AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

Daily Horoscope, 12 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಭಾನುವಾರದಂದು ಸ್ನೇಹಕ್ಕೆ ಒತ್ತಾಯ, ಅಪವಾದ ಬೇಸರ, ಅನಾರೋಗ್ಯದಿಂದ ಮನಸ್ಸು ಹಾಳು, ಪುಣ್ಯಕ್ಷೇತ್ರ ದರ್ಶನ, ಹೂಡಿಕೆಯ ಬಗ್ಗೆ ಅಪನಂಬಿಕೆ ಈ ದಿನದ್ದು.

ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 12, 2026 | 12:32 AM

Share

ಮೇಷ ರಾಶಿ:

ಸಮಸ್ಯೆಗಳಿಗೆ ಸೊಪ್ಪು ಹಾಕಿದಷ್ಟೂ ದೊಡ್ಡದಾಗುತ್ತದೆ. ನಿಮ್ಮದಲ್ಲದ ಕೆಲಸವನ್ನು ನೀವೇ ಮಾಡಬೇಕಾಗಬಹುದು. ಮಕ್ಕಳ ಚಲನವಲನದ ಕಡೆಗೆ ಗಮನವಿರಲಿ. ಕುಟುಂಬದ ಜವಾಬ್ದಾರಿಯನ್ನು ಅನಿವಾರ್ಯ ಕಾರಣಕ್ಕೆ ಪಡೆಯಬೇಕಾದೀತು. ಮನೆಯನ್ನು ಸ್ಥಳಾಂತರ ಮಾಡುವಿರಿ. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ವಸ್ತು ಲಾಭದಿಂದ ಖುಷಿ ಪಡುವಿರಿ. ನಿಮ್ಮ ಉಪಕರಣಗಳು ದುರಸ್ತಿಗೆ ಬರಬಹುದು. ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ.

ವೃಷಭ ರಾಶಿ:

ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಲ್ಲ ಕಡೆ ಎಂದು ಅನ್ನಿಸುತ್ತಿರಬಹುದು. ಅದನ್ನು ಆಲೋಚನೆಯಿಂದ ದೂರವಿರಿಸಿ. ವ್ಯಾಪರದ ವಿಚಾರದಲ್ಲಿ ಸಹಭಾಗಿಯ ಜೊತೆ ಮಾತನಾಡಿ ಮುಂದಡಿಯಿಡಿ. ನಿಮಗೆ ಸಿಕ್ಕ ಗೌರವವನ್ನು ಬೇರೆಯವರಿಗೆ ಬಿಟ್ಟುಕೊಡುವಿರಿ. ಅಪರಿಚಿತ ಕ್ಷೇತ್ರಕ್ಕೆ ಮುಂದಡಿಯಿಡುವಾಗ ಜಾಗರೂಕತೆ ಇರಲಿ. ನಿಮ್ಮ ವಸ್ತುವಿಗಾದ ತೊಂದರೆಗೆ ಪರಿಹಾರವನ್ನು ಕೇಳುವಿರಿ. ವಿದೇಶದಲ್ಲಿ ವಾಸಿಸುವವರಿಂದ ಶುಭವಾರ್ತೆ ಸಿಗುವುದು. ನಿಯಮ‌ಪಾಲನೆಯಲ್ಲಿ ನೀವು ನಿಸ್ಸೀಮರು. ಅನಾದರದಿಂದ ನಿಮಗೆ ಬೇಸರವಾದೀತು.

ಮಿಥುನ ರಾಶಿ:

ನಿಮ್ಮ ಸ್ವಂತ ವಾಹನದಲ್ಲಿ ಇಂದು ಎಲ್ಲಿಗೂ ಪ್ರಯಾಣ ಮಾಡಬೇಡಿ. ಹಿರಿಯರ, ತಜ್ಞರ ಮಾತುಗಳು ನಿಮಗೆ ನಿಮ್ಮ ಬಹುದಿನದಿಂದ ಬೆಳವಣಿಗೆ ಕಾಣದ ಯೋಜನೆಯೊಂದು ಆರಂಭವಾಗುತ್ತದೆ. ಉದ್ಯೋಗದ ವಿಚಾರದಲ್ಲಿ ಪ್ರಭಾವಿಗಳಿಂ ಒತ್ತಡ ಬರಲಿದೆ. ವೃತ್ತಿಯಲ್ಲಿ ನಿಮ್ಮನ್ನು ಸೋಲಿಸಬಹುದು. ಮಕ್ಕಳ ಜೊತೆ ಖುಷಿಯಿಂದ ಕಳೆಯಿರಿ. ಹೊಸತನಕ್ಕೆ ತೆರೆದುಕೊಳ್ಳುವ ಅಗತ್ಯತೆಯು ಇದೆ. ಭೂವ್ಯವಹಾರದ ಪ್ರಸ್ತಾಪವು ಕುಟುಂಬದಲ್ಲಿ ನಡೆಯಬಹುದು. ಆರೋಪಮುಕ್ತದಿಂದ ಮನಸ್ಸು ಹಗುರ.

ಕರ್ಕಾಟಕ ರಾಶಿ:

ಹಣಕಾಸಿನ ವಿಚಾರದಲ್ಲಿ ವಂಚನೆ ಸಾಧ್ಯವಾಗಬಹುದು. ಕರೆ ಸಂದೇಶಗಳಿಗೆ ಪ್ರತ್ಯುತ್ತರ ಬೇಡ. ಅಧ್ಯಾತ್ಮದಲ್ಲಿ ಒಲವು ಮೂಡಬಹುದು. ಬಂಧುಗಳ ಜೊತೆ ನಿಮ್ಮ ಹೊಂದಾಣಿಕೆ ಕಷತಡವಾಗಬಹುದು. ಅದನ್ನೇ ಗಟ್ಟಿಗೊಳಿಸಿಕೊಂಡು ಮುನ್ನಡೆಯಿರಿ. ಅನೇಕ ಉತ್ತಮಮಾರ್ಗಗಳು ತೆರೆದುಕೊಳ್ಳಬಹುದು. ನೂತನ ವಸ್ತುಗಳಿಂದ ನಿಮಗೆ ಇಂದು ಸಂತೋಷವು ಸಿಗುವುದು. ನಿಮ್ಮ ಅತಿಯಾದ ಆತ್ಮವಿಶ್ವಾಸವೂ ನಿಮಗೇ ತೊಂದರೆಯನ್ನು ಉಂಟುಮಾಡೀತು. ಎಲ್ಲರಿಂದ ಹೇಳಿಸಿಕೊಳ್ಳುಬಿರಿ.

ಸಿಂಹ ರಾಶಿ:

ಇಂದು ಮೋಸಮಾಡುವ ಮನಸ್ಸುಳ್ಳವರಾಗಿರುತ್ತೀರಿ. ನಿಮ್ಮ ವಿರೋಧಿಗಳಗೆ ಮಾತಿನಿಂದ ಉತ್ತರಿಸಿ ಉಪಯೋಗವಿಲ್ಲ. ಮನೆಯಿಂದ ನಿಮಗೆ ಶುಭಸಂದೇಶದ ಆಗಮನವಾಗಲಿದೆ. ಉದ್ಯಮಕ್ಕೆ ವಿದೇಶದ ಸಹಕಾರ ಸಿಕ್ಕಿದ್ದು, ಇನ್ನಷ್ಟು ಉತ್ಸಾಹ ಬರವುದು. ಸಹೋದ್ಯೋಗಿಗಳ ಬೆಂಬಲವು ಉದ್ಯೋಗದಲ್ಲಿ ಸಿಗಲಿದೆ. ಪರಿಚಯದವರ ಜೊತೆ ವೃತ್ತಿಯನ್ನು ಮಾಡಬೇಕಾದೀತು. ಪರೋಪಕಾರ ಗುಣವು ನಿಮ್ಮಲ್ಲಿ ಇಂದು ಅಧಿಕವಾಗುವುದು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು.

ಕನ್ಯಾ ರಾಶಿ :

ಯಾರ್ಯಾರದೋ ಒತ್ತಾಯಕ್ಕೂ ಮಣಿಯಬೇಡಿ. ಪ್ರಭಾವಿಗಳ ವ್ಯಕ್ತಿತ್ವವು ನಿಮಗೆ ಅನುಸರೀಣಯವಾಗಬಹುದು. ಮಕ್ಕಳ ಪ್ರೀತಿಯನ್ನು ಪಡೆದುಕೊಳ್ಳುವಿರಿ. ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು. ಸಂಗಾತಿಯ ಪ್ರೀತಿಯನ್ನು ನೀವು ಅರಗಿಸಿಕೊಳ್ಳಲಾರಿರಿ. ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ‌. ಕುಟುಂಬದವರ ಜೊತೆ ಸಂತೋಷದಿಂದ ದಿನವನ್ನು ಕಳೆಯುವಿರಿ. ನಿಮ್ಮ ಪ್ರಮಾಣಿಕತೆಯೇ ನಿಮಗೆ ಮುಳ್ಳಾಗಬಹುದು. ಕೌಟುಂಬಿಕ ವಿಷಯಗಳಲ್ಲಿ, ನೀವು ಬಾಹ್ಯ ವ್ಯಕ್ತಿಯನ್ನು ಸಂಪರ್ಕಿಸುವುದು ಬೇಡ.

ತುಲಾ ರಾಶಿ :

ಸಾಮಾಜಿಕ ಕಾರ್ಯದಲ್ಲಿ ತೊಡಗುವ ಮನಸ್ಸಿದ್ದರೂ ದೇಹವು ಅದಕ್ಕೆ ಸಹಕರಿಸದೇ ಇರಬಹುದು. ನ್ಯಾಯಾಲಯದಿಂದ ಸಿಕ್ಕ ತೀರ್ಪು ನಿಮಗೆ ಸಂತೋಷಕೊಡುವುದು. ಭವಿಷ್ಯದ ಆರ್ಥಿಕತೆಯ ಚಿಂತನೆಯನ್ನು ನಡಸುವಿರಿ. ಸಂಗಾತಿಯ ಜೊತೆ ಶೀತಲಸಮರವು ನಡೆಯಬಹುದು. ಅನಿರೀಕ್ಷತ ಸಂಕಟಕ್ಕೆ ಹಣದ ಕೊರತೆ ಕಾಣಿಸುವುದು. ಅದನ್ನು ಹೊಂದಿಸುವುದು ಕಷ್ಟವಾದೀತು. ವಾಗ್ವಾದವಾಗುವುದೆಂಬ ಭಯವೂ ನಿಮ್ಮನ್ನು ಕಾಡುವುದು. ನಿಮ್ಮ ಆರ್ಥಿಕತೆಯನ್ನು ಗೌಪ್ಯವಾಗಿ ಇಡಬೇಕು ಎನಿಸುವುದು.

ವೃಶ್ಚಿಕ ರಾಶಿ:

ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನವು ವ್ಯರ್ಥವೇ ಸರಿ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸವನ್ನು ಮಾಡಿ. ವಿದೇಶ ಪ್ರವಾಸ ದಾಖಲೆಗಳ ಕೊರೆತೆಯಿಂದ ಸ್ಥಗತಿವಾಗಲಿದೆ. ಯಾರಿಗೂ ಭರವಸೆಯನ್ನು ನೀಡಲು ಹೋಗಬೇಡಿ. ಸಂಗತಿಯ ಜೊತೆ ಈ ದಿನವನ್ನು ಆನಂದದಿಂದ ಕಳೆಯಿರಿ. ಯಾರನ್ನೂ ಸರಿಯಾಗಿ ಅರ್ಥಮಾಡಿಕೊಳ್ಳದೇ ನಿಮ್ಮ ಬಳಿ ಅವರನ್ನು ಬಿಟ್ಟುಕೊಳ್ಳಬೇಡಿ. ಹಳೆಯ ಯೋಜನೆಗಳಿಗೆ ಮರುಜೀವ ಕೊಡುವಿರಿ. ಸಾಮಾಜಿಕ ಸೇವೆಗೆ ಪ್ರಶಂಸೆ.

ಧನು ರಾಶಿ:

ಕುಟುಂಬದ ಕಾಳಜಿಯೇ ನಿಮ್ಮೆದುರು ಮತ್ತೆ ಮತ್ತೆ ಬರಬಹುದು. ಸಜ್ಜನರ ಸಹವಾಸವನ್ನು ದುರಪಯೋಗ ಮಾಡಿಕೊಳ್ಳುವಿರಿ. ಅನ್ಯಚಿಂತೆಯಿಂದ ಕೆಲಸಗಳು ಹಾಗೆಯೇ ಉಳಿದಿರಬಹುದು. ಇಂದು ನೀವು ಕೆಲವು ವಿಷಯಗಳನ್ನು ರಹಸ್ಯವಾಗಿ ಇಡಬೇಕಾಗುತ್ತದೆ. ಭರವಸೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಪ್ರಯತ್ನಿಸಿ. ದಾಂಪತ್ಯ ಜೀವನದಲ್ಲಿ ಮಾಧುರ್ಯವಿರುತ್ತದೆ ಮತ್ತು ಕುಟುಂಬ ಸಂಬಂಧಗಳಿಗೆ ಪ್ರಾಮುಖ್ಯವನ್ನು ನೀಡುತ್ತದೆ.

ಮಕರ ರಾಶಿ:

ನಿಮ್ಮನ್ನು ಇಷ್ಟಪಟ್ಟವರಿಗೆ ಇಂದು ನಿಮ್ಮಿಂದ‌ ಅಸಮಾಧಾನವಾಗುವ ಸಾಧ್ಯತೆ ಇದೆ. ಯಾವುದಾರೂ ಸ್ಪರ್ಧೆಯಲ್ಲಿ ಭಾಗವಹಿಸುವುದಿದ್ದರೆ ಇಂದು ಜಯ ನಿಮ್ಮದೇ. ಎಲ್ಲದಕ್ಕೂ ಹೊಂದಾಣಿಕೆ ಮಾಡಿಕೊಂಡು ಬೇಸರವಾಗಿದ್ದರೂ ಅದನ್ನು ಮಾಡಿಕೊಳ್ಳದೇ ವಿಧಿಯಿಲ್ಲ. ನಿಮ್ಮ ಅಗತ್ಯ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳಬಹುದು. ನೆರಮನೆಯವರ ಜೊತೆ ಭೂಮಿಯ ವಿಚಾರಕ್ಕೆ ವಾಗ್ವಾದವು ಆಗಬಹುದು. ಗೃಹನಿರ್ಮಾಣದ ದಾಖಲೆ ಪಡೆಯಲು ನೀವು ಓಡಾಟ ಮಾಡಬೇಕಾಗುವುದು.

ಕುಂಭ ರಾಶಿ:

ಉತ್ತಮವಾದ ಅಭ್ಯಾಸವನ್ನು ಆರಂಭಿಸಲು ಸಕಾಲ. ಉತ್ಸಾಹಕ್ಕೆ ಭಂಗವಾಗುವ ಯಾವ ವಿಚಾರಗಳೂ ಇಂದ ಆಗದು.‌ ನಿಶ್ಚಿಂತೆಯಿಂದ ಇರಬಹುದು. ಗೆಳಯರ ಜೊತೆ ಕಳೆದ ದಿನಗಳನ್ನು ನೆನಪಿಸಿಕೊಂಡು ಖುಷಿಪಡುವಿರಿ. ಅವಸರದಲ್ಲಿ ಯಾವುದೇ ಕಾರ್ಯವನ್ನು ಮಾಡುವುದು ಬೇಡ. ಮನೆಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ನೀವು ಶುಭ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡುತ್ತೀರಿ. ಕಾರ್ಯನಿರ್ವಹಣೆಗೆ ಪ್ರಶಂಸೆಯು ಸಿಗಲಿದೆ. ಗ್ರಾಹಕರಿಂದ ಮೋಸ ಹೋಗಬೇಕಾದೀತು.

ಮೀನ ರಾಶಿ:

ಮಾತುಗಳನ್ನು ಆಡುವಾಗ ಯಾರ ಜೊತೆ ಮಾತನಾಡುತ್ತಿದ್ದೀರಿ ಎಂಬ ಗಮನವಿರಲಿ. ಸ್ನೇಹಿತರ ಬೆಂಬಲವು ನಿಮಗೆ ಅಗತ್ಯವಾಗಿ ಸಿಗಲಿದೆ. ಕೆಲವು ಅಪರಿಚಿತರ ಜೊತೆ ನೀವು ಎಚ್ಚರಿಕೆಯಿಂದ ಇರುವುದು ಮುಖ್ಯವಾಗಲಿ. ಬಹುಕಾಲದಿಂದ ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸುವ ದಿನವಾಗಿದೆ. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದಿಂದ ಪ್ರಯೋಜನವುದೆ. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಸಿದ್ಧ, ಕರಣ : ಕೌಲವ, ಸೂರ್ಯೋದಯ – 06 – 14 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 10:53, ಯಮಗಂಡ ಕಾಲ 15:36 – 12:25, ಗುಳಿಕ ಕಾಲ 15:31 – 17:04

-ಲೋಹಿತ ಹೆಬ್ಬಾರ್ – 8762924271 (what’s app only)

Follow Us