AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಮಾತಿನಿಂದ ಹಣ ಪಡೆಯುವ ಯೋಜನೆ ಮಾಡುವರು

Daily Horoscope, 24 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಶುಕ್ರವಾರದಂದು ನಿಮ್ಮದಲ್ಲದ ಕ್ಷೇತ್ರದಿಂದ ನೆರವು, ಹಣಕಾಸಿನ ಹರಿವು, ಮಾಡಬೇಕಾದ ಕೆಲಸದ ಮರೆವು, ಹಳೆಯ ಯೋಜನೆಯ ಅರಿವು ಇದು ಈ‌ ದಿನ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ಮಾತಿನಿಂದ ಹಣ ಪಡೆಯುವ ಯೋಜನೆ ಮಾಡುವರು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 24, 2026 | 12:43 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಅತಿಗಂಡ, ಕರಣ : ತೈತಿಲ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:49 – 12:23, ಯಮಗಂಡ ಕಾಲ 15:30 – 17:04, ಗುಳಿಕ ಕಾಲ 07:41 – 09:15

ಮೇಷ ರಾಶಿ:

ಇಂದು ನಿಮ್ಮನ್ನು ಹುಡುಕಿಕೊಂಡು ಬರುವರಿಂದ ನಿಮ್ಮ ವಿವಾಹವು ನಿಶ್ಚಯವಾಗಲಿದೆ. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿ ಹಾಕಿಸುವುದು ಬೇಡ. ಹೂಡಿಕೆಯ ಹೊಸ ವಿಧಾನದಿಂದ ಸಂತೋಷ. ನಿಮ್ಮ‌‌ ಸ್ನೇಹವನ್ನು ಬಯಸಲು ಇಂದು ಅನೇಕರು ಇರಲಿದ್ದಾರೆ. ಅಮುಖ್ಯವಾದ ಕಾರ್ಯಗಳಿಗೆ ಓಡಾಟವನ್ನು ಮಾಡಬೇಕಾದೀತು. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿಯನ್ನು ತಪ್ಪಿಸಿಯಾರು.

ವೃಷಭ ರಾಶಿ:

ಪ್ರೀತಿಗೆ ಬೆಲೆಯನ್ನು ಕೊಡುವ ನಿಮ್ಮ ಹವ್ಯಾಸವು ಮುಂದುವರಿಯಲಿ. ರಾಜಕೀಯದ ನಿಮ್ಮ ರಹಸ್ಯ ನಡೆಯು ಬಯಲಾಗಬಹುದು. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ತುರ್ತು ಚಿಕಿತ್ಸೆಯ ಅವಶ್ಯಕತೆ ಎದುರಾಗುವುದು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ಇಂದು ಖರ್ಚಿನ ಬಗ್ಗೆ ಊಹೆಗೂ ಸಿಗದು. ಶ್ರಮಕ್ಕೆ ಯೋಗ್ಯವಾದ ಆದಾಯವನ್ನು ನಿರೀಕ್ಷಿಸುವಿರಿ. ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌

ಮಿಥುನ ರಾಶಿ:

ಮನಸ್ಸಿಗೆ ಯಾವುದನ್ನಾದರೂ ತಂದುಕೊಂಡು ಅನಂತರ ಮುಂದುವರಿಯುವಿರಿ. ಪ್ರಯಾಣದ ಆಯಾಸವು ನಿಮ್ಮನ್ನು ದುರ್ಬಲಗೊಳಿಸುತ್ತದೆ‌. ನಿಮ್ಮ ಯೋಜನೆಗೆಳಿಗೆ ಪುರಸ್ಕಾರಗಳು ಸಿಗಬಹುದು. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ. ಚಿತ್ರಕಾರರಿಗೆ ಅವಕಾಶಗಳು ಬರಬಹುದು. ಜೀವನದಲ್ಲಿ ಅನೇಕರಿಂದ ನೀವು ಹಿಂದೆ ಬೀಳುತ್ತೀರಿ. ಇದು ನಿಮ್ಮ ಜೀವನಸಂಗಾತಿಯೊಂದಿಗಿನ ಅದ್ಭುತ ದಿನವಾಗಿದೆ.

ಕರ್ಕಾಟಕ ರಾಶಿ:

ನಿಯಮ ಭಂಗದಿಂದ ನಿಮಗೆ ಕಷ್ಟ. ನಿಮ್ಮವರೆಂದುಕೊಂಡವರು ನಿಮ್ಮವರಾಗದೇ ಇರಬಹುದು. ಸಂಗಾತಿಗಳ ಕಲಹವು ಮಕ್ಕಳ ಕಾರಣದಿಂದ ತಣ್ಣಗಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಸಂಪತ್ತು ಬಳಕೆಯಾಗಲಿದೆ. ದಾಖಲೆಗಳು ನಿಮ್ಮ ಬಗ್ಗೆ ಸರಿಯಾದ ಮಾಹಿತಿ ಕೊಡುವುದು. ಅಪರೂಪದ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ಆಶ್ರಯದಾತರನ್ನು ಅಪಮಾನ ಮಾಡುವಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು.

ಸಿಂಹ ರಾಶಿ:

ಪಿರ್ತಾರ್ಜಿತ ಆಸ್ತಿಯನ್ನು ಅನುಭವಿಸುವ ಕ್ಷಣ ನಿಮ್ಮದಾಗಿದೆ. ಶತ್ರುಗಳು ನಿಮ್ಮ ಚಲನವಲನಗಳನ್ನು ಗಮನಿಸುತ್ತ ಇರುವರು. ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ. ಅಶುಭವಾರ್ತೆಯಿಂದ ಉತ್ಸಾಹಕ್ಕೆ ಭಂಗ. ಇಂದು ಹಲವು ಕಾರ್ಯಗಳನ್ನು ಒಂದೇ ಸಲ ಮಾಡಬೇಕಾಗಬಹುದು. ಎಲ್ಲವೂ ಆಗಿಹೋದಂತೆ ನಿಮಗೆ ಅನ್ನಿಸಬಹುದು. ನಿಮ್ಮವರನ್ನು ಬಿಟ್ಟು ಹೋದವರ ಬಗ್ಗೆ ಆಲೋಚನೆ ಬೇಡ. ವಸತಿಯಲ್ಲಿ ತೊಂದರೆ ಬಂದ ಕಾರಣ ಬದಲಾಯಿಸುವ ಸಂದರ್ಭವೂ ಬರಬಹುದು.

ಕನ್ಯಾ ರಾಶಿ:

ಮನಸ್ಸು ಶಾಂತವಾದಷ್ಟು ಕಾರ್ಯದಲ್ಲಿ ಪ್ರಗತಿ ಹೆಚ್ಚು. ಉಕರಣಗಳಿಗೆ ಕಾರಣಾಂತರಗಳಿಂದ ಧನವ್ಯಯವಾದೀತು. ನಂಬಿಕೆಯನ್ನು ಉಳಿಸಿಕೊಳ್ಳಲು ಬಹಳ ಪ್ರಯತ್ನವನ್ನು ಮಾಡಬೇಕಾದೀತು. ಉತ್ತಮರ ಸಹವಾಸ ನಿಮ್ಮ ಜೀವನಕ್ಕೆ ತಿರುವನ್ನು ಕೊಟ್ಟೀತು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ನಿಮ್ಮನ್ನು ಅರಿತವರು ಬಿಡಲಾರರು. ಅನಾರೋಗ್ಯದ ಕಾರಣ ಉತ್ಸಾಹದ ಯಾವ ಕಾರ್ಯವನ್ನೂ ಮಾಡಲಾಗದು. ದಿನದ ಕೆಲಸವನ್ನು ಮಾಡುವಷ್ಟರಲ್ಲಿ ನಿಮ್ಮ ಸಮಯವು ಕಳೆದುಹೋಗುವುದು.

ತುಲಾ ರಾಶಿ:

ಯಾರ ವಿರೋಧವನ್ನೂ ನೀವು ಸಹಿಸಲಾರಿರಿ. ಪರೀಕ್ಷೆಯ ಭಯವು ನಿಮ್ಮನ್ನು ಅತಿಯಾಗಿ ಕಾಡುವುದು. ಭೂವ್ಯವಹಾರದಲ್ಲಿ ನಷ್ಟವಾಗುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ. ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ. ಯಾರಾದರೂ ನಿಮ್ಮ ಬಗ್ಗೆ ಅಸತ್ಯವನ್ನು ಆಡಿದರೆ ಅದನ್ನು ಕಂಡು ಹಿಡಿಯುವಿರಿ.‌

ವೃಶ್ಚಿಕ ರಾಶಿ:

ಕುಟುಂಬದಿಂದ ಅಶುಭವಾದ ಸುದ್ದಿಯು ನಿಮಗೆ ತಿಳಿಯಲಿದೆ‌. ನಿಮ್ಮ ಉಪಾಯವು ಸರಳವಾಗಿದ್ದು, ಉಚಿತವೂ ಆಗಿರಲಿದೆ‌. ಪ್ರಾಮಾಣಿಕತೆಯು ಇಂದು ನಿಮಗೆ ವರವಾಗಿ ಅನೇಕರ ಪ್ರಶಂಸೆಗೆ ಕಾರಣವಾಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮ್ಮ ಕೆಲವು ವರ್ತನೆಯನ್ನು ಮಿತ್ರರು ವಿರೋಧಿಸುವರು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ.

ಧನು ರಾಶಿ:

ನಿಮ್ಮ ಬಗ್ಗೆ ಅಪಪ್ರಚಾರಗಳು ಕೇಳಿ ಬರಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು. ಸ್ನೇಹಿತರ ಜೊತೆ ಇಂದು ಕಾಲವನ್ನು ಕಳೆಯುವಿರಿ. ಇತರ ನೋವಿಗೆ ನೀವಾಗಿಯೇ ಸ್ಪಂದಿಸುವಿರಿ. ಸಂಗಾತಿಯ ಯೋಚನೆಗಳಿಗೆ ಪ್ರತಿಸ್ಪಂದನೆಯು ಸಿಗಲಿದೆ. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ.

ಮಕರ ರಾಶಿ:

ಹಣದ ಪ್ರಾಮುಖ್ಯವನ್ನು ತಿಳಿದುಕೊಳ್ಳುವ ಸಮಯವಿಂದು. ದಾಂಪತ್ಯದಲ್ಲಿ ಶತ್ರುತ್ವ ಕೆಲಸಮಾಡಬಹುದು. ನಿಮ್ಮ ವಿದ್ಯುದುಪಕರಣದಿಂದ ನಿಮಗೆ ನಷ್ಟವಾಗಲಿದೆ. ಅಗತ್ಯವಿದ್ದಷ್ಟು ಮಾತ್ರ ಮಾತನಾಡಿ. ನಿಮ್ಮ ಅಸೂಯಾಗುಣದಿಂದ ನಿಮಗೇ ತೊಂದರೆಯಾದೀತು. ಚಂಚಲ ಮನಸ್ಸು ಸ್ಥಿರವಾಗುವ ತನಕ ಯಾವ ವಿವಾದಕ್ಕೂ ಆಸ್ಪದ ಬೇಡ. ನಿಮ್ಮ ಜೀವನಸಂಗಾತಿ ಇಂದು ನಿಮಗೆ ಪೂರ್ಣ ಬಲ ಮತ್ತು ಪ್ರೀತಿಯನ್ನು ನೀಡುವರು. ಎಲ್ಲರ ಜೊತೆಗಿದ್ದರೂ ಒಂಟಿಯಂತೆ ಅನ್ನಿಸುವುದು.‌

ಕುಂಭ ರಾಶಿ:

ಸಂಗಾತಿಯಿಂದ ಹಣವನ್ನು ನಿರೀಕ್ಷಿಸುವಿರಿ. ಹಿರಿಯ ಆಶೀರ್ವಾದವೇ ನಿಮ್ಮ ಕಾರ್ಯಗಳಿಗೆ ಬೆಂಬಲವಾಗಲಿದೆ. ಹಣದ ವ್ಯಯವು ನಿಮ್ಮನ್ನು ಆತಂಕಕ್ಕೆ ತಳ್ಳಬಹುದು. ವಿವೇಚನೆ ಇರಲಿ. ಅಚಲವಾದ ನಂಬಿಕೆಯೇ ನಿಮ್ಮ ಕಾರ್ಯವನ್ನು ಸರಿಯಾಗಿ ಆಗುವಂತೆ ಮಾಡುವುದು. ನಿಮ್ಮ ಅಂದಾಜು ಮೀರಬಹುದು. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಾಯಿಸಲು ಪ್ರಯತ್ನಿಸುವಿರಿ.

ಮೀನ ರಾಶಿ:

ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ಅನೇಕ ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ. ವೈದ್ಯವೃತ್ತಿಯನ್ನು ಆರಿಸಿಕೊಂಡ ನಿಮಗೆ ಗೌರವಾದರಗಳು ಸಿಗಲಿವೆ. ಪರೋಪಕಾರದಿಂದ ಆತ್ಮತೃಪ್ತಿ ಆಗಲಿದೆ. ಕೃಷಿ ಉತ್ಪನ್ನಗಳ ಉದ್ಯಮದವರಿಗೆ ಹೆಚ್ಚು ಲಾಭವಾಗಲಿದೆ‌. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ