AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ

Daily Horoscope 23 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಸೋಮವಾರ ಕಾನೂನು ಸಮರ, ಹೂಡಿಕೆಗೆ ತಜ್ಞರ ಸಲಹೆ, ಅಜ್ಞಾತಸ್ಥಳದಲ್ಲಿ ವಾಸ, ಮಾನವೀಯತೆ, ಜವಾಬ್ದಾರಿಯಲ್ಲಿ ಹಿಡಿತ ಇದೆಲ್ಲ ಈ ದಿನದ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Feb 23, 2026 | 12:55 AM

Share

ಮೇಷ ರಾಶಿ:

ಮಹತ್ತ್ವದ ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭವಾಗಲಿದೆ. ಮಾತುಗಳನ್ನು ಕಡಿಮೆ ಆಡುವಿರಿ. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು.

ವೃಷಭ ರಾಶಿ:

ಕಾರ್ಯ ಮಾಡುವ ಸುಲಭದ ಉಪಾಯಗಳು ನಿಮ್ಮ ಬುದ್ಧಿಗೆ ತೋಚದೇ ಹೋಗಬಹುದು. ಒಂದಕ್ಕಿಂತಲೂ ಹೆಚ್ಚು ಕಾರ್ಯವನ್ನು ಒಮ್ಮೆಲೇ ಮಾಡುವ ಸಂದರ್ಭವು ಬರಬಹುದು. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು. ಮನಸ್ಸಿನಲ್ಲಿ ಯಾವುದೋ ಆತಂಕವು ಇರಲಿದ್ದು ಹೊರಹಾಕಲು ಪ್ರಯತ್ನಿಸುವಿರಿ. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಕಾರ್ಯದ ನಿಮಿತ್ತ ಓಡಾಟವು ಹೆಚ್ಚಾಗುವುದು. ಬಂಧುಗಳಿಂದ ಸಲ್ಲದ ಮಾತುಗಳನ್ನು ಕೇಳುವಿರಿ. ಆಲಸ್ಯದಿಂದ ನಿಮ್ಮ ಎಲ್ಲ ಕಾರ್ಯಗಳೂ ಉಳಿಯಬಹುದು.

ಮಿಥುನ ರಾಶಿ:

ಮನೆಯ ಖರೀದಿಗೆ ಹಣ ಒಟ್ಟಾಗುವುದು ಕಷ್ಟ. ಕಲಿಕೆಯ ಬಗ್ಗೆ ಆಸಕ್ತಿ ಉಂಟಾಗಬಹುದು. ಒಂದೇ ರೀತಿಯ ಕೆಲಸವನ್ನು ಮಾಡಿ ಬೇಸರವಾದೀತು. ಹೊಸ ವಸ್ತುಗಳನ್ನು ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣವು ಇದ್ದು ಉತ್ಸಾಹದಿಂದ ಇರುವಿರಿ. ಸೌಜನ್ಯದಿಂದ ಮಾತನಾಡಿ, ಸಂತೋಷಪಡಿಸುವಿರಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರು ಹೇಳುವರು.

ಕರ್ಕಾಟಕ ರಾಶಿ:

ಅತಿವೇಗದ ಮಾತು ಇತರರಿಗೆ ಸ್ಪಷ್ಟವಾಗದೇ ಹೋಗಬಹುದು. ನಿಮ್ಮ ಸುರಕ್ಷಿತ ತಾಣವನ್ನು ನೀವೇ ಆರಿಸಿಕೊಳ್ಳಿ. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು. ದಾಂಪತ್ಯ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರಲಿದ್ದು ಅದಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾದೀತು. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ತಾಯಿಯ ಮೇಲೆ ನಿಮ್ಮ ಕೋಪವನ್ನು ತೋರಿಸುವಿರಿ. ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುವಿರಿ. ಆದರೂ ಕಷ್ಟವಾದೀತು.

ಸಿಂಹ ರಾಶಿ:

ಆಪ್ತರ‌ ಜೊತೆ ಮಾಡುವ ಸಮಾಲೋಚನೆಯಿಂದ ಅನೇಕ ವಿಚಾರಕ್ಕೆ ತೆರೆಬೀಳುವುದು. ವಸ್ತುಗಳ ಖರೀದಿಗೆ ಉತ್ಸಾಹವು ಅಧಿಕವಾಗಿರಲಿದೆ. ಯಾರ ಮಾತನ್ನೂ ಕೇಳುವ ವ್ಯವಧಾನವೂ ನಿಮ್ಮಲ್ಲಿ ಇರದು. ಸಹೋದರನ ಕುಟುಂಬದಲ್ಲಿ ನಿಮ್ಮ ಮಧ್ಯಪ್ರವೇಶವು ಆಗಬೇಕಾಗಬಹುದು. ಧಾರ್ಮಿಕ ಕಾರ್ಯದಲ್ಲಿ ನಿಮ್ಮ ತೊಡಗುವಿಕೆ ಹೆಚ್ಚಿರುವುದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಧಾರ್ಮಿಕ ಮುಖಂಡರಿಗೆ ಅಪವಾದ ಬರುವ ಸಾಧ್ಯತೆ ಇದೆ. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು.

ಕನ್ಯಾ ರಾಶಿ:

ನಿಮ್ಮ ನೆಚ್ಚಿನ ವ್ಯಕ್ತಿಗಳ ಸಂಪರ್ಕ ಸಾಧ್ಯವಾಗುವುದು. ಮನೆಯ ಖರ್ಚನ್ನು ಕಡಿಮೆ ಮಾಡುವ ಚಿಂತನೆಯಲ್ಲಿ ಇರುವಿರಿ. ಸರಳತೆಯೇ ನಿಮ್ಮ ಪ್ರಶಂಸೆಗೆ ಕಾರಣವಾಗುವುದು. ಕೆಟ್ಟ ಆಲೋಚನೆಗಳು ಬಂದರೂ ಅದನ್ನು ದೂರ ಮಾಡಿಕೊಳ್ಳುವ ತಂತ್ರವನ್ನು ತಿಳಿಯಿರಿ. ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ. ಮನಸ್ಸಿನಲ್ಲಿ ಹತಾಶೆಯ ಭಾವವು ಪುನಃ ಪುನಃ ಬರಲಿದೆ.

ತುಲಾ ರಾಶಿ:

ಚಿಂತನೆ ವಿಶಾಲವಾಗಲು ಸಣ್ಣ ತಪ್ಪುಗಳನ್ನು ಪಾಠವಾಗಿಸಿಕೊಳ್ಳುವಿರಿ. ಹಿತಮಿತವಾದ ಮಾತುಗಾರಿಕೆಯಿಂದ ಎಲ್ಲರಿಗೂ ಹಿತವಾಗುವುದು. ಆರೋಗ್ಯವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಮಾಡಿಕೊಳ್ಳಿ. ಸಮಯಪ್ರಜ್ಞೆಯಿಂದ ಆಗುವ ತಪ್ಪನ್ನು ಸರಿ ಮಾಡಿಕೊಳ್ಳುವಿರಿ. ಬೇಕಾದಷ್ಟು ಇದ್ದರೂ ಅದನ್ನು ವ್ಯಯಿಸಲು ದಾರಿ ಕಾಣದು. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು. ಬಂಧುಗಳ ಆಶ್ರಯದಲ್ಲಿ ಇಂದು ನೀವು ಇರಬೇಕಾದೀತು.

ವೃಶ್ಚಿಕ ರಾಶಿ:

ವಿವಾದಗಳಿಂದ ದೂರವಿರಬೇಕೆಂದರೂ ಅದು ನಿಮ್ಮನ್ನೇ ಬಂದು ಸೇರುವುದು. ನಿಮ್ಮ ಪ್ರಭಾವ ಹೆಚ್ಚಾಗಿ ಇರುವುದರಿಂದ ಶತ್ರುಗಳು ದೂರ ಹೋಗುತ್ತಾರೆ ಮತ್ತು ದೀರ್ಘ ಕಾಲದಿಂದ ಬಾಕಿ ಉಳಿದಂತಹ ಯೋಜನೆ ಪೂರ್ಣಗೊಳ್ಳುವುವು. ಆರ್ಥಿಕ ಸಮಸ್ಯೆಯನ್ನು ಹೆಚ್ಚಿಸಿಕೊಳ್ಳುವಿರಿ. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುವರು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು. ನಿಮ್ಮನ್ನು ಅನುಕರಣೆ ಮಾಡಬಹುದು.

ಧನು ರಾಶಿ:

ಇಂದು ಮನೆಯ ಹಿರಿಯರನ್ನು ಕಳೆದುಕೊಳ್ಳಬೇಕಾದೀತು. ವ್ಯವಹಾರದಲ್ಲಿ ಅಸಾಧ್ಯವನ್ನು ಸಾಧಿಸುವ ಛಲ ಬೇಡ. ವಿದ್ಯಾರ್ಥಿಗಳು ತಮಗೆ ಬೇಕಾದುದನ್ನು ಯಾರಿಂದಲಾದರೂ ಪಡೆಯುವರು. ಹಲವು ಪ್ರಯತ್ನದ ಬಳಿಕ ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ನಿಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎನಿಸುವುದು. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ ಜವಾಬ್ದಾರಿ ಹೆಚ್ಚಾಗುವುದು.

ಮಕರ ರಾಶಿ:

ನಿಮ್ಮ ಪ್ರೀತಿ ಮತ್ತು ವಿಶ್ವಾಸ ಭದ್ರವಾಗಿರುವುದು. ಏಕಾಂತದಲ್ಲಿ ಇರುವುದು ನಿಮಗೆ ಇಷ್ಟವಾಗುವುದು. ಸಹೋದರಿಯ ನಡುವೆ ವಾಗ್ವಾದ ಮಾಡುವಿರಿ. ಇಂದು ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ. ಹೊಸ ಉದ್ಯೋಗವನ್ನು ಉತ್ಸಾಹದಿಂದ ಮಾಡುವಿರಿ. ಬಯಸಿದ್ದನ್ನು ಪಡೆದುಕೊಳ್ಳುವ ಅರ್ಹತೆ ನಿಮಗೆ ಬರಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಶಿಸ್ತುಬದ್ಧವಾದ ವ್ಯವಹಾರದಿಂದ ನಿಮಗೆ ಹೊಗಳಿಕೆ ಸಿಗುವುದು.

ಕುಂಭ ರಾಶಿ:

ನಿಮ್ಮ ವಿವಾಹದ ಕುರಿತು ಬಂಧುಗಳಲ್ಲಿ ಚರ್ಚೆಯಾಗುವುದು. ಆಪ್ತರಿಗಾಗಿ ಸಮಯವನ್ನು ಇಡುವಿರಿ. ನಿಮಗಾಗಿ ಅನುಕೂಲಕರ ವಾತಾವರಣವನ್ನು ಸಿದ್ಧ ಮಾಡುವರು. ಪ್ರೀತಿಯಲ್ಲಿ ಇಂದು ಸಮಯ ಸರಿಯುವುದೇ ಗೊತ್ತಾಗದು. ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ. ನಿಮ್ಮ ಒರಟಾದ ಮಾತು ಇನ್ನೊಬ್ಬರಿಗೆ ಬೇಸರವನ್ನು ಕೊಡುವುದು. ವಸ್ತುಗಳ ಖರೀದಿಗೆ ಹಣವನ್ನು ಖರ್ಚು ಮಾಡಬಹುದು. ಕುಟುಂಬ ಜೀವನ ಸಾಮಾನ್ಯವಾಗಿರುತ್ತದೆ.

ಮೀನ ರಾಶಿ:

ಶ್ರಮ‌ ಮಾತ್ರ ನಿಮ್ಮದು, ಫಲವು ತಾನಾಗಿಯೇ ಬರುತ್ತದೆ. ಇಂದು ನಿಮ್ಮ ಆದಾಯವನ್ನು ಇಮ್ಮಡಿಗೊಳಿಸಿಕೊಳ್ಳಬಹುದು. ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸವನ್ನು ಕೊಡಲು ಸಾಲ ಮಾಡಬೇಕಾದೀತು. ಆದಾಯದ ಮೂಲವು ಬದಲಾಗಬಹುದು. ಕಾನೂನಿಗೆ ಸಂಬಂಧಿಸಿದಂತೆ ಹೆಚ್ಚಿನ ಓಡಾಟವಾಗಬಹುದು. ಆಸ್ತಿ ವ್ಯವಹಾರದಲ್ಲಿ ಹಿನ್ನಡೆಯಾದಂತೆ ಅನ್ನಿಸಬಹುದು. ನ್ಯೂನತೆಗಳನ್ನು ಮರೆತು ಮುಂದಡಿ ಇಡಬೇಕು‌. ಬರಬೇಕಾದ ಹಣವನ್ನು ನೀವು ಬಹಳ ಶ್ರಮದಿಂದ ಪಡೆಯಬೇಕಾಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಭರಣೀ, ಯೋಗ : ಬ್ರಹ್ಮ, ಕರಣ :ತೈತಿಲ, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 20 pm, ಇಂದಿನ ಶುಭಾಶುಭ ಕಾಲ : ರಾಹು 08:14 – 09:42, ಯಮಗಂಡ ಕಾಲ 11:10 – 12:38, ಗುಳಿಕ ಕಾಲ 14:06 – 15:34

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್