AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಮಾಡಿದ ಆರೋಪಕ್ಕೆ ಹುರುಳಿರದು

Daily Horoscope, 15 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಬುಧವಾರದಂದು ನಿಮ್ಮಿಷ್ಟದ ಕಾರ್ಯ, ಆಪ್ತರ ಭೇಟಿ, ಕುಟುಂಬದಲ್ಲಿ ಅನ್ಯೋನ್ಯತೆ, ಮಕ್ಕಳಿಗೆ ಧೈರ್ಯ, ದೇವರ ಸೇವೆ, ದುಷ್ಕೃತ್ಯಕ್ಕೆ ಪ್ರೆರಣೆ ಇದೆಲ್ಲ ಈ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಮಾಡಿದ ಆರೋಪಕ್ಕೆ ಹುರುಳಿರದು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 15, 2026 | 12:19 AM

Share

ಮೇಷ ರಾಶಿ:

ಕಾರ್ಯದ ಶಿಸ್ತಿನಿಂದ ಸಾಗಲು ಸಹೋದ್ಯೋಗಿಗಳ ಸಹಾಯ ಪಡೆಯಿರಿ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ಮಾಡುವುದು ಸರಿ ಕಾಣದು. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆನಿಸುವುದು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಅದನ್ನು ಕ್ಷಮಾಪಣೆಯಿಂದ ಸರಿಮಾಡಿಕೊಳ್ಳಿ.

ವೃಷಭ ರಾಶಿ:

ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ಇತರರ ತಪ್ಪು ಕೆಲಸದಿಂದ ನಿಮಗೆ ತೊಂದರೆ. ನೀವು ಅದನ್ನು ತಿದ್ಸಬೇಕಸದೀತು. ಕಡಿಮೆ ಪ್ರಯತ್ನದಲ್ಲಿ ಹೆಚ್ಚಿನ ಯಶಸ್ಸು ಪಡೆಯುವ ಸಾಧ್ಯತೆಗಳಿವೆ. ಯಾರ ಮೇಲೂ ಹಗುರಾದ ಮನೋಭಾವ ಬೇಡ. ದುಃಸ್ವಪ್ನವು ನಿಮ್ಮ ನಿದ್ರೆಯನ್ನು ಕೆಡಿಸೀತು. ದೀರ್ಘಕಾಲದ ಗೆಳೆತನವು ಮಾತಿನಿಂದ ಒಡೆದುಹೋಗಬಹುದು. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು.

ಮಿಥುನ ರಾಶಿ:

ನಿಮ್ಮ ಕೆಲಸದ ಗುಣಮಟ್ಟವನ್ನು ಸುಧಾರಿಸಲು ಪ್ರಯತ್ನಿಸಿ. ಪರಿಣಾಮಗಳನ್ನು ಪರಿಗಣಿಸಿ ಮುನ್ನಡೆಯಬೇಕು. ಅಸಂಬದ್ಧ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಿ ಇರುವುದು. ಸಂಗಾತಿಯನ್ನು ಎಲ್ಲಿಗಾದರೂ ದೂರ ಕರೆದುಕೊಂಡು ಹೋಗಲು ಆಸೆಯಾಗುವುದು. ಹಣಕಾಸಿನ ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಿಕೊಳ್ಳಿ. ಸಂಗಾತಿಯ ವರ್ತನೆಯು ಹಿಡಿಸದೇ ಇದ್ದೀತು. ವಿದೇಶದಲ್ಲಿ ಇರವವರಿಗೆ ಅಸಮಾಧಾನ ಹೆಚ್ಚಿರುವುದು.

ಕರ್ಕಾಟಕ ರಾಶಿ:

ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯವಿರುತ್ತದೆ. ನಿಮ್ಮ ಇಷ್ಟದ ಜನರಿಂದ ನೀವು ಬೆಂಬಲವನ್ನು ಪಡೆಯುತ್ತಿರುವಿರಿ. ಶೀಘ್ರದಲ್ಲೇ ಸಂಬಂಧಗಳನ್ನು ಸುಧಾರಿಸುವ ಅವಕಾಶವನ್ನು ನೀವು ಪಡೆಯಬಹುದು. ಮನಸ್ಸಿಗೆ ನೆಮ್ಮದಿಯು ಬೇಕೆಂದು ಅನ್ನಿಸುವುದು. ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ.

ಸಿಂಹ ರಾಶಿ:

ಗುರು ಹಿರಿಯರಿಂದ ಒಳ್ಳೆಯ ಕಾರ್ಯಕ್ಕೆ ಪ್ರೋತ್ಸಾಹ. ಉನ್ನತ ಅಧಿಕಾರಿಯ ಜೊತೆ ಆಗಬೇಕಾದ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿ ವರ್ಗ ಸ್ವೀಕರಿಸುವುದು. ನಿಮ್ಮ ಗುಣಮಟ್ಟವು ನಿಮ್ಮದೇ ಕಾರಣದಿಂದ ತಗ್ಗಬಹುದು. ಆಡಳಿತದಲ್ಲಿ ಆಗಬೇಕಾದ ಬದಲಾವಣೆಯನ್ನು ನೀವು ತರುವಿರಿ. ಎಲ್ಲರ ಜೊತೆ ವಾದಕ್ಕಿಳಿಯುವ ಮನಸ್ಸಿನಲ್ಲಿ ಇರುವಿರಿ. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ. ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು.

ಕನ್ಯಾ ರಾಶಿ:

ವ್ಯಾಪಾರ ಮಾಡುವಾಗ ಹಣದ ಕುರಿತು ಬಹಳ ಎಚ್ಚರಿಕೆ ಅಗತ್ಯವಾಗಿ ಮಾಡಿ. ಇಂದು ಅನಿವಾರ್ಯ ಓಡಾಟವು ಬರಲಿದ್ದು ವಾಹನ ಚಲಾಯಿಸುವಾಗ ನಿಮಗೆ ಜಾಗರೂಕತೆ ಬೇಕಾಗುವುದು. ಕೊಡಬೇಕಾದವರಿಗೆ ಸರಿಯಾದ ಗೌರವವನ್ನು ಕೊಡಿ. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಹಣಕಾಸಿನಲ್ಲಿ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

ತುಲಾ ರಾಶಿ:

ಸರ್ಕಾರಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ವ್ಯಕ್ತಿಗಳಿಗೆ ತಕ್ಕಂತೆ ಬದಲಾವಣೆಗಳನ್ನು ನೀವೇ ಮಾಡುಕೊಳ್ಳುವಿರಿ.. ಕುಟುಂಬಕ್ಕೆ ನಿಮ್ಮ ಸಂಗಾತಿಯ ಸಮರ್ಪಣೆಯು ನಿಮ್ಮನ್ನು ಒತ್ತಡದಿಂದ ಮುಕ್ತಗೊಳಿಸುತ್ತದೆ. ಹೊಸ ಉದ್ಯೋಗಿಗಳನ್ನು ನಿಯೋಜಿಸಿಕೊಂಡು ಕಾರ್ಯವನ್ನು ವಿಸ್ತರಿಸಿ ಲಾಭವನ್ನು ಪಡೆಯುವ ದೀರ್ಘಕಾಲದ ಯೋಜನೆಯ ಕನಸನ್ನು ಕಾಣುವಿರಿ. ನೇರವಾಗಿ ಯಾರನ್ನೂ ದೂರುವುದಿಲ್ಲ. ಎಂತಹ ನೈಪುಣ್ಯವಿದ್ದರೂ ವ್ಯವಹಾರದಲ್ಲಿ ಒಮ್ಮೆ ಎಚ್ಚರ ತಪ್ಪುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ:

ಬಟ್ಟೆ ವ್ಯಾಪಾರಿಗಳು ಮಾತಿನಿಂದ ಯೋಗ್ಯವಾದ ರೀತಿಯಲ್ಲಿ ವ್ಯಾಪಾರ ನಡೆಸಿ ಲಾಭ ಗಳಿಸುವೆರು. ನಿಮ್ಮ ಕುಟುಂಬದಲ್ಲಿ ಹೊರಗಿನವರಿಗೆ ಹಸ್ತಕ್ಷೇಪ ಮಾಡಲು ಬಿಡುವುದು ಬೇಡ. ನೀವು ಇಂದು ಉದ್ಯಮದ ಕಾರಣಕ್ಕೆ ಸ್ನೇಹಬಂಧವನ್ನು ಬಿಗಿ ಮಾಡಿಕೊಳ್ಳುವಿರಿ. ಕಚೇರಿಯಲ್ಲಿ ನೀವು ತಗ್ಗಿ ಬಗ್ಗಿ ನಡೆಯುವುದು ಒಳ್ಳೆಯದು. ನಿಮ್ಮ ಸಂಕಟವನ್ನು ಹೇಳಿಕೊಂಡರೂ ತೊಂದರೆ, ಸುಮ್ಮನೆ ಇದ್ದರೂ ತೊಂದರೆ ಆಗುವುದು. ಅಪರಿಚಿತ ಕರೆಗಳು ಹೆಚ್ಚಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯನ್ನು ತಂದುಕೊಳ್ಳಲಾರಿರಿ.

ಧನು ರಾಶಿ:

ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು. ಬಹು ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಉದ್ಯಮಿಗಳು ಇಂದು ಹಣವನ್ನು ಗಳಿಸುವ ಸಾಧ್ಯತೆಯಿದೆ, ಉತ್ಪಾದದನಾ ಕ್ಷೇತ್ರದಲ್ಲಿ ಕೊಂಚ ಹಿನ್ನಡೆ ಆಗಬಹುದು. ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ದೈಹಿಕ ಕಸರತ್ತನ್ನು ಮಿತವಾಗಿ ಮಾಡಿ. ಅತಿಯಾದ ಸಲುಗೆಯಿಂದ ನಿಮಗೆ ತೊಂದರೆ ಆಗಬಹುದು. ಅಂದುಕೊಂಡಷ್ಟು ಸರಳವಾಗಿ ಇಂದಿನ ಕಾರ್ಯವು ಸಮಾಪ್ತಿಯಾಗದು.

ಮಕರ ರಾಶಿ:

ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ದೂರದೃಷ್ಟಿಯ ಅಗತ್ಯವಿದೆ. ಕುಟುಂಬ ಸದಸ್ಯರ ಜೊತೆ ಚರ್ಚಿಸಿದ ಅನಂತರವೇ ನಿರ್ಧಾರಗಳನ್ನು ತೆಗೆದುಕೊಳ್ಳಿ. ಅತಿಯಾದ ದುರಾಸೆಯಿಂದ ನೀವು ಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ಸಂಬಂಧವನ್ನು ಚೆನ್ನಾಗಿ ನಿಭಾಯಿಸುವ ಕಲೆಯು ಗೊತ್ತಿದೆ. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಅಜ್ಞಾತ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ.

ಕುಂಭ ರಾಶಿ:

ಜಾಗರೂಕತೆಯಿಂದ ವಾಹನ ಚಾಲನೆ ಮಾಡಬೇಕು.‌ ವ್ಯವಹಾರದಲ್ಲಿ ಕಠಿಣ ಪರಿಶ್ರಮವಿರುತ್ತದೆ, ಯೋಜನೆಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಗಳಿವೆ. ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆಗೆ ನಿಮ್ಮ ವರ್ತನೆ ಬದಲಾದೀತು. ನಿಮಗೆ ಅನೇಕರು ಪ್ರಭಾವಿತರಾಗಬಹುದು.‌ ಆರೋಗ್ಯದ ಸಮಸ್ಯೆಯನ್ನು ತಳ್ಳಿಹಾಕುವುದು ಬೇಡ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ.

ಮೀನ ರಾಶಿ:

ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅಹಂಕಾರವು ಬಂದೀತು, ನಿಮಗೆ ಸಾಮಾನ್ಯರ ಜೊತೆ ಸಾಮಾನ್ಯರಂತೆ ವರ್ತಿಸುವುದು ಇಷ್ಟವಾಗುವುದು. ನಿಮ್ಮ ಆತ್ಮೀಯವಾದ ಮಾತಿನಿಂದ ಅಪರಿಚಿತರ ಸ್ನೇಹವನ್ನು ಗಳಿಸುವಿರಿ. ಆಕಸ್ಮಿಕವಾಗಿ ದ್ರವ್ಯಪ್ರಾಪ್ತಿಯಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಶುಕ್ಲ, ಕರಣ : ಬಾಲವ, ಸೂರ್ಯೋದಯ – 06 – 12 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:25 – 13:58, ಯಮಗಂಡ ಕಾಲ 07:45 – 09:18, ಗುಳಿಕ ಕಾಲ 10:51 – 12:25

– ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು