AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಇನ್ನೊಬ್ಬರ ಮಾತನ್ನು ಕೇಳಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುವುದು ಬೇಡ

ಸೆಪ್ಟೆಂಬರ್​ 18,​ 2024ರ​​ ನಿಮ್ಮ ರಾಶಿಭವಿಷ್ಯ: ಆರ್ಥಿಕ ಒತ್ತಡದಿಂದ ನೀವು ಆಚೆ ಬಂದು ನೆಮ್ಮದಿಯನ್ನು ಕಾಣುವಿರಿ. ನಿಮ್ಮಲ್ಲಿ ಇಂದು ಹೆಚ್ಚು ಉತ್ಸಾವಿರಲಿದ್ದು ಕೆಲಸಕ್ಕೆ ಪೂರಕವಾಗಲಿದೆ. ಯಾರನ್ನೋ ದೂರುವ ಬದಲು ನಿಮ್ಮ ನೇರಕ್ಕೆ ಕೆಲಸವನ್ನು ಮಾಡಿ. ಹಾಗಾದರೆ ಸೆಪ್ಟೆಂಬರ್​ 18ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಇನ್ನೊಬ್ಬರ ಮಾತನ್ನು ಕೇಳಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುವುದು ಬೇಡ
ಇನ್ನೊಬ್ಬರ ಮಾತನ್ನು ಕೇಳಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುವುದು ಬೇಡ
TV9 Web
| Edited By: |

Updated on: Sep 18, 2024 | 12:02 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಗಂಡ, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:30 ಗಂಟೆ, ರಾಹು ಕಾಲ ಮಧ್ಯಾಹ್ನ 12:27 ರಿಂದ 01:58, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:25ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ.

ಮೇಷ ರಾಶಿ: ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದೇ ಇಂದು ನಿಮಗೆ ಲಾಭವಾಗುವುದು. ಸ್ಥಿರಾಸ್ತಿಯನ್ನು ಖರೀದಿಸುವ ಸಂದರ್ಭದಲ್ಲಿ ನಾನಾ ತೊಂದರೆಗಳು ಬರಬಹುದು. ಗೊಂದಲಗಳು ನಿಮ್ಮ ಖರೀದಿಸುವ ತೀರ್ಮಾನವನ್ನು ಬದಲಿಸಲೂಬಹುದು. ಆರ್ಥಿಕ ಒತ್ತಡದಿಂದ ನೀವು ಆಚೆ ಬಂದು ನೆಮ್ಮದಿಯನ್ನು ಕಾಣುವಿರಿ. ನಿಮ್ಮಲ್ಲಿ ಇಂದು ಹೆಚ್ಚು ಉತ್ಸಾವಿರಲಿದ್ದು ಕೆಲಸಕ್ಕೆ ಪೂರಕವಾಗಲಿದೆ. ಯಾರನ್ನೋ ದೂರುವ ಬದಲು ನಿಮ್ಮ ನೇರಕ್ಕೆ ಕೆಲಸವನ್ನು ಮಾಡಿ. ಹಣದ ಹರಿವು ಸಾಧಾರಣವಾಗಿ ಇರುವುದು. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಉಂಟಾಗಲಿದೆ. ನೀವೇ ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಸರಿಯಾಗಲಾರದು.‌ ಉಳಿದವರಿಗೆ ಇದು ಮುಜುಗರವನ್ನು ತಂದೀತು. ಉದ್ಯೋಗದಲ್ಲಿ ಆಲಸ್ಯದಿಂದ ಇರುವ ಕಾರಣ ಅಧಿಕಾರಿಗಳಿಂದ ಎಚ್ಚರಿಕೆಯ ಮಾತುಗಳೂ ಬರಬಹುದು. ವ್ಯಾಪಾರದ ನಷ್ಟವನ್ನು ಬೇರೆ ರೀತಿಯಿಂದ ಸರಿಮಾಡಿಕೊಳ್ಳುವಿರಿ. ಯಾರ ಜೊತೆಯೂ ನಿರ್ದಯೆಯಿಂದ ವ್ಯವಹರಿಸುವುದು ಬೇಡ.

ವೃಷಭ ರಾಶಿ: ಇಂದು ನಿಮಗೆ ಸಿಕ್ಕ ಸಂತೋಷವನ್ನು ಇತರರಿಗೂ ಹಂಚುವಿರಿ. ನಿಮಗೆ ಪ್ರಾಪ್ತವಾದ ಸ್ಥಾನದಿಂದ ನಿಮ್ಮ ಆಲೋಚನಾ ಕ್ರಮಗಳೂ ವ್ಯತ್ಯಾಸವಾಗುವುದು. ಸಹಭಾಗಿಗಳ ಜೊತೆ ಸ್ನೇಹದಿಂದ ಇರಬೇಕಾಗುವುದು. ಉದ್ಯೋಗವನ್ನು ಬದಲಿಸಲು ಇಚ್ಛೆ ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆದೀತು. ಬಿದ್ದು ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ ಇದೆ. ಬಂಧುಗಳು ನಿಮಗೆ ಸಹಕಾರವನ್ನು ಕೊಡದೇ ಹೋಗಬಹುದು. ಮಾನಸಿಕ ನೋವನ್ನು ಮರೆಯಲು ಎಲ್ಲಿಗಾದರೂ ದೂರ ಹೋಗಲಿದ್ದೀರಿ. ಅಧ್ಯಾತ್ಮಕ್ಕೆ ಸಮಯ ಕೊಡುವುದು ಕಷ್ಟವಾದೀತು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿಕೊಡುವಿರಿ. ಇನ್ನೊಬ್ಬರ ಮಾತಿನ್ನು ಕೇಳಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುವುದು ಬೇಡ. ಹಿರಿಯರ ಮಾರ್ಗದರ್ಶನ ಸಿಗಲಿದೆ. ನಿಮ್ಮ ಗುಟ್ಟನ್ನು ಯಾರ ಬಳಿಯೂ ಬಿಟ್ಟುಕೊಡಲಾರಿರಿ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು.

ಮಿಥುನ ರಾಶಿ: ಕಾರ್ಯದ ಸ್ಥಳದಲ್ಲಿ ನಿಮಗೆ ಕಹಿಯಾದ ಅನುಭವವಾಗಲಿದೆ. ಇಂದು ನಿಮ್ಮ ಅನುಭವದ ಆಧಾರದ ಯೋಗ್ಯವಾದ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮತ್ತೆ ನಡೆಯುವ ಘಟನೆಗಳನ್ನುಬಗಂಭೀರವಾಗಿ ಸ್ವೀಕರಿಸುವುದು ಬೇಡ. ಮಾನಸಿಕ ನೋವಿನಿಂದ ಬಳಲುವಿರಿ. ಹೊಸತನ್ನು ಅಭ್ಯಾಸ ಮಾಡಬೇಕು ಎನ್ನುವ ಹಂಬಲವು ನಿಲ್ಲುವುದು. ನಟನೆಗೆ ಆಸಕ್ತಿಯು ಬರಲಿದೆ. ಸಾಮಾಜಿಕ ಕಾರ್ಯದಲ್ಲಿ ಮೆಚ್ಚುಗೆ ಸಿಗಲಿದೆ. ಕುಲದೇವರ ದರ್ಶನವನ್ನು ಮಾಡುವಿರಿ. ಆಕರ್ಷಣೆಯಿಂದ ಖರ್ಚನ್ನು ಹೆಚ್ಚು ಮಾಡಿಕೊಳ್ಳುವಿರಿ. ರಾಜಕಾರಿಣಿಗಳ ಭೇಟಿಯಾಗಲಿದೆ. ನಿಮ್ಮ‌ ಸಾಮರ್ಥ್ಯವನ್ನು ಪ್ರದರ್ಶಿಸುವಿರಿ. ಪ್ರವಾಸದಿಂದ ನಿಮಗೆ ತೊಂದರೆಯಾಗಲಿದೆ. ಹೂಡಿಕೆಯ ಹಣವನ್ನು ತೆಗೆಯುವ ನಿರ್ಧಾರಕ್ಕೆ ಬರಬೇಕಾದೀತು.‌ ಪರಿಸ್ಥಿತಿಯನ್ನು ನೋಡಿ ತೀರ್ಮಾನಿಸಿ.

ಕಟಕ ರಾಶಿ: ಧಾರ್ಮಿಕ ಕಾರ್ಯಗಳ ಸಿದ್ಧತೆಯಲ್ಲಿ ನೀವಿರುವಿರಿ. ನಿಮ್ಮ ಸ್ನೇಹಪರವಾದ ವ್ಯಕ್ತಿತ್ವವು ಎಲ್ಲರಿಗೂ ಇಷ್ಟವಾಗುತ್ತದೆ ಎನ್ನಲಾಗದು. ವೃತ್ತಿಯಲ್ಲಿ ಯಾವುದೇ ತೊಂದರೆಗಳಿಲ್ಲದೇ ಎಲ್ಲವೂ ಮುಗಿಯಬಹುದು. ಅಪಕ್ವವಾದ ಆಹಾರಸೇವನೆಯಿಂದ ತೊಂದರೆಯಾಗಲಿದೆ. ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಯು ಹೆಚ್ಚಾಗಬಹುದು. ಬೇರೆ ಊರಿಗೆ ಹೋಗಿ ಸಂಕಟಪಡುವಿರಿ. ದಾಂಪತ್ಯದಲ್ಲಿ ಹೊಂದಾಣಿಯನ್ನು ತರಲು ಬಹಳ ಶ್ರಮವನ್ನು ವಹಿಸಬೇಕಾದೀತು. ಅಪರಿಚಿತ ವ್ಯಕ್ತಿಯಿಂದ ನೀವು ಹೆದರಿ ಸಂಪತ್ತನ್ನು ಕಳೆದುಕೊಳ್ಳಲಿದ್ದೀರಿ. ನಿಮ್ಮವರನ್ನು ನೀವು ಕಳೆದುಕೊಳ್ಳುವ ಭೀತಿಯಲ್ಲಿ ಇರುವಿರಿ. ಮಕ್ಕಳ‌ ಜೊತೆ ಕಾಲವನ್ನು ಕಳೆಯುವಿರಿ. ನಿಮ್ಮದಲ್ಲದ್ದನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ವೃತ್ತಿಯ ಬಗ್ಗೆ ನಿಮ್ಮಲ್ಲಿ ಹಲವು ಗೊಂದಲಗಳು ಕಾಣಿಸುವುದು. ತಾಯಿಯ ಆಸೆಯನ್ನು ಸ್ವಲ್ಪವಾದರೂ ತೀರಿಸುವಿರಿ. ನೀವು ಇಂದು ಅನೇಕ ಪಾತ್ರಗಳನ್ನು ನಿರ್ವಹಿಸಬೇಕಾಗಬಹುದು.

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ