AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿಮ್ಮ ತಪ್ಪಿನಿಂದ ಮಕ್ಕಳಿಗೆ ತೊಂದರೆಯಾದೀತು, ವಿವಾಹದ ಚಿಂತೆ ಕಾಡಬಹುದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 09, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ನಿಮ್ಮ ತಪ್ಪಿನಿಂದ ಮಕ್ಕಳಿಗೆ ತೊಂದರೆಯಾದೀತು, ವಿವಾಹದ ಚಿಂತೆ ಕಾಡಬಹುದು
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 09, 2024 | 12:10 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 09) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ವೃದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:29 ರಿಂದ 04:53 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:50 ರಿಂದ 11:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:40 ರಿಂದ 02:04ರ ವರೆಗೆ.

ಮೇಷ ರಾಶಿ: ಅಪರೂಪದ ಬಂಧುಗಳು ನಿಮ್ಮನ್ನು ಭೇಟಿಯಾಗಲು ಬರಬಹುದು.‌ ಅತಿಥಿಗಳಿಗೆ ಸತ್ಕಾರವನ್ನು ಮಾಡಿ ಸಂತೋಷಪಡಿಸುವಿರಿ.‌ ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ.

ವೃಷಭ ರಾಶಿ: ಸಾಲವನ್ನು ಪಡೆದು ಅವರ ಜೊತೆ ವಾಗ್ವಾದವನ್ನು ಮಾಡುವುದು ಬೇಡ.‌ ಸುಂದರವಾದ ಸ್ಥಳಕ್ಕೆ ಹೋಗಬೇಕು ಎನಿಸುವುದು. ಅನಾರೋಗ್ಯವನ್ನು ನಿರ್ಲಕ್ಷಿಸುವುದು ಬೇಡ. ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ನೀವು ಹಾಳುಮಾಡಿಕೊಳ್ಳುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ನಿಮಗೆ ಬೇಕಾದುದನ್ನು ಪಡೆಯಲು ನಿಮಗೆ ಇಚ್ಛೆ ಇರುವುದು. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಸ್ನೇಹ ಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಸುಮ್ಮನೆ ಕಾಲಹರಣವಾಗುವುದು ನಿಮಗೆ ಗೊತ್ತಾಗದು.

ಮಿಥುನ ರಾಶಿ: ಮಕ್ಕಳ ವಿವಾಹದ ಚಿಂತೆ ಕಾಡಬಹುದು. ನಿಮ್ಮ ತಪ್ಪಿನಿಂದ ಮಕ್ಕಳಿಗೆ ತೊಂದರೆಯಾದೀತು. ನಿಮ್ಮ ಬಗ್ಗೆ ಸ್ಪಷ್ಟತೆ ಇರಲಿ. ಉಸಿರಿಗೆ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಒಂದೇ ವಿಚಾರಕ್ಕೆ ಮತ್ತೆ ಮತ್ತೆ ಬೇಸರಿಸುವ ಅವಶ್ಯಕತೆ ಇಲ್ಲ. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ವಾಹನ ಸವಾರರು ಜಾಗರೂಕತೆ ಅವಶ್ಯಕ.

ಕಟಕ ರಾಶಿ: ಆರೋಗ್ಯದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳುವುದು ಸಾಹಸವಾದೀತು. ಭೂಮಿಯನ್ನು ಖರೀದಿಸುವ ಬಗ್ಗೆ ಸಮಾಲೋಚನೆ ಮಾಡುವಿರಿ. ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗ ಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ಹೊಸ ಯಂತ್ರಗಳನ್ನು ಸ್ವೀಕರಿಸುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ಸಂಗಾತಿಯಿಂದ ಉಡುಗೊರೆಯು ಅನಿರೀಕ್ಷಿತವಾಗಿ ಸಿಗಬಹುದು.

ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ