AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರ ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು‌

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 10, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ದಿನಭವಿಷ್ಯ, ಈ ರಾಶಿಯವರ ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು‌
ಇಂದಿನ ರಾಶಿಭವಿಷ್ಯImage Credit source: iStock Photo
TV9 Web
| Edited By: |

Updated on: Jan 10, 2024 | 12:15 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 10) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಧ್ರುವ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:40 ರಿಂದ 02:05ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:26 ರಿಂದ 09:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:15 ರಿಂದ 12:40ರ ವರೆಗೆ.

ಮೇಷ ರಾಶಿ: ಯಾರ ಮೇಲಾದರೂ ದ್ವೇಷವನ್ನು ಸಾಧಿಸುವ ಮನಸ್ಸಾದೀತು. ಸಂಬಂಧಗಳನ್ನು ಸರಿ ಮಾಡಿಕೊಳ್ಳುವುದು ಮುಖ್ಯ ಕೆಲಸವಾಗಬಹುದು. ವಿದ್ಯಾರ್ಥಿಗಳ ಗುಣಮಟ್ಟವು ಕ್ಷೀಣಿಸುವುದು ನಿಮ್ಮ‌ ಅರಿವಿಗೆ ಬರಲಿದೆ. ಸಾಮಾಜಿಕ ಗೌರವವನ್ನು ಪಡೆಯುವುದರಿಂದ ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ದೂರ ಪ್ರಯಾಣಕ್ಕೆ ವೈದ್ಯರು ನಿರ್ಬಂಧ ಹಾಕಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕಾಗುವುದು.

ವೃಷಭ ರಾಶಿ: ಪುಣ್ಯಕ್ಷೇತ್ರಕ್ಕೆ ಹೋಗುವ ಉತ್ತಮ ಅವಕಾಶವು ನಿಮಗೆ ಅನಿವಾರ್ಯವಾಗಿ ಒದಗಬಹುದು. ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ನಿಮ್ಮ ಕುಟುಂಬ ಸದಸ್ಯರಿಗೆ ನೀವು ವಿಶ್ವಾಸದ್ರೋಹಿ ಆಗುವ ಸಾಧ್ಯತೆಯಿದೆ. ಹಳೆಯ ಸ್ನೇಹಿತನನ್ನು ಯಾವುದಾದರೂ ರೀತಿಯಲ್ಲಿ ಭೇಟಿಯಾಗುವಿರಿ. ಕುಟುಂಬ ವ್ಯವಸ್ಥೆ ಸರಿಯಾಗಲು ಕೆಲವನ್ನು ಬಿಟ್ಟುಕೊಡಬೇಕಾದೀತು. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರಾಗಬಹುದು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದ್ದು ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು. ಸ್ವಾಭಿಮಾನವು ನಿಮ್ಮ ಏಳಿಗೆಗೆ ತಡೆಯನ್ನು ಉಂಟು ಮಾಡಬಹುದು.

ಮಿಥುನ ರಾಶಿ: ಜೀವನದ ದೃಷ್ಟಿಯನ್ನು ನೀವು ಬದಲಿಸಿಕೊಳ್ಳುವಿರಿ. ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಅನಿವಾರ್ಯವಾದೀತು. ಹಲವು ಕಾರ್ಯಗಳನ್ನು ಮಾಡುವ ಸನ್ನಿವೇಶವು ಬರುವ ಕಾರಣ ಸಮಯವನ್ನು ಸರಿಯಾಗಿ ಮಾಡಿಕೊಳ್ಳಿ. ಇಂದು ಅಮೂಲ್ಯವಾದ ವಸ್ತುವು ನಿಮ್ಮ ಪಾಲಾಗಬಹುದು. ಆದರೆ ಅನಗತ್ಯ ವೆಚ್ಚಗಳು ಸಹ ಬರಲಿವೆ. ನಿಮ್ಮ ವ್ಯವಹಾರದಲ್ಲಿಯೂ ಸಹ ನೀವು ಭಾಗವಹಿಸುವಿರಿ ಮತ್ತು ಕೆಲಸ ಪೂರ್ಣಗೊಳ್ಳುತ್ತದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಈ ದಿನವನ್ನು ಮನೆಯ ಕೆಲಸದ ಜೊತೆ ಕಳೆಯುವಿರಿ. ಕಲಾಕಾರರಿಗೆ ಉತ್ತಮ ಲಾಭವು ಆಗಬಹುದು. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು‌. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ.

ಕಟಕ ರಾಶಿ: ಅಹಂಕಾರದಿಂದ ವರ್ತಿಸುವುದು ಬೇಡ. ಅನಪೇಕ್ಷಿತ ವಿಚಾರದಲ್ಲಿ ಚರ್ಚಿಸುವುದು ಬೇಡ. ವೃತ್ತಿಯನ್ನು ಕರ್ತವ್ಯದಂತೆ ಮಾಡುವಿರಿ. ಯಾರನ್ನೋ ನೋಯಿಸಿ ಖುಷಿಯಾಗಿರುವುದು. ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು ಸೂಕ್ತ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಹೊಟ್ಟೆಯ ಸ್ವಾಸ್ಥ್ಯವು ಕೆಡುವ ಸಾಧ್ಯತೆಯಿದೆ. ಜಾಗರೂಕರಾಗಿರಿ ಮತ್ತು ಆಹಾರದ ಮೇಲೆ ಸಂಯಮವಿರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಸಂಗಾತಿಯನ್ನು ನೀವು ಮರೆತು ವ್ಯವಹರಿಸುವಿರಿ. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ಕೆಲಸವು ನಿಮಗೇ ಇಷ್ಟವಾಗದು. ಇನ್ನೊಬ್ಬರ ಮಾತಿನಿಂದ ಸಿಟ್ಟಾಗಬಹುದು. ಕೆಲವು ವಿಷಯಕ್ಕೆ ಕುಟುಂಬದಿಂದ ವಿರೋಧವಿರುವುದು. ಸ್ನೇಹಿತರ ಜೊತೆ ಸುತ್ತಾಟ ಮತ್ತು ಉತ್ತಮ ಭೋಜನವನ್ನು ಮಾಡುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ