AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ತಡೆದಿಟ್ಟ ಸಂಕಟವನ್ನು ಸ್ಫೋಟ ಮಾಡುವರು

Daily Horoscope Mach 01: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಸೋಮವಾರ ಹಳೆಯದರ ಮರೆಯುವು, ನೋವು, ವ್ಯಾವಹಾರಿಕ ಅಸ್ಪಷ್ಟ, ಮಕ್ಕಳಿಗೆ ಸಂತೋಷ, ಸಣ್ಣ ವ್ಯಾಪಾರದಿಂದ ಸಮಾಧಾನ, ಓಡಾಟ ಅಧಿಕ, ಫಲ ಕಡಿಮೆ ಇವೆಲ್ಲ ಇಂದಿನ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ತಡೆದಿಟ್ಟ ಸಂಕಟವನ್ನು ಸ್ಫೋಟ ಮಾಡುವರು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Mar 02, 2026 | 12:55 AM

Share

ಮೇಷ ರಾಶಿ:

ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು. ಕೆಲಸದಲ್ಲಿ ಇರುವಷ್ಟು ಶ್ರದ್ಧೆ ಓದಿನ ಕಡೆಗೆ ಬರದೇ ಇರಬಹುದು. ಕೆಲವನ್ನು ಮರೆತು ಮುಂದೆ ಸಾಗುವುದು ನಿಮಗೆ ಉತ್ತಮ. ದೂರದ ಪೋಷಕರ ಜೊತೆ ಆಪ್ತವಾಗಿ ಮಾತನಾಡುವುದು ಅವರಿಗೆ ನೆಮ್ಮದಿಯನ್ನು ಕೊಡುವುದು ಎನ್ನುವ ಅರಿವು ಇರಲಿ. ನಿಮ್ಮ ಬಳಿಯ ಹಣವನ್ನು ಕೇಳಿಕೊಂಡು ಇಬರ. ಹೊಸ ಉದ್ಯೋಗಕ್ಕೆ ವಿವರಗಳನ್ನು ಕೇಳಿ ಪಡೆಯುವಿರಿ.

ವೃಷಭ ರಾಶಿ:

ಸಮಾರಂಭಗಳಿಗೆ ಭೇಟಿಕೊಡುವುದು, ಅಲ್ಲಿ ನಿಮ್ಮ ಸಮಯವನ್ನು ವ್ಯರ್ಥಮಾಡಿಕೊಳ್ಳುವಿರಿ. ಇಂದು ಯಾರ ಬಗ್ಗೆಯೂ ಸರಿ ಹಾಗೂ ತಪ್ಪುಗಳ ತುಲನೆಯು ಕಷ್ಟವಾಗುವುದು. ಏನನ್ನಾದರೂ ಬಳಸುವ ಮೊದಲು ಪರೀಕ್ಷಿಸಿಕೊಳ್ಳಿ. ಮಕ್ಕಳಲ್ಲಿ ಬದಲಾವಣೆಯನ್ನು ನೀವು ಕಾಣಬಹುದು. ಮೃದುವಾದ ಮಾತನ್ನು ನೀವು ಅಭ್ಯಾಸ ಮಾಡಿಕೊಳ್ಳಬೇಕಾದೀತು. ನಿಮ್ಮ ಕಾರ್ಯದಲ್ಲಿ ಮಗ್ನರಾಗಿ ಎಲ್ಲರನ್ನೂ ಮರೆಯುವಿರಿ. ಬಂಧುಗಳ ಜೊತೆ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಇಂದು ಹೊರಗಿನ ಆಹಾರವನ್ನು ತಿನ್ನುವ ಸ್ಥಿತಿ ಬರಬಹುದು.

ಮಿಥುನ ರಾಶಿ:

ಸರ್ಕಾರಿ ಕೆಲಸಕ್ಕಾಗಿ ಹಣವನ್ನು ಕೊಡುವಿರಿ. ಯಾರಿಗೂ ಎತ್ತರದ ದನಿಯನ್ನು ಮಾಡುವುದು ಬೇಡ. ಹೊಸ ಉದ್ಯಮವನ್ನು ಮಾಡಲು ಆಪ್ತರ ಅಥವಾ ಅನುಭವಿಗಳ ಸಲಹೆ ಬೇಕಾದೀತು. ದಾಂಪತ್ಯದಲ್ಲಿನ ಒಡಕು ಎಲ್ಲರಿಗೂ ಗೊತ್ತಾಗುವ ಮೊದಲೇ ಸರಿ ಮಾಡಿಕೊಳ್ಳಿ. ಆಕಸ್ಮಿಕ ವಾರ್ತೆಯು ನಿಮ್ಮನ್ನು ಸ್ತಬ್ಧಗೊಳಿಸಬಹುದು. ನಿಮ್ಮ ಬಗ್ಗೆ ತಪ್ಪು ಕಲ್ಪನೆಯು ಬರಬಹುದು. ಮಕ್ಕಳ ವಿಚಾರದಲ್ಲಿ ತಾರತಮ್ಯವನ್ನು ಮಾಡುವಿರಿ. ಹಣದಲ್ಲಿ ಮೋಸವಾಗಬಹುದು. ಉನ್ನತ ಹುದ್ದೆಗೆ ಹೋಗಲು ಅವಕಾಶವಿದ್ದರೂ ನಿಮಗೆ ನಾನಾ ಕಾರಣಗಳಿಂದ ಬೇಡವೆನಿಸುವುದು.

ಕರ್ಕಾಟಕ ರಾಶಿ:

ನಿಮ್ಮ ಮಾತು ಇನ್ನೊಬ್ಬರಿಗೆ ನೋವನ್ನು ಕೊಡುಬಹುದು ಎಂಬ ತಿಳಿವಳಿಕೆ ಇರಲಿ. ನಿಮ್ಮ ಕಲೆಗೆ ಸರಿಯಾದ ಪ್ರೋತ್ಸಾಹವು ಸಿಗಲಿದೆ. ವೃತ್ತಿಯಲ್ಲಿ ನೀವು ತುಂಬಾ ನಿಧಾನದಿಂದ ಕೆಲಸ ಮಾಡುವಿರಿ. ದೂರ ಬಂಧುಗಳ ಭೇಟಿಯಿಂದ ವಿವಾಹ ನಿಶ್ಚಯವಾಗಬಹುದುದು. ಪ್ರೇಮವು ಹೊಸ ತಿರುವನ್ನು ಪಡೆಯಬಹುದು. ಮನಸ್ಸು ಕೆಡಿಸಿಕೊಂಡು ಏನೂ ಮಾಡಲಾಗದು. ವಸ್ತುಗಳನ್ನು ಕಳೆದುಹೋಗಿದ್ದು ವಿಳಂಬವಾಗಿ ಬೆಳಕಿಗೆ ಬಂದೀತು. ಹಿರಿಯ ಮಾತನ್ನು ಅಸಡ್ಡೆ ಮಾಡುವಿರಿ. ಸಂಗಾತಿಯ ನಿಲುವನ್ನು ನೀವು ಒಪ್ಪದೇ ಕಲಹವಾಗಬಹುದು. ನಿಮ್ಮ ನಿರ್ಧಾರವು ಸರಿಯಾಗಿದೆಯೇ ಎಂದು ಅವಲೋಕನ ಮಾಡಿಕೊಳ್ಳಿ.

ಸಿಂಹ ರಾಶಿ:

ಅಪರಿಚಿತರ ಜೊತೆ ಸಲುಗೆ ಬೆಳೆಯಬಹುದು. ಅಪರಿಚಿತರ ಜೊತೆ ಅವಶ್ಯಕತೆಯಷ್ಟೇ ವ್ಯವಹರಿಸಿ. ಭವಿಷ್ಯದ ಅನೇಕ ದ್ವಂದ್ವಗಳು ಇರಬಹುದು. ಯಾರ ಬಗ್ಗೆಯೂ ಹಗುರಾದ ಮಾತುಗಳನ್ನು ಆಡುವುದು ಬೇಡ. ಹಣಕಾಸಿನ ಉಳಿತಾಯದ ಬಗ್ಗೆ ತಜ್ಞರ ಜೊತೆ ಮಾತನಾಡುವಿರಿ, ನಿರ್ಧಾರಕ್ಕೆ ಬರುವಿರಿ. ನಿಮ್ಮದಲ್ಲದ ಉದ್ಯೋಗದಲ್ಲಿ ಒತ್ತಡ ಸ್ವೀಕರಿಸುವುದು ಅಭ್ಯಾಸವಾಗಿ ಹೋಗುವುದು. ದುರಭ್ಯಾಸವು ಸಹವಾಸದಿಂದ ಬಿಟ್ಟುಹೋಗಲಿದೆ. ಯಾವುದೇ ಪ್ರಭಾವಕ್ಕೆ ಸಿಕ್ಕಿ ನಿಮ್ಮನ್ನು ಬದಲಿಸಿಕೊಳ್ಳಬೇಕಾಗಬಹುದು.

ಕನ್ಯಾ ರಾಶಿ:

ವ್ಯಾಪಾರ ಚಟುವಟಿಕೆಗಳು ನಿಮ್ಮ‌ ಮನೋವೇಗಕ್ಕೆ ಸಿಗದು. ಕಲಾವಿದರು ಅವಕಾಶವನ್ನು ಹುಡುಕಿಕೊಂಡು ಹೋಗಬೇಕಾಗಬಹುದು. ಸಾಲದ ವಿಚಾರವಾಗಿ ಕುಟುಂಬದ ಜೊತೆ ಬಿಸಿ ಚರ್ಚೆಯಾಗಬಹುದು. ಆಸ್ತಿಯ ಹಂಚಿಕೆಯಲ್ಲಿ ನಿಮಗೆ ಸಮಾಧಾನ ಇರದು. ಹಲವು ದಿನಗಳಿಂದ ಉಳಿಸಿಕೊಂಡ ವೈಯಕ್ತಿಕ ಕೆಲಸವೇ ಉಳಿಯಲಿದೆ. ಸಹೋದರರು ನಿಮ್ಮ ಬಗ್ಗೆ ಹಗುರಾಗಿ ಮಾತನಾಡಿದ್ದು ನಿಮ್ಮ ಕಿವಿಗೆ ಮೂರನೇ ವ್ಯಕ್ತಿಗಳಿಂದ ಗೊತ್ತಾಗಲಿದೆ. ಮಕ್ಕಳ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ತಾಯಿ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಿಕೊಳ್ಳಬಹುದು.

ತುಲಾ ರಾಶಿ:

ಇಂದು ನೀವು ಕೋಪವನ್ನು ಮಾಡಿಕೊಳ್ಳಲು ಕಾರಣವೇ ಬೇಕಾಗದು. ಕುಟುಂಬ ಜೊತೆ ದೇವರ ದರ್ಶನವನ್ನು ಮಾಡುವಿರಿ. ನೌಕರರಿಂದ ನಿಮಗೆ ಸರಿಯಾದ ಪ್ರತಿಕ್ರಿಯೆ ಸಿಗದು. ವಿವೇಚನೆ ಇಲ್ಲದೇ ಆಡಿದ ಮಾತುಗಳಿಂದ ಕಲಹವಾಗಬಹುದು. ನಟನೆಯನ್ನು ಇಷ್ಟಪಡುವವರಿಗೆ ಅವಕಾಶಗಳು ಸಿಗುವುದು. ಪ್ರಾಮಾಣಿಕತೆಗೆ ಸಿಕ್ಕ ಪ್ರಶಂಸೆಯಿಂದ ಇನ್ನಷ್ಟು ಉತ್ಸಾಹ ಇರುವುದು. ಯಾರದೋ ಕಾರ್ಯಕ್ಕೆ ನೀವು ದಂಡಿಸಿ ಕೆಲಸ ಮಾಡಬೇಕಾದೀತು. ನಿಮ್ಮ ಮಾತುಗಳು ಹಾಸ್ಯದಿಂದ ಕೂಡಿರಲಿದೆ. ಅನಾರೋಗ್ಯದಿಂದ ವಿಶ್ರಮಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ:

ನಿಮ್ಮ ವ್ಯಾಪ್ತಿಯನ್ನು ಮೀರಿದ ಕೆಲಸವನ್ನು ನೀವು ಮಾಡಬೇಕಾದೀತು. ಆಸಕ್ತಿಯು ಇಲ್ಲದಿದ್ದರೂ ಒತ್ತಾಯಕ್ಕೆ ಧಾರ್ಮಿಕ ಕಾರ್ಯಗಳಲ್ಲಿ ತೊಡಗುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಅನಿವಾರ್ಯವಿದ್ದರೂ ಧನವ್ಯಯದ ಕಾರಣ ಖರೀದಿಯನ್ನು ಮುಂದೂಡುವಿರಿ. ಇಂದು ನೀವು ತಾಯಿಯ ಪ್ರೀತಿಯಿಂದ ವಂಚಿತರಾಗಬಹುದು. ಉದ್ಯೋಗದ ಕಾರಣಕ್ಕೆ ದೂರದ ಊರಿಗೆ ಹೋಗಬೇಕಾಗುವುದು. ಪ್ರಯಾಣದ ಮುಂಜಾಗ್ರತೆಯ ಕ್ರಮವಿರಲಿ. ಗೊತ್ತಿಲ್ಲದ ಪ್ರದೇಶಕ್ಕೆ ಒಂಟಿಯಾಗಿ ಹೋಗಬೇಕಾಗಬಹುದು.

ಧನು ರಾಶಿ:

ಯುವಕರು ವೃತ್ತಿ ಜೀವನದಲ್ಲಿ ಉತ್ತಮ ಯಶಸ್ಸನ್ನು ಪಡೆಯು ಅವಕಾಶಗಳಿದ್ದರೂ ಅದನ್ನು ಬಳಸಿಕೊಳ್ಳಲು ಮಾರ್ಗದರ್ಶನದ ಅವಶ್ಯಕತೆ ಇದೆ. ಜೀವನದಲ್ಲಿ ಸಣ್ಣಪುಟ್ಟ ಸವಾಲುಗಳನ್ನು ಎದುರಿಸಬೇಕಾಗಬಹುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಪ್ರಾಣಿಗಳ ಮೇಲೆ ಪ್ರೀತಿ ತೋರಿಸುವಿರಿ. ನಿಮ್ಮ ಕಾರ್ಯದಲ್ಲಿ ನಿಮಗೆ ತಪ್ಪು ಕಾಣಿಸುವುದು. ಹೊಗಳಿಕೆಯಿಂದ ನಿಮಗೆ ಸಂಕೋಚ ಉಂಟಾಗಬಹುದು. ಮಿತಿಮೀರಿದ ಓಡಾವು ನಿಮ್ಮ ದೇಹಬಲವನ್ನು ಕುಗ್ಗಿಸುವುದು. ನಿಮ್ಮ ಬಯಕೆಗಳಿಗೆ ಇನ್ಮೊಬ್ಬರು ಪ್ರೇರಣೆ ಆಗಬಹುದು.

ಮಕರ ರಾಶಿ:

ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಂಧವು ಬಲವಾಗಿರುತ್ತದೆ. ಹಳೆಯ ಆಸ್ತಿಯನ್ನು ಮಾರಾಟ ಮಾಡುವುದರಿಂದ ಅಥವಾ ಬಾಡಿಗೆಗೆ ನೀಡುವುದರಿಂದ ಆರ್ಥಿಕ ಲಾಭವಿದೆ. ಭೂಮಿ ಅಥವಾ ವಾಹನದ ನಿರ್ವಹಣೆಗೆ ಹಣವನ್ನು ಖರ್ಚು ಮಾಡಲಾಗುವುದು. ಭೂಮಿಯ ವ್ಯವಹಾರದಲ್ಲಿ ಪಾಲುದಾರರಾಗಿ ಸೇರಿಕೊಳ್ಳುವ ಮನಸ್ಸು ಮಾಡುವಿರಿ. ಸಂಗಾತಿಯ ಜೊತೆ ಬಹಳ ಸಂಯೋಷದ ಕ್ಷಣವನ್ನು ಕಳೆಯುವಿರಿ. ಉದ್ಯೋಗದ ಸ್ಥಳದಲ್ಲಿ ಉಂಟಾದ ಪಕ್ಷಪಾತದಿಂದ ದ್ವೇಷಭಾವವು ಉಂಟಾಗಬಹುದು

ಕುಂಭ ರಾಶಿ:

ವೃತ್ತಿ ಜೀವನದಲ್ಲಿ ಪ್ರಮುಖ ಸಾಧನೆಗಳನ್ನು ಸಾಧಿಸಲಾಗುವುದು. ಜೀವನದಲ್ಲಿ ಧನಾತ್ಮಕ ಶಕ್ತಿಯ ಒಳಹರಿವು ಇರುತ್ತದೆ. ಹಳೆಯ ಹೂಡಿಕೆಯು ಉತ್ತಮ ಲಾಭವನ್ನು ನೀಡುತ್ತದೆ. ಸಮಾಜಸೇವೆಯಲ್ಲಿ ಆಸಕ್ತಿ ಹೆಚ್ಚಲಿದೆ. ವಾಹನ ಖರೀದಿಗೆ ಬಂಧುಗಳಿಂದ ಒತ್ತಡವು ಬರಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದೆ. ನಿಮ್ಮ ಪೂರ್ವಯೋಜಿತ ಕಾರ್ಯಗಳನ್ನು ನೀವು ಬದಲಾಯಿಸುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಲು ಮನೆಯಿಂದ ಒಪ್ಪಿಗೆಯನ್ನು ನಿರಾಕರಿಸಬಹುದು.

ಮೀನ ರಾಶಿ:

ಇಂದು ಕೆಲವರು ಆಸ್ತಿಯಲ್ಲಿ ಹೂಡಿಕೆ ಮಾಡಬಹುದು. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಉದ್ಯೋಗದಲ್ಲಿನ ಒತ್ತಡವು ನಿಮ್ಮ ಆರೋಗ್ಯದ ಮೇಲೆ ಪರಿಣಾಮವನ್ನು ಉಂಟುಮಾಡಬಹುದು. ಮೊದಲೇ ಸಮಯವನ್ನು ಸರಿಯಾಗಿ ನಿರ್ಧರಿಸಿಕೊಂಡು ಕಾರ್ಯವನ್ನು ಆರಂಭಿಸಿದರೆ ಸಕಾಲಕ್ಕೆ ಮುಗಿಯುವುದು.

ಇಂದಿನ ಪಂಚಾಂಗ: 

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಅತಿಗಂಡ, ಕರಣ : ಗರಜ, ಸೂರ್ಯೋದಯ – 06 – 41 am, ಸೂರ್ಯಾಸ್ತ – 06 – 31 pm, ಇಂದಿನ ಶುಭಾಶುಭ ಕಾಲ : ರಾಹು 08:10 – 09:39, ಯಮಗಂಡ ಕಾಲ 11:08 – 12:37, ಗುಳಿಕ ಕಾಲ 14:05 – 15:34

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!