AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಯಿಂದ ವಂಚನೆಗೆ ಒಳಗಾಗುವರು

Daily Horoscope Mach 18: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶೀ / ಚತುರ್ದಶೀ ತಿಥಿಯ ಬುಧವಾರ ವಿಶ್ವಾಸ, ಆತಂಕ, ಹೂಡಿಕೆ, ಅನಾರೋಗ್ಯದ ಭೀತಿ, ಪ್ರಾಮಾಣಿಕ ಪ್ರಯತ್ನ, ನಿರ್ದೋಷತ್ವ ಸಾಬೀತು ಇದೆಲ್ಲ ಇಂದಿನ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಯಿಂದ ವಂಚನೆಗೆ ಒಳಗಾಗುವರು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Mar 18, 2026 | 12:52 AM

Share

ಮೇಷ ರಾಶಿ:

ಸಿಟ್ಟಿನಿಂದ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಸೇವೆ ಮಾಡಲು ನಾಯಕನೇ ಆಗಬೇಕಿಲ್ಲ, ಸೇವಕನಾದರೂ ಸಾಕು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ‌ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ನಿಮ್ಮ ಮೌನವು ಹಲವಾರ ಅನುಮಾನಕ್ಕೆ ಕಾರಣವಾಗಬಹುದು.

ವೃಷಭ ರಾಶಿ:

ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುತ್ತ ಇರಬಹುದು. ಸಲ್ಲದ ಮಾತುಗಳನ್ನಾಡಿ ಶತ್ರುಗಳನ್ನು ಪ್ರಬಲವಾಗಿಸುವಿರಿ. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಹೊಸತನ್ನು ನಿಮ್ಮದಾಗಿಸಿಕೊಳ್ಳುವ ಕಡೆ ಗಮನ ಅಧಿಕ. ಕಳೆದುಹೋದ ವ್ಯಕ್ತಿಗಳನ್ನು ಮತ್ತೆ ಪಡೆಯುವ ಪ್ರಯತ್ನ ಬೇಡ.

ಮಿಥುನ ರಾಶಿ:

ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ದೇಹದ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕು ಎನಿಸುವುದು. ನಿಮ್ಮ‌ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ಬೇಕಾದಷ್ಟು ಹಣವಿದ್ದರೂ ತುರ್ತಿಗೆ ಪ್ರಯೋಜನಕ್ಕೆ ಬಾರದೇಯಿರುವುದು. ನಿಮ್ಮ ನಿರ್ಧಾರಕ್ಕೆ ಮನೆಯಿಂದ ನಿಮಗೆ ಬೆಂಬಲವಿರುವುದು. ಇಂದು ಹಣವನ್ನು ಹೊಂದಿಸುವುದು ಚಿಂತೆಯಾಗಬಹುದು.

ಕರ್ಕಾಟಕ ರಾಶಿ:

ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಸಾಲ ಕೊಟ್ಟವರಿಗೆ ಸಮಾಧಾನವಾಗುವಂತೆ ನಡೆದುಕೊಳ್ಳಿ. ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ಹಳೆಯ ಪ್ರೀತಿಯು ನೆನಪಾಗಿ ಮೌನವಾಗುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಪುಣ್ಯ ಕ್ಷೇತ್ರದ ಭೇಟಿಯಿಂದ ಸಮಾಧಾನ‌. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ.

ಸಿಂಹ ರಾಶಿ:

ಉದ್ಯೋಗದ ಅವಕಾಶಗಳ ನಿರೀಕ್ಷೆಯಲ್ಲಿ ಇರುವಿರಿ. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ದಿನಚರಿಯನ್ನು ಬದಲಿಸಿಕೊಳ್ಳಬೇಕು ಎಂದನಿಸಬಹುದು. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಕೆಲವರ ಮಾತಿಗೆ ಉತ್ತರವನ್ನು ಕೊಡುವುದು ಇಷ್ಟವಾಗದು.

ಕನ್ಯಾ ರಾಶಿ:

ಉದ್ಯಮಕ್ಕೆ ಬೇಕಾದ ಕಾನೂನಿನ ವಿಚಾರವನ್ನು ಚರ್ಚಿಸುವಿರಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ಹೂಡಿಕೆಯನ್ನು ಬೇರೆಯವರ ಹೆಸರಿನಲ್ಲಿ ಮಾಡುವಿರಿ. ಇಂದು ನೀವು ಸಮಯವನ್ನು ಮಾಡಿಕೊಂಡು ಕುಟುಂಬದ ಜೊತೆ ಸೌಹಾರ್ದತೆ ಉಂಟಾಗುವುದು. ಇತರರ ಜೊತೆ ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ.

ತುಲಾ ರಾಶಿ:

ಕೆಲವು ನಿರಾಶೆಯನ್ನು ಮೆಟ್ಟಿನಿಲ್ಲುವ ಧೈರ್ಯ ತೋರಬೇಕು. ನಿಮ್ಮ‌ ಅಂತಸ್ಸಾಕ್ಷಿಗೆ ಸತ್ಯವನ್ನು ಹೇಳುವ ಧೈರ್ಯ ಬರುವುದು. ವಿದೇಶದಿಂದ ಆಹ್ವಾನವು ಬರಬಹುದು. ಆತುರದ ಪ್ರಯಾಣವನ್ನು ಇಂದು ಮಾಡಬೇಡಿ. ಒತ್ತಾಯದಿಂದ‌ ಸ್ನೇಹಿತರ ಮನೆಗೆ ಹೋಗುವಿರಿ. ಆಸ್ತಿಯ ವಿಚಾರವಾಗಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧರಾಗುವಿರಿ. ನಿಮ್ಮ ಹೆಸರಿನಿಂದ ಬೇರೆಯವರು ಕೆಲಸ ಮಾಡಿಕೊಳ್ಳಬಹುದು. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ.

ವೃಶ್ಚಿಕ ರಾಶಿ:

ಅನಿರೀಕ್ಷಿತ ಪ್ರಯಾಣವು ಆಯಾಸವನ್ನು ಕೊಡಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ಇಲ್ಲದ ತಪ್ಪನ್ನು ಒಪ್ಪಿಕೊಳ್ಳುವ ಸಂದರ್ಭ ಬರಬಹುದು. ಅಧಿಕಾರಿಗಳಿಗೆ ದಾಖಲೆಗಳನ್ನು ಒದಗಿಸಬೇಕಾಗುವುದು. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ‌ ಮೇಲೆ ಬರಲಿದೆ. ಸಿಟ್ಟಿನಿಂದ ಅಂತಃಪ್ರಜ್ಞೆ ದೂರಾಗಬಹುದು. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ.

ಧನು ರಾಶಿ:

ಅತಿಯಾದ ಕೋಪದಿಂದ ಎಲ್ಲ ಕೆಲಸವು ವ್ಯತ್ಯಾಸವಾಗಬಹುದು. ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಬೇಕಾಗುವುದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ‌ ಬೇಡ. ತಪ್ಪುಗಳನ್ನು ಸರಿಮಾಡಿಕೊಳ್ಳುವ ಮನಃಸ್ಥಿತಿ ಬರುತ್ತದೆ. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ‌ ಮನಸ್ಸಿನಿಂದ ಮಾತನಾಡುವಿರಿ.‌

ಮಕರ ರಾಶಿ:

ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ಯಾರದೋ ಅಪರಿಚಿತರ ಸಂಪರ್ಕವನ್ನು ಮಾಡಬೇಕಾದೀತು. ಸ್ನೇಹಿತರಿಂದ ಆರ್ಥಿಕತೆಗೆ ಸಹಾಯವು ಸಿಗುವುದು. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ‌. ಹಿರಿಯರಿಂದ ಆದ ದೋಷವನ್ನು ಸರಿ ಮಾಡಿಕೊಳ್ಳುವಿರಿ. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು.‌ ವ್ಯವಹಾರವು ಸರಿಯಾಗಿ ಇರಲಿ. ಇಂದು ಯಾರನ್ನೂ ಸುಲಭವಾಗಿ ನಂಬಲಾರಿರಿ.

ಕುಂಭ ರಾಶಿ:

ಉದ್ಯಮದಲ್ಲಿ ಅಧಿಕ ಚಿಂತೆಯು ಇರಲಿದ್ದು ಪ್ರಯತ್ನವು ಅಧಿಕವಾಗಿ ಇರುವುದು. ಸಂಗಾತಿಯ ಮಾತನ್ನು ಇಂದು ಅನುಸರಿಸುವಿರಿ. ಮನೆಯಲ್ಲಿ ಹಿಂದಿನ ಘಟನೆಯೇ ಮರುಕಳಿಸಲಿದ್ದು ಸಣ್ಣ ವಾಗ್ವಾದವೂ ನಡೆಯಬಹುದು. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ಸುತ್ತಲಿನ ವಾತಾವರಣದಿಂದ ಮನಸ್ಸು ಕೆಡುವ ಸಾಧ್ಯತೆ ಹೆಚ್ಚು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ದುರ್ಬಲರ‌ ಜೊತೆ ಸಂಘರ್ಷ ಬೇಡ.

ಮೀನ ರಾಶಿ:

ದೂರದಲ್ಲಿ ಇದ್ದ ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ಇರುವುದು. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ತಮಾಷೆಯಾಗಿ ಶುರುವಾದ ಮಾತು ಕಲಹದಲ್ಲಿಯೋ ದ್ವೇಷದಲ್ಲಿಯೋ ಮುಕ್ತಯವಾಗಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ದೇಹದ ಯಾವುದಾದರೂ ಭಾಗದಲ್ಲಿ ಪ್ರಾಣಾಂತಿಕ ನೋವು ಕಾಣಿಸಿಜತು. ಉಗುಳಲಾಗದ, ನುಂಗಲಾಗದ ತುತ್ತನ್ನು ಬಾಯಲ್ಲಿ ಇಟ್ಟುಕೊಳ್ಳಬೇಕಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ / ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸಾಧ್ಯ, ಕರಣ : ಚತುಷ್ಪಾತ್, ಸೂರ್ಯೋದಯ – 06 – 31 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:33 – 14:03, ಯಮಗಂಡ ಕಾಲ 08:02 – 09:32, ಗುಳಿಕ ಕಾಲ 11:02 – 12:33

-ಲೋಹಿತ ಹೆಬ್ಬಾರ್-8762924271 (what’s app only)

Follow Us
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ