
ಶಂಕರಾಚಾರ್ಯರಿಂದ ರಚಿತವಾದ ತ್ರಿಪುರಸುಂದರಿ ಅಷ್ಟಕಂ ಶ್ರವಣ ಮಾಡಿ. ಒತ್ತಡ, ಅಂಜಿಕೆ ಹಾಗೂ ಭಾವನೆಗಳ ಏರಿಳಿತದಿಂದ ಹೊರಬರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ದೀರ್ಘ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.
ನಿಮಗೆ ಅಂದುಕೊಂಡಿದ್ದೆಲ್ಲ ಸರಿ ಎಂದೆನಿಸದರೆ ಸಾಲದು, ವಾಸ್ತವಕ್ಕೆ ಹತ್ತಿರ ಇರುವ ರೀತಿಯಲ್ಲಿ ಇದೆಯಾ ಎಂಬುದನ್ನು ಖಾತ್ರಿ ಮಾಡಿಕೊಳ್ಳುವುದು ಮುಖ್ಯವಾಗುತ್ತದೆ. ಇನ್ನು ನೀವಾಗಿಯೇ ಗಂಭೀರವಾದ ವಿಚಾರ ಮಾತನಾಡುತ್ತಿದ್ದೀರಿ ಎಂದಾದಲ್ಲಿ ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಏಕೆಂದರೆ ಹೇಳಿದ್ದೇ ಹೇಳಿ ಎದುರಿನಲ್ಲಿ ಇರುವವರಿಗೆ ನಿಮ್ಮ ಮೇಲೆ ಗೌರವ ಕಡಿಮೆ ಆಗುವಂತೆ ಮಾಡಿಕೊಳ್ಳಲಿದ್ದೀರಿ.
ಒಳ್ಳೆ ಮೊತ್ತವೇ ನೀಡಬಹುದು ಎಂಬ ನಿರೀಕ್ಷೆ ಇಟ್ಟುಕೊಂಡು, ಮಾಡಿದ ಕೆಲಸ ಅಥವಾ ಪ್ರಾಜೆಕ್ಟ್ ನಿಂದ ಬಹಳ ಕಡಿಮೆ ಹಣ ಸಿಗಬಹುದು. ಮನೆಯಿಂದ ಹೊರಗೆ ಊಟ- ತಿಂಡಿ ಮಾಡುವಂಥವರು ಸ್ವಚ್ಛತೆ ಬಗ್ಗೆ ಜಾಸ್ತಿ ಗಮನ ನೀಡಿ. ಸ್ನೇಹಿತರು ಅಥವಾ ಸಂಬಂಧಿಕರ ಒತ್ತಡಕ್ಕೆ ಮಣಿದು, ಮನೆಯ ಹೊರಗಿನಊಟ ಮಾಡಿದಿರೋ ಆರೋಗ್ಯ ಕೈ ಕೊಡುವ ಎಲ್ಲ ಸಾಧ್ಯತೆಗಳಿವೆ.
ನಿರೀಕ್ಷೆಗೂ ಮೀರಿದ ಆದಾಯ ಬರುವಂಥ ಸೂಚನೆಗಳು ದೊರೆಯಲಿವೆ. ಮನರಂಜನೆಗೆ ಸಂಬಂಧಿಸಿದ ವೃತ್ತಿಯಲ್ಲಿ ಇರುವಂಥವರಿಗೆ ಬಹಳ ಒಳ್ಳೆ ಸಮಯ ಇದಾಗಿರಲಿದೆ. ಸಂಗೀತಗಾರರು, ಸ್ಟ್ಯಾಂಡ್ ಅಪ್ ಕಮೆಡಿಯನ್ ಗಳು, ಮ್ಯಾಜಿಕ್ ಮಾಡುವಂಥವರು ಮತ್ತು ಅದನ್ನೇ ತಮ್ಮ ವೃತ್ತಿಯನ್ನಾಗಿ ಆರಿಸಿಕೊಂಡವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಸಿಹಿ ಪದಾರ್ಥಗಳ ವಿಚಾರವಾಗಿ ಹತೋಟಿಯಲ್ಲಿರಿ.
ಲೇಖನ- ಸ್ವಾತಿ ಎನ್.ಕೆ.