Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

ಸೆಪ್ಟೆಂಬರ್​ 10,​ 2024ರ​​ ನಿಮ್ಮ ರಾಶಿಭವಿಷ್ಯ:ವ್ಯಾಪಾರವು ಅಭಿವೃದ್ಧಿಯಾಗಿ ಒಂದೊಂದೇ ಹಂತವನ್ನು ಏರುವಿರಿ. ಕುಟುಂಬವೂ ನಿರಾತಂಕವಾಗಿ ಜೀವನ ನಡೆಸುವುದು. ವಿದ್ಯಾರ್ಥಿಗಳಿಗೆ ಅವಶ್ಯಕವಾದ ಪ್ರೋತ್ಸಾಹದಿಂದ ಒಳ್ಳೆಯ ಫಲವನ್ನು ನಿರೀಕ್ಷಿಸಬಹುದು. ನಿಮ್ಮ ನಿರೀಕ್ಷೆಯ ಮಟ್ಟ ಕಡಿಮೆಯಾಗಲಿದೆ. ಹಾಗಾದರೆ ಸೆಪ್ಟೆಂಬರ್​ 10ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 10, 2024 | 12:05 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:36 ಗಂಟೆ, ರಾಹು ಕಾಲ ಮಧ್ಯಾಹ್ನ 03:33 ರಿಂದ ಸಂಜೆ 05:05, ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:58ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:01ರ ವರೆಗೆ.

ಮೇಷ ರಾಶಿ: ನಿಮ್ಮ ಮೇಲೆ ಯಾವುದಾದರೊಂದು ವಿಷಯ, ವ್ಯಕ್ತಿಗಳು ಪ್ರಭಾವ ಬೀರಬಹುದು. ಅಸ್ತಿಯ ಹಂಚಿಕೆಯ ವಿಚಾರದಲ್ಲಿ ಚರ್ಚೆಗಳು ಆಗಲಿದೆ. ನಿಮ್ಮ ಕೆಲಸಗಳಿಗೆ ವಿಘ್ನಗಳು ಬರಬಹುದು. ಸ್ವ ಉದ್ಯೋಗವು ಕೈ ಹಿಡಿಯುವುವುದು. ವ್ಯಾಪಾರವು ಅಭಿವೃದ್ಧಿಯಾಗಿ ಒಂದೊಂದೇ ಹಂತವನ್ನು ಏರುವಿರಿ. ಕುಟುಂಬವೂ ನಿರಾತಂಕವಾಗಿ ಜೀವನ ನಡೆಸುವುದು. ವಿದ್ಯಾರ್ಥಿಗಳಿಗೆ ಅವಶ್ಯಕವಾದ ಪ್ರೋತ್ಸಾಹದಿಂದ ಒಳ್ಳೆಯ ಫಲವನ್ನು ನಿರೀಕ್ಷಿಸಬಹುದು. ನಿಮ್ಮ ನಿರೀಕ್ಷೆಯ ಮಟ್ಟ ಕಡಿಮೆಯಾಗಲಿದೆ. ನಂಬಿಕೆಯ ಜೊತೆ ಪ್ರೀತಿಯನ್ನೂ ಕಳೆದುಕೊಳ್ಳಬಹುದು. ನಿಮ್ಮ‌ ಬಗ್ಗೆ ಆಡಿಕೊಳ್ಳಲು ಏನಾದರೂ ಸಿಗಲಿದೆ. ಇದು ನಿಮಗೆ ಬೇಸರವನ್ನು ತರಿಸುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ಮನಸ್ಸಿಗೆ ಬಾರದ ಕಾರ್ಯವನ್ನು ಮಾಡಲು ಧೈರ್ಯ ಸಾಲದು.

ವೃಷಭ ರಾಶಿ: ಯಾವುದನ್ನು ನಿಮ್ಮದೆಂದುಕೊಂಡಿದ್ದೀರೋ ಅದು ಉಳಿಯದು. ನೀವು ಕುಟುಂಬ ಮತ್ತು ನಿಮ್ಮ ಆಪ್ತರ ಜೊತೆ ಸಮಯ ಕಳೆಯುವುದರಿಂದ ಬಾಂಧವ್ಯ ಬೆಳೆಯುವುದು. ಬಂಧುಗಳ ಭೇಟಿಯಿಂದ ಚಿತ್ತವು ಉತ್ಸಾಹದಿಂದ ಇರವುದು. ಮಾಡಬೇಕಾದ ಕೆಲಸಗಳನ್ನು ವೇಗವಾಗಿ, ಎಚ್ಚರಿಕೆಯಿಂದ ಮಾಡಿ. ಸಹೋದರನ ಅನಿರೀಕ್ಷಿತ ಸಹಾಯವು ಸಂತಸವನ್ನು ತರುವುದು. ಉಪಕಾರಕ್ಕೆ ಪ್ರತ್ಯುಪಕಾರದ ಮನೋಭಾವ ಇರಲಿ. ನೀವು ಇಂದು ಚಿಂತೆಯಲ್ಲಿ ಇರುವ ಕಾರಣ ಎಲ್ಲರ ಮೇಲೂ ಸಿಟ್ಟುಮಡಿಕೊಳ್ಳುವಿರಿ. ನಿಮ್ಮ ಬಗ್ಗೆ ಹೇಳಿಕೊಳ್ಳುವುದನ್ನು ಕಡಿಮೆ‌ ಮಾಡಿ. ನಿಮ್ಮ ವಸ್ತುವನ್ನು ಇನ್ನೊಬ್ಬರು ಬಳಸಿಕೊಳ್ಳುವರು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಸಹವಾಸದಿಂದ ನಿಮ್ಮ ಸ್ವಭಾವವು ಗೊತ್ತಾಗದೇ ಬದಲಾಗುವುದು. ನಿಮ್ಮ ಹೇಳಿಕೆಗಳು ಮಹತ್ತ್ವದ್ದಾಗಿರದು.

ಮಿಥುನ ರಾಶಿ: ನಿಮ್ಮ ಮಾತನ್ನು ಯಾರೂ ಕೇಳರು ಎಂದು ಬೇಸರವಾಗುವುದು. ನೀವು ಇಂದು ಯಾರ ಸಹಾಯವನ್ನೂ ಪಡೆಯಲು ಇಚ್ಛಿಸುವುದಿಲ್ಲ. ಆಲಸ್ಯದಿಂದ ಕಛೇರಿಯ ಕೆಲಸವನ್ನು ಮಾಡಲು ಆಸಕ್ತಿ ತೋರಿಸುವುದಿಲ್ಲ. ಒಳ್ಳೆಯ ಅಭ್ಯಾಸಗಳು ನಿಮ್ಮನ್ನು ಆರೋಗ್ಯವಾಗಿ ಇಡುವುದು. ಹಿತಶತ್ರುಗಳನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ಜೀವನ ಸಂಗಾತಿಯ ಜೊತೆ ಹೆಚ್ಚು ಮಾತನಾಡುವಿರಿ. ಸಾಮಾಜಿಕ ಕೆಲಸಗಳಿಂದ ಗೌರವಪ್ರಾಪ್ತಿಯಾಗಲಿದೆ. ಪ್ರಯೋಜನವಿಲ್ಲ ಎಂದು ತೆಗೆದಿಟ್ಟ ವಸ್ತುವಿನ ಅಥವಾ ವ್ಯಕ್ತಿಯ ಮರುಬಳಕೆ ಇಂದಾಗಲಿದೆ. ಹೊಸ ಮನೆಯ ಖರೀದಿಗೆ ಯೋಜನೆ ಸಿದ್ಧವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು. ಕರೆಗಳನ್ನು ನಿರ್ಲಕ್ಷಿಸಿ. ಮನೆಗೆ ಅತಿಥಿಗಳ ಆಗಮನವಾಗಲಿದೆ. ನಿಮ್ಮ ಸಮಯವನ್ನು ಯಾರಾದರೂ ವ್ಯರ್ಥಮಾಡಬಹುದು.

ಕರ್ಕಾಟಕ ರಾಶಿ: ಇಂದು ವೈಯಕ್ತಿಕ ಕಾರಣದಿಂದ ನಿಮ್ಮ ಉದ್ಯೋಗವನ್ನು ಬದಲಿಸಬೇಕಾಗುವುದು. ಪಡೆದ ಸಾಲವನ್ನು ತೀರಿಸುವಿರಿ. ಬಾಂಧವ್ಯವನ್ನು ಉಳಿಸಿಕೊಳ್ಳುವುದು ನಿಮಗೆ ಹಿಡಿಸದು. ಹೂಡಿಕೆ ಮಾಡಿದ ಹಣವನ್ನು ಪಡೆಯಲು ಓಡಾಟ ಮಾಡಬೇಕಾದೀತು. ಸಹೋದ್ಯೋಗಿಗಳ ಹಾದಿಯನ್ನು ಸೇರಿ ಮೇಲಧಿಕಾರಿಗಳಿಂದ ಬೈಗುಳ ತಿನ್ನುವಿರಿ. ಭಯವು ಅವಕಾಶಗಳಿಂದ ವಂಚಿನೆಯಾಗುವಂತೆ ಮಾಡುವುದು. ಇಂದು ದುಸ್ಸಾಹಸಕ್ಕೆ ತೊಡಗುವುದುಬೇಡ. ಪ್ರಯಾಣವನ್ನು ಅನಾರೋಗ್ಯದ ಕಾರಣ ಕಡಿಮೆ ಮಾಡುವಿರಿ. ಏಕಾಂತವನ್ನು ಇಷ್ಟಪಟ್ಟರು ಇರಲಾಗದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ಕಳೆದುಹೋದುದನ್ನು ಮರಳಿ ಪಡೆಯುವುದು ಕಷ್ಟ. ವಾಹನದಿಂದ ಆರ್ಥಿಕ ಮುಗ್ಗಟ್ಟು.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ