Horoscope: ನಿಮ್ಮ‌ ಮೇಲೆ‌ ಕೆಟ್ಟ ಕಣ್ಣುಗಳು ಬೀಳಬಹುದು, ಇತರರನ್ನು ಸುಲಭವಾಗಿ ನಂಬುಹುದಿಲ್ಲ

ಸೆಪ್ಟೆಂಬರ್​ 20,​ 2024ರ​​ ನಿಮ್ಮ ರಾಶಿಭವಿಷ್ಯ: ಅಶುಭ ಸೂಚನೆಗಳನ್ನು ಗಮನಿಸಿಯೂ ಉದ್ಧಟತನದಿಂದ ಮುನ್ನುಗ್ಗುವಿರಿ. ಯಾರಾದರೂ ನಿಮ್ಮನ್ನು ಪೀಡಿಸಬಹುದು. ಆಪ್ತಬಂಧುವನ್ನೊಬ್ಬರನ್ನು ಕಳೆದುಕೊಳ್ಳಲೂಬಹುದು. ಎಲ್ಲರೆದುರು ಮುಖಭಂಗವಾಗಬಹುದು. ವೈವಾಹಿಕ ಜೀವನದ ಕನಸನ್ನು ನೀವು ಕಾಣುವಿರಿ. ಹಾಗಾದರೆ ಸೆಪ್ಟೆಂಬರ್​ 20ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ನಿಮ್ಮ‌ ಮೇಲೆ‌ ಕೆಟ್ಟ ಕಣ್ಣುಗಳು ಬೀಳಬಹುದು, ಇತರರನ್ನು ಸುಲಭವಾಗಿ ನಂಬುಹುದಿಲ್ಲ
ನಿಮ್ಮ‌ ಮೇಲೆ‌ ಕೆಟ್ಟ ಕಣ್ಣುಗಳು ಬೀಳಬಹುದು, ಇತರರನ್ನು ಸುಲಭವಾಗಿ ನಂಬುಹುದಿಲ್ಲ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 20, 2024 | 12:05 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಉತ್ತರಾಭಾದ್ರ / ರೇವತೀ, ಯೋಗ: ಧ್ರುವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ 12:26, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:58ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ ಮಧ್ಯಾಹ್ನ 09:24ರ ವರೆಗೆ.

ಮೇಷ ರಾಶಿ: ಯಾವುದನ್ನೇ ಒಪ್ಪಿಕೊಳ್ಳುವುದಾದರೂ ನಿಮಗೆ ಬಲವಾದ ಕಾರಣ ಬೇಕಾಗುತ್ತದೆ. ಪಾಲುದಾರಿಕೆಯಲ್ಲಿ ಹೊಸ ಉದ್ಯಮವನ್ನು ಆರಂಭಿಸುವಿರಿ. ಕುಟುಂಬವು ನಿಮ್ಮ ಶ್ರೇಯಸ್ಸನ್ನು ಹಾರೈಸಲಿದೆ. ಪಾಲುದಾರಿಕೆಯಲ್ಲಿ ಹಣಕಾಸಿನ ವಿಚಾರವು ವಿವಾದಕ್ಕೆ ಕಾರಣವಾಗಲಿದೆ. ಕಾರ್ಯಗಳಲ್ಲಿ ಉಂಟಾದ ವಿಘ್ನವನ್ನು ಪುರುಷಪ್ರಯತ್ನದಿಂದ ಸಾಧಿಸುವಿರಿ. ದಾಂಪತ್ಯದ ಭಿನ್ನಾಭಿಪ್ರಾಯಗಳು ಅಲ್ಪಕಾಲದಲ್ಲಿಯೇ ಸರಿಯಾಗುವುದು. ಸಂಗಾತಿಯನ್ನು ಬೇಸರದಲ್ಲಿದ್ದು ನೀವು ಸಮಾಧಾನ ಮಾಡುವಿರಿ. ನಿಮಗೆ ಸಾಕಷ್ಟು ಸಮಯವುವ ಇಂದು ಇರಲಿದ್ದು ಏನನ್ನೂ ಮಾಡದೇ ಕಾಲವನ್ನು ಕಳೆಯುವಿರಿ. ಉತ್ತಮ ಹವ್ಯಾಸವನ್ನು ಬೆಳೆಸಿಕೊಳ್ಳುವ ಹಂಬಲವಿರುವುದು. ನಿಮ್ಮನ್ನು ನೀವು ಪ್ರಕಟಮಾಡಿಕೊಳ್ಳು ತಯಾರಾಗುವಿರಿ. ನಿಮ್ಮ‌ ಮೇಲೆ‌ ಕೆಟ್ಟ ಕಣ್ಣುಗಳು ಬೀಳಬಹುದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ.

ವೃಷಭ ರಾಶಿ: ಯಾವುದನ್ನೇ ಪಡೆಯುವುದಿದ್ದರೂ ಸುಲಭಕ್ಕೆ ಸಿಕ್ಕುವುದಿಲ್ಲ. ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವಿರಿ. ನಿಮ್ಮ ಇಂದಿನ ಸುತ್ತಾಟ ವ್ಯರ್ಥವಾಗುವುದು. ಅಶುಭ ಸೂಚನೆಗಳನ್ನು ಗಮನಿಸಿಯೂ ಉದ್ಧಟತನದಿಂದ ಮುನ್ನುಗ್ಗುವಿರಿ. ಯಾರಾದರೂ ನಿಮ್ಮನ್ನು ಪೀಡಿಸಬಹುದು. ಆಪ್ತಬಂಧುವನ್ನೊಬ್ಬರನ್ನು ಕಳೆದುಕೊಳ್ಳಲೂಬಹುದು. ಎಲ್ಲರೆದುರು ಮುಖಭಂಗವಾಗಬಹುದು. ವೈವಾಹಿಕ ಜೀವನದ ಕನಸನ್ನು ನೀವು ಕಾಣುವಿರಿ. ನಿಮ್ಮ‌ ದೂರಾಲೋಚನೆಯು ವಾಸ್ತವಕ್ಕಿಂತ ದೂರವಿರುವುದು. ಇಂದು ನಿಮಗೆ ಒಂಟಿಯಾಗಿ ಇರುವುದು ಹೆಚ್ಚು ಇಷ್ಟವಾಗುವುದು. ಸದಭಿರುಚಿಯು ನಿಮಗೆ ವರವಾಗಬಹುದು. ನಿಮ್ಮ‌ ಭಾವವನ್ನು ಪ್ರಕಟಗೊಳಿಸಿ. ಅವಶ್ಯಕ ವಸ್ತುಗಳು ಕಣ್ಮರೆಯಾದಾವು. ಪ್ರಪಂಚಜ್ಞಾನದ ಅಗತ್ಯತೆ ಹೆಚ್ಚಿವಿರುವಂತೆ ತೋರುತ್ತದೆ. ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ನಿಮ್ಮ ದುಃಖವನ್ನು ಹಂಚಿಕೊಳ್ಳಲು ವ್ಯಕ್ತಿಯನ್ನು ಹುಡುಕುವಿರಿ.

ಮಿಥುನ ರಾಶಿ: ಸಾಲವನ್ನು ತೀರಿಸಲು ಮತ್ತೊಂದು ಸಾಲವನ್ನು ಮಾಡಬೇಕಾಗುವುದು. ನೀವು ಇಂದು ಅಸಾಧ್ಯವೆಂದು ಬಿಟ್ಟ ಕಾರ್ಯಗಳನ್ನು ಪುನಃ ಕೈಗೆತ್ತಿಕೊಳ್ಳುವಿರಿ. ಸಹೋದರನ ಸಹಾಕಾರವು ಸ್ವಲ್ಪಮಟ್ಟಿಗೆ ಅನುಕೂಲವಾಗುವುದು. ನೂತನ ವಾಹನದ‌ ಖರೀದಿಯನ್ನು ಮಾಡುವ ಬಯಕೆಯು ಇಂದು ಪೂರ್ಣಗೊಳ್ಳಬಹುದು. ಹಿತಶತ್ರು ನಿಮ್ಮ‌ ಪತನವನ್ನೇ ನಿರೀಕ್ಷಿಸುತ್ತ ಅದಕ್ಕೆ ಬೇಕಾದುದನ್ನು ಮಾಡುವರು.‌ ನಿಮ್ಮ ಕೈಗೆ ಸಿಕ್ಕ ಹಣವು ಗೊತ್ತಾಗದಹಾಗೆ ಖರ್ಚಾಗುವುದು. ಇಂದಿನ‌ ಕಾರ್ಯದ ಯಾದಿ ಮಾಡಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ನಿಮ್ಮ ಸಂಪೂರ್ಣ ತಲ್ಲೀನತೆಯು ಕಾರ್ಯವನ್ನು ಮುಗಿಸಲು ಸಹಾಯಕವಾಗಲಿದೆ. ಕಾನೂನಾತ್ಮಕ ವಿಚಾರಕ್ಕೆ ಮಾತ್ರ ನಿಮ್ಮ ಬೆಂಬಲವು ಇರಲಿ. ಇಂದು ನೀವು ತಾಳ್ಮೆಯನ್ನು ಅಭ್ಯಾಸದಿಂದ ಗಳಿಸಬೇಕಾಗುವುದು. ಸಂಗಾತಿಯ ಜೊತೆ ಒಡನಾಟವು ಹೆಚ್ಚಿರಲಿದೆ. ಆಸ್ತಿಯ ವಿಚಾರಕ್ಕೆ ದಾಯಾದಿ ಕಲಹವಾಗಬಹುದು. ನಿಮ್ಮವರ ಪ್ರೀತಿಗೆ ನೀವು ಮನಸೋಲುವಿರಿ.

ಕರ್ಕಾಟಕ ರಾಶಿ: ಪಾಲುದಾರಿಕೆಯನ್ನು ಬಿಡುವ ಆಲೋಚನೆ ಬರಬಹುದು. ಇಂದು ನಿಮ್ಮ ಕಷ್ಟಕರ ಸಂದರ್ಭದಲ್ಲಿಯೂ ಧೈರ್ಯವನ್ನು ಬಿಡದೇ ಎದುರಿಸಬೇಕು. ನಿಮ್ಮ ಮನೆಯ ಕೆಲಸವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭವಾಗಲಿದೆ. ಇದು ನಿಮಗೆ ಅನಿರೀಕ್ಷಿತ ಆನಂದವನ್ನು ತರಬಹುದು. ಬಹಳ ದಿನಗಳ ಅನಂತರ ತಂದೆಯ ಜೊತೆ ಮಾತನಾಡಿ ಅವರ್ಣನೀಯ ನೆಮ್ಮದಿಯು ಪಡೆಯುವಿರಿ. ಅಪರಿಚಿತರಿಂದ ನಿಮಗೆ ಗೌರವ ಪ್ರಾಪ್ತವಾಗುವುದು. ಇನ್ನೊಬ್ಬರ‌ ನೋವಿಗೆ ಸ್ಪಂದಿಸುವ ನಿಮ್ಮ ಗುಣವು ಹಲವವರಿಗೆ ಮೆಚ್ಚುಗೆಯಾಗಬಹುದು. ನಿಮಗೆ ಸಿಕ್ಕ ವ್ಯಕ್ತಿಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ಸಾಹಸದ ಪ್ರವೃತ್ತಿಯು ಸದ್ಯಕ್ಕೆ ಬೇಡ. ನಿಮಗೆ ತಾಳ್ಮೆಯು ಕಡಿಮೆ ಇರುವುದು ಗೊತ್ತಾಗುವುದು. ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ನಂಬಿಕೆ ದ್ರೋಹವು ನಿಮಗೆ ಕಷ್ಟವಾದೀತು. ನಿಮ್ಮ ಕೋಪಕ್ಕೆ ಒಂದು ಮಿತಿ‌ ಇರಲಿ. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ. ಕೋಪಕ್ಕಿಂತ ತಾಳ್ಮೆಯೇ ನಿಮಗೆ ಸುಖವೆನಿಸಬಹುದು.

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್