AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಆತ್ಮೀಯರನ್ನು ನೀವು ಕಳೆದುಕೊಳ್ಳಬೇಕಾಗುವುದು, ಪ್ರಯತ್ನಕ್ಕೆ ಸರಿಯಾಗಿ ಫಲವು ಸಿಗದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 29, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಆತ್ಮೀಯರನ್ನು ನೀವು ಕಳೆದುಕೊಳ್ಳಬೇಕಾಗುವುದು, ಪ್ರಯತ್ನಕ್ಕೆ ಸರಿಯಾಗಿ ಫಲವು ಸಿಗದು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Dec 29, 2023 | 12:10 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 29) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪುಷ್ಯ, ಯೋಗ: ವೈಧೃತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 57 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:10 ರಿಂದ 12:35 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:23 ರಿಂದ 04:47ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:22 ರಿಂದ 09:46ರ ವರೆಗೆ.

ಮೇಷ ರಾಶಿ: ಇಂದು ನಿಮ್ಮೊಳಗಿನ‌ ಆತ್ಮವಿಶ್ವಾಸವೇ ಆಗಬೇಕಾದ ಕಾರ್ಯಗಳನ್ನು ಮಾಡಿಸಿಕೊಳ್ಳುವುದು. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು. ಕಳೆದುಕೊಂಡಿದ್ದು ನಿಮ್ಮ ಕೈಸೇರಬಹುದು. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಹಿರಿಯರ ಭೇಟಿಯಿಂದ ಜೀವನಕ್ಕೆ ಹಲವು ಪ್ರಯೋಜನಗಳು ಆಗಲಿವೆ. ಸ್ಥಾನಮಾನವನ್ನು ಪಡೆಯಲು ಏನಾದರೂ ಮಾಡುವಿರಿ. ಸಣ್ಣ ಕಾರಣಕ್ಕೆ ಸ್ನೇಹವನ್ನು ಮುರಿದುಕೊಳ್ಳುವಿರಿ.‌ ಯಾರಿಗೂ ಒತ್ತಾಯ ಪೂರ್ವಕ ಇಟ್ಟುಕೊಳ್ಳುವುದು ಬೇಡ. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡಬಹುದು. ಅಪರಿಚಿತರಿಗೆ ನಿಮ್ಮ ಬಗ್ಗೆ ತಿಳಿದುಕೊಳ್ಳುವ ಕುತೂಹಲವು ಬರಬಹುದು.

ವೃಷಭ ರಾಶಿ: ನಿಮ್ಮ ಜವಾಬ್ದಾರಿಯ ಬಗ್ಗೆ ತಾತ್ಸಾರಭಾವವು ಬರಬಹುದು. ಕೆಲವನ್ನು ನೀವು ದೂರ ಇಟ್ಟುಕೊಳ್ಳುವುದೇ ಉತ್ತಮ. ಯಾರ ಸಹಕಾರವನ್ನೂ ಪಡೆಯದೇ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳುವಿರಿ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ನಿಮ್ಮಷ್ಟಕ್ಕೆ ನೀವು ಇದ್ದುಬಿಡಿ. ಹಣಕಾಸಿನ ತೊಂದರೆಯನ್ನು ಸರಿ ಮಾಡಿಕೊಳ್ಳುವ ಮಾರ್ಗದ ಅನ್ವೇಷಣೆ ಮಾಡುವಿರಿ. ಅಹಿತಕರ ಆಹಾರದಿಂದ ಆರೋಗ್ಯವು ಕೆಡಬಹುದು. ನೀರಿನ ಭೀತಿಯು ಇರಲಿದೆ. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟವಾಗುವುದು. ನೀವು ಇಂದು ಮೌನವನ್ನೇ ಹೆಚ್ಚು ಇಷ್ಟಪಡುವಿರಿ.‌ ಇಬ್ಬಗೆಯ ಮಾನಸಿಕತೆಯು ಬೇಡ. ಭವಿಷ್ಯದ ಬಗ್ಗೆ ಚಿಂತನೆಯನ್ನು ನಡೆಸುವಿರಿ.

ಮಿಥುನ ರಾಶಿ: ನಿಮ್ಮ ವೈಯಕ್ತಿಕ ವಿಚಾರಗಳನ್ನು ಅಗತ್ಯವಿರುವವರಿಗೆ ತಿಳಿಸಿ.‌ ನಿಮ್ಮ ಕಾರ್ಯನಿರ್ವಹಣೆಯಿಂದ ಉತ್ತಮ ಫಲಿತಾಂಶವು ಸಿಗಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸಿ ನೆಮ್ಮದಿ ಸಿಗುವುದು. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ. ಮನೆಯ ವಾತಾವರಣವು ಸಂತೋಷವನ್ನು ಕೊಟ್ಟೀತು. ಎಲ್ಲ ವಿಚಾರಕ್ಕೂ ಸಿಟ್ಟು ಉಪಯೋಗಕ್ಕೆ ಬಾರದು. ಮಾತಗಳಲ್ಲಿ ವಕ್ರತೆಯನ್ನು ಕಡಿಮೆ ಮಾಡಿ. ಪ್ರಾಪಂಚಿಕ ಸುಖದಲ್ಲಿ ಆಸಕ್ತಿಯು ಕಡಿಮೆಯಾಗುವುದು. ಅಧ್ಯಾತ್ಮದ ವಿಚಾರವು ಹೆಚ್ಚು ಇಷ್ಟವಾಗುವುದು. ಇನ್ನೊಬ್ಬರ ದುಃಖಕ್ಕೆ ಸ್ಪಂದಿಸುವಿರಿ. ಎಲ್ಲರ ಜೊತೆ ಉತ್ಸಾಹದಿಂದ ಮಾತನಾಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡಬೇಕು ಎಂದುಕೊಳ್ಳುವಿರಿ.

ಕಟಕ ರಾಶಿ: ವಿವಾದವಿಲ್ಲದೇ ಇರಲಾರದಷ್ಟು ನಿಮ್ಮ ಮಾನಸಿಕ ಸ್ಥಿತಿ ಬದಲಾಗಿದೆ. ನಿಮ್ಮ ಸಕಾರಾತ್ಮಕ ಆಲೋಚನೆಗಳೂ ನಿಮಗೆ ಸಹಕಾರವನ್ನು ಕೊಡದು. ಕುಟುಂಬದಲ್ಲಿ ಜವಾಬ್ದಾರಿಯ ಸ್ಥಾನವನ್ನು ಪಡೆಯಬೇಕಾಗುವುದು. ಆತ್ಮೀಯರನ್ನು ನೀವು ಕಳೆದುಕೊಳ್ಳಬೇಕಾಗುವುದು. ಪ್ರಯತ್ನಕ್ಕೆ ಸರಿಯಾಗಿ ಫಲವು ಸಿಗದು. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು. ನಿಮ್ಮವರ ಬಗ್ಗೆ ಯಾರಾದರೂ ಕಿವಿ ಚುಚ್ಚಬಹುದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತವಾಗಿ ಇರದು. ಯಂತ್ರಗಳ ಕೆಲಸವು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಸಂಗಾತಿಯ ಮಾತಿನಿಂದ‌ ಕೆಲವು ಮಾರ್ಪಾಡು ಮಾಡಿಕೊಳ್ಳುವಿರಿ. ನಿಮ್ಮದೇ ಆದ ಕಾರ್ಯದಲ್ಲಿ ಮಗ್ನರಾಗುವಿರಿ. ನಾಲ್ಕಾರು ಕಾರ್ಯಗಳನ್ನು ಒಟ್ಟಿಗೇ ವಹಿಸಿಕೊಂಡು ಯಾವುದನ್ನೂ ಮಾಡಲಾರಿರಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ