗೆ ಈಗ ಮಾಡುತ್ತಿರುವ ಕೆಲಸದ ಜೊತೆಗೆ ಹೊಸ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಸೂಚನೆ ನೀಡಬಹುದು. ಈ ದಿನ ಸಾಧ್ಯವಾದಷ್ಟೂ ಬಿಳಿ ಬಣ್ಣದ ಬಟ್ಟೆಗಳನ್ನು ಹಾಕಿಕೊಳ್ಳಿ.

ಲೇಖನ- ಸ್ವಾತಿ ಎನ್.ಕೆ.

Follow Us
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ