AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಮಗುವಿನ ಆರೋಗ್ಯದ ಚಿಂತೆ ಕಾಡಬಹುದು, ದಾಯಾದಿ ಕಲಹ

17 ಮಾರ್ಚ್​​​ 2025: ಸೋಮವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ತರಾತುರಿಯಲ್ಲಿ ಮತ್ತು ಭಾವೋದ್ವೇಗದಲ್ಲಿ ತೆಗೆದುಕೊಂಡ ನಿರ್ಧಾರವು ತಪ್ಪು ಎಂದು ಸಾಬೀತುಪಡಿಸಬಹುದು. ಮಾರ್ಚ್​​​ 17ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಮಗುವಿನ ಆರೋಗ್ಯದ ಚಿಂತೆ ಕಾಡಬಹುದು, ದಾಯಾದಿ ಕಲಹ
ಮಗುವಿನ ಆರೋಗ್ಯದ ಚಿಂತೆ ಕಾಡಬಹುದು, ದಾಯಾದಿ ಕಲಹ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 17, 2025 | 12:10 AM

ಬೆಂಗಳೂರು, ಮಾರ್ಚ್​ 16, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಧ್ರುವ, ಕರಣ : ವಣಿಜ, ಸೂರ್ಯೋದಯ – 06 – 40 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 08:10 – 09:41, ಯಮಘಂಡ ಕಾಲ 11:11 – 12:41, ಗುಳಿಕ ಕಾಲ 14:11 – 15:42.

ಮೇಷ ರಾಶಿ: ಇಂದು ಅತಿಯಾದ ಉದ್ಯೋಗದ ಕಾರಣಕ್ಕೆ ನಿಮ್ಮ ಆರೋಗ್ಯದ ಸಮಸ್ಥಿತಿ ತಪ್ಪಬಹುದು. ಇನ್ನೊಬ್ಬರ ಪ್ರಶಂಸೆಯಿಂದ ನೀವು ಸಂತೋಷಗೊಳ್ಳುವಿರಿ. ಮನೆಯ ವಾತಾವರಣವು ಯಾವುದೋ ಕಾರಣದಿಂದ ಕೆಟ್ಟದಾಗಬಹುದು. ನಿಮ್ಮ ಉದ್ವೇಗ ಮತ್ತು ಶಾಂತತೆಯನ್ನು ಕಾಪಾಡಿಕೊಳ್ಳಿ. ಕೆಲವು ಅಡಚಣೆಗಳು ಇರಬಹುದು. ಇಂದು ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ಹೊರಗಿನ ಆಹಾರವನ್ನು ತ್ಯಜಿಸಲು ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ಮಕ್ಕಳ ಮೇಲೆ ಒಂದು ಕಣ್ಣಿರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ಚಾಗುವುದು. ಅನಾಗರಿಕರಂತೆ ವರ್ತಿಸುವುದು ಬೇಡ. ಕಲೆಯ ಆಸಕ್ತಿಯು ನಿಮ್ಮನ್ನು ಇನ್ನೊಂದು ದಿಕ್ಕಿಗೆ ಕರೆದೊಯ್ಯಬಹುದು.

ವೃಷಭ ರಾಶಿ: ನಿಮಗೆ ಕೃಷಿಯ ಬಗ್ಗೆ ಆಸಕ್ತಿಯು ಉಂಟಾಗಬಹುದು. ಅಸತ್ಯವಾದ ನಿಮ್ಮ ಮಾತನ್ನು ನಂಬುವವರಿದ್ದಾರೆ. ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ನಿಮ್ಮ ಆತ್ಮಸಾಕ್ಷಿಯ ಮಾತನ್ನು ಆಲಿಸಿ. ಒಡಹುಟ್ಟಿದವರೊಂದಿಗಿನ ಸಂಬಂಧದಲ್ಲಿ ಮಾಧುರ್ಯವನ್ನು ಕಾಪಾಡಿಕೊಳ್ಳಿ. ನೀವು ಅಶಿಸ್ತಿನ ವ್ಯವಸ್ಥೆಯಿಂದ ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ನಿಮ್ಮ ಮೂಗಿನ ನೇರಕ್ಕೆ ಎಲ್ಲವನ್ನೂ ನೀವು ಕಾಣುವುದು ಸಮಂಜಸವಲ್ಲ. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ಸಣ್ಣ ವ್ಯವಸ್ಥೆಯಾದರೂ ಅಚ್ಚುಕಟ್ಟುತನವಿರಲಿದೆ. ವ್ಯಾಪಾರವನ್ನು ನಮ್ರರಾಗಿ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವಿರಿ. ದೂರ ಎಲ್ಲಿಗಾದರೂ ಹೋಗಬೇಕು ಎನಿಸಬಹುದು.

ಮಿಥುನ ರಾಶಿ: ಕನಸಿನಲ್ಲಿ ಕಳೆದುಹೋಗುವ ಸಾಧ್ಯತೆ ಇದೆ. ವಾಸ್ತವಕ್ಕೆ ಹತ್ತಿರವಾಗಿ. ಬಂಧುಗಳಿಂದ ಹೊಸ ವಸ್ತುಗಳು ಪ್ರಾಪ್ತವಾಗಬಹುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ವಿದ್ಯಾರ್ಥಿಗಳು ನಿರೀಕ್ಷೆಯಂತೆ ಫಲಿತಾಂಶ ಪಡೆದು ಆತ್ಮವಿಶ್ವಾಸವನ್ನು ಹೆಚ್ಚುಮಾಡಿಕೊಳ್ಳುವರು. ಭಾವೋದ್ವೇಗದಲ್ಲಿ ತೆಗೆದುಕೊಂಡ ನಿರ್ಧಾರವು ತಪ್ಪು ಎಂದು ಸಾಬೀತುಪಡಿಸಬಹುದು. ಮನಸ್ಸು ಸ್ವಲ್ಪ ನಿರಾಶೆಗೊಳ್ಳಬಹುದು. ಇಂದು ಮನೆಯ ವಾತಾವರಣ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ಶುಭ ಕಾರ್ಯಗಳಿಗೆ ನೀವು ಪ್ರೇರಣೆ ಕೊಡುವಿರಿ. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟುಕೊಳ್ಳಿ. ದೇಹದ ಅಸಮತೋಲನದಿಂದ ನಿಮಗೆ ತೊಂದರೆಯಾದೀತು.

ಕರ್ಕಾಟಕ ರಾಶಿ: ಆಯುಧಗಳ ಜೊತೆ ಜೋಪಾನವಾಗಿ ನೀವು ಇರಬೇಕಾಗುವುದು. ನಿಮ್ಮ ಮಾತು ಅರ್ಥಪೂರ್ಣವಾಗಿ ಇರಲಿ. ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಆದಾಯಕ್ಕೆ ಯೋಗ್ಯವಾಗಿ ವೆಚ್ಚ ಇರಲಿ. ವ್ಯವಹಾರದ ದೃಷ್ಟಿಯಿಂದ ಸಮಯವು ಲಾಭದಾಯಕವಾಗಿರುತ್ತದೆ. ಕೌಟುಂಬಿಕ ಜೀವನ ಸುಖಕರವಾಗಿರಬಹುದು. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರಬಹುದು. ಸ್ವಪ್ರತಿಷ್ಠೆಯನ್ನು ಬಿಡುವುದು ಉತ್ತಮ. ಚರಾಸ್ತಿಯ ವ್ಯಯವಾದರೂ ದೊಡ್ಡ ಸಮಸ್ಯೆ ಅನ್ನಿಸದು. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು.‌ ಅಂತರಂಗದ ಶುದ್ಧೀಕರಣ ಮಾಡಿಕೊಳ್ಳುವುದು ನಿಮಗೆ ಮುಖ್ಯವಾಗಲಿದೆ. ನಿಯೋಜಿತ ಕಾರ್ಯಕ್ಕೆ ಸಮಯ ಕೊಡಿ.

ಸಿಂಹ ರಾಶಿ: ವಿದೇಶೀಯ ವ್ಯವಹಾರಕ್ಕೆ ಅಧಿಕ ಬಂಡವಾಳದ ಅವಶ್ಯಕತೆ ಇರುವುದು. ಶತ್ರುಗಳು ನಿಮ್ಮನ್ನು ಗೆಲ್ಲಲು ಪ್ರಯತ್ನಿಸಬಹುದು.‌ ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ಯಾವುದೇ ಮೊಂಡುತನ ನಿಮಗೆ ತೊಂದರೆ ಕೊಡಬಹುದು. ವ್ಯವಹಾರದಲ್ಲಿ ಕೆಲವು ಸಮಸ್ಯೆಗಳು ಮತ್ತು ತೊಂದರೆಗಳು ಉಂಟಾಗುತ್ತವೆ. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ. ನಿಮಗೆ ಸಿಕ್ಕ ಅನಾದರದಿಂದ ಬೇಸರಗೊಳ್ಳುವಿರಿ. ಮಕ್ಕಳ ಉದ್ಯಮಕ್ಕೆ ನೀವು ಸಹಾಯ ಮಾಡುವಿರಿ. ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವು ಆಗಬಹುದು. ಧನಾತ್ಮಕ ಚಿಂತನೆಯಿಂದ ಕಳೆದುಕೊಂಡ ಉತ್ಸಾಹವು ಮತ್ತೆ ಬರುವುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ. ಕೆಲವು ಮಾನಸಿಕ ಸ್ಥಿತಿಯನ್ನು ನೀವು ಬದಲಿಸಿಕೊಳ್ಳಬೇಕಾದೀತು.

ಕನ್ಯಾ ರಾಶಿ: ಇಂದು ಜಾಣ್ಮೆಯಿಂದ ತಪ್ಪಿ ಹೋಗುವ ಉದ್ಯಮವನ್ನು ನಿಮ್ಮದಾಗಿಸಿಕೊಳ್ಳುವಿರಿ. ಒಡಕುಗಳಿಗೆ ಅವಕಾಶವನ್ನು ಕೊಡುವುದು ಬೇಡ. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ಹಿತೈಷಿಗಳ ಸಹಾಯದಿಂದ ನಿಮ್ಮ ಯಾವುದೇ ಆಸೆಗಳನ್ನು ಈಡೇರಿಸಲಾಗುವುದು. ತರಾತುರಿಯಲ್ಲಿ ಮತ್ತು ಭಾವೋದ್ವೇಗದಲ್ಲಿ ತೆಗೆದುಕೊಂಡ ನಿರ್ಧಾರವು ತಪ್ಪು ಎಂದು ಸಾಬೀತುಪಡಿಸಬಹುದು. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ವಾಹನವನ್ನು ಖರೀದಿಸಲು ನೀವು ಸಮಯದ ನಿರೀಕ್ಷೆಯಲ್ಲಿ ಇರುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ. ಹಠವನ್ನು ಬಿಟ್ಟರೆ ಸಂತೋಷದ ಸಂಗತಿಗಳು ನಿಮ್ಮ ಹುಡುಕಿಕೊಂಡು ಬರಬಹುದು. ರಾಜಕೀಯ ಒತ್ತಡದಿಂದ ನಿಮ್ಮ ಕಾರ್ಯವು ಕೈಮೀರಬಹುದು.