AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ

Daily Horoscope, 23 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಗುರುವಾರದಂದು ಹಿರಿಯರ ಮಾತಿಗೆ ಖಂಡನೆ, ಪರರ ಕಾರ್ಯಗಳಿಗೆ ವಿಡಂಬನೆ, ಪಕ್ಷಪಾತ, ನಿರ್ಮಾಣ, ಅಶಾಂತಿ, ಅದಾಯ ಖರ್ಚಿನಲ್ಲಿ ಸಮಾನತೆ ಇವೆಲ್ಲ ಈ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 23, 2026 | 12:45 AM

Share

ಮೇಷ ರಾಶಿ :

ಬೋಧಕರಾಗಿದ್ದರೆ ನಿಮ್ಮ ವಿದ್ಯಾರ್ಥಿಗಳಿಂದ ಉಡುಗೊರೆ ಸಿಗಬಹುದು. ತಂದೆಯು ನಿಮ್ಮ ಪ್ರಗತಿಯನ್ನು ನಿರೀಕ್ಷಿಸುವಿರಿ. ಬಂಧುಗಳ ಮನೆಯಲ್ಲಿ ಆತಿಥ್ಯ, ನೆಮ್ಮದಿಯಿಂದ ದಿನ ಮುಗಿಯಲಿದೆ. ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಯೋಜನೆಯನ್ನು ನಿರ್ನಾಮ ಮಾಡಬಹುದು.

ವೃಷಭ ರಾಶಿ:

ದೀರ್ಘ ಪ್ರಯಾಣವನ್ನು ಇಚ್ಛಿಸುವ ನೀವು ಆರೋಗ್ಯದ ಮೇಲೂ ಗಮನವಿರಿಕೊಳ್ಳಿ. ಪುನಶ್ಚೇತನಕ್ಕೆ ಅನ್ಯರ ಸಹಕಾರ ಅಗತ್ಯ. ಯಾರದ್ದೋ ಮಾತನ್ನು ಕೇಳಿ ಕೆಲಸಗಳನ್ನು ಮಾಡಬೇಡಿ. ನಿಮ್ಮ ಮನಸ್ಸಿಗೆ ಅದು ಒಪ್ಪಿಗೆಯಾಗಲಿ. ಹಿರಿಯರಿಂದ ಸಂಪತ್ತು ಸಿಗಬಹುದು ಅಥವಾ ಉತ್ತಮಮಾರ್ಗದಿಂದ ಬರುವ ಸಂಪತ್ತು ನಿಮ್ಮನ್ನು ಖುಷಿಯಾಗಿಡಲಿದೆ. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ.

ಮಿಥುನ ರಾಶಿ:

ನಿಮಗೆ ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಸಮಾಧಾನದಿಂದ ಅವರಿಗೆ ಉತ್ತರಕೊಟ್ಟು ಕೆಲವು ದಿನಗಳ ಅನಂತರ ಪಾವತಿಸುವೆನು ಎಂದು ಹೇಳಿ. ಆಮೆಯ ಗತಿ ಸಾಗುವ ಬದುಕನ್ನು ಕಂಡು ನಿರಾಶರಾಗುವುದು ಬೇಡ. ಮಂದಗತಿ, ಶೀಘ್ರಗತಿ ಬದುಕಿನಲ್ಲಿ ಸಾಮಾನ್ಯವೆಂದು ತಿಳಿಯಿರಿ. ಭೂಮಿಯ ವ್ಯವಹಾರದಲ್ಲಿ ಅನುಭವಿಗಳನ್ನು ಜೊತೆಯಲ್ಲಿ ಇರಿಸಿಕೊಳ್ಳಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರು ಹೇಳುವರು.

ಕರ್ಕಾಟಕ ರಾಶಿ:

ಎಲ್ಲ ಕಾರ್ಯಕ್ಕೆ ಸಂಗಾತಿಯೇ ನಿಮಗೆ ದೊಡ್ಡ ಅಡ್ಡಿ ಎನಿಸಬಹುದು. ಅದಕ್ಕೋಸ್ಕರ ನಿಮ್ಮ ಶ್ರಮವನ್ನು ವ್ಯರ್ಥಮಾಡಿಕೊಳ್ಳಬೇಡಿ. ಮಾಡುತ್ತಿರುವ ವ್ಯಾಪಾರದಲ್ಲಿ ಅಭಿವೃದ್ಧಿಯಾಗಲಿದೆ. ಓದಿನೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ಇರಿ. ನಿಮ್ಮ ಅದೃಷ್ಟದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ತಾಯಿಯ ಮೇಲೆ ನಿಮ್ಮ ಕೋಪವನ್ನು ತೋರಿಸುವಿರಿ. ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುವಿರಿ.

ಸಿಂಹ ರಾಶಿ:

ಹೇಳಬೇಕಾದುದನ್ನು ಹೇಳುವಲ್ಲಿ, ಹೇಳುವ ರೀತಿಯಲ್ಲಿ‌ ಹೇಳಿ. ಸಾಲವನ್ನು ಕೊಟ್ಟವರು ಇಂದು ಪೀಡಿಸಲಿದ್ದಾರೆ. ವ್ಯವಸ್ಥಾಪಕರಾಗಿದ್ದರೆ ನಿಮ್ಮ ಕೆಲಸವು ಮೇಲಧಿಕಾರಿಗಳಿಗೆ ಸಂತಸ ನೀಡುವುದು. ಹೊಸ ವಾಹನ ಖರೀದಿಗೆ ಮನಸ್ಸು ಮಾಡಿದರೆ ಸ್ವಲ್ಪ ಮುಂದೂಡಿ. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ನಿಮ್ಮ ಸುರಕ್ಷಿತ ತಾಣವನ್ನು ನೀವೇ ಆರಿಸಿಕೊಳ್ಳಿ. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು.

ಕನ್ಯಾ ರಾಶಿ:

ನಿಮ್ಮ ಬಾಯಿಯ ಚಪಲಕ್ಕೆ ಬೇರೆಯವರು ನೋವುಣ್ಣುವರು. ಸದಾ ನಗುಮುಖದಿಂದ ಇರಿ. ವ್ಯಾಪರ ಸುಗಮವಾಗಿ ಸಾಗುವುದು. ವ್ಯಾವಹಾರಿಕ ಭಾರವನ್ನು ಪಕ್ಕದಲ್ಲಿಟ್ಟು ನಿಶ್ಚಿಂತೆಯಿಂದ ನಿದ್ರಿಸಬಹುದು. ನಾಳೆಯದನ್ನು ಹಂಬಲಿಸಿ ಇಂದು ಹಾಗೂ ನಾಳೆಯನ್ನು ಹಾಳು ಮಾಡಿಕೊಳ್ಳಬೇಡಿ. ಶ್ರಮದಷ್ಟು ಫಲ ಸಿಗುತ್ತದೆ. ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ.

ತುಲಾ ರಾಶಿ:

ವಾಹನದಿಂದ ಗಾಯ ಅಥವಾ ಆರ್ಥಿಕ ಸಂಕಟ ಇರಲಿದೆ. ಸ್ನೇಹಿತರು ಮಾಡಿದ ಕೆಟ್ಟ ಕೆಲಸದಿಂದ ನಿಮಗೆ ಕಂಟಕವು ಬರಬಹುದು. ಭೂಮಿಯ ವ್ಯವಹಾರದಲ್ಲಿ ಹೊಂದಾಣಿಕೆ ಕಷ್ಟ. ಲೇವಾದೇವಿಯ ವ್ಯವಹಾರದಿಂದ ತೊಂದರೆ ಹಾಗೂ ನಷ್ಟ. ತಂದೆಯ ಆಸೆಯನ್ನು ಪೂರ್ಣ ಮಾಡಿ, ಅವರಿಗೆ ಖುಷಿಯನ್ನು ಕೊಡುವಿರಿ. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು.

ವೃಶ್ಚಿಕ ರಾಶಿ:

ಹಿತಶತ್ರುಗಳು ನಿಮ್ಮ ವಿರುದ್ಧ ಕಾಣದಂತೆ ಕತ್ತಿಯನ್ನು ಮಸೆಯುತ್ತಲೇ ಇದ್ದಾರು. ಕುಟುಂಬದಲ್ಲಿ ಮಾತಿನ ಚಕಮಕಿ ನಡೆಯಬಹುದು. ದಾಂಪತ್ಯದ ನಡುವೆ ವಿರಸಭಾವವು ಕೆಲವು ಸಮಯವಿದ್ದು ಶಾಂತವಾಗುವುದು. ಮನಸ್ಸು ಹೇಳಿದಂತೆ ಕೇಳದೇ ಸಮಾಧಾನದಿಂದ ಇರಿ. ಪ್ರವಾಸದಲ್ಲಿ ಇರುವವರಿಗೆ ಆಹಾರದ ವ್ಯತ್ಯಾಸದಿಂದ ಕಷ್ಟವಾಗುವುದು. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುವರು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು.

ಧನು ರಾಶಿ:

ಭೂಮಿಯ ಕ್ರಯ ಮತ್ತು ವಿಕ್ರಯಗಳ ವಿಷಯದಲ್ಲಿ ಲಾಭವನ್ನು ಕಾಣಬಹುದಾಗಿದೆ. ಸಹೋದರರ ನಡುವೆ ಭಿನ್ನಾಭಿಪ್ರಾಯಗಳು ನಡೆಯಬಹುದು. ಸಾಲದ ಭಾರವನ್ನು ಕಡಿಮೆ ಮಾಡಿಕೊಳ್ಳಲಾಗದು. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ ಜವಾಬ್ದಾರಿ ಹೆಚ್ಚಾಗುವುದು. ಭೂಮಿಯ ವ್ಯವಹಾರವು ಪಾಲುದಾರರ ಸಹಕಾರದಿಂದ ಸುಗಮವಾಗಿ ಸಾಗಲಿದೆ.

ಮಕರ ರಾಶಿ:

ಇಷ್ಟವಿಲ್ಲದೇ ಇದ್ದರೂ ಕಾರ್ಯದ ನಿಮಿತ್ತ ಅನ್ಯಸ್ಥಳಕ್ಕೆ ಹೋಗಬೇಕಾಗಿ ಬರಬಹುದು. ಅಲ್ಲಿಯೇ ಇಂದಿನ ನಿಮ್ಮ ವಾಸವಾಗಲಿದೆ. ನಿಮ್ಮ ಸಾಧನೆಯೇ ಮಾತನಾಡುವಂತೆ ಆದರೆ ಒಳ್ಳೆಯದು. ಅಪರಿತರು ನಿಮಗೆ ಸಹಾಯವನ್ನು ಮಾಡಲಿದ್ದಾರೆ. ಬಯಸಿದ್ದನ್ನು ಪಡೆದುಕೊಳ್ಳುವ ಅರ್ಹತೆ ನಿಮಗೆ ಬರಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ವ್ಯವಹಾರದಿಂದ ನಿಮಗೆ ಪ್ರಶಂಸೆಯೂ ಸಿಗುವುದು.

ಕುಂಭ ರಾಶಿ:

ಕೃಷಿಯನ್ನು ಅವಲಂಬಿಸಿ ಬದುಕುವವರಿಗೆ ಅಲ್ಪ ಲಾಭವೂ ಸಿಗಲಿದೆ‌. ವಿದ್ಯಾರ್ಥಿಗಳು ಹತ್ತಾರು ಗೊಂದಲಗಳನ್ನು ಇಟ್ಟುಕೊಳ್ಳಲಿದ್ದಾರೆ. ಹೂಡಿಕೆಯಿಂದ ಬರುವ ಆದಾಯದಿಂದ ಅಚ್ಚರಿಯಾಗಲಿದೆ. ಧಾರ್ಮಿಕವಾಗಿ ಹಣವನ್ನು ವ್ಯಯಿಸಲಿದ್ದೀರಿ. ಕುಟುಂಬದಲ್ಲಿ ನಿಮ್ಮ ವಿವಾಹದ ಕುರಿತು ಚರ್ಚೆಯಾಗುವುದು. ನಿಮಗಾಗಿ ಅನುಕೂಲಕರ ವಾತಾವರಣವನ್ನು ಸಿದ್ಧ ಮಾಡುವರು. ಪ್ರೀತಿಯಲ್ಲಿ ಇಂದು ಸಮಯ ಸರಿಯುವುದೇ ಗೊತ್ತಾಗದು.

ಮೀನ ರಾಶಿ:

ಇಂದು ಯಾರಿಗಾದರೂ ಮಾತುಕೊಡುವಾಗ ಹಲವು ಬಾರಿ ಯೋಚಿಸುವಿರಿ. ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಕಿರಿಕಿರಿಯನ್ನು ಅನುಭವಿಸುತ್ತಿರುವ ನಿಮ್ಮ ಆರೋಗ್ಯದಲ್ಲಿ ಚೇತರಿಕೆ ಇರುವುದು. ವಿದ್ಯಾಭ್ಯಾಸಕ್ಕೆ ವಿದೇಶ ಗಮನ ನಿಶ್ಚಯ ಆಗಬಹುದು. ಹೊಸ ಉದ್ಯೋಗದಿಂದ ನೀವು ಸಾಕಷ್ಟು ಯಶಸ್ಸನ್ನು ಪಡೆಯುತ್ತೀರಿ. ಹಿರಿಯರ ಆರೋಗ್ಯವೂ ಚೇತರಿಕೆ ಕಾಣುವುದು. ಇಂದು ನಿಮ್ಮ ಆದಾಯವನ್ನು ಇಮ್ಮಡಿಗೊಳಿಸಿಕೊಳ್ಳಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಶೋಭನ, ಕರಣ : ಬಾಲವ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:57 – 15:39, ಯಮಗಂಡ ಕಾಲ 06:08 – 07:41, ಗುಳಿಕ ಕಾಲ 09:15 – 10:49

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?