AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ವಿಶ್ವಾಸ ಕಳೆದುಕೊಳ್ಳಬೇಕಾಗುವುದು

Daily Horoscope, 10 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ನವಮೀ ತಿಥಿಯ ಶುಕ್ರವಾರದಂದು ಮಕ್ಕಳ ವರ್ತನೆಯಿಂದ ತಲ್ಲಣ, ಉನ್ನತ ಸ್ಥಾನ ಮಾನಕ್ಕೆ ಪ್ರಯತ್ನ, ಅಶುಭವಾರ್ತೆ, ಚುರುಕುತನ, ಅತಿಯಾದ ಆಸೆ ಇವೆಲ್ಲ ಈ ದಿನ.

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ವಿಶ್ವಾಸ ಕಳೆದುಕೊಳ್ಳಬೇಕಾಗುವುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 10, 2026 | 12:51 AM

Share

ಮೇಷ ರಾಶಿ:

ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ.

ವೃಷಭ ರಾಶಿ:

ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು. ಪ್ರತಿಕೂಲ ಪರಿಸ್ಥಿತಿಯಲ್ಲಿ ನೀವು ಧೈರ್ಯವನ್ನು ಕಾಪಾಡಿಕೊಳ್ಳುವಿರಿ. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ.

ಮಿಥುನ ರಾಶಿ:

ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಡುವರು.‌ ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ನಿಮಗೆ ಉತ್ತಮವಾಗಿರುತ್ತದೆ. ನೂತನ ಮನೆಯ ನಿರೀಕ್ಷೆಯಲ್ಲಿ ನೀವು ಇರುವಿರಿ. ಸಾಮಾಜಿಕ‌ ಜಾಲತಾಣದಲ್ಲಿ ಕ್ರಿಯಾಶೀಲರಾಗಿರುವಿರಿ. ನಿಮ್ಮ ಹವ್ಯಾಸವು ಬದಲಾಗಬಹುದು. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ.

ಕರ್ಕಾಟಕ ರಾಶಿ:

ಅಶುಭಕರ ಸೂಚನೆಯನ್ನು ನಿರ್ಲಕ್ಷಿಸುವಿರಿ. ಅನುಮಾನದ ನಿಮ್ಮ ಸ್ವಭಾವವು ಅಧಿಕವಾಗುದು. ಎಲ್ಲವನ್ನೂ ಸಮಾನವಾಗಿ ನೋಡಲು ಕಷ್ಟವಾಗಬಹುದು. ಕಲಹಕ್ಕೆ ಏನಾದರೂ ವಿಷಯವನ್ನು ಹುಡುಕಿಕೊಳ್ಳುವಿರಿ. ಅನಿರೀಕ್ಷಿತ ಧನಾಗಮನವು ಸಂತೋಷವನ್ನು ಕೊಡುವುದು. ಪರರ ಸೇವೆಗೆ ನಿಮ್ಮ‌ ಮನಸ್ಸು ಒಪ್ಪದು. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು.

ಸಿಂಹ ರಾಶಿ:

ಹಿತಶತ್ರುಗಳಿಂದ ನೀವು ಹತಾಶರಾದಂತೆ ತೋರುವುದು. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು. ವಿದ್ಯಾರ್ಥಿಗಳು ಯಾವುದಾದರೂ ಸ್ಪರ್ಧೆಯಲ್ಲಿ ಭಾಗವಹಿಸಿದರೂ ಸ್ಥಾನವು ಸಿಗಲಿದೆ. ನಿಮ್ಮ ಆರೋಗ್ಯದಲ್ಲಿ ಸಮಸ್ಯೆಗಳನ್ನು ನೀವು ಅಲಕ್ಷ್ಯ ಮಾಡುವುದು ಸರಿಯಾಗದು. ನಿಮಗೆ ಕೊಟ್ಟ ಕೆಲಸಕ್ಕೆ ಏನಾದರೂ ನೆಪವನ್ನು ಹೇಳಿ ತಪ್ಪಿಸಿಕೊಳ್ಳುವಿರಿ. ಕನಸನ್ನು ನೀವು ನೆನಪಿನಲ್ಲಿ ಇಡುವಿರಿ. ಹೂಡಿಕೆಯ ವಿಷಯದಲ್ಲಿ ಸ್ವಲ್ಪ ಹಿಂದೇಡು. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ.

ಕನ್ಯಾ ರಾಶಿ:

ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಗೆಲುವನ್ನು ಕಾಣಲು ಸೂಕ್ತ ಮಾಹಿತಿಯ ಕೊರತೆ ಕಾಣಿಸುವುದು. ನಕಲಿ ದಾಖಲೆಗಳ ಅನಾವರಣ. ಅಪಮಾನವನ್ನು ಸಹಿಸಲಾಗದು. ಏಕಾಂತದಲ್ಲಿ ಇಂದು ನೆಮ್ಮದಿಯನ್ನು ಕಾಣಬಯಸುವಿರಿ. ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ಇರುವುದು. ಮನೆಗೆ ಅತಿಥಿಗಳ ಆಗಮನ. ನಿಮಗೆ ಸಂತೋಷವಾಗುವುದು. ಕಳೆದುಕೊಂಡ ವಸ್ತುವಿನ ಬಗ್ಗೆ ಮೋಹವು ಹೆಚ್ಚಾಗುವುದು. ಹೊಸತನ್ನು ಏನನ್ನಾದರೂ ಮಾಡಬೇಕೆಂಬ ಬಯಕೆ ಬರುವುದು.

ತುಲಾ ರಾಶಿ:

ಎಲ್ಲದೂ ಗೊತ್ತು ಎಂಬ ಗತ್ತು ಎದ್ದು ತೋರುತ್ತದೆ. ಶ್ರಮದ ಸಾಧನೆಗೆ ತೃಪ್ತಿ ಇರುವುದು. ಇಂದು ಉದ್ಯೋಗವನ್ನು ಹುಡುಕುತ್ತಿರುವ ಜನರಿಗೆ ಉತ್ತಮ ಕಾರ್ಯವು ಸಿಗಲಿದೆ. ಗುರಿಯ ನಿರ್ಧಾರವಾಗದೇ ಇದ್ದರೆ ಇಂದು ನಿರ್ಧರಿಸಿ. ನಿಮ್ಮ ಬಹುಕಾಲ ಬಾಕಿಯಿರುವ ಕೆಲಸಗಳ ಬಗ್ಗೆ ನೆಮ್ಮದಿ ಇರದು. ಅವಕಾಶಗಳು ಮತ್ತೆ ಬಾರದು. ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಎಲ್ಲರದ್ದೂ ಒಂದಾದರೆ ನಿಮ್ಮದೇ ಒಂದು ದಾರಿಯಾಗಲಿದೆ. ಬಿಟ್ಟು ಬಿಟ್ಟು ಬರುವ ಅನಾರೋಗ್ಯದಿಂದ ನಿಮಗೆ ಮಾನಸಿಕ ಹಿಂಸೆ ಆಗುವುದು.

ವೃಶ್ಚಿಕ ರಾಶಿ:

ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಇಂದಿನ ನಿಮ್ಮ ಘಟನೆಯು ಯಾರನ್ನೂ ಇಷ್ಟಪಡಲು ಆಗದು. ನಿಮ್ಮ ಸ್ವಭಾವವು ಇತರರಿಗೆ ಕಿರಿಕಿರಿಯನ್ನು ತಂದೀತು. ಹೊಸ ಆವಿಷ್ಕಾರಗಳ‌ ಕಡೆ ನಿಮ್ಮ ಮನಸ್ಸಿರುವುದು. ಸಂಸಾರದಲ್ಲಿ ಯಾವುದೋ ವಿಚಾರಕ್ಕೆ ಜಗಳಕ್ಕೆ ಇಳಿಯಬೇಡಿ. ಶ್ರಮ ವಹಿಸಿ ಮಾಡಿದ ಕಾರ್ಯಕ್ಕೆ ಉತ್ತಮ ಫಲವು ಸಿಗಲಿದೆ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ.

ಧನು ರಾಶಿ:

ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ಮನಸ್ಸಿನೊಳಗೆ ಹಲವು ಗೊಂದಲಗಳನ್ನು ಇಟ್ಟುಕೊಂಡು ಚಡಪಡಿಸುವಿರಿ. ಬಂಗಾರದ ಉದ್ಯಮದ ವಿಸ್ತರಣೆ ಸಾಧ್ಯವಾಗಲಿದೆ. ಇಂದು ನಿಮಗೆ ಏನಾದರೂ ವಿಶೇಷವಾದ ವಸ್ತುವು ಸಿಗಬಹುದು. ಪ್ರೇಮದಿಂದ ವಂಚನೆಯಾಗಬಹುದು. ಚಂಚಲವಾದ ಮನಸ್ಸನ್ನು ನೀವು ಒಂದೇ ಕಡೆ ನಿಲ್ಲಿಸುವುದು ಕಷ್ಡವಾದೀತು. ಇಂದು ಸ್ತ್ರೀಯರ ತಾಳ್ಮೆಗೆ ಪರೀಕ್ಷೆಯಾಗಬಹುದು.

ಮಕರ ರಾಶಿ:

ಆಕಸ್ಮಿಕ ಧನಲಾಭ ಹಾಗೂ ಖರ್ಚುಗಳು ಒಟ್ಟಿಗೇ ಆಗಲಿವೆ. ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ. ಕಳ್ಳರ ಭೀತಿಯಿಂದ ನಿಮಗೆ ಚಿಂತೆಯಾಗಬಹುದು. ಕ್ಷಣಕಾಲದ ಕೋಪವನ್ನು ನೀವು ನಿಯಂತ್ರಣವನ್ನು ಇಟ್ಟುಕೊಳ್ಳುವುದು ಅನಿವಾರ್ಯ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು.

ಕುಂಭ ರಾಶಿ:

ಇಂದಿನ ಹಣಕಾಸಿನ‌ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ವಾಹನ ದಟ್ಟಣೆಯಲ್ಲಿ ಸಿಕ್ಕಿಹಾಕಿಕೊಳ್ಳುವಿರಿ. ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ನೀವು ಭಾವೋದ್ವೇಗದಲ್ಲಿ ನಿರ್ಧಾರ ತೆಗೆದುಕೊಂಡು ಅನಂತರ ಪಶ್ಚಾತ್ತಾಪಪಡುವಿರಿ. ಅಮೂಲ್ಯ ವಸ್ತುಗಳು ಕಣ್ಮರೆಯಾಗುವ ಸಾಧ್ಯತೆ ಇದೆ. ಪ್ರಯೋಜನವಿಲ್ಲದೇ ನೀವು ಯಾರನ್ನೂ ಇಂದು ಮಾತನಾಡಿಸಲಾರಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ.

ಮೀನ ರಾಶಿ:

ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ಇಂದು ಅಧಿಕ ಬಾಯಾರಿಕೆ ನಿಮಗಾಗಲಿದೆ. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಒಪ್ಪಿಕೊಳ್ಳಬೇಕಾಗುವುದು. ಇಂದು ನೀವು ನಿಮ್ಮವರಿಗೆ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿರಿಯ ವ್ಯಕ್ತಿಗಳ ಜೊತೆ ಇಂದು ಪ್ರಯಾಣ ಮಾಡುವಿರಿ. ಯಾರದೋ ಕಾರ್ಯಕ್ಕೆ ನೀವು ಶ್ರಮಿಸಬೇಕಾದೀತು. ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಬಹುದು. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಪರಿಘ, ಕರಣ : ವಣಿಜ, ಸೂರ್ಯೋದಯ – 06 – 15 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:53 – 12:26, ಯಮಗಂಡ ಕಾಲ 15:31 – 17:04, ಗುಳಿಕ ಕಾಲ 07:48 – 09:21

-ಲೋಹಿತ ಹೆಬ್ಬಾರ್-8762924271 (what’s app only)

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​