AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಇಂದು ಸುಳ್ಳು ಹೇಳಿ ಸಿಕ್ಕಿಬೀಳುವಿರಿ-ಎಚ್ಚರ

ಇಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ,  ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಇಂದಿನ (ಮಾರ್ಚ 01 ) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಇಂದು ಸುಳ್ಳು ಹೇಳಿ ಸಿಕ್ಕಿಬೀಳುವಿರಿ-ಎಚ್ಚರ
ರಾಶಿ ಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 01, 2024 | 10:47 PM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:16 ರಿಂದ 12:45ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:19 ರಿಂದ 09:48ರ ವರೆಗೆ.

ಸಿಂಹ ರಾಶಿ : ಇಂದು ನಿಮ್ಮ ಸತತ ಪ್ರಯತ್ನದ ನಡುವೆಯೂ ನೀವು ಖರ್ಚನ್ನು ಖರ್ಚನ್ನು ಕಡಿಮೆ‌ ಮಾಡಿಕೊಳ್ಳಲು ಆಗದು. ಯಾವುದೋ ನಿಶ್ಚಿತ ಮೂಲದಿಂದ ಹಣ ಬರುವ ಭರವಸೆ ಇರುವುದು. ಸ್ನೇಹಿತರು ನಿಮ್ಮ ಸಮಯಪ್ರಜ್ಞೆಯನ್ನು ಇಷ್ಟಪಡುವರು. ಸಂಸ್ಥೆಯ ಮುಖ್ಯಸ್ಥರಾಗಿ ಆಯ್ಕೆಯಾಗುವ ಸಂಭವವಿದೆ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು. ಹೂಡಿಕೆಗೆ ನಿಮ್ಮದಾದ ತಂತ್ರವನ್ನು ಬಳಸುವಿರಿ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು. ನಿಮ್ಮ ಜವಾಬ್ದಾರಿಗಳು ಹೆಚ್ಚಾಗಿ ಅದನ್ನು ಕಳೆದುಕೊಳ್ಳುವ ಆಲೋಚ‌ನೆ‌ಮಾಡುವಿರಿ. ಆರೋಗ್ಯದ ರಕ್ಷಣೆಯಲ್ಲಿ ಹಿನ್ನಡೆಯಾದೀತು. ಅಪರಿಚಿತರ ವಿದ್ಯಾಭ್ಯಾಸಕ್ಕೆ ನಿಮ್ಮಿಂದ ಸಹಾಯವು ಸಿಗಲಿದೆ. ಆದಿತ್ಯ ಹೃದಯವನ್ನು ಪಠಿಸಿ.

ಕನ್ಯಾ ರಾಶಿ : ಇಂದು ನೀವು ಭಯದ ವಾತಾವರಣದಲ್ಲಿ ಇರುವಿರಿ. ಮನೆಯಿಂದ ದೂರಾಗುವ ಸಂದರ್ಭವು ಬರಬಹುದು. ನಿಮ್ಮ ಮೆಚ್ಚಿನವರ ಭೇಟಿಯಾಗಲಿದೆ. ವಿನಾಕಾರಣ ವಾಗ್ವಾದದಿಂದ ದ್ವೇಷವನ್ನು ಬೆಳೆಸಿಕೊಳ್ಳುವಿರಿ. ಅತಿಯಾದ ಆಡಂಬರವು ನಿಮಗೇ ಮುಜುಗರವನ್ನು ತಂದೀತು. ಹಿತಶತ್ರುಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಉದ್ಯಮದಲ್ಲಿ ಉಂಟಾದ ಬೆಳವಣಿಗೆಯನ್ನು ಸಕಾರಾತ್ಮಕವಾಗಿ ಆಲೋಚಿಸಿ. ಕೆಲವು ತೀರ್ಮಾನದ ವಿಚಾರದಲ್ಲಿ ಮನಸ್ಸು ಗೊಂದಲವಾಗಿ ಇರುವುದು. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಗುರುವನ್ನು ಭೇಟಿಯಾಗಿ ಆಶೀರ್ವಾದವನ್ನು ಪಡೆಯುವಿರಿ. ಕಳೆದುದನ್ನು ಮತ್ತೆ ನೆನಪಿಸಿಕೊಳ್ಳಲು ಇಷ್ಟಪಡುವುದಿಲ್ಲ. ಲಕ್ಷ್ಮೀ ನಾರಾಯಣರ ಆರಾಧನೆ ಮಾಡಿ.

ತುಲಾ ರಾಶಿ : ಇಂದು ನಿಮ್ಮ ಅಧಿಕಾರದ ಮಾತಿಗೆ ಮನ್ನಣೆ ಸಿಗುವುದು. ನಿಮ್ಮ ಪರಿಶ್ರಮದಿಂದ ಎಲ್ಲವನ್ನೂ ಪಡೆದುಕೊಂಡ ಮಾನಸಿಕತೆ ಇರಲಿದೆ. ಹಣಕಾಸಿನ ಬಗ್ಗೆ ಸಂಗಾತಿ ಜತೆಗೆ ಚರ್ಚಿಸುವಿರಿ. ಅನಿವಾರ್ಯ ಸಂದರ್ಭದಲ್ಲಿ ಇಂದು ಸುಳ್ಳು ಹೇಳಿ ಸಿಕ್ಕಿಬೀಳುವಿರಿ. ವೃತ್ತಿಯಲ್ಲಿ ಪರಿಣಿತಿಯನ್ನು ಸಾಧಿಸಿಕೊಳ್ಳುವಿರಿ. ಸಹೋದ್ಯೋಗಿಗಳಿಂದ ಒತ್ತಡವು ಬರಬಹುದು. ಮರ ಮುಂತಾದ ಕೆಲಸಗಳಲ್ಲಿ ಆಸಕ್ತಿಯು ಹೆಚ್ಚುವುದು. ಸಂಗಾತಿಯ ಜೊತೆ ವ್ಯವಹಾರದ ವಿಚಾರಕ್ಕೆ ಕಲಹವಾಗಬಹುದು. ಅಪರೂಪದ ಮಿತ್ರರ ಭೇಟಿಯಿಂದ ಸಂತೋಷವಾಗಲಿದೆ. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಇನ್ನೊಬ್ಬರನ್ನು ನೀವು ನೋಡುವ ದೃಷ್ಟಿಯನ್ನು ಬದಲಿಕೊಳ್ಳಬೇಕು. ಲಕ್ಷ್ಮೀಸ್ತೋತ್ರವನ್ನು ಪಠಿಸಿ.

ವೃಶ್ಚಿಕ ರಾಶಿ : ಇಂದು ನಿಮ್ಮ ಕಡೆಯಿಂದ ಯಾವುದೇ ತಪ್ಪುಗಳು ಆಗದಂತೆ ನೋಡಿಕೊಳ್ಳಿ. ಧಾರ್ಮಿಕ ಆಚರಣೆಗಳಿಗೆ ಅಡ್ಡಿಗಳು ಬರಬಹುದು. ಪಿತ್ರಾರ್ಜಿತ ಆಸ್ತಿಯನ್ನು ಒಪ್ಪಂದದ ಆಧಾರದ ಮೇಲೆ ಬಗೆಹರಿಸಿಕೊಳ್ಳುವಿರಿ. ಇಂದು ನೀವು ನಿರೀಕ್ಷೆ ಮಾಡಿದಷ್ಟು ಆದಾಯ ಬರುವುದಿಲ್ಲ. ಇತರರ ಮೇಲೆ ದೋಷಾರೋಪ ಮಾಡುವ ಸ್ವಭಾವವನ್ನು ಬದಲಿಸಿ ಕೊಳ್ಳಬೇಕಾಗುವುದು. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ. ರಾಜಕೀಯವಾದ ಲಾಭದ ಗಳಿಕೆಯು ಇರಲಿದೆ. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಸರ್ಕಾರಿ ಉದ್ಯೋಗಿಗಳ ಸ್ಥಾನವು ಹೆಚ್ಚಾಗಬಹುದು. ಅನಪೇಕ್ಷಿತ ಸ್ಥಳದಲ್ಲಿ ಇರಲು ಇಷ್ಟಪಡುವುದಿಲ್ಲ. ಸುಬ್ರಹ್ಮಣ್ಯ ಸ್ತೋತ್ರವನ್ನು ಪಠಿಸಿ.

Published On - 12:30 am, Fri, 1 March 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ