AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸ್ವಾರ್ಥದ ಪರವಾಗಿ ಯೋಚಿಸಿ, ದುಃಖ

Daily Horoscope, 19 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಭಾನುವಾರದಂದು ಬಹುದಿನದ ದಾಂಪತ್ಯ ಕಲಹ ಮುಕ್ತಾಯ, ಸಾಮಾಜಿಕ ಕಾರ್ಯಕ್ಕೆ ಸಮ್ಮಾನ, ವಿವಾಹಕ್ಕೆ ಸಿದ್ಧತೆ, ಹಿರಿಯರ ಆಕ್ಷೇಪ, ಉದ್ಯೋಗಕ್ಕೆ ಸಿದ್ಧತೆ, ವಿದೇಶದಿಂದ ಲಾಭ ಇವೆಲ್ಲ ಇರಲಿದೆ.

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸ್ವಾರ್ಥದ ಪರವಾಗಿ ಯೋಚಿಸಿ, ದುಃಖ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 19, 2026 | 12:52 AM

Share

ಮೇಷ ರಾಶಿ:

ಬಾಂಧವ್ಯದಲ್ಲಿ ಅಭಿಪ್ರಾಯ ಭೇದದಿಂದ ಕಲಹವಾಗಬಹುದು. ಹಣದ ನಷ್ಟದ ಸಂಭವವಿದೆ. ದೂರದ ಬಂಧುಗಳಿಂದ‌ ಕಾರ್ಯ ಮಾಡಬಹುದು. ವಿದ್ಯಾರ್ಥಿಗಳ ಸಾಧನೆಯ ಹಾದಿಯು ಸುಗಮವಾಗುವುದು. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ವಿಚಾರವೊರುವುದು. ದೂರಪ್ರಯಾಣದಿಂದ ಆತಂಕ ಸೃಷ್ಟಯಾಗಬಹುದು. ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು.

ವೃಷಭ ರಾಶಿ:

ಹೊಸ ಪರಿಚಯಗಳಿಂದ ದೂರವಿರಲು ಪ್ರಯತ್ನಿಸಿ. ತಮ್ಮಂದಿರು ಮತ್ತು ಅಣ್ಣಂದಿರೊಡನೆ ಜಗಳ ಆಗದಂತೆ ನೋಡಿಕೊಳ್ಳಿ. ಕೆಲ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬಡ್ತಿ ದೊರೆತು ವಿದೇಶಕ್ಕೆ ತೆರಳಬಹುದು. ಆಸ್ತಿಯ ವಿಚಾರದಲ್ಲಿ ನೀವು ಆಸಕ್ತಿಯನ್ನು ಕಳೆದುಕೊಳ್ಳುವಿರಿ. ಯಾರಾದರೂ ನಿಮ್ಮ ಕಿವಿಚುಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಲಾರಿರಿ. ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಅಹಂಕಾರವಾದೀತು.

ಮಿಥುನ ರಾಶಿ:

ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ನಿಮ್ಮ ಯೋಜನೆಗಳು ನೆರವೇರಲಿವೆ. ಮನೆಯಲ್ಲಿನ ಬದಲಾವಣೆಗಳು ಸಂತೋಷ ತಂದಿಡುತ್ತವೆ. ಸ್ನೇಹಿತರೊಂದಿಗೆ ಭೆಟ್ಟಿಯಾಗುವ ಅವಕಾಶ ಸಿಗುತ್ತದೆ. ನಿಮ್ಮ ಶ್ರಮ ಯಶಸ್ಸಿನ ಮಾರ್ಗವನ್ನೇ ತೋರಿಸುತ್ತದೆ. ಲ ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು.

ಕರ್ಕಾಟಕ ರಾಶಿ:

ಇಂದು ಅನೇಕ ಸ್ನೇಹಿತರೊಂದಿಗೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಹಣದ ಲಾಭವೂ ಲಭ್ಯವಾಗಬಹುದು. ಇಂದು ಖರ್ಚು ಮಾಡುತ್ತಿದ್ದರೂ ಸಂತೋಷದಲ್ಲಿ ಅದರ ಅರಿವೇ ಆಗದು. ಸಂತಾನದ ಲಾಭವು ನಿಮ್ಮ ಸಂತೋಷವನ್ನು ಅಧಿಕ ಮಾಡುವುದು. ಕುಟುಂಬ ಹಿರಿಯರಿಗೆ ಸೇರಿದ ಆಸ್ತಿಯಲ್ಲಿನ ಪಾಲು ಪಡೆಯುವಿರಿ. ಯಾರದೋ ತಪ್ಪಿನ ಕಾರಣ ವಾಹನದಿಂದ ಬೀಳುವ ಸಾಧ್ಯತೆ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ.

ಸಿಂಹ ರಾಶಿ:

ನಿಮ್ಮ ಮಕ್ಕಳ ಸಂತೋಷಕ್ಕಾಗಿ ಕೆಲಸಮಾಡುವಿರಿ. ಉದ್ಯೋಗ ಅಥವಾ ವ್ಯವಹಾರದಲ್ಲಿ ಉತ್ತೇಜನಕಾರಿ ಬೆಳವಣಿಗೆ ಕಂಡುಬರುತ್ತದೆ. ಹಣದ ಸುಲಭ ಲಾಭ ಸಿಗಲಿದೆ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುತ್ತೀರಿ. ಇಂದು ಅನಾಯಾಸವಾಗಿ ಆದಾಯ ದೊರೆಯುತ್ತದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ಕಳೆದ ಸಮಯವನ್ನು ಮೆಲುಕು ಹಾಕುವಿರಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ. ನೀವು ಕುಟುಂಬದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಬಯಸುವಿರಿ.

ಕನ್ಯಾ ರಾಶಿ:

ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಸಾಲದ ವಿಷಯದಲ್ಲಿ ಯಶಸ್ಸು ದೊರಕುತ್ತದೆ. ಮನೆಯವರ ಆರೋಗ್ಯದತ್ತ ಎಚ್ಚರಿಕೆಯಿಂದ ಗಮನ ಹರಿಸಿ. ಸ್ನೇಹಿತರೊಂದಿಗೆ ವಿರೋಧ ಉಂಟಾಗದಂತೆ ಮಾತನಾಡುವುದು ಅಗತ್ಯ. ಕೆಲಸಗಳಲ್ಲಿ ವಿಘ್ನಗಳ ಸಾಧ್ಯತೆ ಇದೆ. ಅಶಿಸ್ತಿನಿಂದ ನಿಮಗೆ ಕೆಟ್ಟ ಹೆಸರು ಬರಬಹುದು. ಸಂಕುಚಿತ ಸ್ವಭಾವವನ್ನು ದೂರ ಮಾಡಿಕೊಳ್ಳುವುದು ಉತ್ತಮ. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ.

ತುಲಾ ರಾಶಿ:

ಅನ್ಯರ ಮೂಲಕ ಲೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿಮ್ಮ ಶಿಷ್ಟ ನಡವಳಿಕೆ ಇತರರಿಗೆ ಪ್ರೇರಣೆ ಆಗುತ್ತದೆ. ಎಲ್ಲ ಕಾರ್ಯಗಳಲ್ಲಿ ಯಶಸ್ಸು ದೊರಕುವ ಸಂಭವ. ಸ್ವತಂತ್ರವಾಗಿ ಇಂದಿನ ಕಾರ್ಯವನ್ನು ನೀವು ನಿರ್ವಹಿಸುವಿರಿ. ನೂತನ ವಾಹನವನ್ನು ಖರೀದಿಸುವಿರಿ. ಕುಟುಂಬದಲ್ಲಿ ಸಾಮರಸ್ಯವು ಕಾಣಿಸುವುದು. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ.

ವೃಶ್ಚಿಕ ರಾಶಿ:

ಶುಭಕಾರ್ಯಕ್ಕಾಗಿ ಮಾಡುವ ಯತ್ನಗಳು ಯಶಸ್ವಿಯಾಗುತ್ತವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗುತ್ತದೆ. ಇಂದು ನಿಮ್ಮ ಆತ್ಮವಿಶ್ವಾಸ ಇನ್ನಷ್ಟು ಬೆಳೆಯುತ್ತದೆ. ಅಗಲವು ದಿನಗಳ ಭೂವಿವಾದಕ್ಕೆ ಅಂತ್ಯ ಸಿಗಲಿದೆ. ನೌಕರರ ಜೊತೆ ಆಪ್ತ ಸಮಾಲೋಚನೆ ಮಾಡುವಿರಿ. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು. ಚಿಂತಿತ ಕಾರ್ಯವನ್ನು ಪೂರೈಸಲು ನಿಮಗೆ ಬುದ್ಧಿಯು ಸೂಚಿಸದು. ಆಸ್ತಿಯನ್ನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ಹೋಗಬೇಕಾದೀತು.

ಧನು ರಾಶಿ:

ಅನಿರೀಕ್ಷಿತ ವಾಗ್ವಾದಗಳಿಗೆ ಸಾಧ್ಯತೆ ಇದೆ. ಹಣದ ಕೊರತೆ ನಿವಾರಣೆಗೆ ಸಾಲದ ಪ್ರಯತ್ನ ಮಾಡಬಹುದು. ಕುಟುಂಬದಲ್ಲಿ ಹೊಸ ಬದಲಾವಣೆಗಳು ಕಾಣಿಸಬಹುದು. ಯೋಜಿತ ಕಾರ್ಯಗಳಲ್ಲಿ ವಿಳಂಬ ಉಂಟಾಗಬಹುದು. ನಿಮ್ಮ ನಿಶ್ಯಬ್ದತೆ ಹಲವಾರು ಬಿಕ್ಕಟ್ಟಿಗೆ ಪರಿಹಾರವಾಗಬಹುದು. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ. ಮಕ್ಕಳ ಅತಿಯಾದ ಮಾತು ನಿಮಗೆ ಮುಜುಗರ ತಂದೀತು. ನಿಮ್ಮ ಶ್ರಮವು ನಿಷ್ಪ್ರಯೋಜಕ ಎನಿಸುವುದು.

ಮಕರ ರಾಶಿ:

ತಾತ್ಕಾಲಿಕ ಕೋಪದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಮನೆಯಲ್ಲಿ ಒತ್ತಡದ ಪರಿಸ್ಥಿತಿ ಉಂಟಾಗಬಹುದು. ಸಂಬಂಧಗಳ ಎಚ್ಚರಿಕೆಯಿಂದ ಮುನ್ನಡೆಯಿರಿ. ತಾಳ್ಮೆಯ ನಡವಳಿಕೆ ಇಂದಿನ ದಿನ ಸುಗಮವಾಗಿಸುತ್ತದೆ. ಯಾರಿಂದಲೂ ಕೂಡಲೇ ಬದಲಾವಣೆಯನ್ನು ಬಯಸುವುದು ಬೇಡ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ. ಸ್ತ್ರೀಯರಿಗೆ ಪ್ರಯಾಣದಲ್ಲಿ ತೊಂದರೆ ಬರಬಹುದು.

ಕುಂಭ ರಾಶಿ:

ಕೆಲವು ಪ್ರಮುಖ ಯೋಜನೆಗಳನ್ನು ಮುಂದೂಡಬೇಕಾಗಬಹುದು. ಸಣ್ಣ ಮಟ್ಟದ ಆರೋಗ್ಯ ಸಮಸ್ಯೆ ತೊಂದರೆ ನೀಡಬಹುದು. ಪ್ರಯಾಣಗಳಲ್ಲಿ ಅಸಹಜ ತೊಂದರೆಗಳು ಎದುರಾಗಬಹುದು. ಸ್ವಭಾವದ ಕಾರಣ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ. ಅಂದುಕೊಂಡಿದ್ದಕ್ಕಿಂತ ಖರ್ಚು ಅಧಿಕವಾಗಿದ್ದು ಗಳಿಕೆಯ ಬಗ್ಗೆ ಆಲೋಚಿಸುವಿರಿ.

ಮೀನ ರಾಶಿ:

ಉದ್ಯೋಗಸ್ಥರಿಗೆ ಬಡ್ತಿಯ ಸಾಧ್ಯತೆ ಇದೆ. ಇಂದು ಮನಸ್ಸು ಅಸ್ಥಿರವಾಗಿರುವ ಸಾಧ್ಯತೆ ಇದೆ. ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಸಂಘರ್ಷ ಉಂಟಾಗದಂತೆ ಎಚ್ಚರಿಕೆ ವಹಿಸುವುದು ಉತ್ತಮ. ಮಾತಿನಿಂದಲೂ ಕಲಹಗಳು ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಈ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳುಬೇಕು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವಿಷ್ಕಂಭ, ಕರಣ : ಬಾಲವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 18:37, ಯಮಗಂಡ ಕಾಲ 12:24 – 13:57, ಗುಳಿಕ ಕಾಲ 15:31- 17:04

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್