AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯ ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ, ಬುಧವಾರ ಪ್ರಯಾಣದ ವ್ಯತ್ಯಾಸ, ಅನಾರೋಗ್ಯ, ಭವಿಷ್ಯದ ಚಿಂತೆ, ಸಜ್ಜನರ ಸೇವೆ ಇಲವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಈ ರಾಶಿಯ ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 09, 2025 | 1:53 AM

Share

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಶೂಲಿ, ಕರಣ: ತೈತಿಲ, ಸೂರ್ಯೋದಯ – 06:23 am, ಸೂರ್ಯಾಸ್ತ – 06:44 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:34 – 14:07, ಯಮಘಂಡ ಕಾಲ 07:56 – 09:29, ಗುಳಿಕ ಕಾಲ 11:02 – 12:34

ತುಲಾ ರಾಶಿ: ನಿಮ್ಮ ನ್ಯಾಯಾಲಯದ ಹೋರಾಟಕ್ಕೆ ಸಾಕ್ಷಿ ಸಿಗದು. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿರುವ ನಿಮಗೆ ಪ್ರೇಮ ಜೀವನವು ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ರಾತ್ರಿ ವೇಳೆ‌ಪ್ರಯಾಣ ಬೇಡ. ದಾಂಪತ್ಯಜೀವನ ಅಪರೂಪದ ಕ್ಷಣಗಳ ಇಂದಿರಲಿವೆ. ನೀವು ಹೆಚ್ಚು ಭೌತಿಕ ವಿಷಯಗಳ ಮೇಲೆ ಮನಸ್ಸನ್ನು ಕೇಂದ್ರೀಕರಿಸುವಿರಿ. ನಿಮ್ಮ ಕಾರ್ಯದ ತಪ್ಪಿನಿಂದ ಅಧಿಕಾರಿಗಳು ನಿಮ್ಮನ್ನು ನಿಂದಿಸಬಹುದು. ಅಪರೂಪಕ್ಕೆ ಬಂಧುಗಳ ಭೇಟಿ. ಉತ್ತಮ ಆತಿಥ್ಯ. ನಿಮ್ಮ ಮನಸ್ಸಿಗೆ ಬಂದಂತೆ ವರ್ತಿಸುವುದು ಕಷ್ಟಕರವಾಗುವುದು. ವಿರಳ ಲಾಭದ ಅವಕಾಶಗಳ ಬಗ್ಗೆಯೂ ನೀವು ಗಮನ ಹರಿಸಬೇಕು. ಇದು ಜಾಣತನವೂ ಹೌದು. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಇನ್ನೊಬ್ಬರ ಬಗ್ಗೆ ಆಡಿಕೊಳ್ಳುವುದು ಸರಿ ಎನಿಸದು.

ವೃಶ್ಚಿಕ ರಾಶಿ: ಬದ್ಧತೆ ಇಲ್ಲದೇ ಯಾವ ಕೆಲಸವೂ ಇಂದು ಪೂರ್ಣವಾಗದು. ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಪ್ರೇಯಸಿ ಜೊತೆ ಸುತ್ತಾಟ ಮಾಡುವಿರಿ. ಸಂಸ್ಥೆಯ ಪ್ರಮುಖರಿಗೆ ಒಳಗನವರಿಂದ ಆತಂಕ. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ನೀವು ಸಣ್ಣ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ತಂದೆ ಹಾಗೂ ಮಕ್ಕಳ ನಡುವೆ ವ್ಯಾವಹಾರಿಕ ಕಲಹ. ಸಾಮಾಜಿಕ ಕಾರ್ಯಗಳನ್ನು ನೀವು ಹೆಚ್ಚು ಮಾಡುವಿರಿ. ನೀವು ಹೊಸದನ್ನು ಪ್ರಾರಂಭಿಸುವುದು ಒಳ್ಳೆಯದೇ. ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸಲು ಆಲೋಚಿಸುವಿರಿ. ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಸಾಧ್ಯತೆ ತುಂಬಾ ಕಡಿಮೆ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು.

ಧನು ರಾಶಿ: ದಾಂಪತ್ಯದ ಕಲಹದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಯಾರಾದರೂ ಮೌನದಿಂದ ಇದ್ದು, ಕಲಹವನ್ನು ಮೊದಲು ಶಾಂತ ಮಾಡಿ. ನೀವು ವ್ಯಾಪಾರದ ಕಾರಣಕ್ಕೆ ಕೈಗೊಂಡ ಪ್ರಯಾಣವು ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ಸಣ್ಣ ನೌಕರರಿಗೆ ಜೀವನದ ಮೇಲೆ ಉತ್ಸಾಹ ಆರಂಭವಾಗಲಿದೆ. ನಿಮ್ಮ ಪೋಷಕರ ಜೊತೆ ನೀವು ಆಸ್ತಿಯ ವಿಚಾರವಾಗಿ ಚರ್ಚಿಸುವಿರಿ. ಎಲ್ಲರ ಜೊತೆ ಪ್ರೀತಿಯನ್ನು ಹಂಚಿಕೊಳ್ಳುವಿರಿ. ಇಂದು ನೀವು ಆಚರಣೆಗೆ ಹೆಚ್ಚು ಒತ್ತು ನೀಡುವಿರಿ. ಆನುವಂಶಿಕ ಖಾಯಿಲೆ ನಿಮ್ಮಲ್ಲಿ ಕಾಣಿಸಬಹುದು.‌ ಕೂಡಲೇ ಬೇಕಾದ ಚಿಕಿತ್ಸೆಗೆ ಗಮನಕೊಡಿ. ರಾಜಕೀಯದಲ್ಲಿ ನಿಮಗೆ ಜನಬೆಂಬಲ ಹೆಚ್ಚಾಗಬಹುದು. ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಶ್ರದ್ಧೆ ಹೆಚ್ಚಿರುವುದು. ಇನ್ನೊಬ್ಬರನ್ನು ಹಿಂದಿಕ್ಕಲು ಪ್ರಯತ್ನ ಪೂರ್ವಕವಾಗಿ ಕಾರ್ಯ ಮಾಡುವಿರಿ. ಸ್ನೇಹಿತನ ಮನೆಯಲ್ಲಿ ಇಂದು ಹಬ್ಬದ ವಾತಾವರಣವು ಇರಲಿದೆ. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಪ್ರಯತ್ನಿಸಿದ ಕಾರ್ಯಗಳಿಂದ ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶ.

ಮಕರ ರಾಶಿ: ಹಣಕಾಸಿನ ವ್ಯವಹಾರ ನಿಮಗೆ ಕುತ್ತು ತರಬಹುದು. ನೀವು ಈ ದಿನವನ್ನು ಜಾಗರೂಕತೆಯಿಂದ ಆಯೋಜಿಸಿ ಕಾರ್ಯವನ್ನು ಸಾಧಿಸಿಕೊಳ್ಳಿ. ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ಇಂದು ಪುಣ್ಯಕಾರ್ಯದಿಂದ ಪ್ರಾಣಾಪಾಯ ತಪ್ಪಿರುವುದು. ಸಹೋದ್ಯೋಗಿಗಳ ಬಗ್ಗೆ ಪೂರ್ವಾಗ್ರಹವಿರುವುದು. ನೀವು ಸಂಬಂಧಿಕರ ಜೊತೆ ಸ್ವಲ್ಪ ಸಮಯ ಒಟ್ಟಿಗೆ ಕುಳಿತು ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಿರಿ. ವಿದ್ಯುತ್ ಗೆ ಸಂಬಂಧಿಸಿದ ಕೆಲಸ ಮಾಡುವವರು ಜಾಗರೂಕತೆಯಿಂದ ಮಾಡಿ. ನಿಮ್ಮ ಗೌರವಕ್ಕೆ ಧಕ್ಕೆ ಬರಬಹುದು. ನಾಯಕತ್ವದ ಸಾಮರ್ಥ್ಯವು ಬಲವಾಗಬಹುದು. ಕ್ರಿಯಾಶೀಲತೆಯು ನಿಮ್ಮ ಅಧಿಕಾರಕ್ಕೆ ಪೂರಕವಾಗಿರುವುದು. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು.

ಕುಂಭ ರಾಶಿ: ಸ್ಪರ್ಧಾತ್ಮಕ ವಿಚಾರದಲ್ಲಿ ನಿಮಗೆ ಗೆಲವು.‌ ಪರೀಕ್ಷಯ ಫಲಿತಾಂಶದಿಂದ ನೆಮ್ಮದಿ. ನೀವು ಸಂಗಾತಿಯ ಜೊತೆ ಸಂತೋಷವನ್ನು ಹಂಚಿಕೊಳ್ಳಲು ಬಯಸುವಿರಿ. ಆದರೆ ಅವರ ಸಮಸ್ಯೆಗಳ ಬಗ್ಗೆ ಮಾತನಾಡಿ ನಿಮ್ಮನ್ನು ಇನ್ನಷ್ಟು ತೊಂದರೆಗೊಳಿಸಬಹುದು. ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಮನೆಯವರು ನಿಮ್ಮ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಬಹುದು. ಇಂದು ನಿಮಗಾಗಿ ಯಾರಾದರೂ ಸಹಕಾರವನ್ನು ನೀಡಲು ಬರಬಹುದು. ಹೆಚ್ಚುತ್ತಿರುವ ವೆಚ್ಚಗಳನ್ನು ಕಡಿವಾಣ ಹಾಕಿಕೊಳ್ಳಿ. ನೀವು ಅಪೂರ್ಣವಾದ ಕಾರ್ಯಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುವಿರಿ. ನಿಮ್ಮ ಕಾರ್ಯದ ಒಟ್ಟು ಅವಲೋಕನದ ಅವಶ್ಯಕತೆ ಇರಲಿದೆ. ಉನ್ನತ ಸ್ಥಾನಕ್ಕೆ ಹೋಗುವ ಆಯ್ಕೆಯ ಪಟ್ಟಿಯಲ್ಲಿ ನೀವಿರುವಿರಿ. ನಿಮ್ಮ ಮಾತಿನಿಂದ ಸ್ಥಾನಮಾನ ಮತ್ತು ಪ್ರತಿಷ್ಠೆಗಳು ಹೆಚ್ಚಾಗಬಹುದು. ವಿಷಯದಲ್ಲಿ ನೀವು ಗೊಂದಲವಿರಬಹುದು.

ಮೀನ ರಾಶಿ: ಹೂಡಕೆಯಿಂದ ನಷ್ಟ. ಆರ್ಥಿಕ ದಾಖಲೆಗಳನ್ನು ಭದ್ರವಾಗಿರಿಸಿಕೊಳ್ಳಿ. ಇಂದು ನಿಮ್ಮ ಒರಟುತನದಿಂದ ದಾಂಪತ್ಯದಲ್ಲಿ ಕಲಹವಾಗುವ ಸಾಧ್ಯತೆ ಇದೆ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ರಾಜಕೀಯ ನಾಯಕರಿಗೆ ಅನಿರೀಕ್ಷಿತ ಬೆಂಬಲ. ಕಾರ್ಯಕ್ಕೆ ಮತ್ತಷ್ಟು ಉತ್ಸಾಹ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿರಾಸೆ ಅನುಭವಿಸುತ್ತೀರಿ. ಆರ್ಥಿಕ ವ್ಯವಹಾರಕ್ಕೆ ಇಂದು ಶುಭ ದಿನವಾಗಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ಹೆಚ್ಚಿಸುವಿರಿ. ಪ್ರೀತಿಪಾತ್ರರ ಬೆಂಬಲ ನಿಮ್ಮೊಂದಿಗೆ ಇದ್ದರೂ ಮಾನಸಿಕವಾಗಿ ಒಪ್ಪಿಕೊಳ್ಳಲಾರಿರಿ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು.

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ