Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ವಂಚನೆಗೆ ಪ್ರತಿವಂಚನೆ ಮಾಡುವರು

13 ಮಾರ್ಚ್​​​ 2025: ಗುರುವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಸತ್ಯವನ್ನು ಹೇಳಲು ಇಂದು ನೀವು ಹಿಂಜರಿಯುವಿರಿ. ತನಗೆ ತೊಂದರೆಯಾಗುವುದೆಂಬ ಭಯವೂ ಕಾಡಬಹುದು. ಪ್ರಭಾವಿ ವ್ಯಕ್ತಿಗಳ ಸಹಾಯಕರಾಗಿ ಹೋಗುವ ಅವಕಾಶಗಳು ಸಿಗಬಹುದು. ಮಾರ್ಚ್​​​ 13ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರು ವಂಚನೆಗೆ ಪ್ರತಿವಂಚನೆ ಮಾಡುವರು
ಈ ರಾಶಿಯವರು ವಂಚನೆಗೆ ಪ್ರತಿವಂಚನೆ ಮಾಡುವರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 13, 2025 | 12:10 AM

ಬೆಂಗಳೂರು, ಮಾರ್ಚ್​ 13: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಧೃತಿ, ಕರಣ : ವಣಿಜ, ಸೂರ್ಯೋದಯ – 06 – 42 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:12 – 15:42, ಯಮಘಂಡ ಕಾಲ 06:43 – 08:13, ಗುಳಿಕ ಕಾಲ 09:42 – 11:12.

ಮೇಷ ರಾಶಿ: ಮಿತ್ರರ ಸಹಕಾರವನ್ನು ಮರೆಯುವುದು ಬೇಡ. ವಂಚನೆಗೆ ಪ್ರತಿವಂಚನೆಯು ನಿಮ್ಮ ದೃಷ್ಟಿಯಲ್ಲಿ ಸರಿ ಎನಿಸಬಹುದು. ಪ್ರಮಾಣಿಕತೆಯನ್ನು ಹಣಕಾಸಿನ ವ್ಯವಹಾರವನ್ನು ಕೊಡಬಹುದು. ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ನಿರೀಕ್ಷಿತ ಉಡುಗೊರೆಯಿಂದ ಸಂತೋಷವು ಸಿಗುವುದು. ಶಾಂತಿಯುತ ಪರಿಹಾರವನ್ನು ಕಂಡುಹಿಡಿಯುವುದು ಮುಖ್ಯ. ವ್ಯಾಪಾರ ಚಟುವಟಿಕೆಗಳು ಸುಗಮವಾಗಿ ನಡೆಯಲಿವೆ. ತಂಡವಾಗಿ ಕೆಲಸ ಮಾಡಿದರೆ ಗೆಲವು. ಬಿಡುವಿಲ್ಲದ ಕಾರಣ ಒಬ್ಬರಿಗೊಬ್ಬರು ಸಮಯವನ್ನು ಕೊಡಲು ಸಾಧ್ಯವಾಗದು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಸಹೋದರರು ನಿಮ್ಮ ಯೋಜನೆಗೆ ಸಹಕರಿಸಬಹುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ನೌಕರರನ್ನು ಯೋಗ್ಯ ರೀತಿಯಲ್ಲಿ ಕಂಡುಕೊಂಡು ಬೇಕಾದುದನ್ನು ಮಾಡಿಸಿಕೊಳ್ಳುವಿರಿ.‌ ನಿಮ್ಮ ಬಗ್ಗೆ ಯಾರು ಏನೇ ಎಂದರೂ ಸ್ವಭಾವವನ್ನು ಬದಲಿಸಲಾರಿರಿ.

ವೃಷಭ ರಾಶಿ: ನೀವು ಇಂದು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರಲಾರಿರಿ. ಅನುಮಾನದಿಂದ ಹೊರಬರುವುದು ನಿಮಗೆ ಇಷ್ಟವಾಗದು. ಉದ್ಯೋಗದಲ್ಲಿ ಶ್ರಮವಿದ್ದರೂ ಯಶಸ್ಸು ನಿಮ್ಮದಾಗದು. ಕೆಟ್ಟ ನಿರ್ಧಾರಗಳು ವಿಷಾದಕ್ಕೆ ಕಾರಣವಾಗಬಹುದು. ವ್ಯಾಪಾರ ಯೋಜನೆಗಳು ಯಶಸ್ವಿಯಾಗಬಹುದು. ಸಂಗಾತಿಯು ಭಾವನೆಯನ್ನು ಅರ್ಥಮಾಡಿಕೊಳ್ಳಬಹುದು. ಆರ್ಥಿಕತೆಯು ದುರ್ಬಲವಾಗಿದ್ದು ಇದೇ ದೊಡ್ಡ ಚಿಂತೆಯಾಗಬಹುದು. ಬಯಕೆಗಳಿಗೆ ಅಲ್ಪವಿರಾಮ ಹಾಕಿ. ಏಕಕಾಲಕ್ಕೆ ಹತ್ತಾರು ಚಿಂತನೆಯನ್ನು ಮನಸ್ಸು ಮಾಡಲಿದೆ. ಅಸಭ್ಯ ಮಾತುಗಳನ್ನು ಕಡಿಮೆ ಮಾಡಿ.‌ ನಿಮ್ಮನ್ನು ನೋಡುವ ದೃಷ್ಟಿಕೋನವು ಬದಲಾದೀತು. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸವನ್ನು ಮಾಡುವಿರಿ. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣವಿದ್ದರೂ ಸಂತೋಷವು ಇರದು. ಇಂದು ನಿಮ್ಮ ಬಗ್ಗೆಯೇ ನಿಮಗೆ ಅಸಮಾಧಾನವಿರಬಹುದು. ಬರಬೇಕಿದ್ದ ಹಣವು ಬಹಳ ದಿನವಾದರೂ ಬಾರದೇ ಚಿಂತೆಯಾಗುವುದು. ಅದಕ್ಕಾಗಿ ಖರೀದಿಯನ್ನು ಮುಂದೂಡುವಿರಿ.

ಮಿಥುನ ರಾಶಿ: ಹೂಡಿಕೆಯನ್ನು ಮಾಡಿ ಹೊಸ ಚಿಂತೆಯನ್ನು ತಲೆಯೊಳಗೆ ತಂದುಕೊಳ್ಳುವಿರಿ. ಸರಿಯಾದುದನ್ನು ಆಯ್ಕೆ ಮಾಡುವುದು ನಿಮ್ಮಿಂದಾಗದು. ಸರ್ಕಾರಿ ಉದ್ಯೋಗದ ಕಡೆ ನಿಮ್ಮ ಮನಸ್ಸು ಹೊರಳುವುದು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ಕುಟುಂಬ ಮತ್ತು ಆರ್ಥಿಕ ವಿಷಯಗಳಲ್ಲಿ ಸಂಗಾತಿಯು ಸರಿಯಾದ ಸಹಕಾರವನ್ನು ಪಡೆಯಬಹುದು. ನಿಶ್ಚಿತ ಕಾರ್ಯವು ನಿಮ್ಮಿಂದ ಆಗದೇ ಹೋಗಬಹುದು. ಪ್ರಯಾಣದ ಅನಿವಾರ್ಯತೆ ಇದ್ದರೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿ. ಆದಾಯದಿಂದ ಸಂತೋಷವಿದ್ದರೂ ಅದನ್ನು ರಕ್ಷಿಸುವ ಹೊಣೆಗಾರಿಕೆಯೂ ಇರುವುದು. ಗೊಂದಲವನ್ನು ನೀವು ಮೀರುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು. ಪುನಃ ಪುನಃ ನಿಮಗೆ ಆಗದ ವಿಚಾರಗಳೇ ನಿಮ್ಮ ಕಿವಿಗೆ ಬೀಳಬಹುದು. ನಿಮ್ಮ ಸಾಮರ್ಥ್ಯದ ಬಗ್ಗೆ ಸರಿಯಾಗಿ ತಿಳಿಯಿರಿ. ಒತ್ತಡಗಳು ನಿಮ್ಮ ಕೆಲಸವನ್ನು ನಿಧಾನ ಮಾಡುವುದು. ಇಂದು ಎಲ್ಲರ ಜೊತೆ ಹೊಂದಾಣಿಕೆಯ ಸ್ವಭಾವವನ್ನು ಬಿಡಬಹುದು.

ಕರ್ಕಾಟಕ ರಾಶಿ: ತಂಡದ ನಾಯಕರಾಗಿದ್ದಾಗ ತೊಡಗಿಕೊಳ್ಳುವಿಕೆ ಮುಖ್ಯ. ಉದ್ಯಮವನ್ನು ಬಿಟ್ಟು ಬೇರೆಯ ಕಾರ್ಯವನ್ನು ಮಾಡಲು ಆಗದು.‌ ನಿಮ್ಮ ನಕಾರಾತ್ಮಕ ಚಿಂತನೆಗಳೇ ನಿಮ್ಮನ್ನು ಹಿಂದೆಳೆಯುವುದು. ಕೆಲವು ಪ್ರಶ್ನೆಗೆ ಮೌನವೂ ಉತ್ತರವಾದೀತು. ಕುಟುಂಬದ ಜವಾಬ್ದಾರಿಯು ನಿಮ್ಮ ಮೇಲೇ ಬರಬಹುದು‌. ಅಪವಾದ ಸುತ್ತಿಕೊಂಡು ಕೆಲ ಕಾಲ ಸಂಕಟಪಡುವಿರಿ. ಯಾರನ್ನೋ ಆಡಿಕೊಳ್ಳುವುದು ಪ್ರಿಯವಾಗಬಹುದು. ಇಂದು ನಿಮ್ಮ ಮಾರ್ಗಗಳು ಎಲ್ಲವೂ ಮುಚ್ಚಿದಂತೆ ಅನ್ನಿಸಬಹುದು. ವೇಗದ ನಡಿಗೆಯಿಂದ ಬೀಳುವಿರಿ. ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿ. ವ್ಯಂಗ್ಯ ಮಾತುಗಳನ್ನು ಆಡಿ ಯಾರಿಂದಲೂ ಏನನ್ನೂ ನಿರೀಕ್ಷಿಸಲಾಗದು. ಸ್ತ್ರೀಯರಿಂದ ನಿಮಗೆ ನಿಂದನೆ ಸಿಗಬಹುದು. ಅವಿವಾಹಿತರು ವಿವಾಹದ ಬಗ್ಗೆ ಚಿಂತೆ ಮಾಡುವರು. ದೈವದ ಮೇಲಿನ ಶ್ರದ್ಧೆಯು ಕಡಿಮೆಯಾಗದು. ಉದ್ಯೋಗದಲ್ಲಿ ಪ್ರಾಮಾಣಿಕರಾಗಿದ್ದರೂ ಅಪವಾದವು ಬರಬಹುದು. ಎಲ್ಲದಕ್ಕೂ ಕೋಪವೊಂದೇ ಪರಿಹಾರವಾಗದು.

ಸಿಂಹ ರಾಶಿ: ಇಂದು ನೀವು ಎಂದೂ ಊಹಿಸದ ಅವಕಾಶವನ್ನು ಪಡೆದುಕೊಳ್ಳುವಿರಿ. ಕಛೇರಿಯಿಂದ ನಿಮಗೆ ತಿಳಿಯಬೇಕಾದ ವಿಚಾರವು ತಿಳಿಯದೇ ಹೋಗಬಹುದು. ಭಾರವಾದ ವಸ್ತುಗಳನ್ನು ಎತ್ತುವುದು ಬೇಡ. ನಿಮ್ಮ ಉತ್ಪಾದನೆಯು ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ನಕಾರಾತ್ಮಕ ಚಟುವಟಿಕೆಯನ್ನು ಕೋಪದ ಬದಲು ಶಾಂತವಾಗಿ ಪರಿಹರಿಸಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರವು ಯಶಸ್ವಿಯಾಗಬಹುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಅತಿಯಾದ ಬೆನ್ನು ನೋವು ನಿಮ್ಮನ್ನು ಬಾಧಿಸೀತು. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಯಾರ ಮೇಲೇ ರೇಗದೇ ಇರುವುದು ನಿಮಗೆ ಇಷ್ಟವಾದೀತು. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ರಕ್ಷಣಾ ವ್ಯವಸ್ಥೆಯಲ್ಲಿ ಇರುವವರಿಗೆ ಕಾರ್ಯದ ಒತ್ತಡ ಹೆಚ್ಚಿರುವುದು. ಜವಾಬ್ದಾರಿಯ ಕಾರ್ಯವನ್ನೇ ಸರಿಯಾಗಿ ಮಾಡಿ ಆದಾಯವು ಹೆಚ್ಚಾಗುವಂತೆ ಮಾಡಿಕೊಳ್ಳಿ.

ಕನ್ಯಾ ರಾಶಿ: ಸತ್ಯವನ್ನು ಹೇಳಲು ಇಂದು ನೀವು ಹಿಂಜರಿಯುವಿರಿ. ತನಗೆ ತೊಂದರೆಯಾಗುವುದೆಂಬ ಭಯವೂ ಕಾಡಬಹುದು. ಪ್ರಭಾವಿ ವ್ಯಕ್ತಿಗಳ ಸಹಾಯಕರಾಗಿ ಹೋಗುವ ಅವಕಾಶಗಳು ಸಿಗಬಹುದು. ಒತ್ತಡದ ಕಾರಣದ ದೈನಂದಿನ ಕ್ರಿಯೆಯಲ್ಲಿ ಅಸ್ತವ್ಯಸ್ತತೆ. ಉದ್ಯೋಗದಲ್ಲಿ ರಾಜಕೀಯ ಪ್ರವೇಶ ಮಾಡಲಿದೆ. ವಿವಾಹ ಸಂಬಂಧವನ್ನು ಚೆನ್ನಾಗಿ ಇಡುವ ಯೋಚಿಸಿ. ಜವಾಬ್ದಾರಿಯ ಮಾತುಗಳಿಂದ ಅಚ್ಚರಿಯಾದೀತು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಮಕ್ಕಳ ಅನಾರೋಗ್ಯದಿಂದ ನೀವು ಆತಂಕಕ್ಕೆ ಒಳಗಾಗುವಿರಿ. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಗೊತ್ತಿದ್ದರೂ ಗೊತ್ತಿಲ್ಲದಂತೆ ಇರುವಿರಿ. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ ನಡೆಸುವಿರಿ. ನಿಮ್ಮ ದುಃಖಕ್ಕೆ ಬಂಧುಗಳಿಂದ ಸಾಂತ್ವನವು ಸಿಗುವುದು. ಸಿಕ್ಕಿದ್ದರಲ್ಲಿ ಸುಖ ಪಡುವುದನ್ನು ಬೆಳೆಸಿಕೊಳ್ಳುವಿರಿ. ಯಾರನ್ನೂ ಅಲ್ಪವಾಗಿ ಕಾಣುವುದು ಬೇಡ.

ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ