
ಕುಟುಂಬದ ಆಪ್ತರ ಆರೋಗ್ಯದ ಬಗ್ಗೆ ಕಾಳಜಿ ಇರುವುದು. ಇಂದು ವ್ಯಾಪಾರಿಗಳಿಗೆ ನಷ್ಟ ಹಾಗೂ ಉದ್ವೇಗದ ಉಂಟಾಗಬಹುದು. ವಾಹನ ಖರೀದಿಗೆ ಹೆಚ್ಚು ಒತ್ತಡ ಬರಬಹುದು. ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ನಿಮ್ಮ ಸಹಾಯ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ವಿಚಾರದಲ್ಲಿ ನಿಮಗೆ ತಾಳ್ಮೆ ಕಡಿಮೆ ಎನಿಸಬಹುದು.
ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ ದುಃಖಿಸುವಿರಿ. ಕಛೇರಿಯಲ್ಲಿ ನಿಮ್ಮನ್ನು ನೋಡುವ ದೃಷ್ಟಿಯು ಬದಲಾಗುವುದು. ಎಲ್ಲವನ್ನೂ ಹಣದಿಂದ ಲೆಕ್ಕಹಾಕಲಾಗದು. ಮಕ್ಕಳಿಗೆ ಜೀವನಕ್ಕೆ ಬೇಕಾದ ಧೈರ್ಯವನ್ನು ಹೇಳುವಿರಿ. ನೂತನ ಗೃಹನಿರ್ಮಾಣಕ್ಕೆ ಸಂಗಾತಿಯಿಂದ ಸಹಾಯ. ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಹೊಗಳುವರು. ಪುಣ್ಯಸ್ಥಳಕ್ಕೆ ಹೋಗಲು ಇಚ್ಛಿಸುವಿರಿ.
ಕೆಲಸದ ನಿಮಿತ್ತ ನೀವು ಇಂದು ಪ್ರಯಾಣ ಮಾಡಬೇಕಾಗಬಹುದು. ಬೇಡವೆಂದರೂ ನಕಾರಾತ್ಮಕ ಚಿಂತನೆಗಳೇ ನಿಮ್ಮ ಮನಸ್ಸಿಗೆ ಬರುವುದು. ಒಂದೇ ತಕ್ಕಡಿಯಲ್ಲಿ ಎಲ್ಲರನ್ನೂ ತೂಗಲಾಗದು. ನಿಮಗೆ ಬರುವ ವಿವಾಹ ಸಂಬಂಧವನ್ನು ಬೇರೆ ಬೇರೆ ಕಾರಣಗಳನ್ನು ಕೊಟ್ಟು ನಿರಾಕರಿಸುವಿರಿ. ನಿಮ್ಮ ಪ್ರಗತಿಯ ಮಾರ್ಗಗಳನ್ನು ತೆರೆಯಬಹುದು. ಕಾಲಹರಣಕ್ಕೆ ಯಾರ ಜೊತೆಗಾದರೂ ಮಾತನಾಡುತ್ತಾ ಇರುವಿರಿ. ಸಮಯೋಚಿತ ಸ್ಪಂದನೆಯಿಂದ ಗೌರವ ಸಿಗುವುದು.
ಯಾವುದೋ ಅವಘಡದ ಸೂಚನೆಯಿಂದ ನೀವು ಹೆದರುವಿರಿ. ಇದು ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚುಮಾಡೀತು. ನಿಮ್ಮ ವೈವಾಹಿಕ ಸಂಬಂಧಕ್ಕೆ ಸಂಬಂಧಿಸಿದಂತೆ, ನಿಮ್ಮ ಸಂಗಾತಿಯ ನಿಮ್ಮ ಪ್ರೀತಿ ಮತ್ತು ಸಾಮರಸ್ಯ ಉಳಿಯುತ್ತದೆ. ನೀವು ಧರ್ಮ ಕರ್ಮದ ಕೆಲಸಗಳಲ್ಲಿ ಆಸಕ್ತಿ ತೋರಿಸುವಿರಿ. ಸರ್ಕಾರದ ಹಣ ಗೊತ್ತಾಗದೇ ಮಧ್ಯದಲ್ಲಿ ಸ್ಥಗಿತವಾಗುವುದು. ಮನೆಯ ಹಿರಿಯರಿಂದ ಆಶೀರ್ವಾದ ಬಲಬಂದಂತೆ ಅನ್ನಿಸಬಹುದು. ಹತ್ತಾರು ವಿಚಾರಗಳನ್ನು ನೀವು ಏಕಕಾಲದಲ್ಲಿ ಚಿಂತಿಸಿ ತಲೆಯನ್ನು ಹಾಳು ಮಾಡಿಕೊಳ್ಳುವಿರಿ.
ಎದುರಾಳಿಯ ವಿರುದ್ಧ ಪ್ರತಿಸ್ಪರ್ಧಿ ತಂತ್ರವನ್ನು ಹೂಡುವಿರಿ. ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪ ಮಾಡಿಕೊಳ್ಳುವಿರಿ. ಶತ್ರುಗಳೂ ನಿಮಗೆ ಪರೋಕ್ಷವಾಗಿ ಉಪದೇಶ ಕೊಡಬಹುದು. ಸಹೋದರರ ನಡುವೆ ಪ್ರೀತಿ ಇರುತ್ತದೆ. ಉದ್ಯೋಗದಲ್ಲಿ ನಿಮ್ಮ ಬದಲಾವಣೆ ಆಗಲಿದ್ದು ಆಶ್ಚರ್ಯದ ಸಂಗತಿಯಾದೀತು. ಆರ್ಥಿಕ ವಿಚಾರಕ್ಕೆ ದಾಂಪತ್ಯದಲ್ಲಿ ಕೋಲಾಹಲವಾಗುವುದು. ಆದಾಯಕ್ಕಾಗಿ ಅನ್ಯ ಮಾರ್ಗವನ್ನೂ ನೀವು ಅವಲಂಬಿಸಬಹುದು.
ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ನಿಮಗೆ ಕಷ್ಟವಾದೀತು. ತಾಯಿಯ ಪ್ರೀತಿಯು ಇಂದು ನಿಮಗೆ ಹೆಚ್ಚು ಸಿಗಲಿದೆ. ಉದ್ಯಮಕ್ಕೆ ವಿದೇಶೀ ಸಂಪರ್ಕ ಸಾಧ್ಯತೆ. ನಿಮ್ಮ ಮನಸ್ತಾಪವನ್ನು ಕೋಪದ ಮೂಲಕ ಹೊರಹಾಕುವಿರಿ. ನಿಮ್ಮ ನಡವಳಿಕೆಯ ಬಗ್ಗೆ ಹಿರಿಯರು ಮಾತನಾಡಿಕೊಳ್ಳುವರು. ನೀವು ತಾಳ್ಮೆಯಿಂದಿರಿ ಮತ್ತು ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಿ. ಮನೆಯಲ್ಲಿ ನೆಮ್ಮದಿಯ ವಾತಾವರಣವು ಹಾಳಾಗಬಹುದು. ಕಲಿಕೆಯ ವಿಚಾರದಲ್ಲಿ ನೀವು ಹಿಂದುಳಿಯುವಿರಿ.
ಸಂಗಾತಿಯ ಒತ್ತಡವನ್ನು ನೀವು ಕಡಿಮೆ ಮಾಡುವಿರಿ. ವ್ಯಾಪಾರದ ಕಾರಣಕ್ಕೆ ಪ್ರಯಾಣವನ್ನು ಮಾಡುವಿರಿ. ಇಂದಿನ ಕಲಹದಿಂದ ನಿಮ್ಮ ಒಳ ಮನಸ್ಸು ಅರ್ಥವಾಗುವುದು. ನೀವು ಒತ್ತಡವನ್ನು ತಂದುಕೊಳ್ಳಬಾರದು ಎಂದು ಅಂದುಕೊಂಡಿದ್ದರೂ ಅಂತಹ ಸಂದರ್ಭವು ಸೃಷ್ಟಿಯಾಗಬಹುದು. ಆರ್ಥಿಕ ಲಾಭಕ್ಕಾಗಿ ನೀವು ಅವಕಾಶಗಳನ್ನು ಪಡೆಯುವುದನ್ನು ಮುಂದುವರಿಸುವಿರಿ. ಸ್ಥಿರಾಸ್ತಿಯನ್ನು ಪಡೆಯುವ ಚಿಂತನೆ ಸಫಲವಾಗುವುದು. ಉದ್ಯೋಗದಿಂದ ತೆಗೆದುಹಾಕುವ ಭೀತಿಯು ನಿಮ್ಮನ್ನು ಕಾಡಬಹುದು.
ಮನೆಯ ನಿರ್ಮಾಣ ಒತ್ತಡದಿಂದ ಆರೋಗ್ಯದ ವ್ಯತ್ಯಾಸ. ಇಂದು ನೀವು ದಿನದ ಕೊನೆಯಲ್ಲಿ ಸುವಾರ್ತೆಯನ್ನು ನಿರೀಕ್ಷಿಸಬಹುದು. ಬಾಡಿಗೆ ಮನೆಯವರು ಮನೆಯನ್ನು ಬದಲಾಯಿಸುವರು. ಯಾರನ್ನಾದರೂ ಮನವೊಲಿಸಿ ಮಾಡುವ ಕಾರ್ಯಕ್ಕೆ ಫಲ ಸಿಗುವುದು. ಹಳೆಯ ಸ್ನೇಹಿತ ನಿಮ್ಮನ್ನು ಭೇಟಿಯಾಗಬಹುದು. ಮನೆಯಲ್ಲಿ ಇಂದು ಸಂಭ್ರಮದ ವಾತಾವರಣ ಇರುವುದು. ಪ್ರಭಾವಿ ವ್ಯಕ್ತಿಗಳ ಸಹವಾಸ ಕಡಿತವಾಗುವುದು. ಸಹೋದರಿಯರ ಭೇಟಿಯು ನಿಮಗೆ ಸಂತೋಷ ಕೊಡುವುದು.
ನೀವು ಇಂದು ವ್ಯಾಪಾರದಲ್ಲಿ ಲಾಭವನ್ನು ಪಡೆಯುವಿರಿ. ಕೆಲವು ದಿಟ್ಟ ಹೆಜ್ಜೆಯ ಮೂಲಕ ನೀವು ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಪರಿವಾರದಲ್ಲಿ ಪ್ರೀತಿ ಮತ್ತು ಸಾಮರಸ್ಯ ಉಳಿಯಲಿದೆ. ಉಷ್ಣತೆಯಿಂದ ಬಾಧೆಗೊಳಗಾಗುವಿರಿ. ಪೋಷಕರು ಬೆಂಬಲಿಸಲು ಸಾಧ್ಯವಾಗುತ್ತದೆ. ವೈಚಾರಿಕ ಭಿನ್ನಾಭಿಪ್ರಾಯವು ವೈಯಕ್ತಿಕವಾಗಿ ಬದಲಾಗಬಹುದು. ಹಳೆಯ ರೋಗವೇ ಪುನಃ ಕಾಣಸಿಕೊಳ್ಳುವುದು. ಇಂದು ನೀವು ಸಮಾನ್ಯಾರಂತೆ ತೋರುವಿರಿ. ತಂತ್ರಜ್ಞಾನದ ಬಗ್ಗೆ ತಿಳಿವಳಿಕೆ ಕಡಿಮೆ ಎನಿಸುವುದು.
ನಿಮ್ಮ ಪ್ರಭಾವವೂ ಇಂದು ಇತರರ ಮೇಲೆ ಹೆಚ್ಚಾಗಿರಲಿದೆ. ನಿಮ್ಮ ಮಾತಿನಿಂದ ಶತ್ರುಪಾಳ್ಯದ ಬಲ ಉಡುಗಿಹೋಗುವುದು. ಕುಟುಂಬದಲ್ಲಿಯೂ ನೀವು ಗೌರವವನ್ನು ಪಡೆಯುವಿರಿ. ಬಲವಾದ ನೋವನ್ನು ಪಡೆಯಬೇಕಾದೀತು. ಉನ್ನತ ಅಧಿಕಾರಿಗಳ ಜೊತೆ ಸೆಣೆಸಾಡುವ ಸ್ಥಿತಿಯೂ ಬರಬಹುದು. ಉದ್ಯೋಗವನ್ನು ಬದಲಿಸುವ ಆಲೋಚನೆ ಮಾಡಬೇಕಾದೀತು. ಆರ್ಥಿಕ ಸಂಕಷ್ಟವನ್ನು ಜಾಣ್ಮೆಯಿಂದ ನಿರ್ವಹಿಸಲು ಸಾಧ್ಯವಾಗುವುದು. ಅತಿಯಾದ ಆಸೆ ಕಡಿಮೆ ಆಗಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಮಗ್ನರಾಗುವಿರಿ.
ಕೆಲಸದ ಸ್ಥಳದಲ್ಲಿ ಉದ್ವಿಗ್ನತೆ ಇರುತ್ತದೆ. ನೀವು ವಿರುದ್ಧ ಲಿಂಗಿಗಳ ಬೆಂಬಲವನ್ನು ಪಡೆಯುತ್ತೀರಿ. ಖಾಸಗಿ ಕೆಲಸಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಇಂದು ಬಹಳ ಮುಖ್ಯವಾಗಿರುತ್ತದೆ. ಯಾವುದೇ ಸಲಹೆಯು ನಿಮಗೆ ಸಂತೋಷವನ್ನು ನೀಡುತ್ತದೆ. ಚಂಚಲ ಮನಸ್ಸನ್ನು ನೀವು ನಿಯಂತ್ರಿಸಲು ಆಗದು. ಇದರಿಂದ ತೀರ್ಮಾನ ಸರಿಯಾಗಿ ತೆಗೆದುಕೊಳ್ಳಲಾಗದು. ನಿಮ್ಮಿಂದ ಕುಟುಂಬಕ್ಕೆ ಕೀರ್ತಿ. ಕಛೇರಿಯಲ್ಲಿ ಅಸಮಾಧಾನವಿರಲಿದ್ದು, ನೆಮ್ಮದಿಯಿಂದ ಕೆಲಸ ಮಾಡಲು ಆಗದು. .
ಆತ್ಮೀಯರ ಜೊತೆ ಇದ್ದು ಹಣವನ್ನು ಖರ್ಚು ಮಾಡುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಕೆಲವು ಸಮಸ್ಯೆಗಳು ಎದುರಾಗಬಹುದು. ಮಕ್ಕಳ ಮೇಲೆ ನಿಮಗೆ ಅತಿಯಾದ ಮೋಹ ಬೇಡ. ಸಹನೆಯ ನಿಮ್ಮ ಮೇಲೆ ಪ್ರಹಾರ ಅಧಿಕವಾಗಬಹುದು. ವಿದ್ಯಾಭ್ಯಾಸದ ವಿಚಾರದಲ್ಲಿ ಯಾವ ಸಡಿಲಿಕೆಯನ್ನೂ ಮಾಡಿಕೊಳ್ಳದಿರಿ. ದಾಂಪತ್ಯದಲ್ಲಿ ನೀವು ಸಂತೋಷವಾಗಿರುವಿರಿ. ಬಂಧುಗಳನ್ನು ಕಳೆದುಕೊಳ್ಳುವಿರಿ. ಇಂದಿನ ಒತ್ತಡದಲ್ಲಿ ನೀವು ಅನೇಕ ವಿಚಾರಗಳನ್ನು ಮರೆಯುವಿರಿ. ಮನಸ್ಸಿಗೆ ನೆಮ್ಮದಿ ಸಿಗುವ ಜಾಗಕ್ಕೆ ಹೋಗುವಿರಿ. ಅಪರಿಚಿತರ ಮುಂದೆ ಅಸಭ್ಯ ವರ್ತನೆ ಬೇಡ.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಹಸ್ತಾ, ಯೋಗ : ವೃದ್ಧಿ, ಕರಣ : ಗರಜ, ಸೂರ್ಯೋದಯ – 06 – 20 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:59 – 15:32, ಯಮಗಂಡ ಕಾಲ 06:21 – 07:53, ಗುಳಿಕ ಕಾಲ 09:24 – 10:56
-ಲೋಹಿತ ಹೆಬ್ಬಾರ್-8762924271 (what’s app only)