
ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ಒಳ್ಳೆಯ ವ್ಯಕ್ತಿಗಳ ಪರಿಚಯದಿಂದ ಲಾಭ ಸಿಗಬಹುದು. ಗೃಹದಲ್ಲಿ ಸಂಭ್ರಮ. ಸ್ತ್ರೀಯರ ಮೂಲಕ ಸಹಾಯ ಲಭಿಸುತ್ತದೆ. ಕುಟುಂಬದಲ್ಲಿ ಹೆಚ್ಚು ನೆಮ್ಮದಿ ಅನುಭವಿಸುತ್ತೀರಿ. ಶ್ರದ್ಧಾ, ನಂಬಿಕೆಯಿಂದ ನಿಮ್ಮ ಕಾರ್ಯಗಳು ಯಶಸ್ವಿಯಾಗುತ್ತವೆ. ವಾಹನ ಚಾಲನೆಯಿಂದ ಆಯಾಸವಾದೀತು. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ. ಇಂದು ಗಳಿಸಿದ ಹಣವು ಇಂದೇ ಖಾಲಿಯಾಗುವುದು.
ಸೋಮಾರಿತನದಿಂದ ಯಾವುದೇ ಅವಕಾಶ ತಪ್ಪುವಂತೆ ಮಾಡಿಕೊಳ್ಳಬೇಡಿ. ನಿಮ್ಮ ಶ್ರಮಕ್ಕೆ ಖಂಡಿತ ನೀವು ಫಲಿತಾಂಶ ಪಡೆಯುತ್ತೀರಿ. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರದಲ್ಲಿ ಗೊಂದಲವಿರುವುದು. ನಿಮ್ಮವರನ್ನು ಕಂಡು ನೀವು ಅಸೂಯೆಪಡಬಹುದು. ಕಾರ್ಯದ ಆರಂಭದಲ್ಲಿ ಒತ್ತಡವು ಹೆಚ್ಚು ಇರುವುದು. ಉಪಕಾರದ ಕೃತಜ್ಞತೆ ಇರಲಿ. ನಿಮ್ಮ ಇಂದಿನ ಖರ್ಚಿಗೆ ಕಡಿವಾಣ ಹಾಕುವುದು ಅಸಾಧ್ಯವಾಗಬಹುದು. ದುರ್ಬಲರ ಮೇಲೆ ನೀವು ಸಿಟ್ಟಾಗುವಿರಿ.
ಅಯಾಸವಿದ್ದರೂ ಇನ್ನೊಬ್ಬರ ಒತ್ತಾಯಕ್ಕೆ ಅವರೊಂದಿಗೆ ವಾಯುವಿಹಾರಕ್ಕೆಂದು ಹೋಗುವಿರಿ. ಸಾಮಾಜಿಕವಾಗಿ ನಿಮಗೆ ಗೌರವ ಸಿಗುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ. ಪ್ರಾಯಾಣಿಸುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಮಿತ್ರರಿಂದ ಸಂತೋಷದ ಸುದ್ದಿ ಕೇಳಬಹುದು. ಏನಾದರೊಂದು ಕಾರ್ಯವನ್ನು ನೀವು ಮಾಡುತ್ತಲೇ ಇರುವುದು ನಿಮಗೆ ಇಷ್ಟವಾಗುವುದು. ಕಛೇರಿಯಲ್ಲಿ ಸ್ತ್ರೀಯರಿಂದ ಅಪಮಾನವಾಗಬಹುದು. ನಿಮ್ಮ ತಪ್ಪುಗಳು ನಿಮಗೆ ಗೊತ್ತಾಗದೇ ಇನ್ನೊಬ್ಬರು ತಿಳಿಸಬೇಕಾಗುವುದು.
ನಿಮ್ಮ ಸೋಮಾರಿತನದಿಂದ ಕೆಲವೊಂದು ಕೆಲಸಗಳು ಸ್ಥಗಿತಗೊಳ್ಳಬಹುದು. ಸೋಮಾರಿತನದಿಂದ ನಿಮ್ಮ ಸಮಯ ವ್ಯರ್ಥವಾಗಬಾರದು. ಮಕ್ಕಳ ವಿಚಾರದಲ್ಲಿ ಹೆಚ್ಚು ಸಮಯ ವಹಿಸುವ ಅವಶ್ಯಕತೆ ಇದೆ. ಹಣಕಾಸು ಸ್ಥಿತಿ ಸ್ಥಿರವಾಗಿರುತ್ತದೆ. ಇಷ್ಟಾರ್ಥವು ನಿನಗೆ ಸಿದ್ಧಿಯಾಗುವ ಬಗ್ಗೆ ನಿಮಗೆ ಅನುಮಾನವಿರಲಿದೆ. ಇನ್ನೊಬ್ಬರ ಬಗ್ಗೆ ಸದಾ ಅಸಮಾಧಾನವಿರಲಿದೆ. ಕೋಪಗೊಂಡ ಸಂಗಾತಿಯನ್ನು ನೀವು ಸಮಾಧಾನ ಮಾಡಬೇಕಾದೀತು. ಅತಿಯಾದ ಆತ್ಮವಿಶ್ವಾಸ ಕಾರ್ಯವನ್ನು ಹಾಳುಮಾಡಬಹುದು.
ಈ ದಿನ ನಿಮಗೆ ಬದಲಾವಣೆಗಳ ಸಮಯ, ಹೊಸ ಜನರ ಪರಿಚಯದಿಂದ ಹೊಸ ವಿಚಾರಗಳು ಬರುತ್ತವೆ. ಈ ವೇಳೆ ಕುಟುಂಬದಲ್ಲಿ ಗೊಂದಲಗಳನ್ನು ದೂರ ಇಡಲು ಯತ್ನಿಸಿ. ದುರಭ್ಯಾಸದಿಂದ ಎಲ್ಲ ಬಳಿಯಿಂದ ನಿಂದನೆ. ಇಂದು ನಿಮಗೆ ದಾನ ಮಾಡುವ ಮನಸ್ಸಾಗುವುದು. ಹಳೆಯ ಮಿತ್ರನ ಭೇಟಿಯಾಗಿದ್ದು ಅವರ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮ ಮೇಲೆ ನಂಬಿಕೆಯು ಕಡಿಮೆಯಾದೀತು. ಹೂಡಿಕೆಯ ವಿಚಾರದ ಬಗ್ಗೆ ಚರ್ಚೆ ನಡೆಸುವಿರಿ.
ಉತ್ಸಾಹ, ತಾಳ್ಮೆ ನಿಮಗೆ ಈ ದಿನ ಹೊಸ ಶಕ್ತಿ ನೀಡಲಿದೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಂಭವಿಸಬಹುದು. ಖರೀದಿ ಅಥವಾ ಅಲಂಕಾರಿಕ ವಸ್ತು ಖರೀದಿಸುವ ಸಾಧ್ಯತೆ ಇದೆ. ಎಲ್ಲದಕ್ಕೂ ತಂದೆ ತಾಯಿಗಳನ್ನು ದೂರುತ್ತ ಇರುವುದು ಬೇಡ. ಬಂಧುಗಳ ನಡುವೆ ವಾಗ್ವಾದವು ನಡೆದು ವೈಮನಸ್ಯ ಉಂಟಾಗಬಹುದು. ಕಾರ್ಯದ ಒತ್ತಡದಿಂದ ಸಂಗಾತಿಯು ನಿಮ್ಮ ಜೊತೆ ಸರಿಯಾಗಿ ಮಾತನಾಡದೇ ಇರಬಹುದು.
ಹೂಡಿಕೆಗೆ ಬೇಕಾದ ಆಲೋಚನೆಗಳನ್ನು ಮಾಡಬಹುದು. ಮನೆಯನ್ನು ಕಟ್ಟಲು ಸಾಲಮಾಡಬೇಕಾದ ಸ್ಥಿತಿಯು ಬರಬಹುದು. ಆಸ್ತಿ ಸಂಬಂಧಿ ಸಮಸ್ಯೆ ಎದುರಾಗಬಹುದು. ಮೋಸ ಹೋಗಬಹುದಾದ ಸಾಧ್ಯತೆ ಹೆಚ್ಚಿದೆ, ಆದ್ದರಿಂದ ಅಪರಿಚಿತರಿಂದ ದೂರವಿರಿ. ಹೊಸ ಕಾರ್ಯ ಆರಂಭಿಸಲು ಇದು ಯೋಗ್ಯ ಕಾಲವಲ್ಲ. ಸಾಲ ಕೊಟ್ಟವರು ನಿಮ್ಮನ್ನು ಕೇಳುವುದು ಹಿಂಸೆಯಾದೀತು. ಕೆಲಸದ ಸುಲಭ ಮಾರ್ಗವು ನಿಮಗೆ ಸೂಚಿಸದೇ ಇರಬಹುದು.
ಕಲಾವಿದರಿಗೆ ಗಲಿಬಿಲಿಯ ಸನ್ನಿವೇಶವು ಬರಲಿದೆ. ಕೋಪ ನಿಯಂತ್ರಣದಲ್ಲಿ ಇಡಬೇಕು. ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಸಾಧ್ಯ. ಅಜಾಗರೂಕತೆ ನಿಮ್ಮ ಗುರಿಯಿಂದ ದೂರವಿರಿಸಬಹುದು. ಅತಿಯಾದ ಆಲೋಚನೆ ತಪ್ಪಿಸಿ ದೃಢ ನಿರ್ಧಾರ ತೆಗೆದುಕೊಳ್ಳಿ. ಹಿರಿಯರ ಸಲಹೆ ನಿಮಗೆ ಒಳಿತಾಗಿಸಬಹುದು. ಸಂಬಂಧದಲ್ಲಿ ಸಕಾರಾತ್ಮಕ ಮಾತುಗಳು ಅಗತ್ಯ. ನೌಕರರು ನಿಮ್ಮಆಪ್ತರಾಗಿ ನಿಮ್ಮ ಕೆಲಸದಲ್ಲಿ ಭಾಗಿಯಾಗುವರು. ನಿಮ್ಮ ಸಂಪತ್ತನ್ನು ಸದುಪಯೋಗ ಮಾಡಿಕೊಳ್ಳುವ ದಾರಿಯನ್ನು ಕಂಡುಕೊಳ್ಳಿ.
ಮನೆಗೆ ಸಂಬಂಧಿಸಿದ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಮಯ ಬೇಕಾಗುತ್ತದೆ. ತುರ್ತಿಲ್ಲದ ಕೆಲವೊಂದು ಕಾರ್ಯಗಳನ್ನು ಮುಂದೂಡಬೇಕಾಗಬಹುದು. ಮನೆಯಲ್ಲಿನ ಸಮಸ್ಯೆಗಳು ಹೆಚ್ಚಾದಂತೆ ತೋರುವುದು. ಧಾರ್ಮಿಕ ಕ್ಷೇತ್ರದಲ್ಲಿ ಕಾರ್ಯ ಮಾಡುವವರಿಗೆ ಶುಭದಿನ ಇಂದು. ಆತ್ಮಪ್ರಶಂಸೆಗೆ ಸರಿಯಾಗಿ ಕಾರಣವಿರಲಿ. ಕೊಟ್ಟ ಹಣಕ್ಕೆ ಸರಿಯಾದ ಕೆಲಸವನ್ನು ಮಾಡಿಕೊಡುವಿರಿ. ಗ್ರಾಹಕರಲ್ಲಿ ಸಂತುಷ್ಟಿ ಇರುವುದು. ಆಸ್ತಿಯನ್ನು ಸ್ವಂತಕ್ಕೆ ಮಾಡಿಕೊಳ್ಳುವ ಉಪಾಯವು ಹೊಳೆಯಬಹುದು.
ಕುಟುಂಬದಲ್ಲಿ ಇಂದು ಸಂತಸದ ಸಮಯ ಇರಲಿದೆ. ನಿರ್ಣಯ ತೆಗೆದುಕೊಳ್ಳುವ ಮೊದಲು ಎಲ್ಲರ ಅಂಶಗಳನ್ನೂ ಪರಿಗಣಿಸಿ. ಹಣದ ಚಿಂತೆ ನಿಮ್ಮನ್ನು ಇಂದು ಕಾಡಲಿದೆ. ನಿಮ್ಮ ಕೆಲಸದಿಂದ ಮನೆಯ ಹಿರಿಯರು ಕೋಪಗೊಳ್ಳುವರು. ತಾಳ್ಮೆ ಹಾಗೂ ಏಕಾಗ್ರತೆಯಿಂದ ದಿನವನ್ನು ಮುನ್ನಡೆಸುವಿರಿ. ವಿದೇಶೀಯ ವ್ಯವಹಾರದ ಮಾರ್ಗವು ನಿಮಗೆ ತೆರೆದುಕೊಳ್ಳುವುದು. ನಿಮ್ಮ ಬಗ್ಗೆ ನಿಮ್ಮ ಶ್ರಮದಿಂದ ಎಣಿಸಿದಷ್ಟು ಲಾಭವು ಆಗುವುದು. ಲಾಭದ ಮುಂದೆ ಆಯಾಸವು ನಗಣ್ಯವಾಗಲಿದೆ. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿರುವಿರಿ.
ಇಂದು ಮನೆಗೆ ದೂರದ ಬಂಧುಗಳು ಅನಿರೀಕ್ಷಿತ ಭೇಟಿ ನೀಡಬಹುದು, ಈ ವೇಳೆ ಖರ್ಚು ಕೂಡ ಅಧಿಕವಾಗಬಹುದು. ಹಣದ ವ್ಯವಹಾರಗಳಲ್ಲಿ ಇತರರ ಸಲಹೆ ತೆಗೆದುಕೊಳ್ಳಿ. ಮನೋರಂಜನೆಯ ಅವಧಿಯಲ್ಲಿ ಸ್ನೇಹಿತರ ಜೊತೆ ಸಮಯವನ್ನು ಕಳೆಯುವಿರಿ. ಸ್ನೇಹಿತರು ಕೊಟ್ಟ ಹಣವನ್ನು ಪುನಃ ಕೇಳಿದ್ದು ನಿಮಗೆ ಅಪಮಾನವಾಗುವುದು. ಅಪಘಾತಗಳು ಸಂಭವಿಸಬಹುದು. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು.
ಹಣವನ್ನು ಉಳಿಸಲು ಯತ್ನದಲ್ಲಿ ಸೋಲಾಗುವುದು. ಬಹುಕಾಲದಿಂದ ಬಾಕಿಯಾಗಿದ್ದ ಕೆಲಸಗಳು ಪೂರ್ತಿಯಾಗುವ ಸಾಧ್ಯತೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಕುಟುಂಬದಲ್ಲಿ ಹರ್ಷಮಯ ವಾತಾವರಣ ಉಂಟಾಗುತ್ತದೆ. ಒಂದು ಶುಭ ಸಂದೇಶ ನಿಮಗೆ ತಲುಪಬಹುದು. ಬಂಧುಗಳಿಂದ ನಿರ್ಲಕ್ಷ್ಯಕ್ಕೆ ಒಳಗಾದಂತೆ ಅನ್ನಿಸಬಹುದು. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಭರಣೀ, ಯೋಗ : ಐಂದ್ರ, ಕರಣ : ಚತುಷ್ಪಾತ್, ಸೂರ್ಯೋದಯ – 06 – 10 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:51 – 12:24, ಯಮಗಂಡ ಕಾಲ 15:30 – 17:04, ಗುಳಿಕ ಕಾಲ 07:44 – 09:18
-ಲೋಹಿತ ಹೆಬ್ಬಾರ್ – 8762924271 (what’s app only)