AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಖಾಸಗಿತನಕ್ಕೆ ಅಪರಿಚಿತರಿಂದ ಧಕ್ಕೆ..

Daily Horoscope, 08 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ಉದ್ಯೋಗದ ಒತ್ತಡ, ಮಿತವಾದ ಮಾತು, ಆಹಾರದಲ್ಲಿ ವ್ಯತ್ಯಾಸ, ಕುಟುಂಬದ ಮೇಲೆ‌ ಅಕ್ಕರೆ, ಮುಂದಡಿಗೆ ಧೈರ್ಯ, ಮಾತಿಗೆ ಸ್ಪಷ್ಟತೆ, ಆಮಿಷ ಇದೆಲ್ಲ ಈ ದಿನದ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರ ಖಾಸಗಿತನಕ್ಕೆ ಅಪರಿಚಿತರಿಂದ ಧಕ್ಕೆ..
Horoscope
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 08, 2026 | 12:54 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮೂಲಾ, ಯೋಗ : ವ್ಯತಿಪಾತ್, ಕರಣ : ಬಾಲ, ಸೂರ್ಯೋದಯ – 06 – 16 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:26 – 13:59, ಯಮಗಂಡ ಕಾಲ 07:49 – 09:21, ಗುಳಿಕ ಕಾಲ 10:54 – 12:25

ಮೇಷ ರಾಶಿ :

ಪ್ರೀತಿಪಾತ್ರರ ಜೊತೆ ಇಂದು ವಿವಾಹ ನಿಶ್ಚಯದ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಯಂತ್ರೋಪಕರಣಗಳನ್ನು ಪಡೆದು ಆನಂದಿಸುವರು. ಕೆಲಸವನ್ನು ನಿರ್ಧರಿಸುವಾಗ ಯಾವುದೇ ಒತ್ತಡಗಳಿಗೆ ಅವಕಾಶ ಕೊಡಬೇಡಿ. ಒಪ್ಪಂದವನ್ನು ಕೇವಲ ಪತ್ರದ‌ ಮೇಲೆ ಮಾತ್ರವಲ್ಲ, ಮನಸ್ಸಿನಲ್ಲಿ ಕೂಡ ದೃಢಪಡಿಸಿ. ಸಮಯವನ್ನು ಹಾಗೇ ವ್ಯರ್ಥವಾಗಿ ಕಳಡಯಬೇಡಿ. ವ್ಯವಹಾರದಲ್ಲಿ ಹೊಸ ಕೊಡುಗೆಗಳನ್ನು ಕಾಣಬಹುದು. ರಾಜಕೀಯದಿಂದ ನಿಮ್ಮ ವ್ಯವಹಾರಕ್ಕೆ ಹೊಸ ದಿಕ್ಕನ್ನು ಸಿಗಬಹುದು.

ವೃಷಭ ರಾಶಿ :

ಇಂದು ನೀವು ನಿಮ್ಮ ಅಂತರಂಗವನ್ನು ಮುಚ್ಚಿಡಲು ಪ್ರಯತ್ನಿಸಿದರೂ ಅದು ನಿಲ್ಲದು. ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ಆಗುಹೋಗುಗಳಿಗೂ ಜೊತೆಯಾಗುವರು. ಸಾಧನೆಯ ಫಲಿತಾಂಶದ ಬಗ್ಗೆ ಅಂಜಿಕೆ ಇರುವುದು. ಪ್ರೀತಿಯಿಂದ ಎಲ್ಲರೊಂದಿಗೆ ಮಾತನಾಡಿ. ಕುಟುಂಬದ ಮೋಜಿನ ಚಟುವಟಿಕೆಗಳನ್ನು ಮಾಡುತ್ತ ಕಾಲ ಕಳೆಯುವಿರಿ. ನೌಕರರ ನಿರ್ಲಕ್ಷ್ಯದಿಂದ ಆಗುವ ಹೊಣೆಯನ್ನೂ ಹೊರಬೇಕಾಗುವುದು. ಕೆಲವು ರೀತಿಯ ಹಾನಿಯ ಬಗ್ಗೆಯೂ ಚಿಂತಿಸುವುದು ಅಗತ್ಯ.

ಮಿಥುನ ರಾಶಿ:

ಮಾನಸಿಕ ಒತ್ತಡಕ್ಕೆ ಸಿಲುಕದೇ ನಿಶ್ಚಿಂತೆಯಿಂದ ಇರಲು ಪ್ರಯತ್ನಿಸಿ. ಇಂದು ನಿಮ್ಮ ದಕ್ಷತೆಯಿಂದ ಉತ್ತಮ ರೀತಿಯಲ್ಲಿ ಅನೇಕ ವಿಷಯಗಳನ್ನು ಸಾಧಿಸಲು ಇದು ನಿಮಗೆ ಸಹಾಯ ಮಾಡುತ್ತದೆ. ಖಾಸಗಿ ಉದ್ಯೋಗದಲ್ಲಿ ಬಯಸದೇ ಉನ್ನತ ಸ್ಥಾನಕ್ಕೆ ಏರಿದ್ದು ನಂಬಲು ಕಷ್ಟವಾಗಕಿದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಕೆಲವೊಮ್ಮೆ ಸ್ವಭಾವದಲ್ಲಿ ಭ್ರಮೆಯಿಂದ ಕೋಪದ ಸ್ಥಿತಿ ಇರಬಹುದು. ನಿಮ್ಮಲ್ಲಿರುವ ನ್ಯೂನತೆಗಳನ್ನು ನೀವೇ ತಿಳಿದು ಸರಿಪಡಿಸಿ.

ಕರ್ಕಾಟಕ ರಾಶಿ:

ನ್ಯಾಯಾಲಯಕ್ಕೆ ಸಂಬಂಧಿಸಿದ್ದನ್ನು ತುರ್ತಾಗಿ ಮಾಡುವಿರಿ. ಎಷ್ಟೋ ದಿನದ ನಿಮ್ಮ ಜಟಿಲತೆಗಳು ಮಂದಗತಿಯಲ್ಲಿ ಸಾಗುತ್ತಿದ್ದು ಇಂದು ವೇಗವನ್ನು ಪಡೆಯುತ್ತದೆ. ನಿಮ್ಮ ಸುತ್ತಲಿನ ಜಗತ್ತಿಗೆ ನೀವು ಅಚ್ಚರಿಯ ಆಸಾಮಿಯಾಗುತ್ತೀರಿ. ದೂರದ ಪ್ರಯಾಣಕ್ಕೆ ಸಕಾರಣ ಸಿಕ್ಕಿದ್ದು, ಕುಟುಂಬದ ಜೊತೆ ಪ್ರಯಾಣ ಮಾಡುವಿರಿ. ಭೂಮಿ ಅಥವಾ ವಾಹನಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ. ಯಾವುದೇ ರೀತಿಯ ವ್ಯವಹಾರಕ್ಕೆ ನಿಮ್ಮ ಕೆಲಸದ ಗುಣಮಟ್ಟಕ್ಕೆ ಹೆಚ್ಚಿನ ಗಮನ ಬೇಕಾಗುತ್ತದೆ.

ಸಿಂಹ ರಾಶಿ:

ಎಷ್ಟೋ ದಿನದ ಅನಂತರ ಇಂತಹ ಅಪರೂಪದ ಉಲ್ಲಾಸದ ಕ್ಷಣ ನಿಮ್ಮ ಪಾಲಿಗಿ ಇರಲಿದೆ. ವ್ಯಾಪಾರಸ್ಥರು ಗ್ರಾಹಕರ ಜೊತೆಗೆ ಸಮಾಧಾನದಿಂದ‌ ಮಾತನಾಡಿ ಆದಾಯವನ್ನು ಹೆಚ್ಚು ಮಾಡಿಕೊಳ್ಳಬೇಕಿದೆ. ಎಂದೋ ಉಳಿಸಿಟ್ಟ ಕಾಸು ಇಂದು ತುರ್ತಿಮನ ಕಾಲಕ್ಕೆ ಬಳಕೆಗೆ ಬರುತ್ತದೆ. ಋಣಾತ್ಮಕ ಚಿಂತನೆಯನ್ನು ಬಿಡುವುದು ಉತ್ತಮ. ವ್ಯವಹಾರದಲ್ಲಿ ನೀವು ತೆಗೆದುಕೊಳ್ಳುವ ತ್ವರಿತ ನಿರ್ಧಾರಗಳು ಸಕಾರಾತ್ಮಕವಾಗಿರುತ್ತವೆ.

ಕನ್ಯಾ ರಾಶಿ:

ಹಣದ ಹೂಡಿಕೆಯ ಮಾರ್ಗಗಳನ್ನು ಅನ್ಯರ ಮೂಲಕ ಪಡೆದುಕೊಳ್ಳುವಿರಿ. ಯಾರಿಗೂ ಮಾತನ್ನು ಕೊಡಲು ಹೋಗಬೇಡಿ. ನಿಮ್ಮ ನೋವನ್ನು ಆಲಿಸುವ ಕಿವಿಗಳ ಕೊರತೆ ಇದೆ. ನೀವು ನೀಡುವ ಅಭಿಪ್ರಾಯಗಳು ಬಾಲಿಶ ಎಂದು ಮನೆಯವರಿಗೆ ಅನ್ನಿಸಬಹುದು. ಹೂಡಕೆ ಮಾಡಿದರೂ ಅದರ ಪ್ರಮಾಣ ಕಡಿಮೆ ಇರಲಿ. ನಿಮ್ಮ ಆಲೋಚನೆಗಳ ಬಗ್ಗೆ ಯೋಚಿಸುವುದು ಕೆಲವು ಪರಿಣಾಮಗಳನ್ನು ಉಂಟುಮಾಡಬಹುದು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳು ಹೆಚ್ಚು ಸಮಯ ಕಳೆಯಬಹುದು.

ತುಲಾ ರಾಶಿ:

ಪ್ರೀತಿಸುವುದನ್ನು ಕಲಿತರೆ ನಿಮ್ಮ ಸುತ್ತಲು ಎಂತಹದೇ ನಕಾರಾತ್ಮಕ ಅಂಶಗಳಿರಲಿ ಅವುಗಳು ಸಕಾರಾತ್ಮಕವಾಗಿ ನಿಮಗೆ ತೋರುತ್ತವೆ. ವಾಹನ ಸೌಕರ್ಯವನ್ನು ಬಳಸಿಕೊಂಡು ಕಾರ್ಯವನ್ನು ಸಾಧಿಸುವಿರಿ. ನಿಮ್ಮ ನೆಚ್ಚಿನ ಕೆಲಸಗಳು ತೃಪ್ತಿಕರ ರೀತಿಯಲ್ಲಿ ಪೂರ್ಣಗೊಳ್ಳುವುದು. ಸಂಬಂಧಿಕರ ಜೊತೆ ಸಂತೋಷದ ಸಮಯವನ್ನು ಕಳೆಯುವಿರಿ. ನಿಮ್ಮದಲ್ಲದ ತಪ್ಪಿನಿಂದ ನಿಮಗೆ ಕಷ್ಟ. ವೈಯಕ್ತಿಕ ಸಮಸ್ಯೆಗಳನ್ನು ವ್ಯವಹಾರಕ್ಕೆ ತಂದುಕೊಳ್ಳುವುದು ಬೇಡ.‌

ವೃಶ್ಚಿಕ ರಾಶಿ:

ಇಂದಿನ ಜೀವನ ಸಂತೋಷದಿಂದ ಕೂಡಿರುವುದು. ಅತ್ಯಾಪ್ತರಿಂದ ಅಪರೂಪದ ಬಹುಮಾನ ಸಿಗಲಿದೆ. ಆರ್ಥಿಕತೆಯ ಬಗ್ಗೆ ಯಾರಲ್ಲಿಯೂ ಹೇಳಲಾರಿರಿ. ಪ್ರಭಾವೀ ವ್ಯಕ್ತಿಗಳ ಭೇಟಿಯಾಗುವುದು. ನಿಮ್ಮ ಜೀವನದ ದಿಕ್ಕಿಗೆ ಹೊಸ ಮಾರ್ಗವೂ ಸೇರ್ಪಡೆಯಾಗುವುದು. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಲಿ. ಮನೆಯಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಮಾಡಿಸುವಿರಿ. ವಿದ್ಯಾರ್ಥಿಗಳು ಅಧ್ಯಯನದ ಮೇಲೆ ಕೇಂದ್ರೀಕರಿಸಲಾರು. ಖರೀದಿಸುವಾಗ ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳಲು ಮರೆಯದಿರಿ.

ಧನು ರಾಶಿ:

ಹಣವನ್ನು ಸಂಪೂರ್ಣವಾಗಿ ಇತರೇತರ ಕಾರ್ಯಗಳಿಗೆ ಖರ್ಚು ಮಾಡಿ ತುರ್ತು ಅವಶ್ಯಕತೆಗೆ ಹಣವಿಲ್ಲದಂತೆ ಮಾಡಿಕೊಳ್ಳುವಿರಿ. ಸುತ್ತ ನಡೆಯುವ ವಿದ್ಯಮಾನಗಳನ್ನು ಗಮನಿಸಿಕೊಂಡು ಜೀವನವನ್ನು ಸಾಗಿಸಿ. ಅನೇಕ ಬದಲಾವಣೆಗಳು ನಿಮ್ಮ ಜೀವನಕ್ಕೆ ಅಗತ್ಯವಿದೆ. ಎಲ್ಲವನ್ನೂ ಸರಿ ಮಾಡಬಲ್ಲೆನೆಂಬ ಮನಃಸ್ಥಿತಿಯಿಂದ ಹೊರಗುಳಿದು ಯೋಚಿಸಿ. ಯಾರ ಜೊತೆಗೆ ಅಸಭ್ಯ ವರ್ತನೆ ಬೇಡ. ಸಂಬಂಧಿಕರಿಂದ ನಿಮ್ಮ ಬಗ್ಗೆ ದೂರುಗಳು ಬರಬಹುದು. ಆದರೆ ಉತ್ತಮ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪ್ರಯತ್ನವೂ ಅಗತ್ಯ.

ಮಕರ ರಾಶಿ:

ದೂರದ‌ ಪ್ರಯಾಣವನ್ನು ಮಾಡಬೇಡಿ. ಹಣದ ಅಗತ್ಯತೆ ಇಂದು ತುಂಬಾ ಕಾಡಲಿದೆ. ಸಂಗಾತಿಯ ಜೊತೆ ಸಂತೋಷದಿಂದ ಕಳೆಯಲು ಇಚ್ಛಿಸುವಿರಿ. ಮಹಿಳಾ ಉದ್ಯಮಕ್ಕೆ ಆರ್ಥಿಕಬೆಂಬಲ ಸಿಗುವುದು. ಕಛೇರಿಯಲ್ಲಿ ನಿಮ್ಮ‌ ಮೇಲಿನ ಅಭಿಪ್ರಾಯ ಬದಲಾಗಬಹುದು. ನೀವು ಸಂಬಂಧಗಳನ್ನು ಬಳಸದೇ ಸಡಿಲಾಗಬಹುದು. ವಿದ್ಯಾಕ್ಷೇತ್ರದ ಉದ್ಯಮಕ್ಕೆ ಹಿನ್ನಡೆ. ಕಠಿಣ ಪರಿಶ್ರಮದ ಹೊರತಾಗಿ ಸರಿಯಾದ ಫಲಿತಾಂಶವನ್ನು ಸಾಧಿಸಲಾಗುವುದಿಲ್ಲ. ಯುವಕರು ಸಂಶೋಧನೆಯ ಚಟುವಟಿಕೆಗಳಲ್ಲಿ ಯಶಸ್ಸನ್ನು ಸಾಧಿಸುವರು.

ಕುಂಭ ರಾಶಿ:

ನಿಮ್ಮ ಅಂತಸ್ಸತ್ತ್ವವೇ ಎಲ್ಲ ಕಾರ್ಯಗಳನ್ನು ಖುಷಿಯಿಂದ ಮಾಡಲು ಸಹಕಾರಿಯಾಗುವುದು. ಭೂಮಿಯನ್ನು ಕಳೆದುಕೊಳ್ಳುವ ಸ್ಥಿತಿ ಬಂದೀತು. ಉತ್ಸವದಲ್ಲಿ ಪಾಲ್ಗೊಳ್ಳುವಿರಿ ಹಾಗೂ ಮಿತ್ರರ ಜೊತೆ ಇಂದು ಸಂತೋಷದಿಂದ ಸಮಯವನ್ನು ಕಳೆಯುವಿರಿ. ಸಂಗಾತಿಯ ಜೊತೆ ಕಾಲದ ಮಿತಿಯಿಲ್ಲದೇ ಹರಟೆಯನ್ನು ಹೊಡೆಯುವಿರಿ. ನಿಮ್ಮ ಕಾರ್ಯಕ್ಕೆ ಸಮಾಜದಿಂದ ಪುರಸ್ಕಾರ. ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದಾದರೂ ನಿರ್ಧಾರವನ್ನು ತೆಗೆದುಕೊಳ್ಳುವಾಗ, ಉತ್ತಮ ಅನುಭವಿ ವ್ಯಕ್ತಿಯನ್ನು ಸಂಪರ್ಕಿಸಿ.

ಮೀನ ರಾಶಿ:

ನಿಮ್ಮ ಆಸಕ್ತಿಗೆ ಯೋಗ್ಯವಾದ ಕಾರ್ಯವು ಸಿಗುವತನಕ ಕಾಯಬೇಕಾಗುವುದು. ಸ್ಪರ್ಧೆಗಳಲ್ಲಿ ಗಮನಾರ್ಹ ಫಲಿತಾಂಶ ನಿಮ್ಮದಾಗಲಿದೆ. ನಿಮ್ಮವರ ಜೊತೆ ಆನಂದದಿಂದ ಕಾಲವನ್ನು ಕಳೆಯುವಿರಿ. ಪರಸ್ಪರ ಚರ್ಚೆಯ ಮೂಲಕ ಹಳೆಯ ಹಲವು ಸಮಸ್ಯೆಗಳು ಬಗೆಹರಿಯಲಿವೆ. ಪ್ರೀತಿಯಲ್ಲಿ ಪಾರದರ್ಶಕತೆ ಇರುವುದು ಬಹಳ ಮುಖ್ಯ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ.

-ಲೋಹಿತ ಹೆಬ್ಬಾರ್-8762924271 (what’s app only)

Follow Us
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು