AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

Daily Horoscope Mach 15: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಭಾನುವಾರದಂದು ಒಂಟಿತನ, ನಾಯಕತ್ವ ಬದಲಾವಣೆ, ಕಾರ್ಯಕ್ಕೆ ಪ್ರಶಂಸೆ, ಆರ್ಥಿಕ ಸುಧಾರಣೆಗೆ ಚರ್ಚೆ, ಆದಾಯಕ್ಕೆ ಪರ್ಯಾಯ ಮಾರ್ಗದ ಅನ್ವೇಷಣೆ ಇದೆಲ್ಲ ಈ ದಿನ ಇರಲಿದೆ.

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Mar 15, 2026 | 12:50 AM

Share

ಮೇಷ ರಾಶಿ:

ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಉತ್ತಮ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ಕೆಲವು ರಿಸ್ಕ್ ಗಳನ್ನೂ ಎದುರಿಸಬೇಕಾಗುವುದು. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಹಲವು ದಿನದ ಮನಸ್ತಾಪವು ದೂರವಾಗಬಹುದು.

ವೃಷಭ ರಾಶಿ:

ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುವಿರಿ. ಆದರೆ ಅವರಿಂದ ಅದು ಸಿಗದು. ನಿಮ್ಮ ವ್ಯವಹಾರವನ್ನು ಅಳೆಯುವುದು ಸುಲಭವಲ್ಲ. ಅಜ್ಞಾನದಿಂದ ತಪ್ಪುಗಳು ನಡೆಯಬಹುದು. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಇಂದು ಒಂಟಿಯಾದಂತೆ ನಿಮಗೆ ಅನ್ನಿಸಬಹುದು. ಅತಿಯಾದ ಕೋಪವನ್ನು ಮಾಡಿಕೊಳ್ಳುವುದು ಬೇಡ.

ಮಿಥುನ ರಾಶಿ:

ಅನಿರೀಕ್ಷಿತ ನಿಧಿಯ ನಿರೀಕ್ಷೆಯಲ್ಲಿ ಇರುವಿರಿ. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ಅಂದುಕೊಂಡಿದ್ದರ ವಿರುದ್ಧ ನಡೆಯುವುದು ನಿಮಗೆ ಬೇಸರ ತರಿಸಬಹುದು. ನಿಮ್ಮ ವ್ಯಕ್ತಿತ್ವದ ಬಗ್ಗೆ ಇತರರು ಹೆಮ್ಮೆಪಡುವರು. ಪ್ರಶಂಸೆಯಿಂದ ಅಹಂಕಾರವು ಬರುವ ಸಾಧ್ಯತೆ ಇದೆ. ಕುಟುಂಬಕ್ಕೆ ಹೆಚ್ಚು ಸಮಯವನ್ನು ಕೊಡುವಿರಿ. ಸಣ್ಣ ವಸ್ತುವನ್ನು ದಾನ ಮಾಡಿ ಸಂತೋಷಪಡುವಿರಿ.

ಕರ್ಕಾಟಕ ರಾಶಿ:

ಇಂದು ಎಲ್ಲದಕ್ಕೂ ಯಂತ್ರದ ಮೊರೆ ಹೋಗುವುದರಿಂದ ನಿಮಗೆ ಕಷ್ಟ. ಸಹೋದ್ಯೋಗಿಗಳು ಅಹಂಕಾರವನ್ನು ತೋರಿಸುವರು. ನಿಮ್ಮ ನಿಲುವಲ್ಲಿ ನೀವಿರುವುದು ಉತ್ತಮ. ಬೇಕೆಂದುಕೊಂಡಿದ್ದನ್ನು ಪಡೆಯುವುದು ಕಷ್ಟವಾಗುವುದು. ಗೊತ್ತಿಲ್ಲದ ಕಾರ್ಯವನ್ನು ಮಾಡಲು ನಿಮಗೆ ಉತ್ಸಾಹ ಇರಲಿದೆ. ಇನ್ನೊಬ್ಬರ ವಸ್ತುವಿನ ಬಗ್ಗೆ ಮೋಹವು ಇರುವುದು‌. ಆತ್ಮಪ್ರಶಂಸೆಯು ಅಧಿಕಾವಾಗಿ ತೋರುವುದು. ಮಾಧ್ಯಮ‌ ಕ್ಷೇತ್ರದಲ್ಲಿ ಇರುವವರಿಗೆ ಮೇಲುಗೈ ಸಾಧಿಸುವ ಅವಕಾಶವಿರಲಿದೆ.

ಸಿಂಹ ರಾಶಿ:

ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ತಂತ್ರಜ್ಞಾನದಿಂದ ಅನ್ಯ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಸಿಗಲಿದೆ. ನೂತನ ವಾಹನದ ಖರೀದಿಗೆ ಪರ ಊರಿಗೆ ಹೋಗುವಿರಿ. ಮೊದಲೇ ನಿಶ್ಚಯಪಡಿಸಿದ ಕಾರ್ಯವನ್ನು ಬಿಟ್ಟು ಬೇರೆ ಯೋಚನೆ ಮಾಡುವುದು ಬೇಡ. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ.

ಕನ್ಯಾ ರಾಶಿ:

ಇಂದು ಮಕ್ಕಳ ವಿಚಾರವಾಗಿ ನಿಮಗೆ ದೂರು ಬರಬಹುದು. ವಿವಾಹದ ಬಗ್ಗೆ ಯೋಚನೆ ಇದ್ದರೂ ಪ್ರಸ್ತಾಪಿಸುವವರು ಯಾರು ಇಲ್ಲ. ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ಅಪಮಾನದಿಂದ ಮನಸ್ಸು ಉಗ್ರರೂಪಕ್ಮೆ ಬದಲಾಗಬಹುದು. ಯಾರ ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ.

ತುಲಾ ರಾಶಿ:

ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳಲಿದ್ದೀರಿ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ವಿದೇಶಕ್ಕೆ ತೆರಳುವ ನಿರೀಕ್ಷೆಯಲ್ಲಿ ಇರುವಿರಿ. ಮನಸ್ಸಿಗೆ ಹಿಡಿಸಿದ ಕೆಲಸವನ್ನು ಮಾತ್ರ ಬೇಗ ಮಾಡಿ ಮುಗಿಸುವಿರಿ. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು.

ವೃಶ್ಚಿಕ ರಾಶಿ:

ಬಂಧುಗಳ ಕುಹಕಕ್ಕೆ ಸಿಲುಕುವಿರಿ. ನ್ಯಾಯಾಲಯದ ಹೋರಾಟವು ಅಪಯಶಸ್ಸನ್ನು ಕೊಡಬಹುದು. ಕಲಾವಂತಿಕೆಯಿಂದ ನಿಮ್ಮ ಅನೇಕ ನಕಾರಾತ್ಮಕ ವಿಚಾರಗಳು ಮರೆಯಾಗಬಹುದು. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳುವಿರಿ. ದಾನದಿಂದ ಸಮಾಧಾನ ಸಿಗುವ ಸಾಧ್ಯತೆ ಇದೆ. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು.

ಧನು ರಾಶಿ:

ಹಿರಿಯರ ಕೋಪಕ್ಕೆ ನೀವು ಬಲಿಯಾಗಬೇಕಾದೀತು. ಮಾನಸಿಕವಾದ ಅಸ್ಥಿರತೆಯಿಂದ ನಿಮಗೆ ಕಷ್ಟವಾದೀತು. ವೃತ್ತಿಯಲ್ಲಿ ನಿಮಗೆ ತೃಪ್ತಿಯು ಸಿಗಲಿದೆ. ಧಾರ್ಮಿಕ ವಿಚಾರವಾಗಿ ನೀವು ದೂರ ಪ್ರಯಾಣವನ್ನು ಮಾಡುವಿರಿ. ಎಲ್ಲ ಕೆಲಸದಲ್ಲಿ ಆತ್ಮತೃಪ್ತಿಯನ್ನು ಬಯಸುಬಿರಿ. ನಿಮ್ಮ ಮಾತುಗಳೇ ನಿಮಗೆ ಮುಳುವಾಗುವ ಸಾಧ್ಯತೆ ಇದೆ. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಇಂದು ಸಂದರ್ಭವನ್ನು ನೋಡಿಕೊಂಡು ಮಾತನಾಡಿ.

ಮಕರ ರಾಶಿ:

ಆರ್ಥಿಕತೆಯಲ್ಲಿ ನೀವು ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗುವುದು. ನಿಮ್ಮ ಬಾಗುವ ಸ್ವಭಾವವು ನಿಮ್ಮನ್ನು ಮೇಲಕ್ಕೆ ಏರಿಸುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ಪ್ರಭಾವಿ ಗಣ್ಯರ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ಪ್ರೀತಿಯನ್ನು ಕುಟುಂಬದ ಜೊತೆ ಹಂಚಿಕೊಳ್ಳುವಿರಿ. ಮನೆತನದ ಕಾರಣದಿಂದ ನಿಮಗೆ ಗೌರವವು ಪ್ರಾಪ್ತವಾಗಲಿದೆ. ಮೇಲಧಿಕಾರಿಗಳನ್ನು ಮೆಚ್ಚಿಸುವಿರಿ. ನಿಮ್ಮ ಮೌನವನ್ನು ಅನ್ಯರೀತಿಯಲ್ಲಿ ಅರ್ಥೈಸಿಕೊಳ್ಳಬಹುದು.

ಕುಂಭ ರಾಶಿ:

ನಿಮ್ಮ ಬದುಕಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳುವಿರಿ. ಬರುವ ಹಣವು ಕೈಸೇರಿದರೂ ಖರ್ಚಿನ ದಾರಿ ಮುಕ್ತವಾಗಿರುವುದು ಮಕ್ಕಳಿಗೆ ಸಿಗುವ ಪುರಸ್ಕಾರದಿಂದ ನಿಮಗೆ ಸಂತೋಷವಾಗುವುದು. ಅಪರೂಪದ ಮಿತ್ರರು ನಿಮ್ಮನ್ನು ಭೇಟಿ ಮಾಡುವರು. ದಿನಸಿ ವ್ಯಾಪಾರಿಗಳಿಗೆ ಉತ್ತಮ ಲಾಭವು ಆಗಲಿದೆ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ. ಏಕಪಕ್ಷೀಯವಾದ ನಿರ್ಧಾರದಿಂದ ನಿಮ್ಮವರಿಗೆ ಬೇಸರವಾದೀತು.

ಮೀನ ರಾಶಿ:

ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ಅಭಾವವು ಹೆಚ್ಚು ತೋರುವುದು. ಹೂಡಿಕೆಯಿಂದ ನಷ್ಟ ಸಂಭವ. ತಾಯಿ ಮೇಲೆ ಪ್ರೀತಿ ಹೆಚ್ಚಾಗುವುದು. ಅವರಿಗೆ ಖುಷಿಯಾಗುವಂತೆ ನಡೆದುಕೊಳ್ಳುವಿರಿ. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಬಂಧುಗಳ ಕಾರಣಕ್ಕಾಗಿ ಧನವ್ಯಯವಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಪರಿಘ, ಕರಣ : ಕೌಲವ, ಸೂರ್ಯೋದಯ – 06 – 33 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:03 – 18:34, ಯಮಗಂಡ ಕಾಲ 12:33 – 14:03, ಗುಳಿಕ ಕಾಲ 15:33 – 17:33

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ