AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಸ್ವಾರ್ಥಕ್ಕಾಗಿ ಕಾರ್ಯ, ಎಲ್ಲರ ಸಹಕಾರ

Daily Horoscope, 29 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ದ್ವಾದಶೀ ತಿಥಿಯ ಬುಧವಾರದಂದು ದೇಹ ದಂಡನೆ, ಮಕ್ಕಳಿಂದ ಸಹಾಯ, ಚಾಣಾಕ್ಷತನದಿಂದ ಲಾಭ, ಆಯುಧದಿಂದ ಗಾಯ, ಅಧಿಕಾರಕ್ಕೆ ಆಸೆ, ಸಾರ್ವಜನಿಕರಿಂ ತೊಂದರೆ ಇವೆಲ್ಲ ಇಂದಿನ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಸ್ವಾರ್ಥಕ್ಕಾಗಿ ಕಾರ್ಯ, ಎಲ್ಲರ ಸಹಕಾರ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 29, 2026 | 12:46 AM

Share

ಮೇಷ ರಾಶಿ:

ಕುಟುಂಬಕ್ಕೆ ಇದರಿಂದ ಅನೇಕ ಲಾಭಗಳು ನಿಮಗಾಗಲಿವೆ. ಇನ್ನೊಬ್ಬರಿಂದ ಪಡೆದ ಪ್ರಚೋದನೆಯ ಶಕ್ತಿ ಕೆಲ ಕಾಲ ಮಾತ್ರ ಉಳಿಯುವುದು. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು.

ವೃಷಭ ರಾಶಿ:

ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಹೊಸ ಉದ್ಯೋಗ ಸಿಗುವುದೋ ಇಲ್ಲವೋ ಎಂಬ ಅನುಮಾನ ಕಾಡುವುದು. ಜಾಗರೂಕರಾಗಿ ಹೆಜ್ಜೆಯನ್ನು ಹಾಕಿ. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ಸ್ಥಾನಮಾನವನ್ನು ಪಡೆಯಲು ಏನಾದರೂ ಮಾಡುವಿರಿ. ಹಣಕಾಸಿನ ತೊಂದರೆಯನ್ನು ಸರಿ ಮಾಡಿಕೊಳ್ಳುವ ಮಾರ್ಗದ ಅನ್ವೇಷಣೆ ಮಾಡುವಿರಿ.

ಮಿಥುನ ರಾಶಿ:

ಇಂದು ಆಪ್ತಬಂಧುಗಳ ಅಗಲಿಕೆಯಿಂದ ನೋವಾಗಬಹುದು. ಸರಕಿನ‌ ಉದ್ಯಮದಿಂದ ಆತಂಕ. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಒತ್ತಡದಿಂದ ನೀವು ಉದ್ವೇಗಕ್ಕೆ ಒಳಗಾಗಬಹುದು. ಶ್ರೇಷ್ಠ ವ್ಯಕ್ತಿಗಳ ಭೇಟಿಯಿಂದ ಹೊಸ ಕಾರ್ಯಗಳನ್ನು ಮಾಡಲು ಉತ್ಸುಕರಾಗಿರುವಿರಿ. ನಿಮ್ಮ‌ಮಾತಿಗೆ ಸಮಜಾಯಿಷಿ ಕೊಡಬೇಕಾದೀತು. ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡುವುದಿಲ್ಲ.

ಕರ್ಕಾಟಕ ರಾಶಿ:

ಸರಿಯಾದ ಸ್ಥಳದಲ್ಲಿ ಹೂಡಿಕೆಯಿಂದ ಲಾಭ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ನಿಮ್ಮ ಸೋಲನ್ನು ನೀವು ಒಪ್ಪಿಕೊಳ್ಳಲಾರಿರಿ. ಅನಿರೀಕ್ಷಿತ ವಾರ್ತೆಯು ನಿಮ್ಮನ್ನು ಚಿಂತೆಗೆ ದೂಡಲಿದೆ. ಪ್ರಶಾಂತವಾದ ವಾತಾವರಣದಲ್ಲಿ ಕೆಲವು ಸಮಯವನ್ನು ಕಳೆದು ಬನ್ನಿ. ಕುಟುಂಬದಲ್ಲಿ ಜವಾಬ್ದಾರಿಯ ಸ್ಥಾನವನ್ನು ಪಡೆಯಬೇಕಾಗುವುದು. ನಿಮ್ಮ ಮಾತು ಸುಳ್ಳಾಗಬಹುದು. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು.

ಸಿಂಹ ರಾಶಿ:

ಫಲಾಪೇಕ್ಷೆ ಇಲ್ಲದೇ ಮಾಡುವ ಸಹಾಯದ ಮೌಲ್ಯ ಅರಿವಾಗುವುದು. ಸ್ನೇಹಿತರ ಜೊತೆ ಮೋಜಿನಲ್ಲಿ ಇರುವ ಮನಸ್ಸು ಮಾಡುವಿರಿ. ಸಾಮಾಜಿಕ‌ ಕೆಲಸಗಳು ನಿಮಗೆ ಇನ್ನಷ್ಟೂ ಉತ್ಸಾಹವನ್ನು ಕೊಡುವುದು. ವೈದ್ಯರ ಬಳಿ ಸಾವಧಾನತೆಯಿಂದ ಮಾತನಾಡಿ. ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ. ಅನಕ್ಷರಸ್ಥರ ಜೊತೆ ವಾಗ್ವಾದ ಸಲ್ಲ. ಶಕ್ತಿ ಮೀರಿದ ಕೆಲಸವನ್ನು ಮಾಡಿ ಆಯಾಸ ಮಾಡಿಕೊಳ್ಳುವುದು ಬೇಡ. ಕುಟುಂಬಕ್ಕೆ ನಿಮ್ಮಿಂದ ಧನಸಹಾಯದ ಅಪೇಕ್ಷೆ ಇರುವುದು.

ಕನ್ಯಾ ರಾಶಿ:

ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಮನೆಯ ಹಿರಿಯರನ್ನು ಸಂತೋಷಪಡಿಸಿದರೆ ಅದೇ ಆಶೀಋವಾದ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ಹೊರದೇಶದಲ್ಲಿ ಹೊಸದಾಗಿ ಕೆಲಸವನ್ನು ಹುಡುಕುತ್ತಿದ್ದರೆ ಅದನ್ನು ನಿಲ್ಲಿಸಿ.‌ ಇಂದು ಆರಂಭಿಸಿದ ಕೆಲಸಗಳನ್ನು ಇಂದೇ ಮುಗಿಸುವಂತೆ ನೋಡಿಕೊಳ್ಳಿ.

ತುಲಾ ರಾಶಿ:

ಯಾವ ಮರುಕ್ಷಣವೇ ಫಲವನ್ನು ಕೊಡುವುದಿಲ್ಲ ಎಂಬ ವಿಚಾರವು ನಿಮ್ಮೊಳಗೆ ಸರಿಯಾಗಿ ಬೇರೂರಿರಲಿ. ನಮ್ಮ ಪೂರ್ಣವಾಗಿ ನಂಬಲಾರಿರಿ. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು‌ ಮಾನಸಿಕ ಹಿಂಸೆಯಾದೀತು. ಆಧ್ಯಾತ್ಮಿಕ ಚಿಂತನೆಯನ್ನು ಹೆಚ್ಚು ಮಾಡುವಿರಿ. ನಿಮ್ಮ ತುಮುಲವನ್ನು ಅರಿತುಕೊಳ್ಳಲಾರರು. ಹತ್ತಿರದ ಬಂಧುಗಳ ಒಡನಾಟವು ಹೆಚ್ಚಿರಲಿದೆ.

ವೃಶ್ಚಿಕ ರಾಶಿ:

ಪ್ರೇಮವು ಕೊನೆಗೂ ಅಂದುಕೊಂಡಂತೆ ಆಗಲಿದೆ. ನಕಾರಾತ್ಮ ಯೋಚನೆಗಳು ನಿಮ್ಮ ಮನಸ್ಸಿನಲ್ಲಿ ಸುಳಿಯಬಹುದು. ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿದ್ದರೆ ಸಂತೋಷಕರವಾದ ಸುದ್ದಿಯೊಂದು ನಿಮ್ಮ ಪಾಲಿಗಿರುತ್ತದೆ. ನಿರುತ್ಸಾಹಿಗಳಾಗಿ ಕುಳಿತುಕೊಳ್ಳದೇ ಏನನ್ನಾದರೂ ಸಾಧಿಸಬೇಕು ಎಂಬ ಮನಸ್ಸು ನಿಮಗೆ ಬರುತ್ತದೆ. ಉದ್ಯಮದಲ್ಲಿ ಜನರ ವಿಶ್ವಾಸವನ್ನು ಗಳಿಸುವುದು ಮುಖ್ಯವಾಗಿರುವುದು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು.

ಧನು ರಾಶಿ:

ಇಂದು ಕಲಾವಿದರಾಗುವ ಆಸೆ ಪೂರ್ಣವಾಗುವುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ವಿಚಲಿತವಾಗುವುದು. ಕೇಳಿದ್ದಕ್ಕಿಂತ ಹೆಚ್ಚಿನ ಹಣ ಸಿಗುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮ್ಮ ಬದುಕನ್ನು ಖುಷಿಯಾಗಿ ಇಡಲಿದೆ. ಮತ್ತೊಬ್ಬರಿಗೆ ಸಹಾಯ ಮಾಡುವ ಅವಕಾಶ ಬಂದಾಗ ಅದನ್ನು ಅಲ್ಲಗಳೆಯಬೇಡಿ. ಅಸೂಯೆಯಿಂದಾಗಿ ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ.

ಮಕರ ರಾಶಿ:

ಮನೆಯಲ್ಲಿ ಎಲ್ಲರ ಆಗಮನದಿಂದ ಸುಂದರ ವಾತಾವರಣವಿರುತ್ತದೆ. ಸಂಗಾತಿಯಿಂದ ದೂರ ಉಳಿಯಬೇಕಾದ ಸ್ಥಿತಿ ಬರಬಹುದು. ಸ್ಥಾನವನ್ನು ಪಡೆಯಲು ಹಣವನ್ನು ಖರ್ಚುಮಾಡುವಿರಿ. ಮಾತಿನಿಂದ ಯಾರನ್ನೂ ಟೀಕಿಸಲು ಹೋಗಬೇಡಿ. ನಿಮ್ಮನ್ನು ಟೀಕಿಸಲು ಜನರು ಕಾದುಕುಳಿತಿರುತ್ತಾರೆ. ತಂದೆಯ ಮಾತನ್ನು ಉಳಿಸಿಕೊಳ್ಳಲು ನಿಮ್ಮ ಶ್ರಮವು ಬಳಕೆಯಾಗುವುದು.

ಕುಂಭ ರಾಶಿ:

ಕೃಷಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಜೀವನ ನಿಮಗೆ ಬಹಳ ಸುಖವನ್ನು ನೀಡುತ್ತದೆ ಎಂದನ್ನಿಸುತ್ತಿರುತ್ತದೆ‌. ಧಾರ್ಮಿಕ‌ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗಲಿದೆ.‌ ನೀವು ಇಂದು ಜನರೊಡನೆ ಬೆರೆಯಲು ಬಿಡುವಿನ ವೇಳೆಯನ್ನು ಹೊಂದಿದ್ದೀರಿ. ಏನಾದರೂ ಅವಘಡಗಳು ಸಂಭವಿಸಬಹುದು. ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ.

ಮೀನ ರಾಶಿ:

ನೀವು ಪ್ರಯತ್ನಿಸಿದ ಕಾರ್ಯಗಳು ಫಲವನ್ನು ಕೊಡಲಿವೆ. ವಾಹನವನ್ನು ಓಡಿಸುವ ಎಚ್ಚರಿಕೆಯಿಂದ ಇರಿ. ದೂರದ ಊರಿಗೆ ಅನಿವಾರ್ಯವಾಗಿ ಹೋಗಿ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ಕಳ್ಳತನದ ಅಪವಾದಿಂದ ವಾಗ್ವಾದ. ಯಾರದೋ ಸಿಟ್ಟನ್ನು ಯಾರ ಮೇಲೋ ತೀರಿಸಿಕೊಳ್ಳುವ ನಿಮ್ಮ ಸ್ವಭಾವವು ಒಳ್ಳೆಯದಲ್ಲ. ಮನೆಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವನ್ನು ನೀಡುತ್ತಾನೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ಹರ್ಷಣ, ಕರಣ : ತೈತಿಲ, ಸೂರ್ಯೋದಯ – 06 – 04 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:22 – 13:56, ಯಮಗಂಡ ಕಾಲ 07:39 – 09:13, ಗುಳಿಕ ಕಾಲ 10:47 – 12:22

-ಲೋಹಿತ ಹೆಬ್ಬಾರ್ – 8762924271 (what’s app only)

Follow Us