Horoscope: ಈ ರಾಶಿಯವರು ಇಂದು ಹೂಡಿಕೆ ಮಾಡುವಾಗ ಎಚ್ಚರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 09, 2024 | 12:08 AM

ಅಕ್ಟೋಬರ್ 09,​ 2024: ಮ್ಮ ಇಂದಿನ ಮಧ್ಯ ಯಾವ ಪಕ್ಷಪಾತವನ್ನೂ ತೋರಿಸದು. ಸ್ವಂತ ಉದ್ಯೋಗಸ್ಥರಿಗೆ ಲಾಭವಾಗುವುದು. ಸರ್ಕಾರದ ಅಧಿಕಾರಿಗಳು ನಿಮ್ಮನ್ನು ಪೀಡಿಸಬಹುದು. ಸ್ವತಂತ್ರವಾಗಿದ್ದರೂ ಏನನ್ನಾದರೂ ಕಳೆದುಕೊಳ್ಳುತ್ತೇನೆ ಎಂಬ‌ ಭಯವು ಇರುವುದು. ಹಾಗಾದರೆ ಅಕ್ಟೋಬರ್ 09ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ಇಂದು ಹೂಡಿಕೆ ಮಾಡುವಾಗ ಎಚ್ಚರ
ಭವಿಷ್ಯ
Follow us on

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ​, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ12:20 ರಿಂದ 01:49, ಯಮಘಂಡ ಕಾಲ ಬೆಳಗ್ಗೆ 07:53ರಿಂದ 09:22ರವರೆಗೆ, ಗುಳಿಕ ಕಾಲ ಬೆಳಗ್ಗೆ 10:51 ರಿಂದ 12:20 ರವರೆಗೆ.

ಮೇಷ ರಾಶಿ : ಇಂದು ನಿಮ್ಮ‌ ಜೊತೆಗಾರರ ವರ್ತನೆಯ ಮೇಲೆ ಅನುಮಾನವು ಬರಬಹುದು. ತಂದೆಯಿಂದ ನಿಮಗೆ ಆರ್ಥಿಕ ಸಹಾಯವಾಗಲಿದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡಲ್ಲಿ ಕೆಲಸದಲ್ಲಿ ಪ್ರಗತಿ ಇರಲಿದೆ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕೆಲವು ಮಾರ್ಪಾಡುಗಳು ಆಗಬಹುದು. ಮಕ್ಕಳಿಂದ ಆಗುವ ಅಸಮಾಧಾನವನ್ನು ನೀವು ಸಹಿಸಿಕೊಳ್ಳಲಾರಿರಿ. ಕೆಲವು ಸಂಗತಿಗಳು ನಿಮಗೆ ಗೊತ್ತಾಗದಿದ್ದರೇ ಉತ್ತಮ. ನಿಮ್ಮ ಉದ್ಯೋಗಕ್ಕೆ ಬರವ ಅಡೆತಡೆಗಳನ್ನು ಸರಿಮಾಡಿಕೊಂಡು ಮುನ್ನಡೆಯುವಿರಿ. ಯುವಕರಿಗೆ ಸರಿಯಾದ ಮಾರ್ಗರ್ಶನದವು ಸಿಗದೇ ಕಷ್ಟಪಡುವಿರು. ವಾಹನ ಖರೀದಿಯ ವ್ಯವಹಾರವು ನಿಮಗೆ ಸರಿಯಾಗಿ ಮುಕ್ತಾಯವಾಗದು. ಸಹೋದರರ ನಡುವೆ ಆಪ್ತತೆಯು ಹೆಚ್ಚಾಗಬಹುದು. ನಿಮ್ಮ ಕೈತಪ್ಪಿ ಹೋದುದನ್ನು ಪುನಃ ಸ್ವಾಧೀನ ಮಾಡಿಕೊಳ್ಳುವಿರಿ. ಹಳೆಯ ಗೆಳೆಯರ ಸಂಪರ್ಕವು ಅನಿವಾರ್ಯವಾಗಿ ಆಗುವುದು. ಹೂಡಿಕೆಯಲ್ಲಿ ಹಿನ್ನಡೆ ಸಾಧ್ಯತೆ ಇದೆ. ಇದರ ಕೋಪವನ್ನು ಯಾರೆದುರೂ ಪ್ರಕಟಿಸುವುದು ಬೇಡ.

ವೃಷಭ ರಾಶಿ : ಗಳಿಕೆಗಿಂತ ಕಳೆದುಕೊಂಡಿದ್ದು ಅಧಿಕವಾಗಿ ಕಾಣಿಸುವುದು. ನಿಮಗೆ ಬೇಕಾದಷ್ಟು ಸೌಲಭ್ಯಗಳಿದ್ದರೂ ಕೊರತೆ ಎನಿಸಬಹುದು. ಬಹಳ ದಿನಗಳ ಅನಂತರ ದೂರಪ್ರಯಾಣವನ್ನು ಮಾಡಲು ಹೊರಟಿರುವಿರಿ. ಪುಣ್ಯಸ್ಥಳಗಳ ದರ್ಶನವನ್ನು ಮಾಡಲು ಇಚ್ಛಿಸುವಿರಿ. ಸಾಮಾಜಿಕ ಕಾರ್ಯಗಳು ನಿಮಗೆ ಯಶಸ್ಸನ್ನು ತಂದುಕೊಡಲಿವೆ. ಆರ್ಥಿಕ ಲೆಕ್ಕಾಚಾರವು ನಿಮ್ಮನ್ನು ಬಿಡಮೇಲು ಮಾಡಬಹುದು. ವೃತ್ತಿಯಲ್ಲಿ ನಿಮಗೆ ಭಯವು ಆರಂಭವಾಗಿದ್ದು ಆಪ್ತರ ಜೊತೆ ಹಂಚಿಕೊಳ್ಳಿ. ನಿಮ್ಮ ಸಾಮರ್ಥ್ಯವು ಎಲೆ‌ಮರೆಯ ಕಾತಿಯಂತೆ ಇರಲಿದೆ. ಪ್ರೇಮವನ್ನು ಹೇಳಿಕೊಳ್ಳಲು ನೀವು ಹಿಂದೇಟು ಹಾಕುವಿರಿ. ಆಪತ್ಕಾಲಕ್ಕೆ ಇಟ್ಟ ಹಣವನ್ನು ಖರ್ಚು ಮಾಡಿಕೊಳ್ಳುವಿರಿ. ಮಕ್ಕಳ ವಿಚಾರದಲ್ಲಿ ನೀವು ದುರ್ಬಲರಾಗುವಿರಿ. ಉತ್ತರಿಸಿ ಇನ್ನಷ್ಟು ಹತಾಶರಾಗಬೇಡಿ. ಪ್ರಭಾವಿ ವ್ಯಕ್ತಿಗಳ ಆಕಸ್ಮಿಕ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು.

ಮಿಥುನ ರಾಶಿ : ಎಲ್ಲದರಲ್ಲಿಯೂ ಋಣಾತ್ಮಕತೆಯನ್ನು ನೋಡಿದರೆ ಯಶಸ್ಸು ನಿಮಗೆ ಸಿಗುವುದು ಕಷ್ಟವಾಗಬಹುದು. ಪ್ರಭಾವಿಗಳ ಜೊತೆ ನೀವು ಪ್ರಯಾಣ ಮಾಡುವಿರಿ. ಉದ್ಯೋಗದಲ್ಲಿ ಮನಸ್ತಾಪ ಬಂದು ನೀವು ಆ ಉದ್ಯೋಗವನ್ನು ಬಿಡುವಿರಿ. ಮೇಲಧಿಕಾರಿಗಳ ಜೊತೆ ವಾಗ್ವಾದ ಬೇಡ. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಆಗದೇ ಇರುತ್ತವೆ. ನೀವು ಹೇಳಬೇಕಾದ ವಿಷಯಗಳನ್ನು ಇನ್ನೊಬ್ಬರಿಗೆ ಹೇಳುವಿರಿ. ಮರೆವು ನಿಮಗೆ ಬಹಳ ತೊಂದರೆಯನ್ನು ಕೊಟ್ಟೀತು. ಉದ್ಯಮವನ್ನು ಮಾಡುವ ಮೊದಲು ಅದರ ವ್ಯಾಪ್ತಿಯನ್ನು ಅರ್ಥಮಾಡಿಕೊಳ್ಳಿ. ಅಪರಿಚಿತರ ಕರೆಯಿಂದ ನಿಮಗೆ ಕಷ್ಟವು ಬರಬಹುದು. ನಿಮಗೆ ಏಕಾಂತ ಬೇಕೆನಿಸಿ ದೂರ ಎಲ್ಲಿಯಾದರೂ ಹೋಗುವ ಮನಸ್ಸು ಮಾಡುವಿರಿ. ಸಜ್ಜನರ ಸಹವಾಸವು ನಿಮ್ಮ ಅಹಂಕಾರದಿಂದ ಇರುವ ಕಾರಣ ಸಿಗದು. ಯಾವುದಾದರೂ ಒಂದಕ್ಕೆ ನೀವು ನಿಮ್ಮನ್ನು ಅರ್ಪಿಸಿಕೊಳ್ಳುವುದು ಸೂಕ್ತ. ಸಾಮೂಹಿಕ ಕಾರ್ಯದಿಂದ ನಿಮಗೆ ಯಶಸ್ಸು ಸಿಗಬಹುದು. ಸ್ತ್ರೀಯರಿಗೆ ಖಾಸಗಿ ಸಂಸ್ಥೆಯಲ್ಲಿ ಅಧಿಕಾರ ಸಿಗಲಿದೆ. ಯಾವುದನ್ನೂ ಕೆಲವರ ಮಾತಿನ ಮೇಲೆ ನಂಬಲಾಗದು.

ಕರ್ಕಾಟಕ ರಾಶಿ : ನಿಮ್ಮ ಇಂದಿನ ಮಧ್ಯ ಯಾವ ಪಕ್ಷಪಾತವನ್ನೂ ತೋರಿಸದು. ಸ್ವಂತ ಉದ್ಯೋಗಸ್ಥರಿಗೆ ಲಾಭವಾಗುವುದು. ಸರ್ಕಾರದ ಅಧಿಕಾರಿಗಳು ನಿಮ್ಮನ್ನು ಪೀಡಿಸಬಹುದು. ಸ್ವತಂತ್ರವಾಗಿದ್ದರೂ ಏನನ್ನಾದರೂ ಕಳೆದುಕೊಳ್ಳುತ್ತೇನೆ ಎಂಬ‌ ಭಯವು ಇರುವುದು. ಜೀವನದಲ್ಲಿ ಜುಗುಪ್ಸೆ ಬಂದಂತೆ ವರ್ತಿಸುವಿರಿ. ಮಕ್ಕಳಿಂದ ನೀವು ಪೀಡಿತರಾಗುವಿರಿ. ದಾಂಪತ್ಯದ ಬಿರುಕನ್ನು ನೀವು ಸರಿಮಾಡಲು ಅರ್ಹರು. ಹೊಸತನ್ನು ಕಲಿಯುವ ಆಸೆಯಿದ್ದು ಅವಕಾಶವನ್ನು ಹುಡುಕುವಿರಿ. ಯಾವುದೂ ಜಾದೂವಿನಂತೆ ಆಗದು. ಸಮಯವನ್ನು ನಿರೀಕ್ಷಿಸುವ ತಾಳ್ಮೆಯನ್ನು ಬೆಳೆಸಿಕೊಳ್ಳಬೇಕು. ನಿಮ್ಮ ಕುಲದಿಂದ‌ ಗೌರವವು ಸಿಗಬಹುದು. ಅಧಿಕಾರಯುತವಾದ ಮಾತು ಲೆಕ್ಕಕ್ಕೆ ಬಾರದು. ಹೊಸ ಆರಂಭದಲ್ಲಿ ವೇಗವನ್ನು ಪಡೆದುಕೊಳ್ಳುವುದು. ಅಕ್ರಮ ಆಸ್ತಿಯಿಂದ‌ ತೊಂದರೆಯಾಗಬಹುದು. ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರುವಿರಿ. ತೋರಿಕೆಗೆ ಮಾಡುವ ಕೆಲಸದಲ್ಲಿ ನಿಮಗೆ ಸಂತೋಷ ಸಿಗದು. ‌ಬೇಕಾದ ವಸ್ತುವುದು ನಿಮಗೆ ಸಿಗದೇಹೋಗಬಹುದು.