AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಸ್ವಲ್ಪ ತೊಂದರೆ ನೀಡಬಹುದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಫೆಬ್ರವರಿ 07, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Nitya Bhavishya: ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಸ್ವಲ್ಪ ತೊಂದರೆ ನೀಡಬಹುದು
ರಾಶಿ ಭವಿಷ್ಯ
TV9 Web
| Edited By: |

Updated on: Feb 07, 2024 | 12:15 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ಹರ್ಷಣ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:47 ರಿಂದ 02:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:27 ರಿಂದ 09:54 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:20 ರಿಂದ 12:47ರ ವರೆಗೆ.

ಮೇಷ ರಾಶಿ : ನಿಮ್ಮ ಮೇಲಿನ ಪ್ರೀತಿಯಿಂದ ಯಾರಾದರೂ ಅಗತ್ಯ ಸಹಕಾರವನ್ನು ಕೊಡುವರು. ವ್ಯಾಪಾರವನ್ನು ವಿಸ್ತರಿಸಲು ಕುಟುಂಬದ ಸದಸ್ಯರ ಸಹಾಯವನ್ನು ತೆಗೆದುಕೊಳ್ಳಬೇಕಾಗಬಹುದು. ಧಾರ್ಮಿಕತೆಯು ನಿಮ್ಮನ್ನು ಆಪತ್ತಿನಿಂದ ಕಾಪಾಡಬಹುದು. ಕಲಾವಿದರಿಗೆ ನೀವು ಗೌರವ ಕೊಡುವಿರಿ. ಉನ್ನತ ಶಿಕ್ಷಣದ ಹಾದಿ ಸುಗಮವಾಗುವುದು. ಇಂದು ನೀವು ನಿಮ್ಮ ವೃತ್ತಿಗೆ ಸಂಬಂಧಿಸಿದ ಬೇರೆ ಬೇರೆ ಮಜಲುಗಳನ್ನು ಅರಿಯುವಿರಿ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಮುಖ್ಯ ಕೆಲಸವನ್ನು ನೀವು ಮರೆಯುವಿರಿ. ಅಪರಿಚಿತರಿಂದ ನಿಮಗೆ ಕೆಲಸ ಸಿಗಬಹುದು. ಇಂದು ನೀವು ಮಾನಸಿಕವಾಗಿ ತುಂಬಾ ಆಯಾಸವನ್ನು ಅನುಭವಿಸಬಹುದು. ಪ್ರೇಮ ಜೀವನದಲ್ಲಿ ಏರಿಳಿತಗಳಿರಬಹುದು. ನಿಮ್ಮ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಅಗತ್ಯವಿರುವವರಿಗೆ ಆರ್ಥಿಕ ಸಹಾಯವನ್ನು ಮಾಡಬೇಕು ಎನಿಸುವುದು.

ವೃಷಭ ರಾಶಿ : ಇಂದು ನೀವು ನಿರ್ಧಾರವನ್ನು ಆತುರದಿಂದ ಮತ್ತು ಭಾವನಾತ್ಮಕವಾಗಿ ತೆಗೆದುಕೊಳ್ಳುವಿರಿ. ನೀವು ಕೆಲವು ನಿರಾಶಾದಾಯಕ ಮಾಹಿತಿಯನ್ನು ಇಂದು ಪಡೆಯುವಿರಿ. ನೀವು ಅನಿರೀಕ್ಷಿತ ಪ್ರವಾಸವನ್ನು ಮಾಡುವಿರಿ. ನಿಮ್ಮ ದೀರ್ಘಾವಧಿಯ ಕಾನೂನು ಪ್ರಕರಣವು ನಿಮ್ಮ ಪರವಾಗಿ ಬಂದಿದ್ದು ಖುಷಿಕೊಡುವುದು. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ. ವೃತ್ತಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳ ನಿರೀಕ್ಷೆಯಲ್ಲಿ ಇರುವಿರಿ. ಶತ್ರುಗಳು ಪ್ರಬಲರಾಗದಂತೆ ನೋಡಿಕೊಳ್ಳಿ. ಕೆಲವು ಸಂಕೀರ್ಣವಾದ ವಿಷಯಗಳನ್ನು ಪರಿಹರಿಸಬಹುದು. ಇಂದು ಹೊಸ ಜನರನ್ನು ಭೇಟಿ ಮಾಡುವಿರಿ. ನೀವು ಸಹಾಯ ಪಡೆಯಬಹುದು ಮತ್ತು ನಿಮ್ಮ ವ್ಯವಹಾರದಲ್ಲಿ ಹೊಸದನ್ನು ಮಾಡುವಲ್ಲಿ ಯಶಸ್ವಿಯಾಗಬಹುದು. ಅನಾರೋಗ್ಯವನ್ನು ನಗಣ್ಯ ಮಾಡುವಿರಿ.

ಮಿಥುನ ರಾಶಿ : ನಿಮ್ಮ ಸಂಗಾತಿಯ ಜೊತೆ ಸಂಬಂಧವನ್ನು ಸುಧಾರಿಸಲು ನಿಮಗೆ ಸಾಧ್ಯವಾಗುತ್ತದೆ. ನಿಮ್ಮ ನಾಯಕತ್ವದ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಿರಿ. ನಿಮ್ಮ ಆಪ್ತರ ಜೊತೆ ಕೆಲವು ಸಂತೋಷದ ಕ್ಷಣಗಳನ್ನು ಕಳೆಯುವಿರಿ. ನೀವು ವ್ಯವಹಾರದಲ್ಲಿ ಆಸಕ್ತಿಯನ್ನು ಕಡಿಮೆ ಮಾಡಿದಂತೆ ತೋರುವುದು. ಸ್ನೇಹಿತರ ಜೊತೆ ಸಂಬಂಧದಲ್ಲಿ ನಡೆಯುತ್ತಿರುವ ಭಿನ್ನಾಭಿಪ್ರಾಯವು ಪರಿಹರಿಸಲ್ಪಡುತ್ತದೆ. ಭೂಮಿಯ ವ್ಯವಹಾರದಲ್ಲಿ ಬೇಸರ ಬರಬಹುದು. ಹಿರಿಯ ಸದಸ್ಯರಿಗೆ ನೀವು ವಿನಯವಾಗಿ ಏನನ್ನಾದರೂ ಹೇಳಿ. ಇಲ್ಲವಾದರೆ ನಿಮ್ಮ ಬಗ್ಗೆ ಕೆಟ್ಟ ಭಾವನೆ ಬರಬಹುದು. ನೀವು ಆಡಂಬರದಿಂದ ದೂರವಿರಿ. ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಬಂಧುಗಳ ಜೊತೆ ಚರ್ಚಿಸುವಿರಿ. ಹೆಚ್ಚುವರಿ ಜವಾಬ್ದಾರಿಯನ್ನು ಪಡೆಯಲು ನೀವು ನಿರಾಕರಿಸುವಿರಿ. ನಿಮಗೆ ಸಂಗಾತಿಯ ಬಗ್ಗೆ ಚಿಂತೆ ಕಾಡಬಹುದು. ಆರೋಗ್ಯದ ದೃಷ್ಟಿಯಿಂದ ಹೊಸ ಕ್ರಮವನ್ನು ನೀವು ರೂಢಿಸಿಕೊಳ್ಳುವಿರಿ. ಸಮಯದ ಮೌಲ್ಯವನ್ನು ಅರ್ಥಮಾಡಿಕೊಂಡು ಕಾರ್ಯತತ್ಪರರಾಗಿ.

ಕರ್ಕಾಟಕ ರಾಶಿ : ಇಂದು ನೀವು ಯಾರಿಂದಲೋ ಪಡೆದ ಹಣವನ್ನು ಮರಳಿಸುವುದು ಸೂಕ್ತ. ನಿಮ್ಮ ಇಂದಿನ ದಿನಚರಿಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮವನ್ನು ರೂಢಿಸಿಕೊಳ್ಳುವುದು ಉತ್ತಮ. ನೀವು ದೊಡ್ಡ ಅಪಾಯವನ್ನು ತೆಗೆದುಕೊಳ್ಳುವ ಶಕ್ತಿಯನ್ನು ಇಟ್ಟುಕೊಂಡಿಲ್ಲ. ಇಂದು ನಿಮ್ಮ ಬಾಸ್ ಜೊತೆಗಿನ ನಿಮ್ಮ ಸಂಬಂಧದಲ್ಲಿ ವ್ಯತ್ಯಾಸವಾಗಬಹುದು. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು. ಕೆಲವು ವಿಶೇಷ ಕೆಲಸಗಳನ್ನು ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಅದು ಇಂದು ಪೂರ್ಣಗೊಳ್ಳುವುದಕ್ಕೆ ಒತ್ತಡವು ಅನಿವಾರ್ಯವಾದೀತು. ಇಂದು ನೀವು ಸ್ವಲ್ಪ ತಾಳ್ಮೆಯಿಂದಿರಬೇಕು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳ ಜೊತೆ ತಮಾಷೆಯಿಂದ ಇರುವಿರಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್